ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kanakaraja Movie: ಸ್ಯಾಂಡಲ್‌ವುಡ್‌ಗೆ ಅನೂಪ್‍ ರೇವಣ್ಣ ರೀ ಎಂಟ್ರಿ; ʼಕನಕರಾಜʼ ಚಿತ್ರಕ್ಕೆ ಮುಹೂರ್ತ

Kanakaraja Movie: ಡಾ.ವಿ. ನಾಗೇಂದ್ರ ಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನು ಮಾಡುತ್ತಿರುವ, ವಿ.ಎಂ. ರಾಜು ಮತ್ತು ನೀಲ್ ಕೆಂಗಾಪುರ ಜಂಟಿಯಾಗಿ ನಿರ್ದೇಶಿಸುತ್ತಿರುವ ಹಾಗೂ ಎಚ್.ಎಂ. ರೇವಣ್ಣ ಅವರ ಪುತ್ರ ಅನೂಪ್‍ ರೇವಣ್ಣ ನಾಯಕನಾಗಿ ನಟಿಸುತ್ತಿರುವ ʼಕನಕರಾಜʼ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ಮಹಾಲಕ್ಷ್ಮೀ ಲೇಔಟ್‌ನ ಪ್ರಸನ್ನ ಶ್ರೀವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿನೆರವೇರಿತು.

ಎಚ್.ಎಂ. ರೇವಣ್ಣ ಪುತ್ರ ಅನೂಪ್‍ ನಟನೆಯ ʼಕನಕರಾಜʼ ಚಿತ್ರಕ್ಕೆ ಮುಹೂರ್ತ

-

Profile Siddalinga Swamy Oct 10, 2025 10:40 PM

ಬೆಂಗಳೂರು: ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್.ಆರ್. ಸನತ್ ಕುಮಾರ್ ನಿರ್ಮಿಸುತ್ತಿರುವ, ಡಾ.ವಿ. ನಾಗೇಂದ್ರ ಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡುತ್ತಿರುವ, ವಿ.ಎಂ. ರಾಜು ಮತ್ತು ನೀಲ್ ಕೆಂಗಾಪುರ ಜಂಟಿಯಾಗಿ ನಿರ್ದೇಶಿಸುತ್ತಿರುವ ಹಾಗೂ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ಪುತ್ರ ಅನೂಪ್‍ ರೇವಣ್ಣ ನಾಯಕನಾಗಿ ನಟಿಸುತ್ತಿರುವ ʼಕನಕರಾಜʼ ಚಿತ್ರದ (Kanakaraja Movie) ಮುಹೂರ್ತ ಸಮಾರಂಭ ಮಹಾಲಕ್ಷ್ಮೀ ಲೇಔಟ್‌ನ ಪ್ರಸನ್ನ ಶ್ರೀವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಆರಂಭ ಫಲಕ ತೋರಿದರು. ಕರ್ನಾಟಕ ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಕ್ಯಾಮರಾ ಚಾಲನೆ ಮಾಡಿದರು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ. ವಿಶ್ವನಾಥ್ ಸೇರಿದಂತೆ ಮುಂತಾದ ಚಿತ್ರರಂಗದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿದರು.

ಇಂದಿನ ಸಮಾರಂಭಕ್ಕೆ ಆಗಮಿಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತನಾಡಿದ ನಿರ್ಮಾಪಕ ಸನತ್ ಕುಮಾರ್, ʼಕನಕರಾಜʼ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಆರನೇ ಚಿತ್ರ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರಗಳನ್ನು ನಿರ್ಮಾಣ ಮಾಡುತ್ತ ಬಂದಿರುವ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ʼಕನಕರಾಜʼ ಚಿತ್ರದಲ್ಲೂ ಯುವಜನತೆಗೆ ಉತ್ತಮ ಸಂದೇಶವಿದೆ. ನಮ್ಮ ರಾಜ್ಯದ ವಿವಿಧ ಊರುಗಳಲ್ಲಿ, ಪಕ್ಕದ ರಾಜ್ಯಗಳಲ್ಲಿ ಹಾಗೂ ವಿದೇಶದಲ್ಲೂ ಈ ಚಿತ್ರದ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕ ಸನತ್ ಕುಮಾರ್ (ಮೀನಾಕ್ಷಿ ಕಾಫಿ ಬಾರ್) ತಿಳಿಸಿದರು.

ನಾವು ಸಾಮಾನ್ಯವಾಗಿ ಯವಜನತೆ ರಾಜಕೀಯಕ್ಕೆ ಬರಬೇಕು. ರಾಜಕಾರಣಿಯಾಗಬೇಕು ಅಂತ ಹೇಳುತ್ತಿರುತ್ತೇವೆ. ಈ ಮಾತನ್ನೇ ಪ್ರಮುಖವಾಗಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ‌. ಚಿತ್ರದ ನಾಯಕ ವಕೀಲನಾಗಿದರೂ ರಾಜಕೀಯದಲ್ಲೂ ಸಕ್ರಿಯ. ಜತೆಗೆ ಮುಖ್ಯಮಂತ್ರಿಯ ಅಭಿಮಾನಿಯೂ ಹೌದು. ಹಾಗಾಗಿ ನಮ್ಮ ʼಕನಕರಾಜʼ ಚಿತ್ರಕ್ಕೆ ʼFan of CMʼ ಎಂಬ ಅಡಿಬರಹವಿದೆ ಎಂದು ಚಿತ್ರದ ಕಥೆಗಾರರೂ ಆಗಿರುವ ಸಂಗೀತ ನಿರ್ದೇಶಕ ಡಾ.ವಿ. ನಾಗೇಂದ್ರ ಪ್ರಸಾದ್ ಹೇಳಿದರು.

ನಿರ್ಮಾಪಕರೂ ಹೇಳಿದ ಹಾಗೆ ನಮ್ಮ ಚಿತ್ರಕ್ಕೆ ಬೆಂಗಳೂರು, ಮಂಗಳೂರು, ಪಕ್ಕದ ರಾಜ್ಯಗಳು ಹಾಗೂ ವಿದೇಶದಲ್ಲೂ ಚಿತ್ರೀಕರಣ ನಡೆಯಲಿದೆ. ರಮೇಶ್ ಕೊಯಿರ ಛಾಯಾಗ್ರಹಣ ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನವಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿರುತ್ತದೆ ಎಂದರು ನಿರ್ದೇಶಕರಲ್ಲೊಬ್ಬರಾದ ವಿ.ಎಂ.ರಾಜು.

ಮುಹೂರ್ತ ಸಮಾರಂಭಕ್ಕೆ ಬಂದಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯಾವಾದ. ನಾನು ಈ ಚಿತ್ರದಲ್ಲಿ ಲಾಯರ್ ಪಾತ್ರ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳ ಅಭಿಮಾನಿಯೂ ಹೌದು. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಾಯಕ ಅನೂಪ್ ರೇವಣ್ಣ ಹೇಳಿದರು. ʼಕನಕರಾಜʼ ಚಿತ್ರದ ಕಥೆ ಹಾಗೂ ನನ್ನ ಪಾತ್ರ ಚೆನ್ನಾಗಿದೆ ಎಂದು ನಾಯಕಿ ನಿಮಿಷಾ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Deepavali Shopping 2025: ಶುರುವಾಯ್ತು ದೀಪಾವಳಿಯ ಭರ್ಜರಿ ಶಾಪಿಂಗ್

ನಿರ್ಮಾಪಕ ಸನತ್ ಕುಮಾರ್ ನನ್ನ ಆತ್ಮೀಯ ಸ್ನೇಹಿತರು. ಅವರ ನಿರ್ಮಾಣದ ಚಿತ್ರದಲ್ಲಿ ನನ್ನ ಮಗ ಅನೂಪ್ ರೇವಣ್ಣ ನಾಯಕನಾಗಿ ನಟಿಸುತ್ತಿದ್ದಾರೆ. ಕಥೆ ಬಹಳ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲೆಂದು ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹಾರೈಸಿದರು.