ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಮೈಸೂರು
CM Siddaramaiah: ಮೋದಿ ಬದುಕಿರುವುದು ಪ್ರಚಾರದಿಂದ, ಅವರ ಸರಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

ಮೋದಿ ಬದುಕಿರುವುದು ಪ್ರಚಾರದಿಂದ, ಅವರಿಗೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

ಪ್ರಧಾನ ಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

Mysuru News: ಮೈಸೂರಿನಲ್ಲಿ ವಿದ್ವಾನ್ ಸತ್ಯನಾರಾಯಣ ರಾಜು ನೇತೃತ್ವದಲ್ಲಿ ವರ್ಣಂ ಕಾರ್ಯಾಗಾರ ಯಶಸ್ವಿ

ಮೈಸೂರಿನಲ್ಲಿ ವಿದ್ವಾನ್ ಸತ್ಯನಾರಾಯಣ ರಾಜು ನೇತೃತ್ವದಲ್ಲಿ ವರ್ಣಂ ಕಾರ್ಯಾಗಾರ

Mysuru News: ಮೈಸೂರಿನ ವಿಜಯನಗರದ ತ್ರಿಪುರ ಪಾಠಶಾಲೆಯಲ್ಲಿ ಭೈರವಿ ನಾಟ್ಯಶಾಲೆಯ ವತಿಯಿಂದ ಆಯೋಜಿಸಿದ್ದ ವರ್ಣ ಕಾರ್ಯಾಗಾರ ಯಶಸ್ವಿಯಾಗಿ ಪೂರ್ಣಗೊಂಡಿತು. ಕಾರ್ಯಾಗಾರದಲ್ಲಿ ವಿಶ್ವಖ್ಯಾತಿಯ ಭರತನಾಟ್ಯ ವಿದ್ವಾಂಸ, ಬೆಂಗಳೂರಿನ ಸಂಸ್ಕೃತಿ-ಟೆಂಪಲ್ ಆಫ್ ಆರ್ಟ್ಸ್ ನೃತ್ಯ ಸಂಸ್ಥೆಯ ಗುರು ಸತ್ಯನಾರಾಯಣ ರಾಜು ಅವರು ಅಷ್ಟರಾಗಮಾಲಿಕ ವರ್ಣವನ್ನು ಸೂಕ್ಷ್ಮವಾಗಿ ವಿವರಿಸಿದರು. ಈ ಕುರಿತ ವಿವರ ಇಲ್ಲಿದೆ.

Pralhad Joshi: ಡಿ.ಕೆ.ಶಿವಕುಮಾರ್‌ ರಾಜೀನಾಮೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಲಿ: ಪ್ರಲ್ಹಾದ್‌ ಜೋಶಿ ಆಗ್ರಹ

ಡಿಸಿಎಂ ಡಿಕೆಶಿ ರಾಜೀನಾಮೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಲಿ: ಜೋಶಿ ಆಗ್ರಹ

Pralhad Joshi: ವಿಧಾನಸೌಧ ಮುಂಭಾಗ ಕಾರ್ಯಕ್ರಮ ನಡೆಯುತ್ತಿರುವಾಗಲೇ ʼಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಮೂವರ ಸಾವುʼ ಸುದ್ದಿ ಹರಡಿತ್ತು. ಹಾಗಿದ್ದರೂ ಡಿಸಿಎಂ ಕ್ರೀಡಾಂಗಣಕ್ಕೆ ತೆರಳಿ ಸಂಭ್ರಮಿಸಿದ್ದಾರೆ. ಇದು ಅಕ್ಷಮ್ಯ ಅಪರಾಧವಲ್ಲವೇ? ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Insult to Wadiyar: ನಾಲ್ವಡಿ ಕೃಷ್ಣರಾಜ ಒಡೆಯರ ಪ್ರತಿಮೆಗೆ ಅವಮಾನ; ಮೂರ್ತಿಯ ಮೇಲೆ ಕುಳಿತು ಬೀಡಿ ಸೇದಿದ ವ್ಯಕ್ತಿ!

ನಾಲ್ವಡಿ ಕೃಷ್ಣರಾಜ ಒಡೆಯರ್‌ ಮೂರ್ತಿಯ ಮೇಲೆ ಕುಳಿತು ಬೀಡಿ ಸೇದಿದ ವ್ಯಕ್ತಿ!

Insult to Wadiyar: ಉದ್ದಟತನದಿಂದ ವರ್ತಿಸಿದ ಈ ಪುಂಡ, ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಸಂಜೆ ಸುಮಾರು 6 ಗಂಟೆಗೆ ಹತ್ತಿ ಕುಳಿತಿದ್ದಾನೆ. ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು, ಪ್ರತಿಮೆಯ ತಲೆಯ ಮೇಲೆ ಕುಳಿತು ಅದನ್ನು ಒಡೆದು ಹಾಕುವ ಯತ್ನ ಮಾಡಿದ್ದಾನೆ.

Corona Virus: ರಾಜ್ಯದಲ್ಲಿ ಕೊರೊನಾ ವೈರಸ್‌ಗೆ 3ನೇ ಬಲಿ, ಕೋವಿಡ್‌ ಟೆಸ್ಟ್‌ ಕಡ್ಡಾಯ

ರಾಜ್ಯದಲ್ಲಿ ಕೊರೊನಾ ವೈರಸ್‌ಗೆ 3ನೇ ಬಲಿ, ಕೋವಿಡ್‌ ಟೆಸ್ಟ್‌ ಕಡ್ಡಾಯ

ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 24 ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 114 ಕೊರೊನಾ ಪ್ರಕರಣಗಳೊಂದಿಗೆ 367ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಕೊರೋನಾ ಸೋಂಕಿನ (Corona Virus) ಭೀತಿ ಹೆಚ್ಚಾಗುವ ಆತಂಕ ಎದುರಾಗಿದೆ.

Road Accident: ಭೀಕರ ಅಪಘಾತ, ಲಾರಿ ಡಿಕ್ಕಿಯಾಗಿ ಬೈಕ್‌ ಸವಾರರ ಸಾವು; ಒಬ್ಬನ ರುಂಡವೇ ಕಟ್

ಭೀಕರ ಅಪಘಾತ, ಲಾರಿ ಡಿಕ್ಕಿಯಾಗಿ ಬೈಕ್‌ ಸವಾರರ ಸಾವು; ಒಬ್ಬನ ರುಂಡವೇ ಕಟ್

ಅಪಘಾತದಲ್ಲಿ (Road accident) ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಮೃತರನ್ನು ಶೇಖರ್ (26) ಹಾಗೂ ಶಂಕರ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಪಿರಿಯಾಪಟ್ಟಣ ತಾಲೂಕು ಹಿಟ್ನೆಬಾಗಿಲು ಗ್ರಾಮದ ಯುವಕರು ಎಂದು ತಿಳಿದು ಬಂದಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Karnataka Rain: ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ.

CM Siddaramaiah: 600 ಕೋಟಿ ರೂ.ಗೂ ಅಧಿಕ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ: ಸಿದ್ದರಾಮಯ್ಯ

600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ

ಜಾತಿ ವ್ಯವಸ್ಥೆ ವಿರುದ್ಧ ಬಸವಾದಿ ಶರಣರಿಂದ ಆದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah: ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ

ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್‌ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

KN Rajanna: ವಯಸ್ಸಾಯ್ತು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕೆಎನ್‌ ರಾಜಣ್ಣ

ವಯಸ್ಸಾಯ್ತು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕೆಎನ್‌ ರಾಜಣ್ಣ

ಬೆಂಗಳೂರು ಮಳೆ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಚೆನ್ನಾಗಿ ನಿಭಾಯಿಸುತ್ತಿದ್ದಾರೆ. ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಹಕಾರ ಸಚಿವ ರಾಜಣ್ಣ (KN Rajanna) ಮೆಚ್ಚುಗೆ ವ್ಯಕ್ತಪಡಿಸಿದರು.

Puneeth Kerehalli: ಪುನೀತ್‌ ಕೆರೆಹಳ್ಳಿಗೆ ಕೊಲೆ ಬೆದರಿಕೆ; ಮೈಸೂರಿನಲ್ಲಿ ಎಫ್‌ಐಆರ್ ದಾಖಲು

ಪುನೀತ್‌ ಕೆರೆಹಳ್ಳಿಗೆ ಕೊಲೆ ಬೆದರಿಕೆ; ಮೈಸೂರಿನಲ್ಲಿ ಎಫ್‌ಐಆರ್ ದಾಖಲು

Puneeth Kerehalli: ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ಪುನೀತ್‌ ಕೆರೆಹಳ್ಳಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದಲ್ಲಿ ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಾಟ್ಸ್‌ಆ್ಯಪ್‌ ಕಾಲ್ ಹಾಗೂ ವಿಡಿಯೋ ಕಾಲ್ ಮೂಲಕ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

DK Shivakumar Birthday: ಕಬಿನಿ ಹಿನ್ನೀರಿನಲ್ಲಿ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆಶಿ

ಕಬಿನಿ ಹಿನ್ನೀರಿನಲ್ಲಿ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆಶಿ

DK Shivakumar Birthday: ಪಹಲ್ಗಾಮ್‌ ಉಗ್ರರ ದಾಳಿ ಹಿನ್ನೆಲೆಯಲ್ಲಿ ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳಿಗೆ ಡಿಕೆಶಿ ಮನವಿ ಮಾಡಿದ್ದರು. ಹೀಗಾಗಿ ಕುಟುಂಬಸ್ಥರೊಂದಿಗೆ ಮಾತ್ರ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

Puneeth Kerehalli: ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿಗೆ ಬೆದರಿಕೆ ಕರೆ

ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿಗೆ ಬೆದರಿಕೆ ಕರೆ

Death threat: ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದ್ದು, ಎಫ್ ಐಆರ್ ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ ಕಿಡಿಗೇಡಿಗಳು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನನ್ನು ಮುಗಿಸುತ್ತೇವೆ ಎಂದು ಬೆದರಿಕೆ ಕರೆ ಬಂದಿದ್ದು, ಕೋರ್ಟ್ ಅನುಮತಿ ಪಡೆದು ಅಕ್ರಮ ಖಾನ್ ಎಂಬುವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Tourism Sector: ಪ್ರವಾಸೋದ್ಯಮವು ಐಟಿ ಕ್ಷೇತ್ರ ಮೀರಿಸುವ ಸಾಮರ್ಥ್ಯ ಹೊಂದಿದೆ: ಆರ್‌.ಕೆ. ಹೊಳ್ಳ

ಐಟಿ ಕ್ಷೇತ್ರ ಮೀರಿಸುವ ಸಾಮರ್ಥ್ಯ ಪ್ರವಾಸೋದ್ಯಮಕ್ಕಿದೆ: ಆರ್‌.ಕೆ. ಹೊಳ್ಳ

Tourism Sector: ಮೈಸೂರು ನಗರದ ಗೋಲ್ಡನ್ ಕ್ಯಾಸಲ್ ಹೋಟೆಲ್‌ನಲ್ಲಿ ʼಪ್ರವಾಸೋದ್ಯಮ ಮತ್ತು ಶೈಕ್ಷಣಿಕ ಸಹಕಾರ ಕಾರ್ಯಕ್ರಮʼವನ್ನು ಸೋಮವಾರ ಆಯೋಜಿಸಲಾಗಿತ್ತು. ಜಾಗತಿಕ ಪ್ರವಾಸೋದ್ಯಮದ ಅಗತ್ಯಗಳು ಮತ್ತು ಭವಿಷ್ಯದ ಉದ್ಯಮದ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

CM Siddaramaiah: ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ: ಸಿದ್ದರಾಮಯ್ಯ

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಎಚ್.ಡಿ. ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Dr Ayyappan: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

‌ಕೃಷಿ ವಿಜ್ಞಾನಿ ಡಾ. ಎಸ್. ಅಯ್ಯಪ್ಪನ್‌ ಅವರು ನದಿಯಲ್ಲಿ ಕಾಲು ಜಾರಿ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೃತರ ಸಂಬಂಧಿ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Murder Case: ಗೆಳತಿ ವಿಚಾರದಲ್ಲಿ ತಗಾದೆ: ಗೆಳೆಯನನ್ನು ಕೊಂದು ಶವದ ಮುಂದೆ ಡ್ಯಾನ್ಸ್‌

ಗೆಳತಿ ವಿಚಾರದಲ್ಲಿ ತಗಾದೆ: ಗೆಳೆಯನನ್ನು ಕೊಂದು ಶವದ ಮುಂದೆ ಡ್ಯಾನ್ಸ್‌

ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕಾರ್ತಿಕ್, ಪ್ರವೀಣ್‌ನನ್ನು ಕೊಲೆ ಮಾಡುವ ಧಮಕಿ ಹಾಕಿದ್ದ. ಕಾರ್ತಿಕ್ ತನ್ನನ್ನು ಕೊಲೆ ಮಾಡುತ್ತಾನೆ ಎನ್ನುವ ಭಯದಲ್ಲೇ ಹುಡುಗರ ಗ್ಯಾಂಗ್ ಕಟ್ಟಿಕೊಂಡು ಕಾರ್ತಿಕನನ್ನೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಮಹಿಳೆಯೊಬ್ಬಳ ಸಂಗದ ವಿಷಯ ಕೂಡ ಸೇರಿಕೊಂಡಿದೆ.

Mysore Family Killed: ಅಮೆರಿಕದಲ್ಲಿ ಪತ್ನಿ ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ

ಪತ್ನಿ ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ

ಅಮೆರಿಕದಲ್ಲಿ ನೆಲೆಸಿದ್ದ ಮೈಸೂರು ಮೂಲದ ಉದ್ಯಮಿಯೊಬ್ಬರು ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಶ್ವೇತಾ, ಹಾಗೂ ಪುತ್ರನನ್ನು ಕೊಲೆ ಮಾಡಿದ ಬಳಿಕ ಹರ್ಷ ಕಿಕ್ಕೇರಿ ಅಲಿಯಾಸ್ ಹರ್ಷವರ್ಧನ್ (57) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟ ಅಶ್ವಿನಿ ಪುನೀತ್‌ ರಾಜ್‌ಕುಮಾರ್; ʼಜೂನಿಯರ್ ಟಾಯಿಸ್‌ ಇಂಟರ್‌ನ್ಯಾಶನಲ್‌ ಪ್ರಿಸ್ಕೂಲ್ʼ ಪ್ರವೇಶ ಜೂನ್‌ನಿಂದ ಆರಂಭ

ಪ್ರಿಸ್ಕೂಲ್ ಆರಂಭಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

Ashwini Puneeth Rajkumar: ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಚಿತ್ರರಂಗದ ಜತೆಗೆ ಶಿಕ್ಷಣ ಕ್ಷೇತ್ರಕ್ಕೂ ಪ್ರವೇಶಿಸಿದ್ದಾರೆ. 'ಜೂನಿಯರ್ ಟಾಯಿಸ್‌ ಇಂಟರ್‌ನ್ಯಾಶನಲ್‌ ಪ್ರಿಸ್ಕೂಲ್' ಅನ್ನು ಪ್ರಾರಂಭಿಸಿದ್ದಾರೆ. ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಮತ್ತು ಶೃತಿ ಕಿರಣ್‌ ಅವರೊಂದಿಗೆ ಈ ಕಾರ್ಯಕ್ಕಾಗಿ ಕೈ ಜೋಡಿಸಿದ್ದಾರೆ.

DK Shivakumar: ಬಿಜೆಪಿ-ದಳದ ಟೀಕೆಗಳು ಸತ್ತಿವೆ, ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ: ಡಿ.ಕೆ.ಶಿವಕುಮಾರ್

ಬಿಜೆಪಿ-ದಳದ ಟೀಕೆಗಳು ಸತ್ತಿವೆ, ನಮ್ಮ ಕೆಲಸ ಶಾಶ್ವತವಾಗಿ ಉಳಿಯಲಿವೆ: ಡಿಕೆಶಿ

DK Shivakumar: ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Infosys layoffs: ಇನ್ಫೋಸಿಸ್‌ ಮೈಸೂರು ಕ್ಯಾಂಪಸ್‌ನಲ್ಲಿ ಮತ್ತೆ 240 ಟ್ರೈನಿಗಳ ವಜಾ!

ಇನ್ಫೋಸಿಸ್‌ ಮೈಸೂರು ಕ್ಯಾಂಪಸ್‌ನಲ್ಲಿ ಮತ್ತೆ 240 ಟ್ರೈನಿಗಳ ವಜಾ!

Infosys layoffs: ಕೆಲಸದಿಂದ ವಜಾ ಮಾಡಿರುವ ಬಗ್ಗೆ ಟ್ರೈನಿಗಳಿಗೆ ಇನ್ಫೋಸಿಸ್‌ ಕಂಪನಿಯಿಂದ ಇ-ಮೇಲ್‌ ಕಳುಹಿಸಲಾಗಿದೆ. ಫೆಬ್ರವರಿಯಲ್ಲಿ 300 ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತೊಮ್ಮೆ ಇನ್ಫೋಸಿಸ್‌ ಮೈಸೂರು ಕ್ಯಾಂಪಸ್‌ನಲ್ಲಿ 240 ಟ್ರೈನಿಗಳನ್ನು ಕಂಪನಿ ವಜಾಗೊಳಿಸಿರುವುದು ಕಂಡುಬಂದಿದೆ.

Road Accident: ಭೀಕರ ರಸ್ತೆ ಅಪಘಾತ, ಕಾರು ಕ್ಯಾಂಟರ್‌ಗೆ ಡಿಕ್ಕಿಯಾಗಿ ಟೆಕ್ಕಿ ಸಾವು

ಭೀಕರ ರಸ್ತೆ ಅಪಘಾತ, ಕಾರು ಕ್ಯಾಂಟರ್‌ಗೆ ಡಿಕ್ಕಿಯಾಗಿ ಟೆಕ್ಕಿ ಸಾವು

ಮೃತ ಇಂಜಿನಿಯರ್ ಅನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಅಶ್ವಿನಿ (33) ಎಂದು ಗುರುತಿಸಲಾಗಿದೆ. ಆಕೆಯ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಶ್ರೀಕಾಂತ್ ಭಟ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Mysuru News: ಅರ್ಥಪೂರ್ಣ, ಅದ್ಧೂರಿಯಾಗಿ ಬಸವಣ್ಣ ಜಯಂತಿ ಆಚರಣೆ: ಡಾ.ಪಿ.ಶಿವರಾಜು

ಅರ್ಥಪೂರ್ಣ, ಅದ್ಧೂರಿಯಾಗಿ ಬಸವಣ್ಣ ಜಯಂತಿ ಆಚರಣೆ: ಡಾ.ಪಿ.ಶಿವರಾಜು

Mysuru News: ಏಪ್ರಿಲ್ 30 ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ನಗರದ ಗನ್ ಹೌಸ್ ಸರ್ಕಲ್‌ನಲ್ಲಿನ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಗುವುದು. ನಂತರ ಬೆಳಗ್ಗೆ 11 ಗಂಟೆಗೆ ಬಸವಣ್ಣನವರ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ತಿಳಿಸಿದ್ದಾರೆ.

Pralhad Joshi: ವಾಜಪೇಯಿ, ನರೇಂದ್ರ ಮೋದಿ ಕಾಲಘಟ್ಟದಲ್ಲಿ ಡಾ.ಅಂಬೇಡ್ಕರ್‌ ಅವರಿಗೆ ಅತ್ಯುನ್ನತ ಗೌರವ ಅರ್ಪಿಸಲಾಗಿದೆ: ಜೋಶಿ

ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರಿಗೆ ಎನ್‌ಡಿಎ ಸರ್ಕಾರದಿಂದಲೇ ಗೌರವ: ಜೋಶಿ

Pralhad Joshi: ಸ್ವಾತಂತ್ರ್ಯ ಪೂರ್ವದಿಂದಲೂ ಡಾ.ಅಂಬೇಡ್ಕರ್ ಅವರು ಅಧಿಕಾರಸ್ಥರಿಂದ ಅವಮಾನಕ್ಕೆ ಒಳಗಾಗುತ್ತಲೇ ಬಂದರು. ವಾಜಪೇಯಿ ಮತ್ತು ನರೇಂದ್ರ ಮೋದಿ ಅವರ ಕಾಲಘಟ್ಟದಲ್ಲಿ ಅವರಿಗೆ ಅತ್ಯುನ್ನತ ಗೌರವ ಅರ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.