ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

'ಕರಾವಳಿ' ಸಿನಿಮಾದ ರೊಮ್ಯಾಂಟಿಕ್ ಸಾಂಗ್‌ ರಿಲೀಸ್;‌ ʻಮುದ್ದು ಗುಮ್ಮʼ ಹಾಡನ್ನು ಮುದ್ದಾಗಿ ಹಾಡಿದ ಸಿದ್ ಶ್ರೀರಾಮ್

ಕರಾವಳಿ ಸಿನಿಮಾದ ಬಹುನಿರೀಕ್ಷಿತ 'ಮುದ್ದು ಗುಮ್ಮ' ಎಂಬ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದ್ದು, ಸಿದ್ ಶ್ರೀರಾಮ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಸಚಿನ್ ಬಸ್ರೂರು ಸಂಗೀತ ಹಾಗೂ ಪ್ರಮೋದ್ ಮರವಂತೆ ಸಾಹಿತ್ಯವಿರುವ ಈ ಹಾಡಿನಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಂಪದಾ ಜೋಡಿ ಮುದ್ದಾಗಿ ಕಾಣಿಸಿಕೊಂಡಿದೆ.

Prajwal: 'ಕರಾವಳಿ' ಚಿತ್ರದ ರೊಮ್ಯಾಂಟಿಕ್ ಹಾಡಿಗೆ ಸಿದ್ ಶ್ರೀರಾಮ್ ಧ್ವನಿ

-

Avinash GR
Avinash GR Jan 22, 2026 7:30 PM

ನಟ ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ ಶೆಟ್ಟಿ ನಟನೆಯ ಕರಾವಳಿ ಸಿನಿಮಾದ 'ಮುದ್ದು ಗುಮ್ಮ...ಮುದ್ದು ಗುಮ್ಮ ನೀನೇನಾ...' ಹಾಡು ರಿಲೀಸ್ ಆಗಿದ್ದು, ಸಂಗೀತಪ್ರಿಯರ ಹೃದಯ ಗೆದ್ದಿದೆ. ಸಿದ್ ಶ್ರೀರಾಮ್ ಧ್ವನಿಯಲ್ಲಿ ಈ ಹಾಡು ಮೂಡಿಬಂದಿರುವುದು ವಿಶೇಷ. ಗುರುದತ್‌ ಗಾಣಿಗ ನಿರ್ದೇಶನದ ಈ ಸಿನಿಮಾವು ಭಾರಿ ನಿರೀಕ್ಷೆಯನ್ನು ಹುಟ್ಟಹಾಕಿದೆ. ಇದೀಗ ಹಾಡಿನ ಮೂಲಕ ಕರಾವಳಿ ಸಿನಿಮಾ ಗಮನಸೆಳೆಯುತ್ತಿದೆ.

ರೊಮ್ಯಾಂಟಿಕ್‌ ಹಾಡಿನಲ್ಲಿ ಪ್ರಜ್ವಲ್‌ ದೇವರಾಜ್‌

ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ʻಕರಾವಳಿʼ ಸಿನಿಮಾವು ಭಾರಿ ನಿರೀಕ್ಷೆ ಮೂಡಿಸಿದ್ದು, ಈಗಾಗಲೇ ಟೀಸರ್ ಮತ್ತು ಪೋಸ್ಟರ್‌ಗಳಿಂದ ನಿರೀಕ್ಷೆ ದುಪ್ಪಟ್ಟಾಗಿದೆ. ಇದೀಗ ಈ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ಈ ರೊಮ್ಯಾಂಟಿಂಕ್ ಹಾಡಿನಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಂಪದಾ ನಟಿಸಿದ್ದು ಸಿಕ್ಕಾಪಟ್ಟೆ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

Prajwal Devaraj: ದಾಖಲೆ ಮೊತ್ತಕ್ಕೆ ಪ್ರಜ್ವಲ್‌ ದೇವರಾಜ್‌ ಅಭಿನಯದ 'ರಾಕ್ಷಸ' ಚಿತ್ರದ ತೆಲುಗು ಥಿಯೇಟರ್ ಹಕ್ಕು ಮಾರಾಟ

ಶೀಘ್ರದಲ್ಲೇ ರಿಲೀಸ್ ಡೇಟ್‌ ಘೋಷಣೆ

ಸಚಿನ್ ಬಸ್ರೂರು ಸಂಗೀತ ನೀಡಿರುವ ಮುದ್ದು ಗುಮ್ಮ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಪುಟ್ಟ ಟೀಸರ್ ಮೂಲಕವೇ ಭಾರಿ ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಕರಾವಳಿ ಇದೀಗ ಮೆಲೋಡಿ ರೊಮ್ಯಾಂಟಿಕ್ ಹಾಡನ್ನ ರಿಲೀಸ್ ಮಾಡಿ ಮತ್ತಷ್ಟು ಕಾತರವನ್ನು ಮತ್ತಷ್ಟು ಹೆಚ್ಚಿಸಿದೆ. ಸಿನಿಮಾ ಯಾವಾಗ ಎಂಬುದು ಎಲ್ಲರ ಪ್ರಶ್ನೆಯಾಗಿದೆ. ಅದಕ್ಕೆ ಶೀಘ್ರದಲ್ಲೇ ಚಿತ್ರತಂಡ ಉತ್ತರ ನೀಡಲಿದೆಯಂತೆ.

ರಾಜ್‌ ಬಿ ಶೆಟ್ಟಿಗೆ ವಿಭಿನ್ನ ಪಾತ್ರ

ಕರಾವಳಿ ಹೆಸರೆ ಹೇಳುವ ಹಾಗೆ, ಅಲ್ಲಿನ ಸಂಸ್ಕೃತಿ, ಸೊಗಡಿನ ಬಗ್ಗೆ ಇರುವ ಸಿನಿಮಾ ಇದಾಗಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಇದ್ದಾರೆ. ಮಾವೀರ ಎನ್ನುವ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಇನ್ನೂ ಉಳಿದಂತೆ ಸಿನಿಮಾದ ಪವರ್ ಫುಲ್ ಪಾತ್ರದಲ್ಲಿ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಹಾಗೂ ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್‌ ದೇವರಾಜ್‌ಗೆ ಈ ಸಿನಿಮಾದಿಂದ ಹೊಸ ಇಮೇಜ್‌ ಸಿಗಲಿದೆ ಎಂಬ ಟಾಕ್‌ ಕೇಳಿಬಂದಿದೆ.

Prajwal Devaraj: 'ರಾಕ್ಷಸ' ಅವತಾರದಲ್ಲಿ ಪ್ರಜ್ವಲ್‌ ದೇವರಾಜ್‌; ಈ ಬಹು ನಿರೀಕ್ಷಿತ ಚಿತ್ರ ಶಿವರಾತ್ರಿಯಂದು ರಿಲೀಸ್‌

ವಿಕೆ ಫಿಲ್ಮಂ ಅಸೋಸಿಯೇಷನ್‌ ಜೊತೆಗೆ ಗಾಣಿಗ ಫಿಲ್ಮ್ಸ್‌ ಅಡಿಯಲ್ಲಿ ನಿರ್ಮಾಣವಾಗಿರುವ ಕರಾವಳಿ ಸಿನಿಮಾದಲ್ಲಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ ಇದೆಯಂತೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಅಭಿಮನ್ಯು ಸದಾನಂದನ್ ಛಾಯಾಗ್ರಹಣ ಮಾಡಿದ್ದಾರೆ.