ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rishabh Pant: ದಕ್ಷಿಣ ಆಫ್ರಿಕಾ 'ಎ' ವಿರುದ್ಧದ 2 ಅನಧಿಕೃತ ಟೆಸ್ಟ್‌ಗೆ ರಿಷಭ್ ಪಂತ್ ನಾಯಕ

ಈ ವರ್ಷದ ಜುಲೈನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಸಂದರ್ಭದಲ್ಲಿ ಪಾದದ ಮೂಳೆ ಮುರಿತಕ್ಕೊಳಗಾದ ನಂತರ ಪಂತ್ ಆಟದಿಂದ ಹೊರಗುಳಿದಿದ್ದರು. ಪರಿಣಾಮವಾಗಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ವೆಸ್ಟ್ ಇಂಡೀಸ್ ವಿರುದ್ಧದ ತವರಿನ ಟೆಸ್ಟ್ ಸರಣಿ ಹಾಗೂ ಆಸ್ಟ್ರೇಲಿಯಾದ ವೈಟ್-ಬಾಲ್ ಪ್ರವಾಸವನ್ನು ತಪ್ಪಿಸಿಕೊಂಡರು.

ಭಾರತ ಎ ತಂಡಕ್ಕೆ ರಿಷಭ್ ಪಂತ್ ನಾಯಕ

-

Abhilash BC Abhilash BC Oct 21, 2025 2:25 PM

ನವದೆಹಲಿ: ರಿಷಭ್ ಪಂತ್(Rishabh Pant) ತಂಡಕ್ಕೆ ಮರಳುವ ದಿನಾಂಕವನ್ನು ದೃಢಪಡಿಸಲಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ(South Africa Tests) ನಡುವಿನ ಬಹುನಿರೀಕ್ಷಿತ ಟೆಸ್ಟ್ ಸರಣಿಗೂ ಮುನ್ನ ಪ್ರವಾಸಿ ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧದ ಎರಡು ಅನಧಿಕೃತ ಟೆಸ್ಟ್‌ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಭಾರತ ಎ(India A) ತಂಡವನ್ನು ಮುನ್ನಡೆಸಲಿದ್ದಾರೆ. ಹಲವಾರು ಟೆಸ್ಟ್ ಆಟಗಾರರನ್ನು ಒಳಗೊಂಡ ಭಾರತ ಎ ತಂಡದ ಉಪನಾಯಕನನ್ನಾಗಿ ಸಾಯಿ ಸುದರ್ಶನ್ ಅವರನ್ನು ನೇಮಿಸಲಾಗಿದೆ.

ಭಾರತ ಎ ತಂಡವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಾಲ್ಕು ದಿನಗಳ ಎರಡೂ ಪಂದ್ಯಗಳನ್ನು ಆಡಲಿದೆ. ಮೊದಲ ಪಂದ್ಯ ಅಕ್ಟೋಬರ್ 30 ರಂದು ಆರಂಭವಾಗಲಿದ್ದು, ಎರಡನೇ ಪಂದ್ಯ ನವೆಂಬರ್ 6 ರಂದು ಅದೇ ಸ್ಥಳದಲ್ಲಿ ನಡೆಯಲಿದೆ. ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್, ಧ್ರುವ್ ಜುರೆಲ್ ಮತ್ತು ಮೊಹಮ್ಮದ್ ಸಿರಾಜ್ ಆಡಲಿದ್ದಾರೆ.

ಈ ವರ್ಷದ ಜುಲೈನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಸಂದರ್ಭದಲ್ಲಿ ಪಾದದ ಮೂಳೆ ಮುರಿತಕ್ಕೊಳಗಾದ ನಂತರ ಪಂತ್ ಆಟದಿಂದ ಹೊರಗುಳಿದಿದ್ದರು. ಪರಿಣಾಮವಾಗಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ವೆಸ್ಟ್ ಇಂಡೀಸ್ ವಿರುದ್ಧದ ತವರಿನ ಟೆಸ್ಟ್ ಸರಣಿ ಹಾಗೂ ಆಸ್ಟ್ರೇಲಿಯಾದ ವೈಟ್-ಬಾಲ್ ಪ್ರವಾಸವನ್ನು ತಪ್ಪಿಸಿಕೊಂಡರು.

ಇದನ್ನೂ ಓದಿ ʻನಿಮ್ಮ ಕೊಡುಗೆಗಾಗಿ ಅಭಿನಂದನೆಗಳುʼ: ನಿಕೋಲಸ್ ಪೂರನ್‌ಗೆ ವಿಶೇಷ ಸಂದೇಶ ರವಾನಿಸಿದ ರಿಷಭ್ ಪಂತ್!

ಮೊದಲ ಪಂದ್ಯಕ್ಕೆ ಭಾರತ ತಂಡ

ರಿಷಭ್ ಪಂತ್ (ನಾಯಕ, ಆಯುಷ್ ಮ್ಹಾತ್ರೆ, ಎನ್ ಜಗದೀಸನ್, ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಮಾನವ್ ಸುತಾರ್, ಅಂಶುಲ್ ಕಾಂಬೋಜ್, ಯಶ್ ಠಾಕೂರ್, ಆಯುಷ್ ಬಡೋನಿ, ಸರನ್ಶ್ ಜೈನ್.

ದ್ವಿತೀಯ ಪಂದ್ಯಕ್ಕೆ ಭಾರತ ತಂಡ

ರಿಷಭ್ ಪಂತ್ (ನಾಯಕ), ಕೆಎಲ್ ರಾಹುಲ್, ಧ್ರುವ್ ಜುರೆಲ್ (ವಿ.ಕೀ.), ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಮಾನವ್ ಸುತಾರ್, ಖಲೀಲ್ ಅಹ್ಮದ್, ಗುರ್ನೂರ್ ಬ್ರಾರ್, ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.