ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru stampede case: ಕಾಲ್ತುಳಿತ ಕೇಸ್‌; ಬಿಜೆಪಿ ಪ್ರೊಟೆಸ್ಟ್‌- ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ

Bengaluru stampede case: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

Profile Rakshita Karkera Jun 17, 2025 1:29 PM

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭಾರೀ ಕಾಲ್ತುಳಿತ ಪ್ರಕರಣ(Bengaluru stampede case) ಖಂಡಿಸಿ ಬಿಜೆಪಿ ಮತ್ತು ಪ್ರತಿಭಟನೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಕೆ.ಗೋಪಾಲಯ್ಯ, ಸಿಮೆಂಟ್ ಮಂಜುನಾಥ್, ಭೈರತಿ ಬಸವರಾಜು, ಸಿ.ಕೆ. ರಾಮಮೂರ್ತಿ, ಎಂಎಲ್ ಸಿ ಗಳಾದ ಭಾರತಿ ಶೆಟ್ಟಿ, ರವಿಕುಮಾರ್ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.



ಜೂನ್‌ 4ರಂದು ನಡೆದಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದಕ್ಕೆ ಆರ್‌ಸಿಬಿ ಮತ್ತು ಡಿಎನ್‌ಎ ಸೂಕ್ತ ರೀತಿಯಲ್ಲಿ ಜನ ಸಂದಣಿ ನಿರ್ವಹಣೆ ಮಾಡದಿರುವುದೇ ಕಾರಣ ಎಂದು ಜೂನ್‌ 6ರಂದು ನಿಖಿಲ್‌, ಸುನೀಲ್ ಮ್ಯಾಥ್ಯೂ, ಕಿರಣ್‌ ಮತ್ತು ಶಮಂತ್‌ ಅವರನ್ನು ಪೊಲೀಸರು ಬಂಧಿಸಿದ್ದರು. ಅಂದೇ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಈ ನಡುವೆ, ಪೊಲೀಸ್‌ ಕಸ್ಟಡಿಗೆ ಪಡೆಯಲು ಸಿಸಿಬಿ ಪ್ರಯತ್ನಿಸಿದ್ದರೂ ಅದು ಫಲಿಸಿರಲಿಲ್ಲ.

ಇನ್ನು ಈ ದುರಂತಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯುತ ನಡೆಯೇ ನೇರ ಹೊಣೆ ಎಂದು ಪ್ರತಿಪಕ್ಷ ನಾಯಕರು ಆಕ್ರೋಶ ಹೊರ ಹಾಕಿದ್ದರು. ಆರ್‌ಸಿಬಿ ಮ್ಯಾಚ್ ಗೆದ್ದ ದಿನ ರಾತ್ರಿಯಿಡೀ ಅಭಿಮಾನಿಗಳು ವಿಜಯೋತ್ಸವ ಮಾಡಿದ್ದಾರೆ. ಅದಕ್ಕೆ ಪೊಲೀಸರು ಬಂದೋಬಸ್ತ್ ನೀಡಿದ್ದಾರೆ. ಬೆಳಗ್ಗೆ ತರಾತುರಿಯಲ್ಲಿ ವಿಜಯೋತ್ಸವ ಹಮ್ಮಿಕೊಂಡಿದ್ದು, ಪೊಲೀಸರು ಯಾವ ರೀತಿ ಭದ್ರತೆ ನೀಡಬೇಕು. ಈ ಸರ್ಕಾರ ರಾಜ್ಯಕ್ಕೆ ಆಡಳಿತ ಮಾಡಲು ಅರ್ಹತೆ ಇಲ್ಲ. ಇಡೀ ಕಾರ್ಯಕ್ರಮ ಗೊಂದಲಮಯವಾಗಿತ್ತು. ಅವರ ಚೇಲಾಗಳೇ ವೇದಿಕೆಯಲ್ಲಿದ್ದರು. ಪೊಲೀಸರನ್ನು ಎತ್ತಂಗಡಿ ಮಾಡುದಕ್ಕಿಂತ ಪ್ರಕರಣಕ್ಕೆ ಸಚಿವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹೊಣೆ ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದರು.

ಕ್ರೀಡಾಂಗಣದ ಹೊರಗಡೆ ಸಾವಿನ ಸುದ್ದಿ ಬಂದರೂ ಸಹ ಕ್ರೀಡಾಂಗಣದ ಒಳಗೆ ಕಾರ್ಯಕ್ರಮ ಮುಂದುವರಿಸಿದ್ದಾರೆ. ಒಂದು ಕಡೆ ವಿಜಯೋತ್ಸವ, ಇನ್ನೊಂದು ಶವಯಾತ್ರೆ ಮಾಡಿದ್ದಾರೆ. ಇದೊಂದು ಸರ್ಕಾರನಾ? ರಾಜ್ಯದಲ್ಲಿ ಕೋಮುಲಭೆ, ಅಪಹರಣ, ಗಲಾಟೆ ಕೊಲೆ ಪ್ರಕರಣಗಳು ಹೆಚ್ಚಾಗಿದೆ ಎಂದು ಅವರು ದೂರಿದರು.