ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Pradeep Eshwar: ಸಿದ್ದರಾಮಯ್ಯ ಭೇಟಿಯಾಗಿ ನೋವು ಹಂಚಿಕೊಂಡ ಶಾಸಕ ಪ್ರದೀಪ್‌ ಈಶ್ವರ್‌; ಧೈರ್ಯ ತುಂಬಿದ ಮಾಜಿ ಸಿಎಂ

ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ, ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಶಾಸಕ ಪ್ರದೀಪ್‌ ಈಶ್ವರ್ ನೋವು ತೋಡಿಕೊಂಡಿದ್ದಾರೆ. ಈ ವೇಳೆ ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ. ಇದರಿಂದ ಧೃತಿಗೆಡಬೇಡಿ ಎಂದು ಮಾಜಿ ಸಿಎಂ ಧೈರ್ಯ ತುಂಬಿದ್ದಾರೆ.

ಶಾಸಕ ಪ್ರದೀಪ್‌ ಈಶ್ವರ್‌ಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಪ್ರದೀಪ್‌ ಈಶ್ವರ್. -

Prabhakara R
Prabhakara R Jun 30, 2026 3:20 PM

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ (Pradeep Eshwar) ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಶಾಸಕ ನೋವು ಹಂಚಿಕೊಂಡಿದ್ದಾರೆ.

ಈ ವೇಳೆ ಪ್ರದೀಪ್ ಈಶ್ವರ್‌ ಅವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ. ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದರು.

_MLA Pradeep Eshwar  (2)

ಇದೇ ವೇಳೆ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಸೂಚಿಸಿದ್ದಾರೆ. ಇನ್ನು ಪೋಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದು ಬೇಸರದ ಸಂಗತಿ ಎಂದಿರುವ ಮಾಜಿ ಸಿಎಂ ಅವರು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರಗಿಸಬೇಕು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಶಾಸಕ ಪ್ರದೀಪ್ ಈಶ್ವರ್‌ಗೆ ಸಿಎಂ ಕರೆ

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರ ಮೇಲೆ ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಘಟನೆ ಹಿನ್ನೆಲೆಯಲ್ಲಿ ಶಾಸಕ ಪ್ರದೀಪ್​ ಈಶ್ವರ್​ ಅವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರೆ​ ಮಾಡಿ, ಧೈರ್ಯದ ತುಂಬುವ ಕೆಲಸ ಮಾಡಿದ್ದಾರೆ.

ಸೋಮವಾರ ರಾತ್ರಿ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿದ್ದರು ಎಂದು ತಿಳಿದುಬಂದಿದೆ. ಧೈರ್ಯವಾಗಿರು, ನಿನ್ನ ಜೊತೆಗೆ ನಾವು ಇದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಧೈರ್ಯ ತುಂಬಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Bandipur and Nagarahole safari: ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಆರಂಭಿಸಲು ಸಿಎಂ ಸೂಚನೆ

ಕರೆ ಮಾಡಿ ವಿಚಾರಿಸಿದ ಬೆನ್ನಲ್ಲೇ ಇಂದು ಶಾಸಕ ಪ್ರದೀಪ್ ಈಶ್ವರ್ ಅವರು ಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.