Crime News: ವಾಮಾಚಾರಕ್ಕಾಗಿ ಸಾಕಿದ ನಾಯಿ ಕತ್ತು ಕತ್ತರಿಸಿ ಅಪಾರ್ಟ್ಮೆಂಟ್ನಲ್ಲೇ ಬಚ್ಚಿಟ್ಟ ಮಹಿಳೆ!
ನಾಲ್ಕು ದಿನಗಳ ಹಿಂದೆಯೇ ಈ ಮಹಿಳೆ ತಾನೇ ಸಾಕಿದ ನಾಯಿಯನ್ನು ಹತ್ಯೆ ಮಾಡಿ ಬಚ್ಚಿಟ್ಟಿದ್ದಳು ಎನ್ನಲಾಗುತ್ತಿದೆ. ಮಹದೇವಪುರದ ಚಿನ್ನಪ್ಪ ಲೇಔಟ್ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಹಿಳೆ, ನಾಯಿಯ ಕತ್ತು ಕೊಯ್ದು ಹತ್ಯೆಗೈದಿದ್ದಾರೆ. ಹತ್ಯೆ ನಂತರ ನಾಯಿಯನ್ನು ಬಟ್ಟೆಯಲ್ಲಿ ಸುತ್ತಿಟ್ಟಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿ ಮಹಿಳೆ

ಬೆಂಗಳೂರು: ಸಿಲಿಕಾನ್ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರಿನಲ್ಲಿ ಒಂದು (Bengaluru Crime News) ಅಮಾನವೀಯ ಘಟನೆ ನಡೆದಿದೆ. ಪಶ್ಚಿಮ ಬಂಗಾಳ (West Bengal) ಮೂಲದ ಮಹಿಳೆಯೊಬ್ಬರು ತಾನಿದ್ದ ಅಪಾರ್ಟ್ಮೆಂಟ್ನಲ್ಲೇ ತಾವು ಸಾಕಿದ ನಾಯಿಯನ್ನೇ ಕೊಂದು ಬಚ್ಚಿಟ್ಟಿದ್ದಾರೆ. ಮಹದೇವಪುರದ (Mahadevapura) ಚಿನ್ನಪ್ಪ ಲೇಔಟ್ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ವಾಮಾಚಾರಕ್ಕಾಗಿ (Black Magic) ಆಚರಣೆಗಾಗಿ ನಾಯಿಯನ್ನೇ ಬಲಿಕೊಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ನಾಲ್ಕು ದಿನಗಳ ಹಿಂದೆಯೇ ಈ ಮಹಿಳೆ ತಾನೇ ಸಾಕಿದ ನಾಯಿಯನ್ನು ಹತ್ಯೆ ಮಾಡಿ ಬಚ್ಚಿಟ್ಟಿದ್ದಳು ಎನ್ನಲಾಗುತ್ತಿದೆ. ಮಹದೇವಪುರದ ಚಿನ್ನಪ್ಪ ಲೇಔಟ್ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಹಿಳೆ, ನಾಯಿಯ ಕತ್ತು ಕೊಯ್ದು ಹತ್ಯೆಗೈದಿದ್ದಾರೆ. ಹತ್ಯೆ ನಂತರ ನಾಯಿಯನ್ನು ಬಟ್ಟೆಯಲ್ಲಿ ಸುತ್ತಿಟ್ಟಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ಈ ಮಹಿಳೆ 4 ಲ್ಯಾಬ್ರೋಡರ್ ನಾಯಿಗಳನ್ನ ಸಾಕಿದ್ದು, ಒಂದು ನಾಯಿಯನ್ನು ಕೊಂದಿದ್ದಾರೆ ಎನ್ನಲಾಗುತ್ತಿದೆ. ನಾಯಿ ಕಳೇಬರದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಕಳೇಬರ ಸಿಕ್ಕಿದೆ. ಇದನ್ನು ಮರಣೋತ್ತರ ಪರೀಕ್ಷೆಗೆಂದು ಕಳಿಸಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಹತ್ಯೆ ಮಾಡಿದ್ದು, ಬ್ಲ್ಯಾಕ್ ಮ್ಯಾಜಿಕ್ಗಾಗಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಮಹದೇವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಫ್ಲ್ಯಾಟ್ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Chikkanayakanahalli (Tumkur) News: ದೇವಾಲಯದ ಸನ್ನಿಧಿಯಲ್ಲೇ ವಾಮಾಚಾರ, ಭ್ರಷ್ಟಾಚಾರದ ಜಾಲ !