ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karna Serial: ವೀಕ್ಷಕರಿಗೆ ಶಾಕ್: ಇಂದು ಪ್ರಸಾರ ಕಾಣಲ್ಲ ಬಹುನಿರೀಕ್ಷಿತ ಕರ್ಣ ಧಾರಾವಾಹಿ: ಕಾರಣವೇನು?

ಕರ್ಣನ ಆಗಮನಕ್ಕಾಗಿ ವೀಕ್ಷಕರು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಜೂನ್‌ 16 ರಿಂದ ರಾತ್ರಿ 8ಕ್ಕೆ ಕರ್ಣ ಬರಲಿದ್ದಾನೆ ಅಂತ ಅನೌನ್ಸ್ ಆದಮೇಲೆ ವೀಕ್ಷಕರು ಈ ದಿನಕ್ಕಾಗಿ ಕಾದು ಕುಳಿತಿದ್ದರು. ಆದರೆ, ಇಂದು ಈ ಧಾರಾವಾಹಿ ಪ್ರಸಾರ ಕಾಣುವುದಿಲ್ಲ ಎಂಬ ಶಾಕ್ ಅನ್ನು ಝೀ ಕನ್ನಡ ಅಭಿಮಾನಿಗಳಿಗೆ ನೀಡಿದೆ.

ಇಂದು ಪ್ರಸಾರ ಕಾಣಲ್ಲ ಬಹುನಿರೀಕ್ಷಿತ ಕರ್ಣ ಧಾರಾವಾಹಿ

Karna Serial

Profile Vinay Bhat Jun 16, 2025 6:17 PM

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಝೀ ಕನ್ನಡ ವಾಹಿನಿಯಲ್ಲಿ ಇಂದಿನಿಂದ ಹೊಸ ಕರ್ಣ ಧಾರಾವಾಹಿ (Karna Serial) ಶುರುವಾಬೇಕಿತ್ತು. ತನ್ನ ಪ್ರೊಮೋ ಮೂಲಕ ದೊಡ್ಡ ಹೈಪ್ ಕ್ರಿಯೆಟ್ ಮಾಡಿರುವ ಕರ್ಣ ಧಾರಾವಾಹಿ ಇಂದು ರಾತ್ರಿ 8 ಗಂಟೆಯಿಂದ ಪ್ರಸಾರ ಕಾಣಲಿದೆ ಎಂದು ಸ್ವತಃ ಝೀ ಕನ್ನಡ ಹೇಳಿತ್ತು. ಕಿರಣ್ ರಾಜ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಧಾರಾವಾಹಿ ಕೇವಲ ಒಂದೇ ಒಂದು ಪ್ರೊಮೋ ಮೂಲಕ ವೀಕ್ಷಕರನ್ನು ಕಾದು ಕುಳಿದುಕೊಳ್ಳುವಂತೆ ಮಾಡಿದೆ. ಡಾಕ್ಟರ್​ ಕರ್ಣ ಆಗಿ ಕಿರಣ್ ರಾಜ್ ಟಿವಿ ಪರೆದೆ ಮೇಲೆ ಮಿಂಚೋಕೆ ಮತ್ತೇ ಬರುತ್ತಿದ್ದಾರೆ. ಆದರೆ, ಇಂದು ಈ ಧಾರಾವಾಹಿ ಪ್ರಸಾರ ಕಾಣುವುದಿಲ್ಲ.

ಕರ್ಣನ ಆಗಮನಕ್ಕಾಗಿ ವೀಕ್ಷಕರು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಜೂನ್‌ 16 ರಿಂದ ರಾತ್ರಿ 8ಕ್ಕೆ ಕರ್ಣ ಬರಲಿದ್ದಾನೆ ಅಂತ ಅನೌನ್ಸ್ ಆದಮೇಲೆ ವೀಕ್ಷಕರು ಈ ದಿನಕ್ಕಾಗಿ ಕಾದು ಕುಳಿತಿದ್ದರು. ಆದರೆ ಇಂದು ವೀಕ್ಷಕರು ಹಾಗೂ ಅಭಿಮಾನಿಗಳ ಆಸೆಗೆ ತಣ್ಣೀರು ಎರಚಿದಂತಾಗಿದೆ. ಝೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. ‘ಕರ್ಣ ಹುಟ್ಟುವ ಮೊದಲೇ ಶಾಪಗ್ರಸ್ಥ. ತನ್ನದಲ್ಲದ ತಪ್ಪಿಗೆ ಜೀವನ ಪೂರ್ತಿ ಪರಿತಪಿಸಿದವನು. ಹೆಜ್ಜೆ ಹೆಜ್ಜೆಗೂ ದ್ವೇಷ, ಅಸೂಯೆ, ಹತಾಶೆ, ನಿರಾಶೆ, ನೋವು, ಅವಮಾನಗಳಿಗೆ ಗುರಿಯಾದವನು. ಆದರೆ ಎಲ್ಲ ಸವಾಲುಗಳನ್ನೂ ಹಿಮ್ಮೆಟ್ಟಿ ಜನರ ಪ್ರೀತಿ ಗಳಿಸಿದವನು’ ಎಂದು ಬರೆಯಲಾಗಿದೆ.

‘ನಿಷ್ಠೆ, ನಿಯತ್ತು, ತ್ಯಾಗ, ಧೈರ್ಯಕ್ಕೆ ಇನ್ನೊಂದು ಹೆಸರು ಅವನು. ಯುಗ ಯುಗಗಳೇ ಕಳೆದರೂ ದಾನಶೂರನಾಗಿ ಎಲ್ಲರ ಮನದಲ್ಲಿ ನೆಲೆಯಾದವನು. ಕರ್ಣ ಬರೋದನ್ನ ತಡ ಆಗುವಂತೆ ಮಾಡಬಹುದು, ಆದ್ರೆ ಬರೋದನ್ನ ತಡೆಯೋದಕ್ಕೆ ಸಾಧ್ಯವೇ ಇಲ್ಲ. ಇಡೀ ಕರ್ನಾಟಕ ಕಾಯ್ತಾ ಇದೆ ಅನ್ನೋದು ಗೊತ್ತು. ಕೊಟ್ಟ ಮಾತಿನಂತೆ ಕರ್ಣ ಬಂದೇ ಬರ್ತಾನೆ.. ಶೀಘ್ರದಲ್ಲೇ, ಅದೇ ಪ್ರೀತಿ, ವಿಶ್ವಾಸದಿಂದ ಕರ್ಣ ನನ್ನ ಬರಮಾಡಿಕೊಳ್ತರಿ ಅಲ್ವಾ’ ಎಂದು ಕೇಳಲಾಗಿದೆ.

ಈ ಮೂಲಕ ದಿಢೀರನೆ ಕರ್ಣ ಧಾರಾವಾಹಿ ಪ್ರಸಾರ ದಿನಾಂಕ ಮುಂದಕ್ಕೆ ಹೋಗಿದೆ. ಈ ದಿಢೀರ್ ಬದಲಾವಣೆಗೆ ಕಾರಣವೇನು ಅನ್ನೋದು ಸದ್ಯಕ್ಕೆ ತಿಳಿದುಬಂದಿಲ್ಲ. ಝೀ ಕನ್ನಡ ವಾಹಿನಿಯಾಗಲಿ, ಕರ್ಣ ತಂಡವಾಗಲಿ ಯಾವುದೇ ಮಾಹಿತಿಯನ್ನ ಬಹಿರಂಗ ಪಡಿಸಿಲ್ಲ.

ಈ ಧಾರಾವಾಹಿಯಲ್ಲಿ ಕರ್ಣನಿಗೆ ಜೋಡಿಯಾಗಿ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಭವ್ಯಾ ಗೌಡ ಇದ್ದಾರೆ. ಇದರ ಜೊತೆಗೆ ಭವ್ಯಾ ತಂಗಿ ಪಾತ್ರದಲ್ಲಿ ನಮ್ರತಾ ಗೌಡ ಕೂಡ ನಟಿಸುತ್ತಿದ್ದಾರೆ. ಇದೊಂದು ತ್ರಿಕೋನ ಪ್ರೇಮಕಥೆಯ ಧಾರಾವಾಹಿ ಆಗಿದೆ. ಶ್ರುತಿ ನಾಯ್ಡು ಅವರ ನಿರ್ಮಾಣ ಸಂಸ್ಥೆಯಲ್ಲಿ ಮೂಡಿ ಬರ್ತಿರುವ ಕರ್ಣ ಧಾರಾವಾಹಿಯಲ್ಲಿ ಕಿರಣ್ ರಾಜ್‌, ಭವ್ಯಾ, ನಮ್ರತಾ ಜೊತೆ ದೊಡ್ಡ ತಾರೆಯರ ದಂಡೇ ಇದೆ. ನಾಗಾಭರಣ, ಹಿರಿಯ ನಟಿ ಆಶಾ ರಾಣಿ, ಒಲವಿನ ನಿಲ್ದಾಣ ಸೀರಿಯಲ್‌ನಲ್ಲಿ ನಟಿಸಿದ್ದ ವರಲಕ್ಷ್ಮೀ ಶ್ರೀನಿವಾಸ್ ಮತ್ತು ಶ್ಯಾಮ್ ಸಿಮ್ರನ್‌ ನಟಿಸುತ್ತಿದ್ದಾರೆ.

Anushree: ಮದುವೆ ಸುದ್ದಿ ಬೆನ್ನಲ್ಲೇ ಹೊಸ ದುಬಾರಿ ಕಾರು ಖರೀದಿಸಿದ ಅನುಶ್ರೀ