ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kiran Raj: ಕರ್ಣ ಧಾರಾವಾಹಿ ಜೊತೆಗೆ ಸಿನಿಮಾದಲ್ಲೂ ಕಿರಣ್ ರಾಜ್ ಬ್ಯುಸಿ

ಮೊನ್ನೆಯಷ್ಟೆ ಕಿರಣ್ ರಾಜ್ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಝೀ ಕನ್ನಡದಲ್ಲಿ ಶುರುವಾಗಿರುವ ಕರ್ಣ ಧಾರಾವಾಹಿಯಲ್ಲಿ ನಾಯಕನಾಗಿ ಮಿಂಚುತ್ತಿದ್ದಾರೆ. ಇದರಲ್ಲಿ ಇವರ ನಟನೆಗೆ ಅದ್ಭುತ ಪ್ರತಿಕ್ರಿಯೆ ಕೇಳಿಬರುತ್ತಿದೆ. ಕರ್ಣ ಧಾರಾವಾಹಿಯ ಜೊತೆಗೆ ಕಿರಿಣ್ ರಾಜ್ ಹೊಸ ಸಿನಿಮಾದಲ್ಲಿ ಕೂಡ ನಟಿಸುತ್ತಿದ್ದಾರೆ.

ಕರ್ಣ ಧಾರಾವಾಹಿ ಜೊತೆಗೆ ಸಿನಿಮಾದಲ್ಲೂ ಕಿರಣ್ ರಾಜ್ ಬ್ಯುಸಿ

Kiran Raj

Profile Vinay Bhat Jul 16, 2025 7:44 AM

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕನ್ನಡತಿ ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ನಟ ಕಿರಣ್​ ರಾಜ್​ಗೆ (Kiran Raj) ದೊಡ್ಡ ಅಭಿಮಾನಿಗಳ ಬಳಗವಿದೆ. 2020 ಜನವರಿಯಲ್ಲಿ ಶುರುವಾದ ಈ ಧಾರಾವಾಹಿಯು 2023ರಲ್ಲಿ ಮುಕ್ತಾಯಗೊಂಡರೂ ಇಂದಿಗೂ ಹರ್ಷ ಪಾತ್ರ ಹಸಿರಾಗಿದೆ. ಇವರ ಸ್ಟೈಲ್, ಮಾತುಗಾರಿಕೆಗೆ ಅನೇಕ ಮಂದಿ ಫ್ಯಾನ್ಸ್ ಇದ್ದಾರೆ. ಕೇವಲ ಕಿರುತೆರೆಯಲ್ಲಿ ಮಾತ್ರವಲ್ಲದೆ​​ ಹಿರಿತೆರೆಯಲ್ಲೂ ಗುರುತಿಸಿಕೊಂಡಿದ್ದಾರೆ. ಆದರೆ, ಅವರಿಗೆ ಹೆಚ್ಚು ಯಶಸ್ಸು ತಂದುಕೊಟ್ಟಿದ್ದು ಸೀರಿಯಲ್. ಹೀಗಿದ್ದರೂ ಇವರು ಸಿನಿಮಾದಲ್ಲಿ ನಟಿಸುವುದನ್ನು ನಿಲ್ಲಿಸಿಲ್ಲ.

ಇದರ ಮಧ್ಯೆ ಮೊನ್ನೆಯಷ್ಟೆ ಕಿರಣ್ ರಾಜ್ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಝೀ ಕನ್ನಡದಲ್ಲಿ ಶುರುವಾಗಿರುವ ಕರ್ಣ ಧಾರಾವಾಹಿಯಲ್ಲಿ ನಾಯಕನಾಗಿ ಮಿಂಚುತ್ತಿದ್ದಾರೆ. ಇದರಲ್ಲಿ ಇವರ ನಟನೆಗೆ ಅದ್ಭುತ ಪ್ರತಿಕ್ರಿಯೆ ಕೇಳಿಬರುತ್ತಿದೆ. ಕರ್ಣ ಧಾರಾವಾಹಿಯ ಜೊತೆಗೆ ಕಿರಿಣ್ ರಾಜ್ ಹೊಸ ಸಿನಿಮಾದಲ್ಲಿ ಕೂಡ ನಟಿಸುತ್ತಿದ್ದಾರೆ. ಈ ಹಿಂದೆ ರಾನಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಕಿರಣ್ ರಾಜ್ ಈಗ ‘ಜಾಕಿ 42’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್ ಸ್ಪಾಟ್ ಅನ್ನು ಕಿರಣ್ ಆಗಾಗಾ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುತ್ತ ಇರುತ್ತಾರೆ.

ರಾನಿ ಸಿನಿಮಾವನ್ನು ನಿರ್ದೇಶಿಸಿದ್ದ ಗುರುತೇಜ್ ಶೆಟ್ಟಿ ಅವರೇ ಈ ಜಾಕಿ 42 ಚಿತ್ರಕ್ಕೂ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಾಗೆಯೆ ಈ ಸಿನಿಮಾಗೆ ಉತ್ತಮ ಬರಹಗಾರರ ತಂಡ ಕೈಜೋಡಿಸಿದೆ. ಬ್ಲಿಂಕ್ ಸಿನಿಮಾದ ಮೂಲಕ ಎಲ್ಲರ ಗಮನಸೆಳೆದ ನಿರ್ದೇಶಕ ಶ್ರೀನಿಧಿ ಬೆಂಗಳೂರು ಈ ಸಿನಿಮಾದ ಸ್ಕ್ರಿಪ್ಟ್‌ನಲ್ಲಿ ಜೊತೆಯಾಗಿದ್ದಾರೆ. ಕನ್ನಡತಿ ಧಾರಾವಾಹಿಗೆ ಚಿತ್ರಕಥೆ ಬರೆದಿದ್ದ ವಿಕಾಸ್ ನೇಗಿಲೋಣಿ ಕೂಡ ಸ್ಕ್ರಿಪ್ಟ್‌ ಬರಹಗಾರರ ಟೀಮ್‌ನಲ್ಲಿದ್ದಾರೆ.

ಕಿರಣ್ ರಾಜ್ ಅವರು ಈಗಾಗಲೇ ಭರ್ಜರಿ ಗಂಡು, ರಾನಿ, ಮೇಘ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ನಟಿಸಿದ್ದಾರೆ. ವಿಶೇಷ ಸ್ಕ್ರಿಪ್ಟ್​ಗಳನ್ನು ಆಯ್ಕೆ ಮಾಡುವ ಕಿರಣ್ ರಾಜ್, ಏಕಕಾಲಕ್ಕೆ ಸೀರಿಯಲ್ ಹಾಗೂ ಸಿನಿಮಾದಲ್ಲಿ ನಟಿಸುತ್ತಿದ್ದು, ಇವೆರಡನ್ನೂ ಉತ್ತಮ ರೀತಿಯಲ್ಲಿ ಬ್ಯಾಲೆನ್ಸ್ ಮಾಡುತ್ತಿದ್ದಾರೆ.

Chaithra Kundapura: ‘ಸಿಹಿ ಸುದ್ದಿ ಕೊಟ್ಟ ಚೈತ್ರಾ ಕುಂದಾಪುರ’ ಎಂದವರಿಗೆ ಚಳಿ ಬಿಡಿಸಿದ ಫೈರ್ ಬ್ರ್ಯಾಂಡ್