ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ತಾಜಾ ಸುದ್ದಿ

Vishweshwar Bhat Column: ʼಹೇರ್‌ ಆಫ್‌ ದಿ ಡಾಗ್‌ʼ ಅಂದರೇನು ?

Vishweshwar Bhat Column: ʼಹೇರ್‌ ಆಫ್‌ ದಿ ಡಾಗ್‌ʼ ಅಂದರೇನು ?

ಟೋಪಿ ನೆಲಕ್ಕೆ ಬಿದ್ದ ತಕ್ಷಣ ಆಟಗಾರರು ಸ್ಪರ್ಧೆಯನ್ನು ಶುರುಮಾಡಬೇಕಿತ್ತು. ಅಂದರೆ, ಟೋಪಿ ಕೆಳಗೆ ಬಿದ್ದ ಕ್ಷಣದ ಕೆಲಸ ಆರಂಭವಾಗಬೇಕು ಎಂಬ ಅರ್ಥದಿಂದ ಈ ನುಡಿಗಟ್ಟು ಬಳಕೆಗೆ ಬಂದಿತು. ಹಾಗೆ 'Hair of the Dog' ಎಂಬ ನುಡಿಗಟ್ಟು ಇದೆ. ಇದರ ಪೂರ್ಣ ರೂಪ 'Hair of the dog that bit you'.

Roopa Gururaj Column: ನಮ್ಮ ದೌರ್ಬಲ್ಯಗಳನ್ನೇ ಅಸ್ತ್ರವಾಗಿಸಿಕೊಳ್ಳಬೇಕು

Roopa Gururaj Column: ನಮ್ಮ ದೌರ್ಬಲ್ಯಗಳನ್ನೇ ಅಸ್ತ್ರವಾಗಿಸಿಕೊಳ್ಳಬೇಕು

ಇಡೀ ಕ್ರೀಡಾಂಗಣ ಎದ್ದು ನಿಂತು ಚಪ್ಪಾಳೆ ತಟ್ಟಿತು. ವಾಪಸ್ ಬರುವಾಗ ಹುಡುಗ ಗುರುಗಳನ್ನು ಕೇಳಿದ, “ನಾನು ಒಂದೇ ಒಂದು ಪಟ್ಟಿನಿಂದ ಹೇಗೆ ಗೆದ್ದೆ?" ಗುರುಗಳು ಹೇಳಿದರು- “ಮಗು, ನೀನು ಕಲಿತ ಪಟ್ಟು ಜೂಡೋದ ಅತ್ಯಂತ ಕಷ್ಟಕರವಾದದ್ದು. ಅದರಿಂದ ಪಾರಾಗಲು ಎದುರಾಳಿಗೆ ಇರುವ ಏಕೈಕ ದಾರಿ ಎಂದರೆ, ನಿನ್ನ ಬಲಗೈಯನ್ನು ಹಿಡಿದು ಎಳೆಯುವುದು. ಆದರೆ ನಿನಗೆ ಆ ಕೈಯೇ ಇಲ್ಲವಲ್ಲ!". ಆತನ ದೊಡ್ಡ ದೌರ್ಬಲ್ಯವೇ ಅವನ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿ ಬದಲಾಗಿತ್ತು.

Horoscope Today February 4th: ಈ ರಾಶಿಗೆ ಇಂದು ಶುಕ್ರನಿಂದ ಸುವರ್ಣ ಸಮಯ

ಶುಕ್ರನಿಂದ ಈ ರಾಶಿಗೆ ಇಂದು ಶುಭ ಫಲ

ನಿತ್ಯ ಭವಿಷ್ಯ ಫೆಬ್ರವರಿ 4, 2026: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು ಮಘೆ ಮಾಸೆ, ಕೃಷ್ಣೆ ಪಕ್ಷದ, ತೃತೀಯ ತಿಥಿ,ಪೂರ್ವ ಪಾಲ್ಗುಣಿ ನಕ್ಷತ್ರದ ಫೆಬ್ರವರಿ 4ನೇ ತಾರೀಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ನಿರಾಗ್‌ ಫುಡ್ಸ್‌ ಬೆಳೆದು ಬಂದ ದಾರಿ ಗೊತ್ತೆ? ಇಲ್ಲಿದೆ ಸಂಸ್ಥಾಪಕರ ಆಸಕ್ತಿದಾಯಕ ವಿವರ

ನಿರಾಗ್‌ ಫುಡ್ಸ್‌ ಬೆಳೆದು ಬಂದ ದಾರಿ ಗೊತ್ತೆ? ಇಲ್ಲಿದೆ ವಿವರ

ಕಾರ್ಪೊರೇಟ್ ಜಗತ್ತಿನಲ್ಲಿ ಹಲವಾರು ವರ್ಷಗಳನ್ನು ಕಳೆದ ನಂತರ, ನಾನು ಹೆಚ್ಚು ವೈಯಕ್ತಿಕ ಮತ್ತು ಅರ್ಥಪೂರ್ಣವಾದದ್ದನ್ನು ಮಾಡಲು ಬಯಸುವ ಹಂತವನ್ನು ತಲುಪಿದೆ. ಬೆಳೆದ ನಂತರ, ಆಹಾರವು ಯಾವಾಗಲೂ ನನ್ನ ಜೀವನದಲ್ಲಿ ಕೇಂದ್ರವಾಗಿತ್ತು, ವಿಶೇಷವಾಗಿ ನನ್ನ ಅಜ್ಜಿಯ ಅಡುಗೆಮನೆಯಲ್ಲಿ ಬೇಯಿಸಿದ ಸರಳ, ಆರೋಗ್ಯಕರ ಆಹಾರ. ಆ ಸುವಾಸನೆ, ಮತ್ತು ಎಲ್ಲವನ್ನೂ ತಯಾರಿಸುವ ಕಾಳಜಿ ನನ್ನೊಂದಿಗೆ ಉಳಿದುಕೊಂಡಿತು.

WPL 2026: ಗುಜರಾತ್‌ ಜಯಂಟ್ಸ್‌ ವಿರುದ್ಧ ಗೆದ್ದು ಫೈನಲ್‌ಗೆ ಅರ್ಹತೆ ಪಡೆದ ಡೆಲ್ಲಿ ಕ್ಯಾಪಿಟಲ್ಸ್‌!

WPL 2026: ಆರ್‌ಸಿಬಿಗೆ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರಾಳಿ!

DCW vs GGTW Match Highlights: ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, 2026ರ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಗುಜರಾತ್‌ ಜಯಂಟ್ಸ್‌ ವಿರುದ್ಧ 7 ವಿಕೆಟ್‌ ಗೆಲುವು ದಾಖಲಿಸಿತು. ಆ ಮೂಲಕ ಫೈನಲ್‌ಗೆ ಪ್ರವೇಶ ಮಾಡಿದೆ.

Karnataka Madara Mahasabha: ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ನೇಮಕ : ಪಟ್ರೇನಹಳ್ಳಿ ಕೃಷ್ಣಪ್ಪ ಹೇಳಿಕೆ

ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ನೇಮಕ

ಕರ್ನಾಟಕ ಮಾದಾರ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಪಟ್ರೇನಹಳ್ಳಿ ಕೃಷ್ಣಪ್ಪ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಮಾದರ ಮಹಾಸಭಾದ ತಾಲೂಕು ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದರು

Chikkaballapur News: ಹೆಣ್ಣು ಮಕ್ಕಳಿಗೆ ಅವಕಾಶ ನೀಡಿದಾಗಲೇ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ : ಟಿ.ಜಿ.ಶಿವಶಂಕರೇಗೌಡ

ಹೆಣ್ಣು ಮಕ್ಕಳಿಗೆ ಅವಕಾಶ ನೀಡಿದಾಗಲೇ ಮುಖ್ಯವಾಹಿನಿಗೆ ಬರಲು ಸಾಧ್ಯ

ಹೆಣ್ಣು ಮಕ್ಕಳಿಗೆ ಅವಕಾಶಗಳನ್ನು ನೀಡಿದಾಗ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ ವಾಗಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಪದವಿ, ಸಿಇಟಿ ಸೇರಿದಂತೆ ವಿವಿಧ ಹಂತದ ಕೋರ್ಸುಗಳಲ್ಲಿ ಹೆಣ್ಣುಮಕ್ಕಳೇ ಮೊದಲ ರ‍್ಯಾಂಕ್‌ಗಳನ್ನು ಪಡೆಯು ತ್ತಿರುವುದು ಒಳ್ಳೆಯ ಬೆಳವಣಿಗೆ

Chimul Election: ಚಿಮುಲ್ ಚುನಾವಣೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ, ಭರಣಿ ವೆಂಕಟೇಶ್ ಅವರ ಖಾಲಿ ಡಬ್ಬಾ ಹೇಳಿಕೆಗೆ ತೀವ್ರ ಖಂಡನೆ: ಕ್ಷಮೆ ಕೋರಲು ಆಗ್ರಹ

ಚಿಮುಲ್ ಚುನಾವಣೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

ಚುನಾವಣೆಯಲ್ಲಿ ನನ್ನ ಸೋಲಿಗೆ ನಾನೇ ಕಾರಣ. ಚುನಾವಣಾ ಪೂರ್ವ ತಯಾರಿಗೆ ಸಮಯದ ಅಭಾವ ವಿತ್ತು. ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಇದು ನನ್ನ ಮೊದಲ ಅನುಭವ. ಗೋಪಾಲಕರ ಸೇವೆ ಮಾಡುವ ಉದ್ದೇಶದಿಂದ ಸ್ಪರ್ಧಿಸಿ ಆತುರದ ನಿರ್ಧಾರದ ಕಾರಣ ಸೋಲು ಕಂಡೆ. ಇನ್ನೂ ಗೆದ್ದ ಸಂತೋಷದಲ್ಲಿ ಭರಣಿ ವೆಂಕಟೇಶ್ ಅವರು ನನ್ನ ಹಿಂದೆ ಇದ್ದವರು ಖಾಲಿ ಡಬ್ಬಾಗಳು ಎಂದು ಹೇಳಿರುವುದು ಘನತೆಗೆ ತಕ್ಕದಲ್ಲ.ನಾವು ಖಾಲಿ ಡಬ್ಬಾಗಳೆ ಆಗಿರಲಿ.

ತಂಬಾಕು ಮೇಲಿನ ಶೇ.18 ಅಬಕಾರಿ ಸುಂಕ ಹಿಂದಕ್ಕೆ; ಎಚ್.ಡಿ. ಕುಮಾರಸ್ವಾಮಿ ಮನವಿಗೆ ವಿತ್ತ ಸಚಿವೆ ಸ್ಪಂದನೆ

ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂಪಡೆದ ಕೇಂದ್ರ ಸರ್ಕಾರ

HD Kumaraswamy: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದ ಫಲವಾಗಿ ಎಫ್‌ಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ತಂಬಾಕು ಹರಾಜು ವಿಷಯಕ್ಕೆ ಸಂಬಂಧಿಸಿ ತಮ್ಮ ಮನವಿಗೆ ಸ್ಪಂದಿಸಿ ಬೆಳೆಗಾರರ ಪರವಾಗಿ ಕ್ರಮ ವಹಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ.

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹ; ವಿಧಾನಸೌಧದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರಿಂದ ಅಹೋರಾತ್ರಿ ಧರಣಿ

ವಿಧಾನಸೌಧದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರಿಂದ ಅಹೋರಾತ್ರಿ ಧರಣಿ

BJP-JDS Overnight Dharna: ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಧರಣಿ ನಡೆಸಲಾಯಿತು.

ಸುಧಾರಿತ ರಾಮ್‌ಜೆಟ್ ಕ್ಷಿಪಣಿ ತಂತ್ರಜ್ಞಾನದ ಯಶಸ್ವಿ ಪರೀಕ್ಷೆ; ಎಲೈಟ್ ರಾಷ್ಟ್ರಗಳ ಪಟ್ಟಿಗೆ ಸೇರಿದ ಭಾರತ

ಸುಧಾರಿತ ರಾಮ್‌ಜೆಟ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಘನ ಇಂಧನ ಡಕ್ಟೆಡ್ ರಾಮ್‌ಜೆಟ್ ತಂತ್ರಜ್ಞಾನವನ್ನು ಮಂಗಳವಾರ ಒಡಿಶಾ ಕರಾವಳಿಯ ಚಾಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR)ನಿಂದ ಯಶಸ್ವಿಯಾಗಿ ಹಾರಾಟ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ SFDR ತಂತ್ರಜ್ಞಾನದ ಯಶಸ್ವಿ ಪರೀಕ್ಷೆಗಾಗಿ ಡಿಆರ್‌ಡಿಒಗೆ ಅಭಿನಂದನೆ ಸಲ್ಲಿಸಿದ್ದಾರೆ.

Foxconn tax issue: ಫಾಕ್ಸ್‌ಕಾನ್ ಕಂಪನಿಗೆ ನೀಡಿದ್ದ ಗ್ರಾಪಂ ತೆರಿಗೆ ನೋಟೀಸ್ ರದ್ದು: ಜಿಪಂ ಸಿಇಒ ಸ್ಪಷ್ಟನೆ

ಫಾಕ್ಸ್‌ಕಾನ್ ಕಂಪನಿಗೆ ನೀಡಿದ್ದ ಗ್ರಾಪಂ ತೆರಿಗೆ ನೋಟೀಸ್ ರದ್ದು

ಫಾಕ್ಸ್‌ಕಾನ್ ಕಂಪನಿಗೆ ತೆರಿಗೆ ಪಾವತಿಸಲು ಸೂಚಿಸಿ ಎಂಟು ಸಲ ನೋಟಿಸ್ ನೀಡಲಾಗಿತ್ತು. ಆದರೆ ಅದು ಯಾವುದಕ್ಕೂ ಉತ್ತರಿಸಿಲ್ಲ. ಈಗ ಆ ಪ್ರದೇಶವನ್ನು ಎಸ್ಐಆರ್ ಎಂದು ಘೋಷಿಸಿರುವುದರಿಂದ ಗ್ರಾಪಂ ಕಡೆಯಿಂದ ನೋಟೀಸ್ ನೀಡುವ ಪ್ರಮೇಯವೇ ಉದ್ಭವಿಸದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಿಇಒ ಕೆ.ಎನ್ ಅನುರಾಧ ತಿಳಿಸಿದ್ದಾರೆ.

T20 World Cup: ಈ ಬಾರಿ ಟಿ20 ವಿಶ್ವಕಪ್‌ ಗೆಲ್ಲುವ ತಂಡವನ್ನು ಆರಿಸಿದ ಎಂಎಸ್‌ ಧೋನಿ!

ಟಿ20 ವಿಶ್ವಕಪ್‌ ಗೆಲ್ಲುವ ತಂಡವನ್ನು ಆರಿಸಿದ ಎಂಎಸ್‌ ಧೋನಿ!

ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ಅತ್ಯಂತ ಅಪಾಯಕಾರಿ ತಂಡಗಳಲ್ಲಿ ಒಂದಾಗಿದೆ. ಹಾಗಾಗಿ ಈ ಬಾರಿಯೂ ಟೀಮ್‌ ಇಂಡಿಯಾ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿಯನ್ನು ಉಳಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಫೆಬ್ರವರಿ 7 ರಂದು ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ.

ಮುಂಬೈ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ಡಿಕ್ಕಿ; ತಪ್ಪಿದ ಭಾರಿ ದುರಂತ

ಮುಂಬೈ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ಡಿಕ್ಕಿ

ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ಮತ್ತು ಇಂಡಿಗೋ ವಿಮಾನಗಳು ಡಿಕ್ಕಿ ಹೊಡೆದಿದ್ದು, ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಎರಡೂ ವಿಮಾನಗಳ ರೆಕ್ಕೆ ಪರಸ್ಪರ ತಾಗಿದ್ದು, ಯಾವುದೇ ಅನಾಹುತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದ ಖದೀಮರು; ತಕ್ಷಣ ಕ್ರಮಕ್ಕೆ ಭಾರತ ಆಗ್ರಹ

ಗಾಂಧಿ ಪ್ರತಿಮೆಗೆ ಹಾನಿ; ಕ್ರಮಕ್ಕೆ ಆಗ್ರಹ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದಿರುವ ಘಟನೆ ನಡೆದಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ಯಲಾಗಿದೆ. ಇದು ಭಾರತೀಯ ಮತ್ತು ಆಸ್ಟ್ರೇಲಿಯನ್ ಸಮುದಾಯದಲ್ಲಿ ತೀವ್ರ ಕಳವಳವನ್ನು ಉಂಟು ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ ಕ್ರಮಕ್ಕೆ ಆಗ್ರಹಿಸಿದೆ.

T20 World Cup: ಭಾರತದ ಪಂದ್ಯವನ್ನು ಬಾಯ್ಕಟ್‌ ಮಾಡಿದ ಪಾಕಿಸ್ತಾನಕ್ಕೆ ಮತ್ತೊಂದು ಸಂಕಷ್ಟ; ಪಿಸಿಬಿಗೆ ಐಸಿಸಿ ವಾರ್ನಿಂಗ್‌!

T20 World Cup: ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಐಸಿಸಿ ವಾರ್ನಿಂಗ್‌!

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಆರಂಭಕ್ಕೆ ಇನ್ನು ಕೇವಲ 5 ದಿನಗಳು ಮಾತ್ರ ಬಾಕಿ ಇದೆ. ಇದರ ನಡುವೆ ಪಾಕಿಸ್ತಾನ ತಂಡ, ಭಾರತ ವಿರುದ್ದದ ಪಂದ್ಯವನ್ನು ಬಾಯ್ಕಟ್‌ ಮಾಡಿರುವ ವಿಷಯ ದಿನದಿಂದ ದಿನಕ್ಕೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌, ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಎಚ್ಚರಿಕೆಯನ್ನು ನೀಡಿದೆ.

ಶ್ರೀ ಕ್ಷೇತ್ರ ಉಳವಿಯಲ್ಲಿ ಸಂಭ್ರಮ, ಸಡಗರದಿಂದ ನೆರವೇರಿದ ಚೆನ್ನಬಸವೇಶ್ವರ ಮಹಾ ರಥೋತ್ಸವ

ಶ್ರೀ ಕ್ಷೇತ್ರ ಉಳವಿಯಲ್ಲಿ ನೆರವೇರಿದ ಚೆನ್ನಬಸವೇಶ್ವರ ಮಹಾ ರಥೋತ್ಸವ

Ulavi Channabasaveshwara Swamy Rathotsava : ಉಳವಿ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಸಂಜಯ ಕಿತ್ತೂರು ಅವರು ಚನ್ನಬಸವೇಶ್ವರ ರಥಕ್ಕೆ ಪೂಜೆ ಸಲ್ಲಿಸಿ ಭಕ್ತಾರೊಂದಿಗೆ ರಥ ಎಳೆಯುವುದರ ಮೂಲಕ ಮಹಾ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ವಿವಿಧೆಡೆಯಿಂದ ಸಾವಿರಾರು ಭಕ್ತರು ಭಾಗಿಯಾಗಿದ್ದರು.

ಜನವರಿಯಲ್ಲಿ 4,894 ಮೆ. ಟನ್ ಮೈಸೂರು ಸ್ಯಾಂಡಲ್‌ ಸೋಪ್ ಉತ್ಪಾದನೆ; ಸಾರ್ವಕಾಲಿಕ ದಾಖಲೆ

ಜನವರಿಯಲ್ಲಿ 4,894 ಮೆ. ಟನ್ ಮೈಸೂರು ಸ್ಯಾಂಡಲ್‌ ಸೋಪ್ ಉತ್ಪಾದನೆ

MB Patil: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮೆಟ್ರಿಕ್ ಟನ್ ಸೋಪ್ ಉತ್ಪನ್ನ ಉತ್ಪಾದನೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ʼʼಅತ್ಯುತ್ತಮ ಒಪ್ಪಂದʼʼ: ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದೇನು?

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಅತ್ಯುತ್ತಮ: ಪಿಯೂಷ್ ಗೋಯಲ್

India -US Trade Deal: ಭಾರತ–ಅಮೆರಿಕ ಮಧ್ಯೆ ಒಪ್ಪಂದದ ವಿವರಗಳನ್ನು ಸಂಸತ್ತಿನಲ್ಲಿ ಹಂಚಿಕೊಳ್ಳಲು ಬಯಸಿದ್ದೆ. ಆದರೆ ಲೋಕಸಭೆಯಲ್ಲಿ ನಡೆದ ಗದ್ದಲದ ಕಾರಣ ಸಾಧ್ಯವಾಗಲಿಲ್ಲ ಎಂದು ಸಚಿವ ಪಿಯೂಷ್ ಗೋಯಲ್ ಹೇಳಿದರು. ಈ ವೇಳೆ ವಿರೋಧ ಪಕ್ಷದ ನಾಯಕರನ್ನು ತೀವ್ರವಾಗಿ ಟೀಕಿಸಿದ ಅವರು, ರಾಹುಲ್ ಗಾಂಧಿ ನಕಾರಾತ್ಮಕ ಮನಸ್ಥಿತಿಯ ವ್ಯಕ್ತಿ. ಅವರು ದೇಶದ ಬೆಳವಣಿಗೆಯನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು.

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು; ಸಂಬಂಧಿಕರಲ್ಲಿ ಕ್ಷಮೆ ಕೇಳಿದ್ದೇಕೆ?

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು

ರೈಲ್ವೇ ಹಳಿಯಲ್ಲಿ ತಾಯಿ ಮತ್ತು ಮಕ್ಕಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮಹಿಳೆ ತನ್ನ ಸಂಬಂಧಿಕರಿಗೆ ಕ್ಷಮೆ ಕೇಳಿ ಪತ್ರ ಬರೆದಿದ್ದು, ಡೆತ್ ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಈ ಹೃದಯ ವಿದ್ರಾವಕ ಘಟನೆಯ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪ್ರಭಾವ ಬೀರಬಲ್ಲ ಮೂವರು ಬೌಲರ್‌ಗಳನ್ನು ಆರಿಸಿದ ಆಕಾಶ್‌ ಚೋಪ್ರಾ!

ಟಿ20 ವಿಶ್ವಕಪ್‌ನಲ್ಲಿ ಮೂವರು ಕೀ ಬೌಲರ್‌ಗಳನ್ನು ಆರಿಸಿದ ಚೋಪ್ರಾ!

ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7 ರಂದು 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಗೂ ಮುನ್ನ ಕ್ರಿಕೆಟ್‌ ಪಂಡಿತರು ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ, ಈ ಟೂರ್ನಿಯಲ್ಲಿ ಪ್ರಭಾವ ಬೀರಬಲ್ಲ ಮೂವರು ಬೌಲರ್‌ಗಳನ್ನು ಆಯ್ಕೆ ಮಾಡಿದ್ದಾರೆ.

S P Venkatesh: ʻಹೃದಯ ಸಮುದ್ರ ಕಲಕಿʼ ಹಾಡಿನ ಮಾಂತ್ರಿಕ ಎಸ್​​ಪಿ ವೆಂಕಟೇಶ್ ಇನ್ನಿಲ್ಲ

ʻಹೃದಯ ಸಮುದ್ರ ಕಲಕಿʼ ಹಾಡಿನ ಮಾಂತ್ರಿಕ ಎಸ್​​ಪಿ ವೆಂಕಟೇಶ್ ಇನ್ನಿಲ್ಲ

S P Venkatesh: ʼಹೃದಯ ಸಮುದ್ರ ಕಲಕಿ…ʼ ಸೇರಿದಂತೆ ಕನ್ನಡದಲ್ಲಿ ಹಲವು ಜನಪ್ರಿಯ ಗೀತೆಗಳಿಗೆ ಸಂಗೀತ ಸಂಯೋಜಿಸಿರುವ ಎಸ್‌.ಪಿ. ವೆಂಕಟೇಶ್‌ ( S P Venkatesh) (ಸಂಗೀತ ರಾಜ), ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. 1955ರಲ್ಲಿ ಚೆನ್ನೈನಲ್ಲಿ ಜನಿಸಿದ ವೆಂಕಟೇಶ್‌, ಮಲಯಾಳಂ, ತೆಲುಗು, ಬಂಗಾಲಿ, ಹಿಂದಿ, ಕನ್ನಡ, ಒರಿಯಾ ಮುಂತಾದ ಭಾಷೆಗಳಲ್ಲಿ ಸೇರಿದಂತೆ 150ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ.

ಅಮೆರಿಕ- ಭಾರತ ವ್ಯಾಪಾರ ಒಪ್ಪಂದ: ರೈತರ ವಿಚಾರದಲ್ಲಿ ರಾಜಿ ಇಲ್ಲ, ವೆನೆಜುವೆಲಾ ತೈಲ ಖರೀದಿ ಮಾಡೋದಿಲ್ಲ

ಅಮೆರಿಕ- ಭಾರತ ಒಪ್ಪಂದದ ಬಗ್ಗೆ ಕೇಂದ್ರ ಸರ್ಕಾರ ಹೇಳುವುದೇನು?

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಪೂರ್ಣಗೊಂಡಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕೇಂದ್ರ ಸರ್ಕಾರ ಘೋಷಣೆಯನ್ನೂ ಮಾಡಿವೆ. ಅಮೆರಿಕ- ಭಾರತ ಒಪ್ಪಂದಕ್ಕಾಗಿ ರೈತರ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ವೆನೆಜುವೆಲಾ ತೈಲ ಖರೀದಿ ಮಾಡೋದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಔರಾದ್‌ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಔರಾದ್‌ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ

ಬೀದರ್‌ ಜಿಲ್ಲೆಯ ಔರಾದ ತಾಲೂಕಿನ ಜಮಲಾಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 50 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ಜರುಗಿದೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಔರಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Loading...