ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannada New Movie: ಮಯೂರ್ ಕಡಿ ನಿರ್ದೇಶನ, ನಾಯಕನಾಗಿ ನಟಿಸಿರುವ ʼಮಾತೊಂದ ಹೇಳುವೆʼ ಚಿತ್ರ ಜೂ.13ಕ್ಕೆ ರಿಲೀಸ್‌

Kannada New Movie: ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ 'ಮಾತೊಂದ ಹೇಳುವೆ' ಚಿತ್ರವನ್ನು ಆರ್‌ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ. ಜತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ.

ʼಮಾತೊಂದ ಹೇಳುವೆʼ ಚಿತ್ರ ಜೂ.13ಕ್ಕೆ ಬಿಡುಗಡೆ

Profile Siddalinga Swamy May 13, 2025 9:44 PM

ಬೆಂಗಳೂರು: ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್‌ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ 'ಮಾತೊಂದ ಹೇಳುವೆ' ಚಿತ್ರವನ್ನು (Kannada New Movie)‌ ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ‌. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್‌ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ. ಜತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ. ಈ ವಿಡಿಯೋದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ‌. ಜೂನ್ 13 ರಂದು ರಾಜ್ಯಾದ್ಯಂತ ʼಮಾತೊಂದ ಹೇಳುವೆʼ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಬಿಡುಗಡೆಯ ಹೊಸ್ತಿಲಲ್ಲಿರುವ ಈ ಚಿತ್ರದ ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಚಾಲನೆ ನೀಡಿದೆ.

ತಾರಾಗಣದಲ್ಲಿ ಮಯೂರ್ ಕಡಿ ಅವರ ಜತೆಯಲ್ಲಿ ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ. ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್, ಪ್ರತೀಕ್, ಕಾರ್ತಿಕ್ ಪತ್ತಾರ್, ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ. ಚಿತ್ರದ ಕಥೆಯಲ್ಲಿ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ. ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ ಎನ್ನುತ್ತಾರೆ ನಿರ್ದೇಶಕ ಹಾಗೂ ನಾಯಕ ಮಯೂರ್ ಕಡಿ.

ಈ ಸುದ್ದಿಯನ್ನೂ ಓದಿ | Summer Fashion, Beauty: ಸಮ್ಮರ್‌ನಲ್ಲಿ ವೈಬ್ರೆಂಟ್‌ ಕಲರ್ಸ್‌ ಹಂಗಾಮ

ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ʼಮತೊಂದು ಹೇಳುವೆʼ ಚಿತ್ರಕ್ಕೆ ಪ್ರಭು ಸವಣೂರ್ ಹಾಗೂ ಅವಿನಾಶ್ ಯು.ಎಸ್. ಅವರ ಸಹ ನಿರ್ಮಾಣವಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ನಿರ್ದೇಶನ ಹಾಗೂ ಅಭಯ್ ಕಡಿ ಸಂಕಲನವಿರುವ ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ.ಎಸ್. ಹಿನ್ನೆಲೆ ಸಂಗೀತ ನೀಡಿದ್ದಾರೆ.