ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ತನ್ನ ಜೊತೆ ಮಾತನಾಡದ ಸಮಾಜ ಕಲ್ಯಾಣ ಇಲಾಖೆ ಮಹಿಳಾ ಸಿಬ್ಬಂದಿಯನ್ನು ಇರಿದು ಕೊಂದ ದುಷ್ಟ

Murder Case: ರೇಣುಕಾ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ರೇಣುಕಾ ಬುಧವಾರ (ಜೂ.11) ಕೊಟ್ನಾಳ ಗ್ರಾಮದಿಂದ ಬಸ್ ಮೂಲಕ ಬಂದಿಳಿದ್ದರು. ಈ ವೇಳೆ ಬೈಕ್​ನಲ್ಲಿ ಆಗಮಿಸಿದ ಸಂಜು ಬನಸೋಡೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾನೆ.

ಸಮಾಜ ಕಲ್ಯಾಣ ಇಲಾಖೆ ಮಹಿಳಾ ಸಿಬ್ಬಂದಿಯನ್ನು ಇರಿದು ಕೊಂದ ದುಷ್ಟ

ಕೊಲೆ ಆರೋಪಿ ಸಂಜು ಬನಸೋಡೆ

ಹರೀಶ್‌ ಕೇರ ಹರೀಶ್‌ ಕೇರ Jun 12, 2025 6:59 AM

ವಿಜಯಪುರ: ತನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಾಳೆ ಎಂದು ಕೋಪಗೊಂಡ ವಿಕೃತನೊಬ್ಬ ಮಹಿಳೆೆಗೆ ಚಾಕುವಿನಿಂದ ಚುಚ್ಚಿ ಕೊಲೆ (Murder case) ಮಾಡಿರುವ ಘಟನೆ ಇಂಡಿ (Indi) ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ. ಮೃತಪಟ್ಟವಳು ಸಮಾಜ ಕಲ್ಯಾಣ ಇಲಾಖೆಯಲ್ಲಿ (Social Welfare Department) ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ (woman worker) ಸಿಬ್ಬಂದಿಯಾಗಿದ್ದು, ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದ ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಕೊಲೆಯಾದ ಮಹಿಳೆ. ಇಂಡಿ (Vijayapura news) ತಾಲೂಕಿನ ಅಗರಖೇಡ ಗ್ರಾಮದ ಸಂಜು ಬನಸೋಡೆ ಕೊಲೆ ಮಾಡಿದ ಆರೋಪಿ.

ರೇಣುಕಾ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ರೇಣುಕಾ ಬುಧವಾರ (ಜೂ.11) ಕೊಟ್ನಾಳ ಗ್ರಾಮದಿಂದ ಬಸ್ ಮೂಲಕ ಬಂದಿಳಿದ್ದರು. ಈ ವೇಳೆ ಬೈಕ್​ನಲ್ಲಿ ಆಗಮಿಸಿದ ಸಂಜು ಬನಸೋಡೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಣುಕಾ ಅವರನ್ನು ಇಂಡಿ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರೇಣುಕಾ ಕನ್ನೊಳ್ಳಿ ಮೃತಪಟ್ಟಿದ್ದಾರೆ.

ರೇಣುಕಾ ಸಾವಿನಿಂದ ಅವರ ತಾಯಿ ಸಹೋದರರ ಆಕ್ರಂದನ ಮುಗಿಲು ಮುಟ್ಟಿದೆ. ಕೊಲೆಯ ಕಾರಣದ ಕುರಿತು ರೇಣುಕಾ ತಾಯಿ ಹಾಗೂ ಸಹೋದರ ಮಾಹಿತಿ ನೀಡಿದ್ದಾರೆ. ರೇಣುಕಾರ ಪತಿ ಸಾಯಬಣ್ಣ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಾಯಬಣ್ಣ ಸೇವೆಯಲ್ಲಿರುವಾಗಲೇ ಮೃತಪಟ್ಟ ಕಾರಣ ರೇಣುಕಾ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ಸಿಕ್ಕಿದೆ. ತವರೂರು ಕೊಟ್ನಾಳದಿಂದ ನಿತ್ಯ ಇಂಡಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಬಂದು ಹೋಗುತ್ತಿದ್ದರು. ಈ ವೇಳೆ ಇಂಡಿ ತಾಲೂಕಿನ ಅಗರಖೇಡ್ ಗ್ರಾಮದ ಸಂಜು ಬನಸೋಡೆ ಎಂಬ ಯುವಕ ರೇಣುಕಾಗೆ ತನ್ನ ಜೊತೆಗೆ ಮಾತನಾಡು ಎಂದು ಬೆನ್ನು ಬಿದ್ದಿದ್ದ. ಆತನ ಜೊತೆಗೆ ಮಾತನಾಡಲು ನಿರಾಕರಣೆ ಮಾಡಿದ ಪರಿಣಾಮ ಸಂಜು ಬನಸೋಡೆ ರೇಣುಕಾರಿಗೆ ಹರಿತವಾದ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.

ಇಂಡಿ ಪಟ್ಟಣ ಠಾಣೆಯ ಪೊಲೀಸರು ಆರೋಪಿ ಸಂಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ತನಿಖೆ ಮುಂದವರೆದಿದೆ. ಇಂಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Indore Couple Missing: ರೇನ್‌ ಕೋಟ್‌, ಶರ್ಟ್‌ನಿಂದ ಸಿಕ್ತು ಕೊಲೆಯ ಸುಳಿವು; ಹಂತಕರ ಬಂಧನ ಹೇಗಿತ್ತು?