ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತಾಜಾ ಸುದ್ದಿ

ಹೊಟೇಲ್ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಹೊರೆ; ತಿಂಡಿ ಬೆಲೆ ಹೆಚ್ಚಳ

ಬೆಂಗಳೂರಿನಲ್ಲಿ ಹೊಟೇಲ್ ತಿಂಡಿ ತಿನಿಸು ಬೆಲೆ ಏರಿಕೆ

ಊಟ, ತಿಂಡಿಗಾಗಿ ಹೊಟೇಲ್ ಅನ್ನೇ ನೆಚ್ಚಿಕೊಂಡಿದ್ದೀರಾ ? ಹಾಗಿದ್ದರೆ ಬೆಂಗಳೂರು ಹೊಟೇಲ್ ಗಳು ನಿಮಗೆ ಶಾಕ್ ಕೊಡುವುದು ಗ್ಯಾರಂಟಿ. ಬಹುತೇಕ ಎಲ್ಲಾ ಹೊಟೇಲ್ ಗಳಲ್ಲೂ ಚಹಾ, ಕಾಫಿ, ತಿಂಡಿ, ಊಟದ ಬೆಲೆಯನ್ನು ಹೆಚ್ಚಿಸಲಾಗಿದೆ. ಕನಿಷ್ಠ 5 ರೂ. ನಿಂದ 20 ರೂ. ವರೆಗೂ ದರ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರ ಜೇಬಿಗೆ ಕತ್ತರಿ ಹಾಕಲಿದೆ.

BJP MLA DN Jeevaraj: ಅಂಚೆ ಮತ ತಿರುಚಿದ ಆರೋಪ; ಶೃಂಗೇರಿ ಬಿಜೆಪಿ ಶಾಸಕ ಡಿ.ಎನ್‌. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಶೃಂಗೇರಿ ಶಾಸಕ ಡಿ.ಎನ್‌. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

2023ರಲ್ಲಿ ಮತ ತಿರುಚಿರುವುದು ನಡೆದಿದೆ ಎನ್ನುವುದಾದರೆ ಆ ವಿಚಾರವನ್ನು ಮರು ಎಣಿಕೆಗೆ ಆದೇಶಿಸಿದ ನ್ಯಾಯಾಲಯದ ಗಮನಕ್ಕೆ ತಂದು, ನಿರ್ದೇಶನ ಪಡೆದು ಮುಂದುವರಿಯಬೇಕಿತ್ತು. ದೂರಿನಲ್ಲಿ ಹಾಲಿ ಚುನಾವಣಾಧಿಕಾರಿ ಗೌರವ್‌ ಶೆಟ್ಟಿಯನ್ನು ಏಕೆ ಆರೋಪಿ ಮಾಡಲಾಗಿಲ್ಲ ಎಂದು ಪ್ರಶ್ನಿಸಿರುವ ಕೋರ್ಟ್‌, ಶಾಸಕ ಜೀವರಾಜ್‌ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.

ಆರ್‌ಸಿಬಿ ಜತೆ 18 ವರ್ಷ ಸಮಯ ಕಳೆದಿದ್ದ ಎವನ್ ಸ್ಪೀಚ್ಲಿಗೆ ವಿರಾಟ್‌ ಕೊಹ್ಲಿ ಭಾವನಾತ್ಮಕ ಸಂದೇಶ!

ಆರ್‌ಸಿಬಿ ಹೆಡ್‌ ಫಿಸಿಯೊ ಎವನ್‌ ಸ್ಪೀಚ್ಲಿಗೆ ವಿರಾಟ್‌ ಕೊಹ್ಲಿ ಸಂದೇಶ!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ ಕಳೆದ 18 ವರ್ಷಗಳಿಂದ ಹೆಡ್‌ ಫಿಸಿಯೊ ಆಗಿ ಸೇವೆ ಸಲ್ಲಿಸಿದ್ದ ಎವನ್‌ ಸ್ಪೀಚ್ಲಿ ಅವರು ವಿದಾಯ ಹೇಳಿದ್ದಾರೆ. ಆ ಮೂಲಕ ತಮ್ಮ ದೀರ್ಘಾವಧಿ ಆರ್‌ಸಿಬಿ ಜೊತೆಗಿನ ಪಯಣವನ್ನು ಅಂತ್ಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ.

ಮೇ 9ರ ರವೀಂದ್ರನಾಥ್ ಟ್ಯಾಗೋರ್ ಜನ್ಮ ದಿನಾಚರಣೆಯಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣ ವಚನ

ಮೇ 9ರಂದು ಬಂಗಾಳದಲ್ಲಿ ಬಿಜೆಪಿ ಸರ್ಕಾರ ಪ್ರಮಾಣ ವಚನ ಸಾಧ್ಯತೆ

BJP government in Bengal: ನೋಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ್ ಟ್ಯಾಗೋರ್ ಅವರ ಜನ್ಮದಿನದಂದೇ ಅಂದರೆ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಕೂಡ ಈ ದಿನಾಂಕವನ್ನು ದೃಢಪಡಿಸಿದ್ದಾರೆ.

ಶೃಂಗೇರಿ ಕ್ಷೇತ್ರದ ಮರುಎಣಿಕೆ: ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ ಎಂದ ಡಿ.ಕೆ. ಶಿವಕುಮಾರ್

ಶೃಂಗೇರಿ ಮರುಎಣಿಕೆ: ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ: ಡಿಕೆಶಿ

DK Shivakumar: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಗೆದ್ದ 19 ಶಾಸಕರಲ್ಲಿ 18 ಮಂದಿ ಮುಸ್ಲಿಮರು!

ಅಸ್ಸಾಂನಲ್ಲಿ ಕಾಂಗ್ರೆಸ್‌ನಿಂದ ಗೆದ್ದ 19 ಶಾಸಕರಲ್ಲಿ 18 ಮಂದಿ ಮುಸ್ಲಿಮರು!

ಮೇ 4ರಂದು ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಲ್ಲಿ ಸ್ಪರ್ಧಿಸಿದ ಮುಸ್ಲಿಂ ಅಭ್ಯರ್ಥಿಗಳು ಗಮನಾರ್ಹ ಯಶಸ್ಸು ಸಾಧಿಸಿದ್ದಾರೆ. ವಿಶೇಷವಾಗಿ ಅಸ್ಸಾಂನಲ್ಲಿ ಕಾಂಗ್ರೆಸ್‌ನಿಂದ ಗೆದ್ದ 19 ಸ್ಥಾನಗಳಲ್ಲಿ 18 ಮಂದಿ ಮುಸ್ಲಿಂ ಅಭ್ಯರ್ಥಿಗಳು. ಆ ಮೂಲಕ ಸುಮಾರು ಶೇ. 90ರಷ್ಟು ಯಶಸ್ಸು ದಾಖಲಿಸಲಾಗಿದೆ. ಅದೇ ಸಮಯದಲ್ಲಿ ಮುಸ್ಲಿಮೇತರ ಅಭ್ಯರ್ಥಿಗಳ ಪ್ರದರ್ಶನ ಅತ್ಯಂತ ದುರ್ಬಲವಾಗಿತ್ತು. ಕೇರಳಂನಲ್ಲಿಯೂ ಯುಡಿಎಫ್ ಮೈತ್ರಿಕೂಟದ ಮೂಲಕ ಹೆಚ್ಚಿನ ಮುಸ್ಲಿಂ ಶಾಸಕರು ಆಯ್ಕೆಯಾಗಿದ್ದು, ರಾಜಕೀಯ ಸಮೀಕರಣಗಳಲ್ಲಿ ಮತಧ್ರುವೀಕರಣದ ಸ್ಪಷ್ಟ ಚಿತ್ರಣ ಕಂಡುಬಂದಿದೆ.

ಶೃಂಗೇರಿಯಲ್ಲಿ ಬಿಜೆಪಿಯು ವೋಟ್ ಚೋರಿ ಮಾಡಿರುವುದು ಸ್ಪಷ್ಟ: ಸಿಎಂ ಆರೋಪ

ಶೃಂಗೇರಿಯಲ್ಲಿ ಬಿಜೆಪಿಯು ವೋಟ್ ಚೋರಿ ಮಾಡಿರುವುದು ಸ್ಪಷ್ಟ: ಸಿಎಂ

Sringeri Postal Ballot Recount: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ರಾಜೇಗೌಡರಿಗೆ 255 ಮತಗಳು ಅನರ್ಹ ಆಗಿವೆ. ಜೀವರಾಜ್ ಅವರಿಗೆ ಮರು ಎಣಿಕೆಯಲ್ಲಿ 690 ಮತಗಳು ಲಭಿಸಿವೆ. ಇದರಿಂದ ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ, ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ಇದು ವೋಟ್ ಡಕಾಯಿತಿಯಾಗಿದೆ ಎಂದು ಆರೋಪಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇಂದಿರಾ ಗಾಂಧಿ ಕಾಲದ ಕಾಂಗ್ರೆಸ್ ದಾಖಲೆ ಸರಿಗಟ್ಟಿದ ಬಿಜೆಪಿ: ಈಗ ಕಛ್‌ನಿಂದ ಕಿಬಿತ್ತುವರೆಗೆ ಕೇಸರಿ ಅಲೆ

21 ರಾಜ್ಯಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಬಿಜೆಪಿ

ಅಸ್ಸಾಂನಲ್ಲಿ ಸತತ ಮೂರನೇ ಬಾರಿ ಅಧಿಕಾರವನ್ನು ಕಾಪಾಡಿಕೊಂಡು, ಪಶ್ಚಿಮ ಬಂಗಾಳದಲ್ಲಿ ಮಹತ್ವದ ಗೆಲುವು ಸಾಧಿಸುವ ಮೂಲಕ ಬಿಜೆಪಿ ತನ್ನ ರಾಜಕೀಯ ಪ್ರಭಾವವನ್ನು ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿದೆ. 2014ರಲ್ಲಿ ಕೇವಲ ಏಳು ರಾಜ್ಯಗಳಲ್ಲಿ ಮಾತ್ರ ಅಧಿಕಾರ ಹೊಂದಿದ್ದ ಪಕ್ಷ, ಸಂಘಟನಾ ಶಕ್ತಿ, ಮೈತ್ರಿ ರಾಜಕೀಯ ಮತ್ತು ಬೂತ್ ಮಟ್ಟದ ಕಾರ್ಯತಂತ್ರಗಳ ಮೂಲಕ ದೊಡ್ಡ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ. ಈ ಸಾಧನೆ ಇಂದಿರಾ ಗಾಂಧಿಯ ಕಾಲದಲ್ಲಿ ಕಾಂಗ್ರೆಸ್ ಹೊಂದಿದ್ದ ಐತಿಹಾಸಿಕ ಪ್ರಾಬಲ್ಯಕ್ಕೆ ಸಮಾನವಾಗಿದೆ. 2024ರ ಲೋಕಸಭಾ ಚುನಾವಣೆಯ ಹಿನ್ನಡೆಯ ನಂತರವೂ ಬಿಜೆಪಿ ಪುನರುತ್ಥಾನ ಸಾಧಿಸಿದ್ದು, ರಾಷ್ಟ್ರ ರಾಜಕೀಯದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೆ ದೃಢಪಡಿಸಿದೆ.

ಬೆಂಗಳೂರಿನಲ್ಲಿ ಮೇ 11ರಿಂದ ಪರಮ್ ಹಿಸ್ಟರಿ ಸೆಂಟರ್‌ನಿಂದ 'ಅನ್ವೇಷಣ 2026' ಬೇಸಿಗೆ ಶಿಬಿರ

ಬೆಂಗಳೂರಿನಲ್ಲಿ ಮೇ 11ರಿಂದ 'ಅನ್ವೇಷಣ 2026' ಬೇಸಿಗೆ ಶಿಬಿರ

Bengaluru News: ಪರಮ್ ಹಿಸ್ಟರಿ ಸೆಂಟರ್‌ನಿಂದ ಮೇ 11 ರಿಂದ ಮೇ 17ರವರೆಗೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್‌ನಲ್ಲಿರುವ 'ಯುವಪಥ' ದಲ್ಲಿ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ವಿಭಿನ್ನ ಮತ್ತು ಆಕರ್ಷಕ ಕಾರ್ಯಚಟುವಟಿಕೆ, ರೋಚಕ ಕಥೆಗಳು ಹಾಗೂ ನೈಜ ಅನುಭವದ ಮಾಧ್ಯಮಗಳ ಮೂಲಕ ಮಕ್ಕಳನ್ನು ನಮ್ಮ ಇತಿಹಾಸದ ಕಾಲಗರ್ಭಕ್ಕೆ ಕರೆದೊಯ್ಯುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ.

Gold Price Today On 5th May 2026: ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಭಾರಿ ಇಳಿಕೆ

ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ

Gold Silver Rate: ಇಂದು ಚಿನ್ನದ ದರ ಇಳಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 40 ರುಪಾಯಿ ಕಡಿಮೆಯಾಗಿದ್ದು, ಆ ಮೂಲಕ 13,675 ರುಪಾಯಿಗೆ ಇಳಿದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 44 ರುಪಾಯಿ ಅಗ್ಗವಾಗಿದ್ದು, 14,918 ರುಪಾಯಿಗೆ ಬಂದು ತಲುಪಿದೆ.

Bengaluru Airport: ಬೆಂಗಳೂರು ವಿಮಾನ ನಿಲ್ದಾಣ ಈಗ ಮತ್ತಷ್ಟು ಸ್ಮಾರ್ಟ್‌; ಅಪಘಾತ ತಡೆಗೆ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ ಜಾರಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ

ವಿಮಾನಗಳು ಓಡಾಡುವ ಜಾಗದಲ್ಲಿಭದ್ರತೆ ಹೆಚ್ಚಿಸಲು 'ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ವಿಮಾನ ನಿಲ್ದಾಣವು ಜಾರಿಗೆ ತಂದಿದೆ. ಹೊಸ ವ್ಯವಸ್ಥೆಯು ಸ್ಮಾರ್ಟ್ ಕ್ಯಾಮೆರಾಗಳು ಮತ್ತು ಎಐ ತಂತ್ರಜ್ಞಾನವನ್ನು ಒಳಗೊಂಡಿದ್ದು, ಇದು ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಗುರುತಿಸಿ, ಏನಾದರೂ ಅಪಾಯ ಎದುರಾದರೆ ತಕ್ಷಣವೇ ಎಚ್ಚರಿಕೆ ನೀಡುತ್ತದೆ.

ನನ್ನ ಸ್ವಂತ ಮನೆಗೆ ಭೇಟಿ ನೀಡಲು ಅನುಮತಿ ಬೇಕೆ? ಪಿತೃ ಪ್ರಧಾನ ಮದುವೆ ಸಂಪ್ರದಾಯದ ವಿರುದ್ಧ ಯುವತಿ ಆಕ್ರೋಶ

ಮದುವೆ ಮಂಟಪದಲ್ಲೇ ಪಿತೃಪ್ರಧಾನ ಪದ್ಧತಿ ಖಂಡಿಸಿದ ವಧು

Viral News: ಮದುವೆಯೊಂದರಲ್ಲಿ ಪಿತೃ ಪ್ರಧಾನ ಭಾರತೀಯ ವಿವಾಹ ಆಚರಣೆಯ ಬಗ್ಗೆ ಯುವತಿಯೊಬ್ಬಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಿವಾಹದ ವಿಧಿ ವಿಧಾನದ ಸಂದರ್ಭ ದಲ್ಲಿ ಪಾದ್ರಿಯೂ ವಧುವನ್ನು ತನ್ನ ಗಂಡನ ಒಪ್ಪಿಗೆಯಿಲ್ಲದೆ ತನ್ನ ಪೋಷಕರ ಮನೆಗೆ ಭೇಟಿ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ಕೇಳುವಾಗ ವಧು ಮದುವೆ ಸಮಾರಂಭದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ನೋಯ್ಡಾ ಕಾಲೇಜಿನಲ್ಲಿ ಜೂನಿಯರ್ ವಿದ್ಯಾರ್ಥಿನಿ ಮೇಲೆ ಹಲ್ಲೆ: ಕಪಾಳಮೋಕ್ಷ ಮಾಡಿ ದೌರ್ಜನ್ಯ!

ನೋಯ್ಡಾದಲ್ಲಿ ಸೀನಿಯರ್ ವಿದ್ಯಾರ್ಥಿಗಳ ರ‍್ಯಾಗಿಂಗ್: ನೆಟ್ಟಿಗರು ಕಿಡಿ

Viral Video: ಗ್ರೇಟರ್ ನೋಯ್ಡಾದ ಖಾಸಗಿ ವಿಶ್ವವಿದ್ಯಾಲಯದ ವಿಡಿಯೊವೊಂದು ವೈರಲ್ ಆಗಿದ್ದು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆಯನ್ನು ನಡೆಸಿದೆ. ವಿದ್ಯಾರ್ಥಿನಿಯೊಬ್ಬಳು ಜೂನಿಯರ್ ವಿದ್ಯಾರ್ಥಿನಿಗೆ ಸರಿಯಾಗಿ ನಿಂದಿಸಿ ಕಪಾಳಮೋಕ್ಷ ಮಾಡಿದ್ದಾಳೆ‌. ಸದ್ಯ ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆತಂಕವನ್ನು ವ್ಯಕ್ತ ಪಡಿಸಿದ್ದಾರೆ..

ಯುಎಇ ವಿರುದ್ಧ ಇರಾನ್ ಮತ್ತೆ ಕ್ಷಿಪಣಿ ದಾಳಿ, ಮೂವರು ಭಾರತೀಯರಿಗೆ ಗಾಯ: ಭಾರತ ಖಂಡನೆ

ಯುಎಇ ವಿರುದ್ಧ ಇರಾನ್ ಮತ್ತೆ ಕ್ಷಿಪಣಿ ದಾಳಿ; ಭಾರತೀಯರಿಗೆ ಗಾಯ

Missile attack by Iran: ಯುಎಇಯ ಫುಜೈರಾ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ನಡೆಸಿದ ದಾಳಿಯನ್ನು ಭಾರತ ಖಂಡಿಸಿದೆ. ಈ ದಾಳಿಯಲ್ಲಿ ಮೂವರು ಭಾರತೀಯ ಪ್ರಜೆಗಳು ಗಾಯಗೊಂಡಿದ್ದಾರೆ. ಇದನ್ನು ಖಂಡಿಸಿರುವ ಭಾರತ, ಸ್ವೀಕಾರ್ಹವಲ್ಲ ಎಂದು ಹೇಳಿದೆ. ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿದೆ.

ತಮಿಳುನಾಡು ಚುನಾವಣೆ ಫಲಿತಾಂಶ: ಮೂರು ಪಕ್ಷಗಳಿಂದ ಸ್ಪರ್ಧಿಸಿ ಗೆದ್ದ ಒಂದೇ ಕುಟುಂಬದ ಸದಸ್ಯರು

ಮೂರು ಪಕ್ಷಗಳಿಂದ ಸ್ಪರ್ಧಿಸಿ ಗೆದ್ದ ಒಂದೇ ಕುಟುಂಬದ ಸದಸ್ಯರು

Tamil Nadu Election Results: 2026ರ ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಭಾರತದ 'ಲಾಟರಿ ಕಿಂಗ್' ಎಂದೇ ಹೆಸರು ಪಡೆದಿರುವ ಸ್ಯಾಂಟಿಯಾಗೊ ಮಾರ್ಟಿನ್ ಅವರ ಕುಟುಂಬದ ಮೂವರು ಸದಸ್ಯರು ವಿವಿಧ ಪಕ್ಷಗಳಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ. ಒಂದೇ ಕುಟುಂಬದ ಸದಸ್ಯರು ಮೂರು ಬೇರೆ-ಬೇರೆ ರಾಜಕೀಯ ಸಿದ್ಧಾಂತವುಳ್ಳ ಪಕ್ಷಗಳಿಂದ ಸ್ಪರ್ಧಿಸಿರುವುದು ವಿಶೇಷ.

ಟಿವಿಕೆ ಅಭ್ಯರ್ಥಿ ವಿರುದ್ಧ ಡಿಎಂಕೆ ಸಚಿವನನ್ನು ಸೋಲಿಸಿತ್ತು ಕೇವಲ ಒಂದು ಮತ

ತಮಿಳುನಾಡಿನ ಒಂದು ಮತದ ಕಥೆ

ಕೇವಲ ಒಂದೇ ಒಂದು ಮತ ಮಸ್ಕತ್‌ ವ್ಯಕ್ತಿ ಹಾಕದೇ ಇರುತ್ತಿದ್ದರೆ ಅಲ್ಲಿನ ರಾಜಕೀಯ ಚಿತ್ರಣವೇ ಬೇರೆ ಆಗಿರುತ್ತಿತ್ತು. ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಡಿಎಂಕೆ ಸಚಿವನ ಸೋಲಿಗೆ ಕಾರಣವಾಗಿದ್ದು ಕೇವಲ ಒಂದು ಮತ ಎಂದರೆ ಅಚ್ಚರಿಯಾಗಲೇಬೇಕು. ಇದರಿಂದಾಗಿಯೇ ಟಿವಿಕೆ ಅಭ್ಯರ್ಥಿ ಗೆದ್ದರು. ಇಂದು ಒಂದು ಮತದ ಮಹತ್ವದ ಕಥೆಯನ್ನು ಈಗ ಹೇಳುತ್ತಿದೆ.

Biocon successor: ಬಯೋಕಾನ್ ಮುಂದಿನ ಉತ್ತರಾಧಿಕಾರಿ ಘೋಷಿಸಿದ ಕಿರಣ್ ಮಜುಂದಾರ್ ಶಾ; ಯಾರು ಈ ಕ್ಲೇರ್ ಮಜುಂದಾರ್?

ಬಯೋಕಾನ್ ಮುಂದಿನ ಉತ್ತರಾಧಿಕಾರಿ ಘೋಷಿಸಿದ ಕಿರಣ್ ಮಜುಂದಾರ್ ಶಾ

Who is Claire Mazumdar?: ಬಯೋಕಾನ್‌ ಕಂಪನಿಯು ಮುಂದಿನ ಹಂತದ ಪ್ರಗತಿಗಾಗಿ ಸುಧಾರಿತ ಜೈವಿಕ ತಂತ್ರಜ್ಞಾನ ಮತ್ತು ಕಾರ್ಯಾಚರಣೆಗಳಲ್ಲಿ ಕೃತಕ ಬುದ್ಧಿಮತ್ತೆಯ ಸಂಯೋಜನೆಯ ಮೇಲೆ ಗಮನ ಕೇಂದ್ರೀಕರಿಸುತ್ತಿರುವ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಆಗಲಿರುವುದು ಗಮನಾರ್ಹವಾಗಿದೆ.

Kalita Majhi: ಮನೆಗೆಲಸ ಮಾಡುತ್ತಿದ್ಧ ಮಹಿಳೆ ಈಗ ಬಂಗಾಳದ ಶಾಸಕಿ!; ಯಾರು ಈ ಕಲಿತಾ ಮಾಝಿ?

ಮನೆಗೆಲಸ ಮಾಡುತ್ತಿದ್ಧ ಮಹಿಳೆ ಬಂಗಾಳದ ಶಾಸಕಿ!

Who is Kalita Majhi?: 294 ಸದಸ್ಯ ಬಲದ ವಿಧಾನಸಭೆಯಲ್ಲಿ 206 ಸ್ಥಾನಗಳನ್ನು ಗಳಿಸಿದ ಬಿಜೆಪಿಯ ಭರ್ಜರಿ ಗೆಲುವಿನ ಮಧ್ಯೆ ಮಾಝಿಯವರ ಗೆಲುವು ಕೂಡ ಗಮನಸೆಳೆದಿದೆ. ಬಿಜೆಪಿಯ ಈ ಗೆಲುವು ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್‌ನ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು.

Kannada New Movie: ಸ್ಯಾಂಡಲ್‌ವುಡ್‌ಗೆ ʻಲವ್‌ ಸೀಸನ್ಸ್‌ʼ ಎಂಟ್ರಿ: ಲಿರಿಕಲ್ ವೀಡಿಯೋ ಸಾಂಗ್ ಔಟ್‌

ಸ್ಯಾಂಡಲ್‌ವುಡ್‌ಗೆ ಲವ್‌ ಸೀಸನ್ಸ್‌ ಎಂಟ್ರಿ: ಲಿರಿಕಲ್ ವೀಡಿಯೋ ಸಾಂಗ್ ಔಟ್‌

Kannada New Movie: ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ (Cinema) ಮೊದಲ ಲಿರಿಕಲ್ ವೀಡಿಯೋ ಸಾಂಗ್ ಇದೀಗ ಬಿಡುಗಡೆಗೊಂಡಿದೆ. ಈ ಮೂಲಕ ಮಧುರವಾದ ಸಾಹಿತ್ಯ, ಸಂಗೀತದ ಗೀತೆಯ ಮೂಲಕ ಲವ್ ಸೀಸನ್ಸ್ ಮ್ಯೂಸಿಕ್ ಹಂಗಾಮಕ್ಕೆ ಚಾಲನೆ ಸಿಕ್ಕಂತಾಗಿದೆ. ಎನ್‌.ಆರ್‌ ಸ್ಟುಡಿಯೋ ಯೂಟ್ಯೂಬ್‌ ಚಾನೆಲ್‌ನಲ್ಲಿ ಮಳೆಯಾಗೋ ಮೊದಲೇ ಕೊಡೆ ಹಿಡಿದು ಬರುವೆ, ನಗು ಮುಗಿವಾ ಮೊದಲೇ ಹೊಸ ಖುಷಿಯ ಕೊಡುವೆ ಎಂಬ ಮೋಹಕ ಸಾಲುಗಳನ್ನು ಕಾಂತಾರಾ ಖ್ಯಾತಿಯ ಪ್ರಮೋದ್ ಮರವಂತೆ ಬರೆದಿದ್ದಾರೆ.

ದಳಪತಿ ಗೆಲುವಿಗೆ ರಾಹುಲ್ ಗಾಂಧಿ ಅಭಿನಂದನೆ; ಟಿವಿಕೆ ಜೊತೆ ಸೇರಲು ಡಿಎಂಕೆಯೊಂದಿಗಿನ ಮೈತ್ರಿ ಮುರಿಯುತ್ತಾ ಕಾಂಗ್ರೆಸ್?

ಟಿವಿಕೆ ಜೊತೆ ಕಾಂಗ್ರೆಸ್ ಮೈತ್ರಿ? ರಾಹುಲ್ ಗಾಂಧಿ ಹೇಳಿದ್ದೇನು?

ಭಾರಿ ಗದ್ದಲದ ನಡುವೆ ಅಧಿಕಾರದ ಗದ್ದುಗೆ ಏರಲು ಈಗ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ದಳಪತಿ ವಿಜಯ್ ಅವರಿಗೆ ಬಹುಮತದ ಸವಾಲು ಎದುರಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಭಾಶಯ ಸಂದೇಶಗಳನ್ನು ಅವರಿಗೆ ಕಳುಹಿಸಿದ್ದು, ಕಾಂಗ್ರೆಸ್ ಮತ್ತು ಟಿವಿಕೆ ಮೈತ್ರಿ ಮಾಡಿಕೊಳ್ಳುತ್ತದೆ ಎನ್ನಲಾಗುತ್ತಿದೆ.

ಪತ್ನಿಯನ್ನು ಕೊಂದು, 2 ವರ್ಷದ ಮಗುವನ್ನು ಕಾಡಿನಲ್ಲಿ ಬಿಟ್ಟು ಹೋದ ಆರೋಪಿ

ಪತ್ನಿಯನ್ನು ಕೊಂದು, 2 ವರ್ಷದ ಮಗುವನ್ನು ಕಾಡಿನಲ್ಲಿ ಬಿಟ್ಟ ಆರೋಪಿ

Crime News: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ, 2 ವರ್ಷದ ಪುತ್ರನನ್ನು ಕಾಡಿನಲ್ಲಿ ಬಿಟ್ಟು ಹೋದ ಘಟನೆ ಮಧ್ಯಪ್ರದೇಶದ ರೈಸೇನ್ ಮತ್ತು ವಿದಿಶಾ ಜಿಲ್ಲೆಗಳ ನಡುವೆ ನಡೆದಿದೆ. ಈ ಆಘಾತಕಾರಿ ಕೃತ್ಯದ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿದರು. ಇದು ರಾಯ್ಸೆನ್ ಮತ್ತು ವಿದಿಶಾ ಜಿಲ್ಲೆಗಳಲ್ಲಿ ರಾತ್ರಿಯಿಡೀ ಬೃಹತ್ ಶೋಧ ಕಾರ್ಯಾಚರಣೆಗೆ ಕಾರಣವಾಯಿತು.

ತಪ್ಪಿದ ಭಾರೀ ದುರಂತ; ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ KSRTC ಬಸ್

ತಪ್ಪಿದ ಭಾರೀ ದುರಂತ; ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ KSRTC ಬಸ್

ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಕೆಸ್‌ ಆರ್‌ಟಿಸಿ ಪಲ್ಲಕ್ಕಿ ಬಸ್‌ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸದ್ಯ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಆರಂಭದಲ್ಲಿ ಕೈ ಟಿಕೆಟ್ ವಿಚಾರವಾಗಿ ಮೇಟಿ ಕುಟುಂಬದಲ್ಲಿ ಉಂಟಾದ ಗೊಂದಲ ಕಾಂಗ್ರೆಸ್ ಗೆ ಕೊಂಚ ಹಿನ್ನಡೆ ಉಂಟುಮಾಡಿದ್ದರೂ ಕೊನೆಗೆ ಸಿಎಂ ಸಿದ್ದರಾಮಯ್ಯನವರ ಸಂಧಾನದ ಫಲವಾಗಿ ಉಮೇಶ್ ಮೇಟಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಯಿತು. ಜತೆಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಮತಕ್ಷೇತ್ರದ ಅಭ್ಯರ್ಥಿ ಪರವಾಗಿ ಹಳ್ಳಿ, ಹಳ್ಳಿಯಲ್ಲೂ ಪ್ರಚಾರ ಮಾಡಿದ್ದರ ಕಾರಣಕ್ಕೆ ಕಾಂಗ್ರೆಸ್ 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ಬದಲಾವಣೆ ಗಾಳಿಯಲ್ಲಿ ಹೊಸ ಪಾಠ

ಬದಲಾವಣೆ ಗಾಳಿಯಲ್ಲಿ ಹೊಸ ಪಾಠ

ಕೇರಳದಲ್ಲಿ ಮೂರು ಅವಧಿಯಿಂದ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವ ದ ಎಡರಂಗದ ಎಲ್‌ಡಿಎಫ್ ಪಕ್ಷದಿಂದ ಅಧಿಕಾರ ಕಸಿದು ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಗದ್ದುಗೆ ಏರುತ್ತಿದೆ. ಕೇರಳದಲ್ಲೂ ಬಿಜೆಪಿ ಮೊದಲ ಬಾರಿಗೆ ಮೂರು ಸ್ಥಾನ ಗೆದ್ದಿದೆ. ಈ ನಾಲ್ಕು ರಾಜ್ಯಗಳ ಫಲಿತಾಂಶ, ದೇಶ ಬದಲಾವಣೆಯತ್ತ ವಾಲುತ್ತಿರುವುದಕ್ಕೆ ಉದಾಹರಣೆ.

Loading...