ಕ್ರಾಸ್ ವೋಟಿಂಗ್ ಮಾಡಿದವರ ವಿರುದ್ಧ ಕ್ರಮ: ಎಚ್ಡಿಕೆ
HD Kumaraswamy: ನನಗೆ ಎಲ್ಲವೂ ಗೊತ್ತಿದ್ದೇ ನಾನು ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಯಾರ ಯಾರ ಆತ್ಮಸಾಕ್ಷಿ ಹೇಗೆಲ್ಲ ವರ್ತನೆ ಮಾಡುತ್ತದೆ ಎಂಬುದನ್ನು ಪರೀಕ್ಷೆ ಮಾಡಲು ಪಕ್ಷದ ಅಭ್ಯರ್ಥಿಯನ್ನು ನಾನು ಕಣಕ್ಕೆ ಇಳಿಸಬೇಕಾಯಿತು. ಎಲ್ಲವೂ ನಾನು ಅಂದುಕೊಂಡಂತೆ ಆಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಕಟ್ಟಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.