ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೈಸೂರು

ಸ್ವಾಮಿ ವಿವೇಕಾನಂದರ ತತ್ತ್ವ ಉಲ್ಲೇಖಿಸಿ ದೇಶದ ಯುವ ಜನತೆಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ

ಮೈಸೂರಿನಲ್ಲಿ ಯುವಶಕ್ತಿ, ಶಿಕ್ಷಣಕ್ಕೆ ಪ್ರಧಾನಿ ಮೋದಿ ಒತ್ತು

Narendra modi: ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ 'ವಿವೇಕ ಸ್ಮಾರಕ' ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಯುವಜನತೆ, ಶಿಕ್ಷಣ ಮತ್ತು ಸಮಾನ ಅವಕಾಶಗಳ ಮಹತ್ವವನ್ನು ಒತ್ತಿ ಹೇಳಿದರು. ಮಾತೃಭಾಷೆಯಲ್ಲಿನ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ, ಮಹಿಳೆಯರಿಗೆ ಎನ್‌ಡಿಎ ಪ್ರವೇಶ, ಸ್ಟಾರ್ಟ್‌ಅಪ್‌ಗಳು ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಕರ ಸಾಧನೆಗಳನ್ನು ಶ್ಲಾಘಿಸಿ, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಸಕ್ರಿಯ ಭಾಗವಹಿಸುವಿಕೆಗೆ ಕರೆ ನೀಡಿದರು.

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ; ಪ್ರಧಾನಿ ಮೋದಿಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪಿಎಂ ಮೋದಿಗೆ ಸಿಎಂ ಮನವಿ

CM DK Shivakumar: ನಮ್ಮ ಸರ್ಕಾರ ಕೂಡ ವಿವೇಕಾನಂದರ ಆಲೋಚನೆ ಹೊಂದಿದೆ. ಯುವ ಯುಗ, ನವ ಯುಗ ನಮ್ಮ ಸರ್ಕಾರದ ಘೋಷಣೆ. ನಾವು ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಯುವಕರು ಒಂದಾಗಬೇಕು, ಅವರ ಕಲೆ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯುವಕರ ಸಂಘ ಸ್ಥಾಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

PM Narendra Modi: ಮೈಸೂರಿನ ವಿವೇಕ ಸ್ಮಾರಕ ಯುವಕರಿಗೆ ಪ್ರೇರಣೆ ನೀಡಲಿದೆ: ಪ್ರಧಾನಿ ಮೋದಿ

ಮೈಸೂರಿನ ವಿವೇಕ ಸ್ಮಾರಕ ಯುವಕರಿಗೆ ಪ್ರೇರಣೆ ನೀಡಲಿದೆ: ಪ್ರಧಾನಿ ಮೋದಿ

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ. ಕಾರ್ಯಕ್ರಮದಲ್ಲಿ ಯುವಮಂತ್ರ ಜಪಿಸಿದ ಪ್ರಧಾನಿಗಳು, ಯುವಕರಿಗೆ ಪ್ರೋತ್ಸಾಹ ನೀಡುವ ದೇಶ ಅಭಿವೃದ್ಧಿ ಹೊಂದುತ್ತದೆ. ನಮ್ಮ ಯುವಕರಿಗೆ ಸರಿಯಾದ ಮಾರ್ಗದರ್ಶನ ಸಿಗಬೇಕಿದೆ

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು ಎಂದ ಸಿಎಂ ಡಿ.ಕೆ. ಶಿವಕುಮಾರ್

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು: ಸಿಎಂ

CM DK Shivakumar: ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್‌, ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Viveka Smaraka in Mysuru: ಮೈಸೂರಿನಲ್ಲಿ 45 ಕೋಟಿ ವೆಚ್ಚದ ʼವಿವೇಕ ಸ್ಮಾರಕʼ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿನಲ್ಲಿ ʼವಿವೇಕ ಸ್ಮಾರಕʼ ಉದ್ಘಾಟಿಸಿದ ಪ್ರಧಾನಿ ಮೋದಿ

PM Narendra Modi: 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಆಗಮಿಸಿದ್ದ ಐತಿಹಾಸಿಕ ಘಟನೆಯನ್ನು ಸ್ಮರಿಸುವ ಉದ್ದೇಶದಿಂದ ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಅವರ ಬೋಧನೆಗಳು ಹಾಗೂ ಆದರ್ಶಗಳ ಮೂಲಕ ಯುವಜನತೆಗೆ ಸ್ಫೂರ್ತಿ ನೀಡುವ ಉದ್ದೇಶ ಹೊಂದಿದೆ.

Cauvery water Dispute: ಕಾವೇರಿ ಕಿಚ್ಚು; CWRC ಆದೇಶದ ವಿರುದ್ಧ ಭುಗಿಲೆದ್ದ ರೈತರು, ಕನ್ನಡಪರ ಸಂಘಟನೆಗಳ ಆಕ್ರೋಶ

ಕಾವೇರಿ ಕಿಚ್ಚು; ಭುಗಿಲೆದ್ದ ರೈತರು, ಕನ್ನಡಪರ ಸಂಘಟನೆಗಳ ಆಕ್ರೋಶ

ತಮಿಳುನಾಡಿನ ಸಿಎಂ ಕರ್ನಾಟಕಕ್ಕೆ ಬಂದು ನಮ್ಮ ಜಲಾಶಯಗಳ ಸ್ಥಿತಿ ನೋಡಲಿ. ಮಳೆ ಇಲ್ಲದ ಕಾರಣ ನಮ್ಮ ಜಲಾಶಯಗಳಲ್ಲೂ ನೀರಿಲ್ಲ. ಕುಡಿಯುವ ನೀರಿಗೂ ಆಹಾಕಾರ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ನೀರು ಕೊಡಲು ಆಗಲ್ಲ ಎಂದು ಕರವೇ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುರಂತವನ್ನೇ ಸೋಲಿಸಿ ಚೊಚ್ಚಲ ಪ್ರಯತ್ನದಲ್ಲೇ ಕಾಮನ್‌ವೆಲ್ತ್ ಪದಕ ಗೆದ್ದ ಕನ್ನಡತಿ ಶಿಲ್ಪಾ

ದುರಂತವನ್ನೇ ಸೋಲಿಸಿ ಕಾಮನ್‌ವೆಲ್ತ್ ಪದಕ ಗೆದ್ದ ಕನ್ನಡತಿ ಶಿಲ್ಪಾ

Shilpa K S: ರೈತ ಶೈಲಾ ಹಾಗೂ ಗೃಹಿಣಿ ಶಾಂತಾ ದಂಪತಿ ಪುತ್ರಿಯಾಗಿರುವ ಶಿಲ್ಪಾ, ಗ್ರಾಮೀಣ ವಾತಾವರಣದಲ್ಲೇ ಬೆಳೆದವರು. ಕ್ರೀಡೆಗೆ ಹೆಚ್ಚಿನ ಅವಕಾಶಗಳಿಲ್ಲದ ಪರಿಸ್ಥಿತಿಯಲ್ಲೂ ಸ್ನಾತಕೋತ್ತರ ಪದವಿ ಹಾಗೂ ಬಿಇಡಿ ಪೂರ್ಣಗೊಳಿಸಿ, ಮೈಸೂರಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಕಾಮನ್‌ವೆಲ್ತ್ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಶರ್ಮಿಳಾ; ಮೈಸೂರಿನ ಶಿಲ್ಪಾಗೆ ಕಂಚು

ಐತಿಹಾಸಿಕ ಚಿನ್ನ ಗೆದ್ದ ಶರ್ಮಿಳಾ; ಮೈಸೂರಿನ ಶಿಲ್ಪಾಗೆ ಕಂಚು

Commonwealth Games: 28ನೇ ವಯಸ್ಸಿನಲ್ಲಿ ಅಜಿತ್ ಸಿಂಗ್ ಅವರನ್ನು ವಿವಾಹವಾದ ಬಳಿಕ ಧಂಕರ್ ಅವರ ಜೀವನವು ಸಕಾರಾತ್ಮಕ ತಿರುವು ಪಡೆದುಕೊಂಡಿತು. ಪತ್ರಿಕೆಯಲ್ಲಿ ಈ ಕ್ರೀಡೆಯ ಬಗ್ಗೆ ಓದಿದ ನಂತರ ಸಿಂಗ್, ಪತ್ನಿಯನ್ನು ಪ್ಯಾರಾ ಅಥ್ಲೆಟಿಕ್ಸ್‌ಗೆ ಪರಿಚಯಿಸಿದರು. ಅವರ ಸಾಮರ್ಥ್ಯದಲ್ಲಿ ನಂಬಿಕೆ ಇಟ್ಟ ಅವರು, ವೃತ್ತಿಪರವಾಗಿ ಅಥ್ಲೆಟಿಕ್ಸ್ ಅನ್ನು ಮುಂದುವರಿಸಲು ಪ್ರೋತ್ಸಾಹಿಸಿದರು.

ರೊಬೋಟ್ ನೆರವಿನಿಂದ ಹೃದಯ ಬೈಪಾಸ್, ಹರ್ನಿಯಾ ಹಾಗೂ ಸುನ್ನತಿಯ ಯಶಸ್ವಿ ಶಸ್ತ್ರಚಿಕಿತ್ಸೆ

ವಿಶ್ವದಲ್ಲಿಯೇ ಮೊದಲ ಬಾರಿಗೆ ರೊಬೋಟ್ ನೆರವಿನಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ತುಂಬ ಸಂಕೀರ್ಣಮಯವಾಗಿದ್ದ ಈ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯ ವಿವಿಧ ವೈದ್ಯಕೀಯ ವಿಭಾಗಗಳ ಸಮನ್ವಯದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಇದರಿಂದಾಗಿ 81 ವರ್ಷದ ರೋಗಿಯು ಮೂರು ಪ್ರತ್ಯೇಕ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಬೇಕಾದ ಅನಿವಾರ್ಯತೆ ತಪ್ಪಿದೆ. ಶಸ್ತ್ರಚಿಕಿತ್ಸೆಯ ನೋವು, ದೀರ್ಘಕಾಲ ಆಸ್ಪತ್ರೆಯಲ್ಲಿ ಉಳಿಯುವ ಅವಶ್ಯಕತೆ, ಸೋಂಕಿನ ಸಾಧ್ಯತೆ ಹಾಗೂ ಚೇತರಿಕೆಯ ಅವಧಿ ಗಣನೀಯವಾಗಿ ಕಡಿಮೆಯಾಗಿದೆ.

Mysuru News: ಮೈಸೂರಿನಲ್ಲಿ ಆಘಾತಕಾರಿ ಘಟನೆ; ಹೆಂಡತಿ, ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಗಂಡ ಆತ್ಮಹತ್ಯೆ!

ಮೈಸೂರಿನಲ್ಲಿ ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ಗಂಡ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಏಟ್ರಿಯಾ ರಿನ್ಯೂಎಬಲ್ ಮೈಸೂರಿಗೆ ವಿಸ್ತರಣೆ; ಕರ್ನಾಟಕದಲ್ಲಿ ರೂಫ್‌ಟಾಪ್ ಸೌರಶಕ್ತಿ ಸೇವೆ ಮತ್ತಷ್ಟು ಬಲ

ಕರ್ನಾಟಕದಲ್ಲಿ ರೂಫ್‌ಟಾಪ್ ಸೌರಶಕ್ತಿ ಸೇವೆ ಮತ್ತಷ್ಟು ಬಲ

ವಸತಿ ಹಾಗೂ ವಾಣಿಜ್ಯ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ತೊಂದರೆಯಿಲ್ಲದ ರೂಫ್‌ ಟಾಪ್ ಸೌರಶಕ್ತಿ ಪರಿಹಾರಗಳನ್ನು ಒದಗಿಸುತ್ತಿರುವ ಏಟ್ರಿಯಾ ರಿನ್ಯೂಎಬಲ್, ಹೆಚ್ಚಿನ ಸೌರ ವ್ಯವಸ್ಥೆಗಳ ಅಳವಡಿಕೆಯನ್ನು ಕೇವಲ 5 ರಿಂದ 6 ಗಂಟೆಗಳೊಳಗೆ ಪೂರ್ಣಗೊಳಿಸುತ್ತದೆ. ಪ್ರತಿಯೊಂದು ಸೌರಶಕ್ತಿ ವ್ಯವಸ್ಥೆಗೆ 30 ವರ್ಷಗಳ ವಾರಂಟಿ ಹಾಗೂ 5 ವರ್ಷಗಳ ಉಚಿತ ನಿರ್ವಹಣಾ ಸೇವೆ ಒದಗಿಸಲಾಗುತ್ತಿದ್ದು, ಗ್ರಾಹಕರು ವಿಶ್ವಾಸದಿಂದ ಸೌರಶಕ್ತಿಯನ್ನು ಅಳವಡಿಸಿಕೊಳ್ಳಲು ಇದು ನೆರವಾಗಲಿದೆ.

ರಾಜ್ಯದಲ್ಲಿ ನಿಂಜಾ ಪೆಟ್ ಫುಡ್ ಬ್ರ್ಯಾಂಡ್ ಪರಿಚಯಿಸಿದ ಗೋದ್ರೇಜ್ ಪೆಟ್ ಕೇರ್

ನಿಂಜಾ ಪೆಟ್ ಫುಡ್ ಬ್ರ್ಯಾಂಡ್ ಪರಿಚಯಿಸಿದ ಗೋದ್ರೇಜ್ ಪೆಟ್ ಕೇರ್

ಶ್ವಾನಗಳ ಕರುಳಿನ ಆರೋಗ್ಯಕ್ಕೆ ಪೂರಕವಾದ, ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ವನ್ನು ಈ ನಾಲ್ಕೂ ರಾಜ್ಯಗಳಲ್ಲಿನ ಸಾಕುಪ್ರಾಣಿಗಳ ಮಾಲೀಕರಿಗೆ ಸುಲಭವಾಗಿ ತಲುಪಿಸುವ ಉದ್ದೇಶ ದಿಂದ ಕಂಪನಿಯು ತನ್ನ ವಹಿವಾಟಿನ ವ್ಯಾಪ್ತಿಯನ್ನು ವಿಸ್ತರಿಸಿದೆ. ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಸಾಕುಪ್ರಾಣಿ ಆರೈಕೆ ಕ್ಷೇತ್ರದಲ್ಲಿ ಅಖಿಲ ಭಾರತ ಮಟ್ಟದಲ್ಲಿ ತನ್ನ ಉಪಸ್ಥಿತಿ ಯನ್ನು ವಿಸ್ತರಿಸುವ ಕಂಪನಿಯ ಗುರಿ ಸಾಧಿಸುವ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

S. Janaki's last rites: ಗಾನಕೋಗಿಲೆ ಎಸ್‌.ಜಾನಕಿ ಪಂಚಭೂತಗಳಲ್ಲಿ ಲೀನ; ಚಿತೆಗೆ ಮೊಮ್ಮಗಳು ಅಪ್ಸರಾ ಅಗ್ನಿಸ್ಪರ್ಶ

ಪಂಚಭೂತಗಳಲ್ಲಿ ಎಸ್‌.ಜಾನಕಿ ಲೀನ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದ ತೋಟದಲ್ಲಿ ಭಾನುವಾರ ಸಂಜೆ ತೆಲುಗು ಬ್ರಾಹ್ಮಣ ಸಂಪ್ರದಾಯ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್‌.ಜಾನಕಿ ಅರ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಮೊಮ್ಮಗಳು ಅಪ್ಸರಾ ಅವರು ಅಂತಿಮ ವಿಧಿವಿಧಾನ ನೆರವೇರಿಸಿದರು.

S. Janaki: ನಾಳೆ ಸಂಜೆ ಮೈಸೂರಿನಲ್ಲಿ ಎಸ್‌. ಜಾನಕಿ ಅಂತ್ಯಸಂಸ್ಕಾರ; ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ನಾಳೆ ಸಂಜೆ ಮೈಸೂರಿನಲ್ಲಿ ಎಸ್‌. ಜಾನಕಿ ಅಂತ್ಯಸಂಸ್ಕಾರ

S Janaki's funeral: ತಮ್ಮ ಅಂತ್ಯಸಂಸ್ಕಾರವು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಯೇ ನಡೆಯಬೇಕು ಎಂಬುದು ಸ್ವತಃ ಎಸ್. ಜಾನಕಿ ಅವರ ಆಸೆಯಾಗಿತ್ತು. ಅವರ ಆ ಇಚ್ಛೆಯಂತೆಯೇ ಅವರ ಕುಟುಂಬ ಸದಸ್ಯರ ಒಪ್ಪಿಗೆಯ ಮೇರೆಗೆ ಮೈಸೂರಿನಲ್ಲಿಯೇ ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.

Mysuru Dasara 2026: ಈ ಬಾರಿ 11 ದಿನಗಳ ವಿಜೃಂಭಣೆಯ ಮೈಸೂರು ದಸರಾ; ಅ.11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ

ಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ: ಸಿಎಂ

CM DK Shivakumar: ದಸರಾ ಆಯೋಜನೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕಾರ್ಯಕಾರಿ ಸಮಿತಿ ರಚನೆ ಮಾಡಲಿದ್ದೇನೆ. ಈ ಬಾರಿ ಏರ್ ಶೋ ನಡೆಸಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಬೇಕು ಎಂದು ಸಲಹೆ ಬಂದಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌; ಅ.11ಕ್ಕೆ ನಾಡಹಬ್ಬ ಉದ್ಘಾಟನೆ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

ಸಿಎಂ ಡಿಕೆ ಶಿವಕುಮಾರ್ ಅವರ ​ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮೈಸೂರು ದಸರಾ ವೇಳಾಪಟ್ಟಿ ಬಗ್ಗೆ ತೀರ್ಮಾನಿಸಲಾಗಿದೆ. ನಾಡಹಬ್ಬದ ರೂಪುರೇಷೆ ಸೇರಿದಂತೆ ಗಜ ಪಯಣ, ದಸರಾ ಉದ್ಘಾಟನೆ, ಜಂಬೂ ಸವಾರಿ ಸೇರಿದಂತೆ ಈ ಬಾರಿ ದಸರಾದ ಪ್ರಮುಖ ಕಾರ್ಯಕ್ರಮಗಳ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ.

C.N. Muktha: ಕನ್ನಡದ ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ಅನಾರೋಗ್ಯದಿಂದ ನಿಧನ

ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ಅನಾರೋಗ್ಯದಿಂದ ನಿಧನ

ಕಳ್ಳಂಬೆಳ್ಳ ನರಸಿಂಹಮೂರ್ತಿ ಮುಕ್ತಾ ಅವರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ 25 ವರ್ಷಕ್ಕೂ ಹೆಚ್ಚು ಕಾಲ ವಿವಿಧೆಡೆ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ಇವರ 75ಕ್ಕೂ ಅಧಿಕ ಕಾದಂಬರಿ, 15ಕ್ಕೂ ಅಧಿಕ ಕಥಾಸಂಕಲನಗಳು ಪ್ರಕಟವಾಗಿವೆ.

ಮಹಿಳೆಯರಿಂದ ಶೋಷಣೆಗೆ ಒಳಗಾಗುವ ಪುರುಷರ ರಕ್ಷಣೆಗೆ ಪುರುಷ ಆಯೋಗ ರಚಿಸಿ; H ವಿಶ್ವನಾಥ್‌ ಆಗ್ರಹ

ಪುರುಷರ ರಕ್ಷಣೆಗೆ ಪುರುಷ ಆಯೋಗ ರಚಿಸಿ; H ವಿಶ್ವನಾಥ್‌ ಆಗ್ರಹ

ಪುರುಷರ ಮೇಲೆ ಇತ್ತೀಚಿನ ದಿನಗಳಲ್ಲಿ ದೌರ್ಜನ್ಯ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಮಹಿಳಾ ಆಯೋಗ ಇರುವ ಮಾದರಿಯಲ್ಲೇ ಪುರುಷರ ರಕ್ಷಣೆಗಾಗಿ ತಕ್ಷಣವೇ 'ಪುರುಷ ಆಯೋಗ'ವನ್ನು ರಚಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ತೊಂದರೆ ಆದರೆ ಪೊಲೀಸರು ಬರ್ತಾರೆ. ಹೆಣ್ಮಕ್ಕಳ ರಕ್ಷಣೆಗೆ ಕಾನೂನು ಇದೆ ಎಂದು ಹೇಳಿದ್ದಾರೆ.

Mysuru Tragedy: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಘೋರ ದುರಂತ; ಡೆತ್‌ ನೋಟ್‌ ಬರೆದು ತಂದೆ, ತಾಯಿ, ಮಗಳು ಆತ್ಮಹತ್ಯೆ!

ಮೈಸೂರಿನಲ್ಲಿ ಘೋರ ದುರಂತ; ತಂದೆ, ತಾಯಿ, ಮಗಳು ಆತ್ಮಹತ್ಯೆ!

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ. ಯುವತಿಯೊಬ್ಬಳ ವಿವಾಹಕ್ಕೆ ಕೇವಲ ಎರಡು ದಿನ ಬಾಕಿ ಇತ್ತು. ಆದರೆ, ಮದುವೆ ತಯಾರಿಯ ಸಂಭ್ರಮದಲ್ಲಿದ್ದ ಕುಟುಂಬವೇ ದುರಂತ ಅಂತ್ಯ ಕಂಡಿರುವುದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಒಪ್ಪಿಗೆ

ಹುಬ್ಬಳ್ಳಿ- ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ

MB Patil: ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್‌ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.

4 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ; ಸಮಯ ನೋಡಿಕೊಂಡು ಕ್ರಮ ಎಂದ ಎಚ್.ಡಿ.ಕುಮಾರಸ್ವಾಮಿ

ಕ್ರಾಸ್ ವೋಟಿಂಗ್ ಮಾಡಿದವರ ವಿರುದ್ಧ ಕ್ರಮ: ಎಚ್‌ಡಿಕೆ

HD Kumaraswamy: ನನಗೆ ಎಲ್ಲವೂ ಗೊತ್ತಿದ್ದೇ ನಾನು ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಯಾರ ಯಾರ ಆತ್ಮಸಾಕ್ಷಿ ಹೇಗೆಲ್ಲ ವರ್ತನೆ ಮಾಡುತ್ತದೆ ಎಂಬುದನ್ನು ಪರೀಕ್ಷೆ ಮಾಡಲು ಪಕ್ಷದ ಅಭ್ಯರ್ಥಿಯನ್ನು ನಾನು ಕಣಕ್ಕೆ ಇಳಿಸಬೇಕಾಯಿತು. ಎಲ್ಲವೂ ನಾನು ಅಂದುಕೊಂಡಂತೆ ಆಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಕಟ್ಟಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Piriyapattana News: ಅನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ

ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ

ಜಾನಪದಗಳು ಉಳಿಯ ಬೇಕು. ವಿದ್ಯಾರ್ಥಿಗಳುಜ ಕೂಡ ಜಾನಪದ ಕಲೆಯನ್ನು ಉಳಿಸಿಬೆಳೆಸಬೇಕು. ಸ್ಥಳೀಯವಾಗಿ ನಡೆಯವ ಹಬ್ಬ, ಜಾತ್ರೆಗಳಲ್ಲಿ ಪಾಲ್ಗೊಂಡು ಅಲ್ಲಿನ ಜಾನಪದ ಸೊಗಡನ್ನು ನೋಡ ಬೇಕು. ಮನೆ ಮನೆಗೆ ತೆರಳಿ ಜಾನಪದ ಹಾಡುಗಳನ್ನು ಹಾಡುವ ಕಲಾವಿದರನ್ನು ಗೌರವಿಸಬೇಕು. ಅವರ ಹಾಡುಗಳನ್ನು ನಾವು ಹಾಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು

Mysuru Pub Fire: ಮೈಸೂರು ಪಬ್‌ ಅಗ್ನಿ ಅವಘಡದಲ್ಲಿ ಸ್ಯಾಂಡಲ್‌ವುಡ್‌ ನಟನಿಗೆ ತೀವ್ರ ಗಾಯ; ಜಿಗಿದು ಪ್ರಾಣ ರಕ್ಷಿಸಿಕೊಳ್ಳಲು ಯತ್ನಿಸಿದ ಗ್ರಾಹಕರು! video

ಮೈಸೂರು ಪಬ್‌ ಅಗ್ನಿ ಅವಘಡದಲ್ಲಿ ಸ್ಯಾಂಡಲ್‌ವುಡ್‌ ನಟನಿಗೆ ತೀವ್ರ ಗಾಯ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್​ ಡೆನ್​​ ಪಬ್​​​​ ಅನ್ನು ಆಫ್ರಿಕನ್ ಸ್ಟೈಲ್​ನಲ್ಲಿ ನಿರ್ಮಾಣ ಮಾಡಲಾಗಿತ್ತು. ಹುಲ್ಲು, ಗೋಣಿ ತಾಟು, ವುಡ್ ಹೆಚ್ಚಾಗಿ ಬಳಸಿ ನಿರ್ಮಾಣವಾಗಿತ್ತು. ದಟ್ಟವಾಗಿ ಬೆಂಕಿ ಹೊತ್ತಿ ಉರಿಯಲು ಇದೇ ಕಾರಣ ಎನ್ನಲಾಗಿದೆ. ದುರಂತದಲ್ಲಿ ಇಬ್ಬರು, ಮೃತಪಟ್ಟಿದ್ದರೆ, ಆರು ಮಂದಿ ಗಾಯಗೊಂಡಿದ್ದಾರೆ.

Mysuru Fire accident: ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ; ಇಬ್ಬರ ಸಾವು, ಏಳು ಮಂದಿಗೆ ಗಾಯ

ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ; ಇಬ್ಬರ ಸಾವು

FoxDen Restobar Fire Accident in mysuru: ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಇಬ್ಬರು ಸಜೀವ ದಹನರಾಗಿದ್ದಾರೆ ಎಂದು ತಿಳಿದುಬಂದಿದೆ.

Loading...