ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vishnuvardhan: ಡಾ.ವಿಷ್ಣುವರ್ಧನ್ 75ನೇ ಜನ್ಮದಿನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ

ಸ್ಯಾಂಡಲ್‌ವುಡ್‌ ನಟ ದಿ.ಡಾ.ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು 'ಯಜಮಾನರ ಅಮೃತ ಮಹೋತ್ಸವ'ವೆಂದು ಆಚರಿಸಲು ಡಾ.ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ.ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಚಿತ್ರರಂಗದ ಅನೇಕ‌ ಗಣ್ಯರು ಭಾಗಿಯಾಗಲಿದ್ದಾರೆ.

ವಿಷ್ಣುವರ್ಧನ್‌ 75ನೇ ಜನ್ಮದಿನೋತ್ಸವದ ಅದ್ದೂರಿ ತಯಾರಿ

Dr Vishnuvardhan 75th Birthday Celebration

Profile Pushpa Kumari Jun 26, 2025 8:45 PM

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ಸಾಹಸಸಿಂಹ ಡಾ.ವಿಷ್ಣುವರ್ಧನ್ (Dr Vishnuvardhan) ಅವರ 75ನೇ ಜನ್ಮದಿನೋತ್ಸವವನ್ನು 'ಯಜಮಾನರ ಅಮೃತ ಮಹೋತ್ಸವ' ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮೃತ ಮಹೋತ್ಸವದ ನೇತೃತ್ವವನ್ನು ಚಲನಚಿತ್ರ ನಿರ್ದೇಶಕ ಮತ್ತು ಡಾ. ವಿಷ್ಣುವರ್ಧನ್ ಅವರ ಆಪ್ತರೂ ಆದಂತಹ ಎಸ್. ನಾರಾಯಣ್ ವಹಿಸಿಕೊಂಡಿದ್ದು, ಮಾರ್ಗದರ್ಶಕರಾಗಿ ಎಸ್.ವಿ.ರಾಜೇಂದ್ರಸಿಂಗ್ ಬಾಬು ಕೈಜೋಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಎಸ್‌.ನಾರಾಯಣ್ ಮಾತನಾಡಿ, ʼʼಡಾ.ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗುತ್ತಿದ್ದು, ಇದರಲ್ಲಿ ಸ್ಯಾಂಡಲ್‌ವುಡ್‌ನ ಎಲ್ಲರೂ ಭಾಗವಹಿಸುತ್ತಾರೆ ಎಂಬ ಭರವಸೆ ಇದೆʼʼ ಎಂದರು. ʼʼಈಗಾಗಲೇ ಅಮರನಟ ಎಂಬ ಕಾರ್ಯಕ್ರಮವನ್ನು ಡಾ. ರಾಜ್ ಕುಮಾರ್ ಅವರ ಹೆಸರಲ್ಲಿ, ಅಂಬಿ ಸಂಭ್ರಮ ಎನ್ನುವ ಕಾರ್ಯಕ್ರಮವನ್ನು ಡಾ. ಅಂಬರೀಷ್ ಅವರ ಹೆಸರಲ್ಲಿ ಆಯೋಜಿಸಿದ ಅನುಭವ ನನಗಿರುವುದರಿಂದ, ಕನ್ನಡ ಚಿತ್ರರಂಗದ ತ್ರಿಮೂರ್ತಿಗಳಲ್ಲೊಬ್ಬರಾದ ಡಾ. ವಿಷ್ಣುವರ್ಧನ್ ಅವರ ಕಾರ್ಯಕ್ರಮದಲ್ಲೂ ಭಾಗಿಯಾಗುವ ಭಾಗ್ಯ ನನಗೆ ಸಿಕ್ಕಿರುವುದು ಪುಣ್ಯʼʼ ಎಂದರು.

ಎಸ್.ವಿ.ರಾಜೇಂದ್ರಸಿಂಗ್‌ ಬಾಬು ಮಾತನಾಡಿ, ಅಮೃತ ಮಹೋತ್ಸವಕ್ಕೆ ಭಾರತೀಯ ಚಿತ್ರರಂಗದ ವಿಷ್ಣುವರ್ಧನ್‌ ಅವರ ಆಪ್ತರನ್ನೆಲ್ಲ ಆಹ್ವಾನಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದರ ಜತೆಗೆ ಹಿಂದಿ, ತಮಿಳು, ಮಲಯಾಳಂ, ತೆಲುಗು ಚಿತ್ರರಂಗದ ಖ್ಯಾತ ನಟರು ಹಾಜರಾಗುವಂತೆ ನೋಡಿಕೊಳ್ಳುತ್ತೇನೆ ಎಂದರು.

ಇದನ್ನು ಓದಿ: Kannappa Movie: 'ಕಣ್ಣಪ್ಪ' ಸಿನಿಮಾ ಬಗ್ಗೆ ಅನಗತ್ಯ ವಿಮರ್ಶೆ ಮಾಡಿದರೆ ಕಾನೂನು ಕ್ರಮ; ಚಿತ್ರತಂಡದಿಂದ ಖಡಕ್ ಎಚ್ಚರಿಕೆ

ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ಶ್ರೀ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ʼʼಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಚಿತ್ರರಂಗದ ಅನೇಕ‌ ಗಣ್ಯರು ಭಾಗಿಯಾಗಲಿದ್ದಾರೆʼʼ ಎಂದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು, ವಾಣಿಜ್ಯ ಮಂಡಳಿಯು ಈ ಕಾರ್ಯಕ್ರಮಕ್ಕೆ ಕೇವಲ ಸಹಕಾರವನ್ನಲ್ಲದೆ ಸಹಭಾಗಿತ್ವವನ್ನು ವಹಿಸಿಕೊಳ್ಳಲಿದೆ ಎನ್ನುವ ಭರವಸೆ ನೀಡಿದರು. ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ಹಾಗೂ ರಮೇಶ್ ಯಾದವ್ ಕೂಡ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.