ಈಜಲು ಹೋದ ಬಾಲಕರಿಬ್ಬರು ನೀರುಪಾಲು
ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಆಲಭುಜನಹಳ್ಳಿಯ ಚೇತನ್ (14) ಹಾಗೂ ದರ್ಶನ್ (15) ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ.