ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ತಾಜಾ ಸುದ್ದಿ
World Malaria Day 2025: ವಿಶ್ವ ಮಲೇರಿಯ ದಿನ... ಸಂಘಟಿತ ಯತ್ನವೇ ರೋಗ ತಡೆಗೆ ಪ್ರಧಾನ!

ವಿಶ್ವ ಮಲೇರಿಯ ದಿನ: ಈ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ!

ಮಲೇರಿಯ ಸೋಂಕು ಪ್ರಸಾರ ವಾಗದಂತೆ ತಡೆಯುವುದು ಮತ್ತು ಸೂಕ್ತ ಚಿಕಿತ್ಸೆಯನ್ನು ರೋಗಿಗಳಿಗೆ ಒದಗಿಸುವುದರ ಮಹತ್ವವನ್ನು ಸಾರುವ ಉದ್ದೇಶದಿಂದ, ಏಪ್ರಿಲ್‌ ತಿಂಗಳ ೨೫ನೇ ದಿನವನ್ನು ವಿಶ್ವ ಮಲೇರಿಯ ದಿನವೆಂದು ಗುರುತಿಸಲಾಗಿದೆ. ವೈದ್ಯ ವಿಜ್ಞಾನ ಸಾಕಷ್ಟು ಉನ್ನತಿ ಹೊಂದಿರುವ ಈ ದಿನಗಳಲ್ಲೂ, ವಾರ್ಷಿಕವಾಗಿ ಕೋಟಿಗಟ್ಟಲೆ ಜನರ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ, ಮಲೇರಿಯ ರೋಗದ ದುಷ್ಪರಿಣಾಮವನ್ನು ಅರ್ಥ ಮಾಡಿಕೊಳ್ಳಬೇಕು.. ಹಾಗಾಗಿ ಈ ರೋಗದ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳಬೇಕು..

Pahalgam Terror Attack: ಉಗ್ರರಿಗೆ ಬೆಂಬಲ ನೀಡುತ್ತಿರುವುದು ಹೌದು... ಸಂದರ್ಶನದಲ್ಲಿ ಒಪ್ಪಿಕೊಂಡ ಪಾಕಿಸ್ತಾನ ರಕ್ಷಣಾ ಸಚಿವ

ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದು ಹೌದು ಎಂದ ಪಾಕ್

Pakistan Defense Minister: ಸಂದರ್ಶನವೊಂದರಲ್ಲಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಅಂತಾರಾಷ್ಟ್ರೀಯ ಮಾಧ್ಯಮಗಳ ಮುಂದೆ ತಮ್ಮ ದೇಶದ ಕುಕೃತ್ಯಗಳ ಬಗ್ಗೆ ಹೇಳಿಕೊಂಡಿದ್ದಾರೆ. ಈ ಮೂಲಕ ಪಾಕಿಸ್ತಾನವು ಜಾಗತಿಕ ವೇದಿಕೆಗಳಲ್ಲಿ ಭಾರತದ ದೀರ್ಘಕಾಲೀನ ನಿಲುವನ್ನು ಸಮರ್ಥಿಸಿಕೊಂಡಿದೆ.

Amit Shah: "ಪಾಕಿಸ್ತಾನಿಗಳನ್ನು ಈ ಕೂಡಲೇ ಹುಡುಕಿ ದೇಶದಿಂದ ಹೊರದಬ್ಬಿ"  ;  ಅಮಿತ್‌ ಶಾ ಖಡಕ್‌ ಸೂಚನೆ

ಪಾಕಿಸ್ತಾನಿಗಳನ್ನು ಈ ಕೂಡಲೇ ಹುಡುಕಿ ದೇಶದಿಂದ ಹೊರದಬ್ಬಿ; ಅಮಿತ್‌ ಶಾ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಸೋಮವಾರ ನಡೆದ ಭೀಕರ ಉಗ್ರರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿಯನ್ನು ಮಾಡಲು ಮುಂದಾಗಿದೆ. ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಹೊರದಬ್ಬುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೂಚನೆ ನೀಡಿದ್ದಾರೆ.

Dr K Kasturirangan: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ

Dr K Kasturirangan: 1994 ರಿಂದ 2003ರವರೆಗೆ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ಡಾ.ಕೆ. ಕಸ್ತೂರಿ ರಂಗನ್‌ ಅವರು, 2003ರಿಂದ 2009ರವರೆಗೆ ರಾಜ್ಯಸಭೆ ಸದಸ್ಯರಾಗಿದ್ದರು. ಇನ್ನು ಇವರು ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿಯಾಗಿದ್ದಾರೆ.

Pahalgam terror attack: ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್; ಮಂಗಳೂರಿನಲ್ಲಿ ಕಿಡಿಗೇಡಿ ವಿರುದ್ಧ ಕೇಸ್‌

ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್;‌ ಕೇಸ್‌ ದಾಖಲು

Pahalgam terror attack: 2023ರಲ್ಲಿ ಮಹಾರಾಷ್ಟದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್‍ ಕುತ್ತಿಗೆಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ ಎಂದು ಕಿಡಿಗೇಡಿ, ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡಿದ್ದಾನೆ.

Kunal Kamra: ಏಕನಾಥ್ ಶಿಂಧೆ ಪ್ರಕರಣ;   ಕುನಾಲ್ ಕಮ್ರಾಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಕುನಾಲ್ ಕಮ್ರಾಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿವಾದಾತ್ಮಕ ಹೇಳೀಕೆ ನೀಡಿದ್ದ ಕುನಾಲ್‌ ಕಾಮ್ರಾಗೆ ಇದೀಗ ಬಿಗ್‌ ರಿಲೀಫ್‌ ಸಿಕ್ಕಿದೆ. ಹಾಸ್ಯನಟ ಅವರಿಗೆ ಬಾಂಬೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ. ಶುಕ್ರವಾರ ಬೆಳಿಗ್ಗೆ ನ್ಯಾಯಾಲಯವು ಶ್ರೀ ಕಮ್ರಾ ಅವರನ್ನು ಈ ಸಮಯದಲ್ಲಿ ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

Aishwarya Gowda: ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ

ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ

9.82 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್‌ ಮೇಲೆ ಗುರುವಾರ (ಏ.24) ರಂದು ದಾಳಿ ನಡೆಸಿದ್ದರು. ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದ್ದರು.

Fawad Khan Movie: ಪಾಕ್ ನಟ ಫಯಾದ್ ಖಾನ್ ನಟನೆಯ ಅಬಿರ್ ಗುಲಾಲ್ ಸಿನಿಮಾದ ಹಾಡುಗಳು ಯೂಟ್ಯೂಬ್‌ನಿಂದ ಡಿಲೀಟ್

ಪಾಕ್‌ ನಟ ಸಿನಿಮಾ ಹಾಡು ಯೂಟ್ಯೂಬ್‌ನಿಂದ ಡಿಲೀಟ್

ಪಾಕ್ ನಟ ಫವಾದ್ ಖಾನ್(Fawad Khan movie) ನಟಿಸಿರುವ ಹಿಂದಿ ಸಿನಿಮಾವೊಂದರ ಮೇಲೆ ಉಗ್ರರ ದಾಳಿಯ ನೇರ ಎಫೆಕ್ಟ್ ಬಿದ್ದಿದೆ. ಭಾರತದಲ್ಲಿ ಬಿಡುಗಡೆ ಆಗಬೇಕಿದ್ದ ಪಾಕಿಸ್ತಾನದ ನಟನ ಸಿನಿಮಾ ಒಂದಕ್ಕೆ ಇದೀಗ ಅವಕಾಶ ನಿರಾಕರಿಸಲಾಗಿದೆ. ಈ ಸಿನಿಮಾದ ಹಾಡು ಮತ್ತು ಟೀಸರ್ ನ ತುಣುಕು ಯೂಟ್ಯೂಬ್‌ನಿಂದ ತೆಗೆದುಹಾಕಲಾಗಿದೆ.

IND vs PAK: ಇನ್ನು ಮುಂದೆ ವಿಶ್ವಕಪ್ ಗ್ರೂಪ್ ಹಂತದಲ್ಲಿ ಭಾರತ-ಪಾಕ್‌ ಪಂದ್ಯ ನಡೆಯುವುದು ಅನುಮಾನ!

ವಿಶ್ವಕಪ್ ಗ್ರೂಪ್ ಹಂತದಲ್ಲಿ ಭಾರತ-ಪಾಕ್‌ ಪಂದ್ಯ ನಡೆಯುವುದು ಅನುಮಾನ!

Pahalgam Terrorist Attack: ಮುಂಬರುವ ವಿಶ್ವಕಪ್ ಕೂಟದಲ್ಲಿ ಭಾರತ ಪಾಕಿಸ್ಥಾನ ಪಂದ್ಯಗಳ ಮೇಲೆ ಪಹಲ್ಗಾಮ್‌ನ ಉಗ್ರರ ದಾಳಿಯ ಕರಿನೆರಳು ಬಿದ್ದಿದ್ದು, ಈ ಸಂಬಂಧವಾಗಿ, ಬಿಸಿಸಿಐ ಮತ್ತು ಭಾರತ ಸರಕಾರ ಯಾವ ನಿಲುವನ್ನು ತಳೆಯಲಿದೆ ಎಂಬ ಕುತೂಹಲ ಎರಡೂ ದೇಶಗಳ ಕ್ರಿಕೆಟ್ ಪ್ರೇಮಿಗಳಲ್ಲಿ ಮೂಡಿದೆ.

Rahul Gandhi: ಸ್ವಾತಂತ್ರ್ಯ ಹೋರಾಟಗಾರರಿಗೆ ಕೊಡುವ ಗೌರವ ಇದೇನಾ? ಸಾವರ್ಕರ್‌ ವಿರುದ್ಧದ ಹೇಳಿಕೆಗೆ ರಾಹುಲ್‌ಗಾಂಧಿಗೆ ಸುಪ್ರೀಂ ಕ್ಲಾಸ್‌

ಸಾವರ್ಕರ್‌ಗೆ ಅಪಮಾನ; ರಾಹುಲ್‌ಗಾಂಧಿಗೆ ಸುಪ್ರೀಂ ಕ್ಲಾಸ್‌

Supreme Court Slams Rahul Gandhi:ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ ಆಗಿದೆ. ಈ ವರ್ತನೆ ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

Bhagya Lakshmi Serial: ತಾಂಡವ್ ಆಫೀಸಲ್ಲಿ ಭಾಗ್ಯಂಗೆ ಸಿಕ್ತು ಭಾರೀ ಗೌರವ: ದಂಗಾದ ಶ್ರೇಷ್ಠಾ

ತಾಂಡವ್ ಆಫೀಸಲ್ಲಿ ಭಾಗ್ಯಂಗೆ ಸಿಕ್ತು ಭಾರೀ ಗೌರವ: ದಂಗಾದ ಶ್ರೇಷ್ಠಾ

ಕುತೂಹಲ ತಡೆಯಲಾಗದೆ ತಾಂಡವ್-ಶ್ರೇಷ್ಠಾ, ಭಾಗ್ಯ ಬಳಿಯೇ ಹೋಗಿ ನಿನೇನು ಮಾಡ್ತಾ ಇದ್ದೀಯ ಇಲ್ಲಿ? ಎಂದು ಪ್ರಶ್ನಿಸಿದ್ದಾರೆ. ಆಗ ಭಾಗ್ಯ ಏನೋ ಸ್ವಲ್ಪ ಕೆಲಸ ಇತ್ತು, ಅದಕ್ಕಾಗಿ ಬಂದೆ ಎಂದು ಅಲ್ಲಿಂದ ಹೊರಟು ಹೋಗಿದ್ದಾಳೆ. ಶ್ರೇಷ್ಠಾ ನಾನಾ ಪ್ಲ್ಯಾನ್ ಮಾಡಿ ಹೆಚ್ಆರ್ ಬಳಿ ಹೋಗಿ ಭಾಗ್ಯ ಯಾಕೆ ಬಂದಿದ್ದಳು ಎಂಬ ವಿಚಾರವನ್ನು ತಿಳಿಯಲು ಮುಂದಾಗುತ್ತಾಳೆ. ಆದರೆ,

Indian Airlines: ವಾಯುಮಾರ್ಗ ಮುಚ್ಚಿದ ಪಾಕ್‌; ಏರ್‌ಇಂಡಿಯಾ, ಇಂಡಿಗೋ ವಿಮಾನಗಳು ಡೈವರ್ಟ್‌

ಭಾರತೀಯ ವಿಮಾನಗಳಿಗೆ ವಾಯುಪ್ರದೇಶ ಮುಚ್ಚಿದ ಪಾಕ್

ಪಹಲ್ಗಾಮ್‌ ದುರಂತ (Pahalgam attack) ನಂತರ ಭಾರತ ಸರ್ಕಾರ ಕೈಗೊಂಡ ಕ್ರಮಗಳಿಗೆ ಪ್ರತಿಯಾಗಿ ಪಾಕಿಸ್ತಾನವು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಹೀಗಾಗಿ ಸೇವೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಇಂಡಿಗೋ ಮತ್ತು ಏರ್ ಇಂಡಿಯಾ ಪ್ರಯಾಣಿಕರಿಗೆ ತಿಳಿಸಿದೆ. ವಿಮಾನ ಮಾರ್ಗಗಳನ್ನು ಬದಲಾಯಿಸಬೇಕಾಗಿರುವುದರಿಂದ "ಪರ್ಯಾಯ ವಿಸ್ತೃತ ಮಾರ್ಗ" ಕ್ಕೆ ಕಾರಣವಾಗುವ ಕೆಲವು ಅಂತಾರಾಷ್ಟ್ರೀಯ ವಿಮಾನಗಳ ವೇಳಾಪಟ್ಟಿಯ ಮೇಲೆ ಇದು ಪರಿಣಾಮ ಬೀರುತ್ತದೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.

Shimla Agreement: ಶಿಮ್ಲಾ ಒಪ್ಪಂದ ಮುರಿಯುವ ಬೆದರಿಕೆ-ಯುದ್ಧಕ್ಕೆ ಅಹ್ವಾನ ನೀಡಿತೇ ಪಾಕ್ ?

ಭಾರತಕ್ಕೆ ಪಾಕ್‌ನಿಂದ ಶಿಮ್ಲಾ ಒಪ್ಪಂದ ಮುರಿಯುವ ಬೆದರಿಕೆ

ದಕ್ಷಿಣ ಕಶ್ಮೀರ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರವು ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ ಶಿಮ್ಲಾ ಒಪ್ಪಂದವನ್ನು ಮುರಿಯುವುದಾಗಿ ಬೆದರಿಕೆ ಒಡ್ಡುತ್ತಿದೆ. ಈ ಮೂಲಕ ಪಾಕಿಸ್ತಾನವು ಯುದ್ಧ ನಡೆಸಲು ಭಾರತಕ್ಕೆ ಬಹಿರಂಗವಾಗಿಯೇ ಅಹ್ವಾನ ನೀಡುತ್ತಿದೆ. ಒಂದು ವೇಳೆ ಪಾಕಿಸ್ತಾನ ಈ ಒಪ್ಪಂದ ಮುರಿದರೆ ಮತ್ತೊಮ್ಮೆ ಎರಡು ದೇಶಗಳ ನಡುವೆ ಯುದ್ಧ ಪ್ರಾರಂಭವಾಗುವುದರಲ್ಲಿ ಸಂದೇಹವಿಲ್ಲ.

Abir Gulaal Ban In India: ಪಾಕ್ ನಟ ಫವಾದ್ ಖಾನ್ ಅಭಿನಯದ ಬಾಲಿವುಡ್‌ ಚಿತ್ರ 'ಅಬೀರ್ ಗುಲಾಲ್’ ಬ್ಯಾನ್

ಪಾಕ್ ನಟನ ಸಿನಿಮಾ ರಿಲೀಸ್‌ಗೆ ನಿಷೇಧ ಹೇರಿದ ಭಾರತ

Abir Gulaal Ban In India: ಪಾಕಿಸ್ತಾನಿ ನಟ ಫವಾದ್ ಖಾನ್ ಅಭಿನಯದ ಬಾಲಿವುಡ್ ಚಿತ್ರ ಅಬೀರ್ ಗುಲಾಲ್ ಭಾರತದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ವಾಣಿ ಕಪೂರ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರ ಮಂಗಳವಾರ ನಡೆದ ಭೀಕರ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸಂಬಂಧಿಸಿದ ಮೂಲಗಳು ತಿಳಿಸಿವೆ.

‌Ricky Rai Shoot out: ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ! ಬಾಯಿ ಬಿಟ್ಟ ಗನ್‌ ಮ್ಯಾನ್

ತನಗೆ ತಾನೇ ಗುಂಡಿಕ್ಕಿಕೊಂಡು ರಿಕ್ಕಿ ರೈ ನಾಟಕ! ಬಾಯಿ ಬಿಟ್ಟ ಗನ್‌ ಮ್ಯಾನ್

ಸಾಕಷ್ಟು ಅನುಮಾನ ಉಂಟಾಗಿದ್ದರಿಂದ ರಿಕ್ಕಿ ರೈ ಗನ್ ಮ್ಯಾನ್ ವಿಠಲ್‌ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆಯ ವೇಳೆ ಆತ ಮಹತ್ವದ ಮಾಹಿತಿ ನೀಡಿದ್ದಾನೆ.

Pahalgam Terror Attack: ಹಮಾಸ್- ಪಾಕ್ ಬೆಂಬಲಿತ ಲಷ್ಕರ್ ನಡುವೆ ಸಂಪರ್ಕ ಇದೆ ಎಂದ ಇಸ್ರೇಲ್ ರಾಯಭಾರಿ

ಪಹಲ್ಗಾಮ್‌ ದಾಳಿಯನ್ನು ಹಮಾಸ್ ದಾಳಿಗೆ ಹೋಲಿಸಿದ ಇಸ್ರೇಲ್‌ ರಾಯಭಾರಿ

Pahalgam Terror Attack: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿನಡೆದ ಭಯೋತ್ಪಾದಕ ದಾಳಿಯನ್ನು ಇಸ್ರೇಲ್‌ನ ರಾಯಭಾರಿ ರಿಯುವೆನ್ ಅಜಾರ್ ಅವರು 2023ರ ಅಕ್ಟೋಬರ್ 7ರ ಹಮಾಸ್ ದಾಳಿಗೆ ಹೋಲಿಸಿದ್ದಾರೆ. ಈ ಎರಡೂ ದಾಳಿಗಳು ನಾಗರಿಕರನ್ನು ಗುರಿಯಾಗಿಸಿಕೊಂಡಿರುವುದರಿಂದ ಸಾಮ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

RCB vs RR: ರಾಜಸ್ಥಾನ್‌ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ನಿರ್ಮಿಸಿದ ದಾಖಲೆ ಪಟ್ಟಿ

ರಾಜಸ್ಥಾನ್‌ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ನಿರ್ಮಿಸಿದ ದಾಖಲೆ ಪಟ್ಟಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮುಂಬೈ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಮತ್ತೆ ಮೂರನೇ ಸ್ಥಾನಕ್ಕೇರಿದೆ. ಆಡಿದ 9 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ 12 ಅಂಕ ಪಡೆದಿರುವ ಆರ್‌ಸಿಬಿ ಇನ್ನೆರಡು ಗೆಲುವು ಸಾಧಿಸಿದರೆ ತಂಡದ ಪ್ಲೇ ಆಫ್‌ ಸ್ಥಾನ ಖಚಿತವಾಗಲಿದೆ. ತಂಡಕ್ಕೆ ಇನ್ನು 5 ಪಂದ್ಯಗಳು ಬಾಕಿ ಇದೆ.

Pahalgam terror Attack: ಭಾರತೀಯ ಸೇನೆಯ ಭರ್ಜರಿ ಬೇಟೆ-  ಲಷ್ಕರ್‌ ತೊಯ್ಬಾ ಟಾಪ್‌ ಕಮಾಂಡರ್‌ ಫಿನೀಶ್‌!

LeT ಟಾಪ್‌ ಕಮಾಂಡರ್‌ ಫಿನೀಶ್‌!

LeT commander encounter:ಪಹಲ್ಗಾಮ್‌ನಲ್ಲಿ ಮೂರು ದಿನಗಳ ಹಿಂದೆ ನಡೆದ ರಣ ಭೀಕರ ಉಗ್ರ ದಾಳಿ ಬೆನ್ನಲ್ಲೇ ಭಯೋತ್ಪಾದಕರ ಬೇಟೆಗೆ ಇಳಿದಿರುವ ಭಾರತೀಯ ಸೇನೆ ಲಷ್ಕರ್‌- ತೊಯ್ಬಾ ಉಗ್ರ ಸಂಘಟನೆಯ ಟಾಪ್‌ ಕಮಾಂಡರ್‌ನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 25th April 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಇಳಿಕೆ ಕಂಡು ಬಂದಿದ್ದು, 9,005ರೂ. ಇದ್ದು, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಇಳಿಕೆ ಆಗಿ ಪ್ರಸ್ತುತ 9,824 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 90,050 ರೂ. ಮತ್ತು 100 ಗ್ರಾಂಗೆ 9,00,500 ರೂ. ನೀಡಬೇಕಾಗುತ್ತದೆ.

ಇಎಂಐ ರೂಪದಲ್ಲಿ ನೀರು ಶುಲ್ಕ ಪಾವತಿಸಿ

ಇಎಂಐ ರೂಪದಲ್ಲಿ ನೀರು ಶುಲ್ಕ ಪಾವತಿಸಿ

ಬೆಂಗಳೂರು ಜಲಮಂಡಳಿ ಈಗಾಗಲೇ ಕಾವೇರಿ ಐದನೇ ಹಂತವನ್ನು ಅನುಷ್ಠಾನಗೊಳಿಸಿದ್ದರೂ, ನಿರೀ ಕ್ಷಿತ ಪ್ರಮಾಣದಲ್ಲಿ ಸಂಪರ್ಕ ಪಡೆಯಲು ಗೃಹಬಳಕೆದಾರರು ಮುಂದೆ ಬಂದಿಲ್ಲ. ಆದ್ದರಿಂದ ಇದೀಗ ಬೆಂಗಳೂರು ಜಲಮಂಡಳಿ ವಿನೂತನ ಪ್ರಯೋಗಕ್ಕೆ ಕೈಹಾಕಿದ್ದು ನೂತನ ಕಾವೇರಿ ನೀರಿನ ಸಂಪರ್ಕ ಪಡೆಯಲು ನೀಡಬೇಕಿರುವ ಡೆಪಾಸಿಟ್ ಹಣವನ್ನು ಆರಂಭಿಕ ಹಂತದಲ್ಲಿ ಶೇ.20ರಷ್ಟು ಪಾವತಿಸಿ, ಇನ್ನುಳಿದ ವರ್ಷದ ಅವಧಿಯಲ್ಲಿ ಬಾಕಿ ಮೊತ್ತ ಪಾವತಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ

Pahalgam Terror Attack: 2 ದಿನಗಳಲ್ಲಿ ಪಾಕಿಸ್ತಾನ ವಿರುದ್ಧ 7 ದೊಡ್ಡ ನಿರ್ಧಾರ ಕೈಗೊಂಡ ಭಾರತ

ಪಾಕಿಸ್ತಾನದ ವಿರುದ್ಧ ಭಾರತದ ಪ್ರತೀಕಾರ ಹೇಗಿದೆ ಗೊತ್ತಾ..?

Pahalgam Terror Attack: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಭಾರತ ದಿಟ್ಟ ಹೆಜ್ಜೆ ಇಟ್ಟಿದ್ದು, ಭಾರತವು ಅಟಾರಿ ಗಡಿ ಬಂದ್ ಮಾಡಿದ್ದು, ಪಾಕಿಸ್ತಾನದ ಮೇಲೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವ ಭಾರತ, ಪಾಕಿಸ್ತಾನದೊಂದಿಗಿನ ತನ್ನ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿದೆ. ಪಾಕಿಸ್ತಾನಿಗರಿಗೆ ವೀಸಾ ಸೇವೆ ಸ್ಥಗಿತಗೊಳಿಸಿದ್ದು, ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇದರಿಂದ ಪಾಕಿಸ್ತಾನ ಕಂಗಾಲಾಗಿದೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.

Pahalgam terror Attack: ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಲಷ್ಕರ್‌ ಉಗ್ರರ ಮನೆಗಳು ಧ್ವಂಸ

ಇಬ್ಬರು ಲಷ್ಕರ್‌ ಉಗ್ರರ ಮನೆಗಳು ಧ್ವಂಸ

Lashkar Terrorists: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಬೆನ್ನಲ್ಲೇ ಇಬ್ಬರು ಶಂಕಿತ ಉಗ್ರರ ನಿವಾಸಗಳನ್ನು ಭಾರತೀಯ ಸೇನೆ ಪುಡಿಗಟ್ಟಿದೆ. ಸ್ಫೋಟಕಗಳನ್ನು ಸ್ಫೋಟಿಸಿ ಉಗ್ರರ ಮನೆಗಳನ್ನು ಧ್ವಂಸ ಮಾಡಲಾಗಿದೆ. ಲಷ್ಕರ್-ಎ-ತೈಬಾ (LET) ಭಯೋತ್ಪಾದಕ ಸಂಘಟನೆಯ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳು ನಾಶಗೊಂಡಿವೆ.

MS Dhoni: ಟಿ20ಯಲ್ಲಿ ವಿಶೇಷ ಮೈಲಿಗಲ್ಲು ನಿರ್ಮಿಸಲು ಧೋನಿ ಸಜ್ಜು

ಟಿ20ಯಲ್ಲಿ ವಿಶೇಷ ಮೈಲಿಗಲ್ಲು ನಿರ್ಮಿಸಲು ಧೋನಿ ಸಜ್ಜು

IPL 2025: ಐಪಿಎಲ್ 2025 ಮುಗಿಯುವ ಹೊತ್ತಿಗೆ ಧೋನಿಗೆ 44 ವರ್ಷ ವಯಸ್ಸಾಗುತ್ತದೆ. ಆದ್ದರಿಂದ ಧೋನಿಗೆ ಈ ಬಾರಿಯ ಐಪಿಎಲ್‌ ಕೊನೆಯ ಆವೃತ್ತಿ ಎನ್ನಲಾಗಿದೆ. ಆದರೆ ಧೋನಿ ಮಾತ್ರ ತಮ್ಮ ನಿವೃತ್ತಿಯ ವಿಚಾರವನ್ನು ತಳ್ಳಿ ಹಾಕುತ್ತಲೇ ಇದ್ದಾರೆ. ನಿವೃತ್ತಿ ನಿರ್ಧರಿಸುವುದು ನಾನಲ್ಲ, ನನ್ನ ದೇಹ ಎಂದು ಹೇಳುತ್ತಿದ್ದಾರೆ.

Mittu Changappa passed Away: ಇಂದಿರಾ ಗಾಂಧಿ ಆಪ್ತ, ಕಾಂಗ್ರೆಸ್‌ ನಾಯಕ ಮಿಟ್ಟು ಚಂಗಪ್ಪ ಇನ್ನಿಲ್ಲ

ಇಂದಿರಾ ಗಾಂಧಿ ಆಪ್ತ, ಕಾಂಗ್ರೆಸ್‌ ನಾಯಕ ಮಿಟ್ಟು ಚಂಗಪ್ಪ ಇನ್ನಿಲ್ಲ

ಕಿಂಗ್ ಮೇಕರ್ ಆಗಿ ಕಂಗೊಳಿಸಿದ್ದ ಮಿಟ್ಟು ಅವರು ಇಂದಿರಾ ಗಾಂಧಿ, ಗುಂಡೂರಾವ್, ಎಸ್.ಎಂ. ಕೖಷ್ಣ, ಸಿದ್ದರಾಮಯ್ಯ, ಶಿವಕುಮಾರ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆಲ್ಲರಿಗೂ ಆತ್ಮೀಯರಾಗಿದ್ದರು. 32 ಚುನಾವಣೆಗಳಲ್ಲಿಯೂ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿ ಮತದಾನ ಜಾಗೃತಿಯ ರಾಯಭಾರಿಯಂತೆ ಗಮನ ಸೆಳೆದಿದ್ದರು.