Actor Vijay Deverakonda: ನಟ ವಿಜಯ್ ದೇವರಕೊಂಡಗೆ ಭಾರೀ ಸಂಕಷ್ಟ! ಅರೆಸ್ಟ್ ಆಗ್ತಾರಾ ಸ್ಟಾರ್ ನಟ?
ನಟ ವಿಜಯ್ ದೇವರಕೊಂಡ(Actor Vijay Deverakonda) ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬುಡಕಟ್ಟು ಸಮುದಾಯವನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಬೆನ್ನಲ್ಲೆ ಅವರ ವಿರುದ್ಧ ಕೇಸ್ ದಾಖಲಾಗಿದೆ. ಸೈದಾಬಾದ್ ನಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ನಾಯಕ್ ಅವರು ದೂರು ದಾಖಲಿಸಿದ್ದಾರೆ.


ಹೈದರಾಬಾದ್: ಬುಡಕಟ್ಟು ಸಮುದಾಯವನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ವಿಜಯ್ ದೇವರಕೊಂಡ(Actor Vijay Deverakonda) ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೈಬರಾಬಾದ್ನ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸೈದಾಬಾದ್ ನಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ನಾಯಕ್ ಅವರು ದೂರು ದಾಖಲಿಸಿದ್ದಾರೆ. ಸೂರ್ಯ ಅವರ 'ರೆಟ್ರೊ' ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದ ಸಂದರ್ಭದಲ್ಲಿ ವಿಜಯ್ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಏನಿದು ವಿವಾದಾತ್ಮಕ ಹೇಳಿಕೆ?
ಈ ಕಾರ್ಯಕ್ರಮದಲ್ಲಿ, ದೇವರಕೊಂಡ ಅವರು ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದರು. "ಕಾಶ್ಮೀರದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಪರಿಹಾರವೆಂದರೆ ಭಯೋತ್ಪಾದಕರಿಗೆ ಶಿಕ್ಷಣ ನೀಡುವುದು ಮತ್ತು ಅವರು ಬ್ರೈನ್ ವಾಶ್ಗೆ ಒಳಗಾಗದಂತೆ ನೋಡಿಕೊಳ್ಳುವುದು. ಅವರು ಏನು ಸಾಧಿಸುತ್ತಾರೆ? ಕಾಶ್ಮೀರ ಭಾರತಕ್ಕೆ ಸೇರಿದ್ದು, ಕಾಶ್ಮೀರಿಗಳು ನಮ್ಮವರು. ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಪಾಕಿಸ್ತಾನಿಗಳು ಸ್ವತಃ ತಮ್ಮ ಸರ್ಕಾರದಿಂದ ಬೇಸತ್ತಿದ್ದಾರೆ. ಅಲ್ಲಿನ ಜನರು ಮತ್ತು ಭಯೋತ್ಪಾದಕರು 500 ವರ್ಷಗಳ ಹಿಂದೆ ಬುಡಕಟ್ಟು ಜನಾಂಗದವರು ಸಾಮಾನ್ಯ ಜ್ಞಾನವಿಲ್ಲದೆ ಹೋರಾಡಿದಂತೆ ವರ್ತಿಸುತ್ತಾರೆ ಎಂದು ಅವರು ಹೇಳಿದರು. ಈ ಹೇಳಿಕೆ ಭಾರೀ ವಿವಾದವನ್ನೇ ಸೃಷ್ಟಿಸಿತ್ತು. ಬುಡಗಟ್ಟು ಜನಾಂಗ ವಿಜಯ್ ವಿರುದ್ಧ ಭಾರೀ ಆಕ್ರೋಶ ಹೊರ ಹಾಕಿತ್ತು.
ಈ ಸುದ್ದಿಯನ್ನೂ ಓದಿ: Rashmika-Vijay Deverakonda: ಮತ್ತೆ ರಶ್ಮಿಕಾ-ವಿಜಯ್ ದೇವರಕೊಂಡ ಭರ್ಜರಿ ವೆಕೇಶನ್? ವೈರಲ್ ಆಗಿರೋ ವಿಡಿಯೊದಲ್ಲೇನಿದೆ?
ಇದರ ಬೆನ್ನಲ್ಲೇ ವಿಜಯ್ ಸಾರ್ವಜನಿಕ ಕ್ಷಮೆಯಾಚಿಸಿದ್ದರು. ತಮ್ಮ ಹೇಳಿಕೆಗಳು ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಹೇಳಿದರು. ಯಾವುದೇ ಸಮುದಾಯವನ್ನು, ವಿಶೇಷವಾಗಿ ನಮ್ಮ ಪರಿಶಿಷ್ಟ ಪಂಗಡಗಳನ್ನು ನೋಯಿಸುವ ಅಥವಾ ಗುರಿಯಾಗಿಸುವ ಉದ್ದೇಶವಿರಲಿಲ್ಲ, ಅವರನ್ನು ನಾನು ಆಳವಾಗಿ ಗೌರವಿಸುತ್ತೇನೆ ಮತ್ತು ನಮ್ಮ ದೇಶದ ಅವಿಭಾಜ್ಯ ಅಂಗವೆಂದು ಪರಿಗಣಿಸುತ್ತೇನೆ ಎಂದು ಅವರು ಬರೆದಿದ್ದಾರೆ. ಇದಕ್ಕೂ ಮೊದಲು, ಹೈದರಾಬಾದ್ ಮೂಲದ ವಕೀಲ ಲಾಲ್ ಚೌಹಾಣ್ ಕೂಡ ಇದೇ ಹೇಳಿಕೆಗಳಿಗಾಗಿ ನಟನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿ ಮಾಡಿದೆ. ಏತನ್ಮಧ್ಯೆ, ವಿಜಯ್ ದೇವರಕೊಂಡ 'ಕಿಂಗ್ಡಮ್' ಚಿತ್ರದಲ್ಲಿ ಮುಂದಿನ ಬಾರಿ ಕಾಣಿಸಿಕೊಳ್ಳಲಿದ್ದಾರೆ.