ಜೈಲಿನಿಂದ ಹೊರಬಂದ ಎರಡನೇ ದಿನ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಪಾಪಿ; ಛೀ...ಥೂ...ಎಂದ ಜನ
Crime News: ಕಳವು ಆರೋಪದಲ್ಲಿ ಜೈಲು ಸಿಕ್ಷೆ ಅನುಭವಿಸಿದ್ದ 23 ವರ್ಷದ ಸಿಂದರವೇಲು ಎನ್ನುವ ಪಾಪಿ ಹೊರಬಂದ ಎರಡೇ ದಿನಕ್ಕೆ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಆತನನ್ನು ಪೊಲೀಸರು ಬಂದಿದ್ದು, ತನಿಖೆ ನಡೆಯುತ್ತಿದೆ.

ಸಾಂಧರ್ಬಿಕ ಚಿತ್ರ.

ಚೆನ್ನೈ: ಈ ಬೀಭತ್ಸ ಘಟನೆಯ ಓದುತ್ತಿದ್ದರೆ ನಿಮ್ಮಲ್ಲೂ ಆಕ್ರೋಶ ಮೂಡಬಹುದು. ಜತೆಗೆ ಕೃತ್ಯ ಎಸಗಿದ ಯುವಕನ ಬಗ್ಗೆ ಅಸಹ್ಯ ಉಂಟಾಗಬಹುದು. ಮಾನವೀಯ ಸಂಬಂಧಕ್ಕೆ ಬೆಲೆಯೇ ಇಲ್ಲವೆ ಎನ್ನುವ ಪ್ರಶ್ನೆಯೂ ಹಾದು ಹೋಗಬಹುದು. ಇಷ್ಟೆಲ್ಲ ಪೀಠಿಕೆ ಹಾಕಲೂ ಕಾರಣವಿದೆ. ಹೌದು, ತಮಿಳುನಾಡಿನ ಯುವಕನೊಬ್ಬ ಇಂತಹ ನೀಚ ಕೃತ್ಯ ಎಸಗಿ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದ್ದಾನೆ (Crime News). ಕಳವು ಕೇಸಿನಲ್ಲಿ ಜೈಲಿಗೆ ಹೋಗಿದ್ದ ಈ ಅಸಾಮಿ ಹೊರಬಂದ 2 ದಿನದಲ್ಲೇ 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಆಘಾತಕಾರಿ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ತಲೆ ಮರೆಸಿಕೊಂಡಿದ್ದ ಆತನನ್ನು ಇದೀಗ ಸೆರೆ ಹಿಡಿಯಲಾಗಿದೆ.
ಆರೋಪಿಯನ್ನು 23 ವರ್ಷದ ಸುಂದರವೇಲು ಎಂದು ಗುರುತಿಸಲಾಗಿದೆ. ವಾಕಿಂಗ್ ಮಾಡುತ್ತಿದ್ದ ವೃದ್ಧೆಯ ಮೇಲೇೆರಗಿ ಈತ ಅತ್ಯಾಚಾರ ಎಸಗಿದ್ದ. ಈ ವೇಳೆ ಆತ ಮದ್ಯ ಸೇವಿಸಿದ್ದ ಎಂದು ಮೂಲಗಳು ತಿಳಿಸಿವೆ. ಜೂ. 15ರಂದು ಜೈಲಿನಿಂದ ಬಿಡುಗಡೆಗೊಂಡಿದ್ದ ಆತ ಇದೀಗ ಮತ್ತೆ ಘೋರ ಅಪರಾಧ ಎಸಗಿದ್ದಾನೆ. ಸದ್ಯ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Physical Abuse: ಮೊಬೈಲ್ನಲ್ಲಿ ಮಹಿಳೆಯರ 13,500 ಕ್ಕೂ ಹೆಚ್ಚು ಅಶ್ಲೀಲ ಫೋಟೋ ಪತ್ತೆ; ಬ್ಲಾಕ್ಮೇಲ್ ಮಾಡುತ್ತಿದ್ದ ಸೈಕೋ ಅರೆಸ್ಟ್
ಘಟನೆ ವಿವರ
ʼʼಆರೋಪಿ ಸುಂದರವೇಲು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ. ನಮ್ಮ ಬಳಿ ಸೂಕ್ತ ಸಾಕ್ಷಿಗಳಿದ್ದು, ಇದರ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಸದ್ಯ ಸಂತ್ರಸ್ತೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆʼʼ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿಸಲು ತೆರಳಿದ ಪೊಲೀಸರ ಮೇಲೆ ಆರೋಪಿ ಚಾಕುವಿನಿಂದ ದಾಳಿ ನಡೆಸಲು ಮುಂದಾಗಿದ್ದ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ʼʼನಾವು ಬಂಧಿಸಲು ತೆರಳಿದಾಗ ಆರೋಪಿ ಚಾಕು ಹಿಡಿದು ದಾಳಿ ನಡೆಸಲು ಮುಂದಾಗಿದ್ದ. ಈ ವೇಳೆ ಇಬ್ಬರಿಗೆ ಗಾಯಗಳಾಗಿವೆ. ಹೀಗಾಗಿ ಗತ್ಯಂತರವಿಲ್ಲದೆ ಅನಿವಾರ್ಯವಾಗಿ ಗುಂಡು ಹಾರಿಸಬೇಕಾಯಿತುʼʼ ಎಂದು ಪೊಲೀಸರು ವಿವರಿಸಿದ್ದಾರೆ. ಸದ್ಯ ಈ ಘಟನೆಗೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಸುಂದರವೇಲುವಿನ ಕೃತ್ಯಕ್ಕೆ ತಮಿಳುನಾಡೇ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ವಿಪಕ್ಷಗಳಿಂದ ತರಾಟೆ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆರ ಮೇಲಿನ ದೌರ್ಜನ್ಯ ಪ್ರಕರಣಗಳ ಹಿನ್ನಲೆಯಲ್ಲಿ ವಿಪಕ್ಷಗಳು ಆಡಳಿತರೂಢ ಡಿಎಂಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ತಮಿಳುನಾಡು ವಿಧಾನಸಭೆಯ ವಪಕ್ಷ ನಾಯಕ ಎಡಪ್ಪಡಿ ಕೆ. ಪಳನಿಸ್ವಾಮಿ ಮಾತನಾಡಿ, "ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಳ್ವಿಕೆಯಲ್ಲಿ ತಮಿಳುನಾಡು ಎತ್ತ ಸಾಗುತ್ತಿದೆ ಎನ್ನುವುದೇ ತಿಳಿಯುತ್ತಿಲ್ಲ. ೀ ಸರ್ಕಾರ ಮಾದಕ ವಸ್ತುಗಳ ಹಾವಳಿಯನ್ನು ನಿರ್ಮೂಲನೆ ಮಾಡಲಿದೆ ಅಥವಾ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಿದೆ ಎಂಬ ವಿಶ್ವಾಸ ಜನರಿಗೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದಾಗ್ಯೂ ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಒಟ್ಟಿನಲ್ಲಿ ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.