Chikkaballapur News: ಕೃಷಿ ಪರಿಕರಗಳನ್ನು ಸಮರ್ಪಕವಾಗಿ ವಿತರಿಸಿ: ಉಪ ಕೃಷಿ ನಿರ್ದೇಶಕಿ ಜಿ.ದೀಪಶ್ರೀ ಸೂಚನೆ
ವಿವಿಧ ಪರಿಕರಗಳನ್ನು ಕೊಳ್ಳುವ ರೈತರಿಗೆ ರಸೀದಿಯನ್ನು ಕಡ್ಡಾಯವಾಗಿ ಸೂಕ್ತ ವಿವರಗಳೊಂದಿಗೆ ನೀಡಬೇಕು. ವಿವಿಧ ಪರಿಕರಗಳ ದಾಸ್ತಾನು ವಿವರಗಳನ್ನು ಇಲಾಖೆಗೆ ಕಾಲಕಾಲಕ್ಕೆ ಸಲ್ಲಿಸಬೇಕು. ರಸಗೊಬ್ಬರಗಳನ್ನು ರೈತರ ಆಧಾರ್ ಕಾರ್ಡ್ ಪಡೆದು ಪಿ.ಓ.ಎಸ್ ಯಂತ್ರದ ಮೂಲಕವೇ ವಿತರಿಸಬೇಕು. ರಸಗೊಬ್ಬರ ಬಿತ್ತನೆ ಬೀಜ ಮತ್ತು ಕೀಟನಾಶಕ ಕಾಯ್ದೆಗಳ ಅನುಸಾರ ವಹಿವಾಟು ನಡೆಸಬೇಕು


ಚಿಕ್ಕಬಳ್ಳಾಪರ: ವಿವಿಧ ಕೃಷಿ ಪರಿಕರಗಳನ್ನು ಆಯಾ ಕಾಯ್ದೆಗಳ ಅನುಸಾರ ಯಾವುದೇ ಕೊರತೆ ಯಾಗದಂತೆ, ಯಾವುದೇ ಲೋಪದೋಷಗಳಾಗದಂತೆ ರೈತರಿಗೆ ವಿತರಿಸಬೇಕೆಂದು ಉಪ ಕೃಷಿ ನಿರ್ದೇಶಕರಾದ ಜಿ. ದೀಪಶ್ರೀ ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು. ಚಿಕ್ಕಬಳ್ಳಾಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೃಷಿ ಪರಿಕರ ಮಾರಾಟಗಾರರ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಎಲ್ಲಾ ಕೃಷಿ ಪರಿಕರ ಮಾರಾಟಗಾರರಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ, ಪೀಡೆನಾಶಕಗಳು ಮತ್ತು ಬಿತ್ತನೆ ಬೀಜ ವಿತರಿಸುವ ಸಂದರ್ಭದಲ್ಲಿ ಅವುಗಳ ಗುಣಮಟ್ಟ ಖಾತ್ರಿ ಪಡಿಸಿಕೊಂಡು ನಿಗದಿತ ದರಗಳಲ್ಲಿ ಮಾರಾಟ ಮಾಡಬೇಕು. ರಸಗೊಬ್ಬರಗಳ ದಾಸ್ತಾನು ದರ ಪಟ್ಟಿಯನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಬೇಕು.
ಇದನ್ನೂ ಓದಿ: MI IPL Playoffs record: ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್/ನಾಕೌಟ್ ಸಾಧನೆ
ವಿವಿಧ ಪರಿಕರಗಳನ್ನು ಕೊಳ್ಳುವ ರೈತರಿಗೆ ರಸೀದಿಯನ್ನು ಕಡ್ಡಾಯವಾಗಿ ಸೂಕ್ತ ವಿವರಗಳೊಂದಿಗೆ ನೀಡಬೇಕು. ವಿವಿಧ ಪರಿಕರಗಳ ದಾಸ್ತಾನು ವಿವರಗಳನ್ನು ಇಲಾಖೆಗೆ ಕಾಲಕಾಲಕ್ಕೆ ಸಲ್ಲಿಸಬೇಕು. ರಸಗೊಬ್ಬರಗಳನ್ನು ರೈತರ ಆಧಾರ್ ಕಾರ್ಡ್ ಪಡೆದು ಪಿ.ಓ.ಎಸ್ ಯಂತ್ರದ ಮೂಲಕವೇ ವಿತರಿಸಬೇಕು. ರಸಗೊಬ್ಬರ ಬಿತ್ತನೆ ಬೀಜ ಮತ್ತು ಕೀಟನಾಶಕ ಕಾಯ್ದೆಗಳ ಅನುಸಾರ ವಹಿವಾಟು ನಡೆಸಬೇಕು ಎಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಸಿ. ಮುನಿರಾಜು ಮಾತನಾಡುತ್ತಾ, ವಿವಿಧ ಕೃಷಿ ಪರಿಕರಗಳನ್ನು ನಿಗದಿತ ದರದಲ್ಲಿ ಮಾರಾಟ ಮಾಡುವುದು, ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಡಿಎಪಿ ಗೊಬ್ಬರ ಸರಬರಾಜು ಮತ್ತು ವಿತರಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಡಿಎಪಿ ಗೊಬ್ಬರದ ಬದಲಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವಾರು ಸಂಯುಕ್ತ ಗೊಬ್ಬರಗಳನ್ನು ಬಳಸಲು ರೈತರಿಗೆ ಮನವರಿಕೆ ಮಾಡಿಕೊಡಲು ಎಲ್ಲಾ ಮಾರಾಟಗಾರರಿಗೆ ಸೂಚಿಸಿದರು.
ಡಿಎಪಿ ಗೊಬ್ಬರದಲ್ಲಿ ಸಾರಜನಕ ಮತ್ತು ರಂಜಕ ಪ್ರಧಾನ ಪೋಷಕಾಂಶಗಳು ಮಾತ್ರ ಇದ್ದು ಬೆಳೆಗಳಿಗೆ ಬೇಕಾಗುವ ಪ್ರಮುಖ ಇನ್ನೊಂದು ಪ್ರಧಾನ ಪೋಷಕಾಂಶ ಪೊಟ್ಯಾಶ್ ಇರುವುದಿಲ್ಲ. ಇದರಿಂದ ಗಿಡಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಡಿಎಪಿ ಬಳುಸುವುದರಿಂದ ಮಣ್ಣಿನಲ್ಲಿ ರಂಜಕ ಅಂಶ ಹೆಚ್ಚಾಗಿ ಅಗತ್ಯವಾದ ಲಘು ಪೋಷಕಾಂಶ ಗಳಾದ ಸತು(ಜಿಂಕ್) ಮತ್ತು ಕಬ್ಬಿಣದ ಕೊರತೆ ಉಂಟಾಗಿ ಬೆಳೆ ಇಳುವರಿ ಕಡಿಮೆಯಾಗುತ್ತದೆ. ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಶ್ ಅನ್ನು 4:2:1 ಅನುಪಾತದಲ್ಲಿ ಬಳಸಬೇಕಾಗಿದ್ದು, ಈಗಾಗಲೇ ಜಿಲ್ಲೆಯ ಅನುಪಾತ 4.8:2.9:1 ಇದ್ದು ವಿವಿಧ ಬೆಳೆಗಳಿಗೆ ಶಿಫಾರಸ್ಸಿನ ಅನ್ವಯ ಮಾತ್ರ ರಸಗೊಬ್ಬರವನ್ನು ಬಳಸಲು ರೈತರಿಗೆ ಮನವರಿಕೆ ಮಾಡಿಕೊಡಲು ಎಲ್ಲರಿಗೂ ತಿಳಿಸಲಾಯಿತು.
ತಾಲ್ಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ರೈತರಿಗೆ ಸಕಾಲದಲ್ಲಿ ಗುಣಮಟ್ಟದ ಕೃಷಿ ಪರಿಕರಗಳನ್ನು ನೀಡಲು ಎಲ್ಲಾ ಪರಿಕರ ಮಿತ್ರರು ಪ್ರಾಮಾಣಿಕ ಪ್ರಯತ್ನ ಮಾಡಲು ಮತ್ತು ಇಲಾಖೆಯ ಇತರೆ ಯೋಜನೆಗಳ ಬಗ್ಗೆ ಹೆಚ್ಚಿನ ರೈತರಿಗೆ ಮಾಹಿತಿ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ವಿ.ರಾಮಚಂದ್ರ, ನಯನದೇವಿ, ಕೃಷಿ ಇಲಾಖೆಯ ಸಿಬ್ಬಂದಿ ಮತ್ತು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟಗಾರರು