ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೊಪ್ಪಳ

Koppala news: ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

Road Accident: ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆ ತೆರಳಿ ಮರಳುತ್ತಿದ್ದರು.

Shivasharanappa Gouda Patil: ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ

ಯಲಬುರ್ಗಾ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ನಿಧನ

ಶಿವಶರಣಪ್ಪಗೌಡ ಪಾಟೀಲ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ಸಲ ಪರಾಭವಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಕೊಪ್ಪಳ ಜಿಲ್ಲೆಯಲ್ಲಿ ಜನಪ್ರಿಯ ಶಾಸಕರಾಗಿದ್ದ ಇವರು, ರೈತರ ಸಮಸ್ಯೆಗಳಿಗೆ ಧ್ವನಿಯಾಗಿದ್ದಲ್ಲದೆ, ಮೂಲ ಸೌಕರ್ಯಗಳ ಅಭಿವೃದ್ಧಿಗೂ ವಿಶೇಷ ಗಮನ ನೀಡಿದ್ದರು.

Koppal News: ಕೊಪ್ಪಳದಲ್ಲಿ ಮಗುವಿಗೆ ಜನ್ಮ ನೀಡಿದ 10 ತರಗತಿ ವಿದ್ಯಾರ್ಥಿನಿ; ಪೋಕ್ಸೊ ಕೇಸ್‌ ದಾಖಲು

ಕೊಪ್ಪಳದಲ್ಲಿ ಮಗುವಿಗೆ ಜನ್ಮ ನೀಡಿದ 10 ತರಗತಿ ವಿದ್ಯಾರ್ಥಿನಿ

ಕೊಪ್ಪಳದ ಕುಕನೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಬಾಲಕಿಯ ಈ ಸ್ಥಿತಿಗೆ ಕಾರಣವಾದ ಆರೋಪಿ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಘಟನೆಯಿಂದಾಗಿ ವಸತಿನಿಲಯದಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಪೋಷಕರಲ್ಲಿ ಆತಂಕ ಉಂಟಾಗಿವೆ.

Koppala News: ಹಣ ಮರಳಿ ಕೊಡುತ್ತೇವೆಂದು ಕರೆಸಿಕೊಂಡು ಹೋಂ ಗಾರ್ಡ್‌ ಮೇಲೆ ನಾಲ್ವರಿಂದ ಅತ್ಯಾಚಾರ

ಹಣ ಮರಳಿ ಕೊಡುತ್ತೇವೆಂದು ಕರೆಸಿ ಹೋಂ ಗಾರ್ಡ್‌ ಮೇಲೆ ನಾಲ್ವರಿಂದ ಅತ್ಯಾಚಾರ

Koppala News: ಸಂತ್ರಸ್ತೆ ಪೊಲೀಸರಿಗೆ ನೀಡಿದ ಮಾಹಿತಿ ಪ್ರಕಾರ, ಆರೋಪಿ ಆಕೆಯನ್ನು ಬೈಕ್‌ನಲ್ಲಿ ಕರೆದೊಯ್ದು ಮದ್ಲೂರ ಗ್ರಾಮದ ಬಳಿ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಇನ್ನು ಮೂವರು ಸೇರಿಕೊಂಡಿದ್ದಾರೆ. ಅವರು ಮಹಿಳೆಗೆ ಜ್ಯೂಸ್ ಎಂದು ಹೇಳಿ ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ನಂತರ ನಾಲ್ವರು ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಕುಷ್ಟಗಿ ಮತ್ತು ಮದ್ಲೂರ ಸೀಮೆಯಲ್ಲಿ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯವೇ ತಲೆ ತಗ್ಗಿಸುವ ಘಟನೆ; ಅಪ್ರಾಪ್ತೆ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕ

ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕ

Koppal News: ಕೊಪ್ಪಳದಲ್ಲಿ 21 ವರ್ಷದ ಯುವಕನೊಬ್ಬ ತನ್ನ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸುಮಾರು 8 ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಸಹೋದರನಿಂದ ಗರ್ಭ ಧರಿಸಿದ ಸಂತ್ರಸ್ತೆ ಅಕ್ಟೋಬರ್‌ 30ರಂದು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಕಾಮುಕ ಸಹೋದರನ್ನು ಪೊಲೀಸರು ಬಂಧಿಸಿದ್ದಾರೆ.

Murder Case: ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ

ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ

Koppala news: ವೆಂಕಟೇಶ ಕುರುಬರ ದೇವಿಕ್ಯಾಂಪ್‌ನಿಂದ ಸ್ನೇಹಿತರೊಂದಿಗೆ ಊಟ ಮಾಡಿ ಬೈಕ್‌ನಲ್ಲಿ ಗಂಗಾವತಿಗೆ ತೆರಳುತ್ತಿದ್ದರು. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ಬೈಕ್‌ಗೆ ಗುದ್ದಿ ಅಡ್ಡಗಟ್ಟಿದ ಗುಂಪು, ಲಾಂಗ್ ಮತ್ತು ಮಚ್ಚುಗಳಿಂದ ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.

Road Accident: ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್‌, ಮೂವರು ಭಕ್ತರ ಸಾವು

ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್‌, ಮೂವರು ಭಕ್ತರ ಸಾವು

Koppala news: ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ, ರಸ್ತೆ ಬದಿ ನಡೆಯುತ್ತಿದ್ದ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ವೇಳೆ ಭಕ್ತರು ದೇವಾಲಯದಿಂದ ಕೇವಲ ಮೂರು ಗಂಟೆಗಳ ನಡಿಗೆಯ ದೂರದಲ್ಲಿದ್ದರು.

CM Siddaramaiah: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13,000 ಕೋಟಿ ಅನುದಾನ: ಸಿಎಂ

CM Siddaramaiah: ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾಲ್ಕು ಬಾರಿ ದೆಹಲಿಗೆ ಹೋಗಿ ಅನ್ಯಾಯ ಸರಿ ಪಡಿಸಲು ಮನವಿ ಮಾಡಿದರೂ ಮೋದಿಯೂ ಮಾಡಲಿಲ್ಲ, ನಿರ್ಮಲಾ ಸೀತಾರಾಮನ್ ಅವರೂ ಅನ್ಯಾಯ ಸರಿ ಪಡಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Yellalinga Murder case: ಯಲ್ಲಾಲಿಂಗ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟ; ಎಲ್ಲಾ ಆರೋಪಿಗಳೂ ಖುಲಾಸೆ

ಯಲ್ಲಾಲಿಂಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳೂ ಖುಲಾಸೆ

Koppal News: ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಿದೆ. ಯಲ್ಲಾಲಿಂಗನ ಕೊಲೆ ಪ್ರಕರಣ ಈ ಹಿಂದೆ ಶಿವರಾಜ ತಂಗಡಗಿ ಸಚಿವರಾಗಿದ್ದಾಗ ಅವರ ರಾಜೀನಾಮೆಗೂ ಕಾರಣವಾಗಿತ್ತು. ಇದೀಗ ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆಯಿಂದ ಕೋರ್ಟ್ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

Basanagouda Patil Yatnal: ದಲಿತ ಮಹಿಳೆಯರಿಗೆ ಅಪಮಾನ ಆರೋಪ; ಶಾಸಕ ಯತ್ನಾಳ್ ವಿರುದ್ಧ ಅಟ್ರಾಸಿಟಿ ಕೇಸ್‌

ದಲಿತ ಮಹಿಳೆಯರಿಗೆ ಅಪಮಾನ; ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್‌

Basanagouda Patil Yatnal: ಸನಾತನ ಧರ್ಮದವರು ಮಾತ್ರ ಚಾಮುಂಡಿಗೆ ಪೂಜಿಸಬೇಕು. ಸಾಮಾನ್ಯ ದಲಿತ ಮಹಿಳೆಗೂ ಯತ್ನಾಳ್ ಅವಕಾಶ ಇಲ್ಲ ಅಂತ ಶಾಸಕ ಯತ್ನಾಳ್‌ ಹೇಳಿಕೆ ನೀಡಿದ್ದಾರೆ. ದಲಿತ ಮಹಿಳೆಯರಿಗೆ ಅಪಮಾನ ಮಾಡಿರುವ ಶಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದ್ದರಿಂದ ಯತ್ನಾಳ್‌ ವಿರುದ್ಧ ಕೇಸ್‌ ದಾಖಲಾಗಿದೆ.

Lokayukta Raid: ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

Koppala: ಗಳಿಕೆಗೆ ಮೀರಿದ ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ಈ ಅಧಿಕಾರಿಗಳ ಬಗ್ಗೆ ಹಲವು ದೂರುಗಳು ಲೋಕಾಯುಕ್ತದಲ್ಲಿ ದಾಖಲಾಗಿದ್ದವು. ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಎಲ್ಲ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

POCSO case: ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್

ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್

Koppla: ತಮ್ಮ ಮಗಳು ಅಪ್ರಾಪ್ತಳಾಗಿದ್ದು, ಕೊಲೆಯಾದ ಗವಿನಾಯಕ ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ. ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ನನಗೆ ಜೀವಬೆದರಿಕೆ ಹಾಕಿದ್ದ. ಮಗಳ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ಬಗ್ಗೆ ಆತನ ತಂದೆ, ತಾಯಿ, ಪಾಲಕರಿಗೆ ತಿಳಿಸಿದರೂ ಅವರೂ ಜೀವ ಬೆದರಿಕೆ ಹಾಕಿದ್ದರೆಂದು ದೂರಲಾಗಿದೆ.

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌ ಘೋಷಣೆ

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌

Koppala: ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕಿಡಿಕಾರಿದರು.

Murder Case: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಯುವಕನ ಕೊಲೆ

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಯುವಕನ ಕೊಲೆ

Koppala: ಕುರುಬರ ಓಣಿಯ ನಿವಾಸಿ 30 ವರ್ಷದ ಗವಿಸಿದ್ದಪ್ಪ ನಾಯಕ ಅನ್ಯಕೋಮಿನ ಯುವತಿಯೊಬ್ಭಳನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಹುಡುಗಿಯ ಕಡೆಯವರಿಗೂ ಈತನಿಗೂ ಬಿಸಿಬಿಸಿ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಮೂರು ಜನರು ಮಾರಕಾಸ್ತ್ರಗಳನ್ನು ಬಳಸಿ ಗವಿಸಿದ್ದಪ್ಪನ ಮೇಲೆ ದಾಳಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

lokayukta Raid: ತಿಂಗಳಿಗೆ 15,000 ರೂ. ಸಂಬಳ ಪಡೆಯುವ ಸರ್ಕಾರಿ ನೌಕರ; 24 ಮನೆಗಳು, 30 ಕೋಟಿ ಆಸ್ತಿಯ ಒಡೆಯ..!

15,000 ಸಂಬಳ ಪಡೆಯುತ್ತಿದ್ದ ಗುಮಾಸ್ತನ ಬಳಿ ಇರುವ ಆಸ್ತಿ ಎಷ್ಟು ಗೊತ್ತಾ..?

ಕೊಪ್ಪಳದ ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ನಲ್ಲಿ (ಕೆಆರ್‌ಐಡಿಎಲ್) ಗುಮಾಸ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಕಳಕಪ್ಪ ನಿಡಗುಂದಿ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು, ₹30 ಕೋಟಿಗೂ ಅಧಿಕ ಆಸ್ತಿ ಹೊಂದಿರುವುದು ಪತ್ತೆಯಾಗಿದೆ. ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಗಿದೆ. ಕೊಪ್ಪಳದಲ್ಲಿ ಕೆಲಸ ಮಾಡುತ್ತಿದ್ದ ಕಲಕಪ್ಪ, ತಿಂಗಳಿಗೆ 15,000 ರೂ. ವೇತನ ಪಡೆಯುತ್ತಿದ್ದರೂ, 24 ಮನೆಗಳು, ನಾಲ್ಕು ಪ್ಲಾಟ್‌ಗಳು, ಮತ್ತು 40 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ. ಈ ಆಸ್ತಿಗಳು ಆತ, ಆತನ ಪತ್ನಿ ಮತ್ತು ಅವರ ಸಹೋದರನ ಹೆಸರಿನಲ್ಲಿವೆ.

Murder Case: ಗಂಡನನ್ನು ಪ್ರಿಯತಮನಿಂದ ಕೊಲ್ಲಿಸಿ ನಾಗರಪಂಚಮಿ ಹಬ್ಬದ ಪಾಯಸ ಉಂಡ ಪತ್ನಿ!

ಗಂಡನನ್ನು ಪ್ರಿಯತಮನಿಂದ ಕೊಲ್ಲಿಸಿ ನಾಗರಪಂಚಮಿ ಹಬ್ಬದ ಪಾಯಸ ಉಂಡ ಪತ್ನಿ!

Koppala Crime News: ನೇತ್ರಾವತಿಗೆ ಬೂದಗುಂಪ ಗ್ರಾಮದ ದ್ಯಾಮಣ್ಣ ಜೊತೆ ಮದುವೆ ಆಗಿ, ಮೂರು ಮಕ್ಕಳು ಆಗಿದ್ದರೂ ಶ್ಯಾಮಣ್ಣ ಎಂಬಾತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ ಇಬ್ಬರೂ ಕೊಲೆ ಸಂಚು ರೂಪಿಸಿದ್ದಾರೆ.

‌Bhindaganavile Bhagwan Column: ಭಾಷೆಯ ಕಲಿಕೆ ‘ಓಕೆ’ ವ್ಯಾಕರಣದ ಬಂಧ ‘ಯಾಕೆ?’

ಭಾಷೆಯ ಕಲಿಕೆ ‘ಓಕೆ’ ವ್ಯಾಕರಣದ ಬಂಧ ‘ಯಾಕೆ?’

ಭಾಷೆಗಳನ್ನು ಕಲಿಯುವ ನಿಟ್ಟಿನಲ್ಲಿ, ಜಗತ್ತಿನಾದ್ಯಂತದ ಶಿಕ್ಷಣಕ್ರಮಗಳಲ್ಲಿ ವ್ಯಾಕರಣಕ್ಕೇ ಅನಗತ್ಯ ಒತ್ತು ನೀಡಲಾಗುತ್ತದೆ. ‘ವ್ಯಾಕರಣವೇ ಭಾಷೆಗೆ ವಾಗ್ಬಲ, ಅಡಿಪಾಯ’ ಎಂಬ ನಿಲುವು ಮಕ್ಕಳ ಸಹಜ ಕಲಿಕೆಗೆ ತಡೆಯೊಡ್ಡುತ್ತದೆ. ವ್ಯಾಕರಣ ಕಲಿತೂ ಹಲವು ಸಂದರ್ಭಗಳಲ್ಲಿ ಮಕ್ಕಳು ಆಯಾ ಭಾಷೆಯಲ್ಲಿ ನಿರರ್ಗಳವಾಗಿ ಮಾತಾಡಲು ವಿಫಲವಾಗುವುದಿದೆ.

Karnataka Rains: ತುಂಗಭದ್ರಾ ಡ್ಯಾಂನಿಂದ 1.20 ಲಕ್ಷ ಕ್ಯುಸೆಕ್ ನೀರು ಬಿಡುಗಡೆ; ಸೇತುವೆ ಮುಳುಗಿ ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಿದ ಕಂಪ್ಲಿ-ಗಂಗಾವತಿ ಸೇತುವೆ

Tungabhadra dam: ರಾಜ್ಯದ ನಾಲ್ಕು ಜಿಲ್ಲೆಗಳ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಿಂದ 1.20 ಲಕ್ಷ ಕ್ಯುಸೆಕ್ ನೀರನ್ನು ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗಿದೆ. ತುಂಗಭದ್ರಾ ನದಿ ಧುಮ್ಮಿಕ್ಕಿ ಹರಿಯುವ ದೃಶ್ಯ ವೈಭವ ನೋಡುಗರನ್ನು ಸೆಳೆಯುತ್ತಿದೆ.

Koppala news: ಕೊಪ್ಪಳ ಗವಿಮಠದಲ್ಲಿ ನಾಗದೇವರ ಮುಂದೆ ಮುಸ್ಲಿಂ ಮಹಿಳೆಯ ಧ್ಯಾನ!

ಕೊಪ್ಪಳ ಗವಿಮಠದಲ್ಲಿ ನಾಗದೇವರ ಮುಂದೆ ಮುಸ್ಲಿಂ ಮಹಿಳೆಯ ಧ್ಯಾನ!

ಆವರಣದಲ್ಲಿ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುವುದು ಕಂಡುಬರುತ್ತಿದೆ. ಗವಿಮಠದ ಶ್ರೀಗಳು ನಿತ್ಯ ಸಂಜೆ ಹೊತ್ತಲ್ಲಿ ಕುಳಿತುಕೊಳ್ಳುವ ಜಾಗದ ಮುಂದೆಯೇ ಮಹಿಳೆ ಧ್ಯಾನ ಮಾಡುತ್ತಿದ್ದಾರೆ. ಮಾನಸಿಕ ನೆಮ್ಮದಿಗಾಗಿ ಒಟ್ಟು 11 ದಿನ ಧ್ಯಾನ ಮಾಡುವುದಾಗಿ ಹಸೀನಾ ಬೇಗಂ ಹೇಳಿದ್ದಾರೆ.

BJP Karnataka: ಮುನಿಸು ಮರೆತು ಒಂದಾದ ಜನಾರ್ದನ ರೆಡ್ಡಿ- ಶ್ರೀರಾಮುಲು!

ಮುನಿಸು ಮರೆತು ಒಂದಾದ ಜನಾರ್ದನ ರೆಡ್ಡಿ- ಶ್ರೀರಾಮುಲು!

BJP Karnataka: ಸಂಡೂರು ಉಪಚುನಾವಣೆಯ ಫಲಿತಾಂಶದ ಬಳಿಕ ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ದೂರವಾಗಿದ್ದರು. ಇದೀಗ ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ, ನಾವಿಬ್ಬರೂ ಒಂದೇ ಎನ್ನುವ ಸಂದೇಶ ಸಾರಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಇಬ್ಬರು ನಾಯಕರ ಕೈಗಳನ್ನು ಎತ್ತಿ ಹಿಡಿದು ಮುನಿಸು ಮರೆಯುವಂತೆ ಮಾಡಿದ್ದಾರೆ.

KRIDL: ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರೀ ಅಕ್ರಮ ಆರೋಪ; ಲೋಕಾಯುಕ್ತಕ್ಕೆ ದೂರು

ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರಿ ಅಕ್ರಮ!

ಕಳೆದ ವರ್ಷ ಬಾರೀ ಚರ್ಚೆಯಲ್ಲಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣ ಸಾಕಷ್ಟು ಸದ್ದು ಮಾಡಿದ್ದು, ಇದೀಗ ಅಂತಹುದೇ ಪ್ರಕರಣ ಈ ಹಗರಣದಲ್ಲಿ ಭಾಗಿಯಾದ ಇಬ್ಬರು ಅಧಿಕಾರಿಗಳ ವಿರುದ್ದ ಕೊಪ್ಪಳ ಲೋಕಾಯುಕ್ತರಿಗೆ ದೂರು ನೀಡಲಾಗಿದೆ.

Heart attack: ಕೊಪ್ಪಳದಲ್ಲಿ ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ

ಕೊಪ್ಪಳದಲ್ಲಿ ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ

Koppal News: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆನಕಲ್‌ನಲ್ಲಿ ಹೃದಯಾಘಾತದಿಂದ ಯೋಗ ಶಿಕ್ಷಕ ಮೃಪ್ಟಟಿದ್ದಾರೆ. ಶುಕ್ರವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Heart Attack: ಕುಷ್ಟಗಿ ಶಾಸಕರ ಪಿಎ ಚಂದ್ರಕಾಂತ ವಡ್ಡಿಗೇರಿ ಹೃದಯಾಘಾತದಿಂದ ನಿಧನ

ಕುಷ್ಟಗಿ ಶಾಸಕರ ಪಿಎ ಚಂದ್ರಕಾಂತ ವಡ್ಡಿಗೇರಿ ಹೃದಯಾಘಾತದಿಂದ ನಿಧನ

Heart Attack: ಕುಷ್ಟಗಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪಿಎ ಚಂದ್ರಕಾಂತ ವಡ್ಡಿಗೇರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಇವರನ್ನು ಕುಷ್ಟಗಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Murder Case: 3ನೇ ಹೆಂಡ್ತಿಯನ್ನು ಕೊಂದು ಶವವನ್ನು ಲಗೇಜ್‌ ಎಂದು ಬಸ್‌ನಲ್ಲಿ ಹಾಕಿದ್ದ ಭೂಪ; 23 ವರ್ಷಗಳ ಬಳಿಕ ಅರೆಸ್ಟ್‌!

3ನೇ ಪತ್ನಿಯನ್ನು ಕೊಂದಿದ್ದ ಪತಿ 23 ವರ್ಷಗಳ ಬಳಿಕ ಅರೆಸ್ಟ್‌!

Koppal News: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಹಾಲದಾಳ ಗ್ರಾಮದ ವ್ಯಕ್ತಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದ. 2002 ರಲ್ಲಿ ವೈಯಕ್ತಿಕ ಜಗಳಕ್ಕೆ ಪತ್ನಿಯನ್ನು ಕೊಚ್ಚಿ ಕೊಂದಿದ್ದ. ಬಳಿಕ ಗೋಣಿ ಚೀಲದಲ್ಲಿ ಶವ ತುಂಬಿ, ಲಗೇಜ್‌ ಎಂದು ನಂಬಿಸಿ, ಸರ್ಕಾರಿ ಬಸ್‌ನಲ್ಲಿ ಕಳುಹಿಸಿದ್ದ. ತಲೆಮರೆಸಿಕೊಂಡಿದ್ದ ಆರೋಪಿ ಈಗ ಸಿಕ್ಕಿಬಿದ್ದಿದ್ದಾನೆ.

Loading...