Kiccha Sudeep: ಮುಗಿಯದ ನಟ್ಟು-ಬೋಲ್ಟ್ ವಿವಾದ: ಕಿಚ್ಚನ ಹೇಳಿಕೆಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆ ಶಿವಕುಮಾರ್ ಅವರು ಕೆಲಸ ಸತ್ಯಗಳನ್ನು ತಿಳಿದುಕೊಂಡು ಮಾತನಾಡಿದ್ರೆ ನಮ್ಗೆ ಅವರ ಮೇಲಿನ ಗೌರವ ಇನ್ನೂ ಹೆಚ್ಚಾಗುತ್ತಿತ್ತು. ಅವರ ಈ ಹೇಳಿಕೆ ಚಿತ್ರರಂಗದಲ್ಲಿ ಅನೇಕ ಮಂದಿಯ ಮನಸ್ಸಿಗೆ ನೋವಾಗಿದೆ ಎಂದು ಕಿಚ್ಚ ಸುದೀಪ್ ಹೇಳಿದ್ದರು. ಇದೀಗ ಡಿಕೆಶಿ ಸುದೀಪ್ ಅವರ ಈ ಹೇಳಿಕೆಗೆ ಮತ್ತೆ ತಿರುಗೇಟು ಕೊಟ್ಟಿದ್ದಾರೆ.

DK Shivkumar and Kiccha Sudeep

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivkumar) ಅವರು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ‘ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ’ ಎಂದು ಹೇಳಿದ್ದರು. ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ಟಾರ್ ನಟ-ನಟಿಯರು ಗೈರಾದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದರು. ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡೋದು ಗೊತ್ತು. ಇದನ್ನು ವಾರ್ನ್ ಅಂತಾ ಆದ್ರೂ ಅಂದ್ಕೊಳಿ, ಮನವಿ ಅಂತಾ ಆದ್ರೂ ಅನ್ಕೊಳಿ ಅಂತ ಎಚ್ಚರಿಸಿದ್ದರು. ನನಗೆ ಚಲನಚಿತ್ರ ವಾಣಿಜ್ಯ ಮಂಡಳಿ, ಈ ಸಿನಿಮಾ ನಟರ ಬಗ್ಗೆ ನನಗೆ ಬಹಳ ಸಿಟ್ಟು ಬಂದುಬಿಟ್ಟಿದೆ ಎಂದಿದ್ದರು.
ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತು. ಆದರೆ, ಚಿತ್ರರಂಗದವರು ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿರಲಿಲ್ಲ. ಆದರೆ ಮೊನ್ನೆಯಷ್ಟೆ ರಿಪಬ್ಲಿಕ್ ಕನ್ನಡದ ಸಂಗಮ 2025 ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಈ ಕುರಿತು ಮಾತನಾಡಿ, ನಾವು ಓಡಾಡೊ ಕಾರುಗಳ ನಟ್ಟು-ಬೋಲ್ಟ್ ಕೂಡ ಕೈಟ್ ಇರಬೇಕು.. ಅದಕ್ಕೆ ಮೆಕಾನಿಕ್ ಹತ್ರ ಹೋಗಬೇಕು ಆ ಮೆಕಾನಿಕ್ಗೆ ಮಾತ್ರ ಕಾರಿನ ನಟ್ಟು-ಬೋಲ್ಟ್ ವಿಚಾರ ಗೊತ್ತಿರುತ್ತೆ.. ಹೀಗಾಗಿ ಚಿತ್ರರಂಗದ ವಿಚಾರ ಚಿತ್ರರಂಗದಲ್ಲಿ ಇರುವವರಿಗೆ ಮಾತ್ರ ಗೊತ್ತು ಎಂದು ಹೇಳಿದ್ದರು.
Bhagya Lakshmi Serial: ಪೂಜಾ-ಕಿಶನ್ ಮದುವೆ ಆಗಬಾರದೆಂದು ಉಪವಾಸ ಕೂತ ಮೀನಾಕ್ಷಿ
ಅಲ್ಲದೆ ಡಿಕೆ ಶಿವಕುಮಾರ್ ಅವರು ಕೆಲಸ ಸತ್ಯಗಳನ್ನು ತಿಳಿದುಕೊಂಡು ಮಾತನಾಡಿದ್ರೆ ನಮ್ಗೆ ಅವರ ಮೇಲಿನ ಗೌರವ ಇನ್ನೂ ಹೆಚ್ಚಾಗುತ್ತಿತ್ತು. ಅವರ ಈ ಹೇಳಿಕೆ ಚಿತ್ರರಂಗದಲ್ಲಿ ಅನೇಕ ಮಂದಿಯ ಮನಸ್ಸಿಗೆ ನೋವಾಗಿದೆ ಎಂದು ಹೇಳಿದ್ದರು. ಇದೀಗ ಡಿಕೆಶಿ ಸುದೀಪ್ ಅವರ ಈ ಹೇಳಿಕೆಗೆ ಮತ್ತೆ ತಿರುಗೇಟು ಕೊಟ್ಟಿದ್ದಾರೆ.
ಮಾಧ್ಯಮಗಳೊಂದಿಗೆ ಸುದೀಪ್ ಪ್ರತಿಕ್ರಿಯೆ ಬಗ್ಗೆ ಮಾತನಾಡಿದ ಡಿಕೆಶಿ, ‘ನನಗೆ ಯಾರಿಗೂ ಉತ್ತರ ಕೊಡೋಕೆ ಇಷ್ಟ ಇಲ್ಲ. ಫಿಲ್ಮ್ ಚೇಂಬರ್ಗೆ ಹೋಗಿ ನಾನು ಏನು ಮಾಡಿದ್ದೇನೆ ಎಂಬುದರ ಹಿಸ್ಟರಿ ತೆಗೆದುಕೊಂಡು ಬರಲಿ. ಅವರೆಲ್ಲರಿಗೂ ಉತ್ತರಿಸಬೇಕಿಲ್ಲ. ಕಾಲ ಉತ್ತರ ಕೊಡುತ್ತದೆ’ ಎಂದು ಹೇಳಿದ್ದಾರೆ.