Rachita Ram: ಸಂಜು ವೆಡ್ಸ್ ಗೀತಾ ಚಿತ್ರತಂಡದ ವಿರುದ್ದ ರಚ್ಚು ಫ್ಯಾನ್ಸ್ ಗರಂ; ಪ್ರಮೋಷನ್ ವಿಡಿಯೋ ರಿಲೀಸ್ ಮಾಡಿ ಕೌಂಟರ್
ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ವಿರುದ್ದ ಸಂಜು ವೆಡ್ಸ್ ಗೀತಾ ಚಿತ್ರತಂಡ ಆಕ್ರೋಶ ವ್ಯಕ್ತಪಡಿಸಿದೆ. ನಿರ್ದೇಶಕ ನಾಗಶೇಖರ್ ದೂರು ದಾಖಲಿಸಿದ್ದಾರೆ. ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ನಟಿ ಬಂದಿಲ್ಲ ಎಂದು ಅವರು ದೂರಿದ್ದಾರೆ. ಇದಾದ ಬಳಿಕ ರಚ್ಚು ಫ್ಯಾನ್ಸ್ ಸಿಡಿದೆದ್ದಿದ್ದಾರೆ. ಸಂಜು ವೆಡ್ಸ್ ಗೀತಾ ಚಿತ್ರತಂಡದ ವಿರುದ್ಧ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ (Rachita Ram) ವಿರುದ್ದ ಸಂಜು ವೆಡ್ಸ್ ಗೀತಾ (Sanju Weds Geeta 2) ಚಿತ್ರತಂಡ ಆಕ್ರೋಶ ವ್ಯಕ್ತಪಡಿಸಿದೆ. ನಿರ್ದೇಶಕ ನಾಗಶೇಖರ್ ದೂರು ದಾಖಲಿಸಿದ್ದಾರೆ. ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ನಟಿ ಬಂದಿಲ್ಲ ಎಂದು ಅವರು ದೂರಿದ್ದಾರೆ. ಸಿನಿಮಾ ಟೀಮ್ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿದ್ದಾರೆ. ಇದಾದ ಬಳಿಕ ರಚ್ಚು ಫ್ಯಾನ್ಸ್ ಸಿಡಿದೆದ್ದಿದ್ದಾರೆ. ಸಂಜು ವೆಡ್ಸ್ ಗೀತಾ ಚಿತ್ರತಂಡದ ವಿರುದ್ಧ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ರದ ಪ್ರಮೋಷನ್ಗೆ ನಟಿ ಬಂದಿಲ್ಲ ಎಂದು ರಚಿತಾ ರಾಮ್ ವಿರುದ್ಧ ಚಿತ್ರತಂಡ ಫಿಲ್ಮ್ ಚೇಂಬರ್ಗೆ ದೂರು ನೀಡಿದೆ. ಇದೀಗ ಅದಕ್ಕೆ ಕೌಂಟರ್ ಕೊಡಲು ರಚ್ಚು ಫ್ಯಾನ್ಸ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ರಚಿತಾ ರಾಮ್ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ವಿಡಿಯೋ ಇದೆ. ಆ ವಿಡಿಯೋದಲ್ಲಿ ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ನಾಗಶೇಖರ್ ಕೂಡ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ರಚಿತಾ ಅವರು ಹಲವು ಖಾಸಗಿ ಚಾನೆಲ್ಗಳ ಜೊತೆ ಸಂಜು ವೆಡ್ಸ್ ಗೀತಾ ಚಿತ್ರದ ಕುರಿತು ಮಾತನಾಡಿರುವ ಕ್ಲಿಪ್ಸ್ ಕೂಡ ಇದೆ. ಇನ್ನು ಎಷ್ಟು ಪ್ರಮೋಷನ್ಗೆ ಅಟೆಂಡ್ ಆಗಬೇಕು. ಸಾಕ್ಷಿ ಕೇಳುತ್ತಿದ್ದವರಿಗೆ ವಿಡಿಯೋ ಮೂಲಕ ಉತ್ತರ ನೀಡುತ್ತೇವೆ ಎಂದು ರಚಿತಾ ರಾಮ್ ಅಭಿಮಾನಿಗಳ ಕೌಂಟರ್ ನೀಡಿದ್ದಾರೆ.
ಏನಿದು ಘಟನೆ?
ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ಬಂದಿಲ್ಲ ಎಂದು ಚಿತ್ರತಂಡ ರಚಿತಾ ರಾಮ್ ವಿರುದ್ಧ ಗರಂ ಆಗಿತ್ತು. ಸಿನಿಮಾ ಟೀಮ್ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದರು. ರಚಿತಾ ರಾಮ್ ಅವರಿಂದಾಗಿ ನಮ್ಮ ಚಿತ್ರಕ್ಕೆ ಹೊಡೆದ ಬಿದ್ದಿದೆ ಎಂದು ಅವರು ತಮ್ಮ ದೂರಿನಲ್ಲಿ ಹೇಳಿದ್ದರು. ನಮ್ಮ ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಸಪೋರ್ಟ್ ಮಾಡಿಲ್ಲ. ರಾಕ್ಲೈನ್ ವೆಂಕಟೇಶ್ ಅವರು ಕೂಡ ಅವರ ಬಳಿ ಮಾತನಾಡಿ ಅವರ ಮನೊಲಿಸಲು ಪ್ರಯತ್ನ ಮಾಡಿದರು. ಆದರೆ ಅದು ಯಾವುದೂ ಪ್ರಯೋಜನಕ್ಕೆ ಬಂದಿಲ್ಲ.
ಈ ಸುದ್ದಿಯನ್ನೂ ಓದಿ: Rachita Ram: ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ಗೆ ದೂರು; ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಕ ನಾಗಶೇಖರ್ ಒತ್ತಾಯ
ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾಗೆ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥವ್ರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಎಂದು ನಿರ್ದೇಶಕ ಹೇಳಿದ್ದಾರೆ.