IND vs ENG Test: ಇಂಗ್ಲೆಂಡ್ಗೆ ಪ್ರಯಾಣಿಸಿದ ಭಾರತ ತಂಡ
ಇಂಗ್ಲೆಂಡ್ ಲಯನ್ಸ್ ತಂಡದೆದುರಿನ ದ್ವಿತೀಯ ಅನಧಿಕೃತ ಟೆಸ್ಟ್ ಪಂದ್ಯ ಶುಕ್ರವಾರದಿಂದ ಆರಂಭವಾಗಲಿದೆ. ಈ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಆಡುವ ಸಾಧ್ಯತೆಯಿದೆ. ಇಂಗ್ಲೆಂಡ್ ವಾತಾವರಣಕ್ಕೆ ಹೊಂದಿಕೊಳ್ಳುವ ಉದ್ದೇಶದಿಂದ ರಾಹುಲ್ ಅನಧಿಕೃತ ಟೆಸ್ಟ್ನಲ್ಲೂ ಆಡುವ ಸಾಧ್ಯತೆಯಿದೆ.


ಮುಂಬಯಿ: ಇಂಗ್ಲೆಂಡ್ ವಿರುದ್ಧದ(IND vs ENG Test) ಐದು ಪಂದ್ಯಗಳ ಟೆಸ್ಟ್ಗಳ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾ(jasprit bumrah) ಅವರು ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಆದರೆ ಅವರ ಅನುಪಸ್ಥಿತಿಯಲ್ಲಿ ಬೌಲಿಂಗ್ ಪಡೆಯ ಒತ್ತಡವನ್ನು ನಿಭಾಯಿಸು ವಷ್ಟು ಗುಣಮಟ್ಟದ ಬೌಲರ್ ನಮ್ಮ ತಂಡದಲ್ಲಿದ್ದಾರೆ ಎಂದು ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್(Gautam Gambhir) ಅವರು ಹೇಳಿದ್ದಾರೆ.
ಇಂಗ್ಲೆಂಡಿಗೆ ತೆರಳುವ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಗಂಭೀರ್, ವೈದ್ಯಕೀಯ ತಂಡದ ಸೂಚನೆಯಂತೆ ಬುಮ್ರಾ ಅವರು ಎಲ್ಲ ಐದು ಟೆಸ್ಟ್ಗಳಲ್ಲಿ ಕಾಣಿಸಿಕೊಳ್ಳುವುದು ಕಷ್ಟ ಎಂದು ಭಾರತೀಯ ತಂಡವನ್ನು ಪ್ರಕಟಿಸುವ ವೇಳೆಯೇ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥ ಅಗರ್ಕರ್ ತಿಳಿಸಿದ್ದರು. ಅದರಂತೆ ಅವರು 3 ಪಂದ್ಯದಲ್ಲಿ ಮಾತ್ರ ಆಡುವ ಸಾಧ್ಯತೆ ಇದೆ. ಒಂದೊಮ್ಮೆ ಅವರನ್ನು ಎಲ್ಲ ಪಂದ್ಯಗಳಲ್ಲಿ ಆಡಿಸಿದರೆ ಕಾರ್ಯದೊತ್ತಡ ಹೆಚ್ಚಾಗಿ ಅವರು ಮತ್ತೆ ಗಾಯಗೊಳ್ಳುವ ಸಾಧ್ಯತೆ ಇದೆ ಎಂದು ಗಂಭೀರ್ ಹೇಳಿದರು.
ಶುಭಮನ್ ಗಿಲ್ ನೇತೃತ್ವದ ಭಾರತ ತಂಡ ಗುರುವಾರ ತಡರಾತ್ರಿ ಮುಂಬೈನಿಂದ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಲಿದೆ. ಈಗಾಗಲೇ ಕೆಲವು ಆಟಗಾರರು ಭಾರತ ಎ ತಂಡದೊಂದಿಗೆ ಇಂಗ್ಲೆಂಡ್ನಲ್ಲಿದ್ದು ಅಭ್ಯಾಸ ಪಂದ್ಯಗಳನ್ನು ಆಡುತ್ತಿದ್ದಾರೆ. ಐಪಿಎಲ್ ಕಾರಣದಿಂದ ಭಾರತ ತಂಡ ಪ್ರಯಾಣ ತಡವಾಗಿತ್ತು. ಇಲ್ಲವಾದಲ್ಲಿ ಮೇ 29 ರಂದೇ ಭಾರತ ತಂಡ ಇಂಗ್ಲೆಂಡ್ಗೆ ಪ್ರಯಾಣ ಮಾಡಬೇಕಿತ್ತು.
ಇಂಗ್ಲೆಂಡ್ ಲಯನ್ಸ್ ತಂಡದೆದುರಿನ ದ್ವಿತೀಯ ಅನಧಿಕೃತ ಟೆಸ್ಟ್ ಪಂದ್ಯ ಶುಕ್ರವಾರದಿಂದ ಆರಂಭವಾಗಲಿದೆ. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಆಡುವ ಸಾಧ್ಯತೆಯಿದೆ. ಇಂಗ್ಲೆಂಡ್ ವಾತಾವರಣಕ್ಕೆ ಹೊಂದಿಕೊಳ್ಳುವ ಉದ್ದೇಶದಿಂದ ರಾಹುಲ್ ಅನಧಿಕೃತ ಟೆಸ್ಟ್ನಲ್ಲೂ ಆಡುವ ಸಾಧ್ಯತೆಯಿದೆ.
ಭಾರತ ಟೆಸ್ಟ್ ತಂಡ
ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್(ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ(ಕೆಲವು ಪಂದ್ಯಕ್ಕೆ ಮಾತ್ರ), ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್.