ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದೇಶ

ತಂಬಾಕು ಮೇಲಿನ ಶೇ.18 ಅಬಕಾರಿ ಸುಂಕ ಹಿಂದಕ್ಕೆ; ಎಚ್.ಡಿ. ಕುಮಾರಸ್ವಾಮಿ ಮನವಿಗೆ ವಿತ್ತ ಸಚಿವೆ ಸ್ಪಂದನೆ

ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂಪಡೆದ ಕೇಂದ್ರ ಸರ್ಕಾರ

HD Kumaraswamy: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದ ಫಲವಾಗಿ ಎಫ್‌ಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ತಂಬಾಕು ಹರಾಜು ವಿಷಯಕ್ಕೆ ಸಂಬಂಧಿಸಿ ತಮ್ಮ ಮನವಿಗೆ ಸ್ಪಂದಿಸಿ ಬೆಳೆಗಾರರ ಪರವಾಗಿ ಕ್ರಮ ವಹಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ.

ಸುಧಾರಿತ ರಾಮ್‌ಜೆಟ್ ಕ್ಷಿಪಣಿ ತಂತ್ರಜ್ಞಾನದ ಯಶಸ್ವಿ ಪರೀಕ್ಷೆ; ಎಲೈಟ್ ರಾಷ್ಟ್ರಗಳ ಪಟ್ಟಿಗೆ ಸೇರಿದ ಭಾರತ

ಸುಧಾರಿತ ರಾಮ್‌ಜೆಟ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಘನ ಇಂಧನ ಡಕ್ಟೆಡ್ ರಾಮ್‌ಜೆಟ್ ತಂತ್ರಜ್ಞಾನವನ್ನು ಮಂಗಳವಾರ ಒಡಿಶಾ ಕರಾವಳಿಯ ಚಾಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR)ನಿಂದ ಯಶಸ್ವಿಯಾಗಿ ಹಾರಾಟ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ SFDR ತಂತ್ರಜ್ಞಾನದ ಯಶಸ್ವಿ ಪರೀಕ್ಷೆಗಾಗಿ ಡಿಆರ್‌ಡಿಒಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮುಂಬೈ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ಡಿಕ್ಕಿ; ತಪ್ಪಿದ ಭಾರಿ ದುರಂತ

ಮುಂಬೈ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ಡಿಕ್ಕಿ

ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ಮತ್ತು ಇಂಡಿಗೋ ವಿಮಾನಗಳು ಡಿಕ್ಕಿ ಹೊಡೆದಿದ್ದು, ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಎರಡೂ ವಿಮಾನಗಳ ರೆಕ್ಕೆ ಪರಸ್ಪರ ತಾಗಿದ್ದು, ಯಾವುದೇ ಅನಾಹುತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದ ಖದೀಮರು; ತಕ್ಷಣ ಕ್ರಮಕ್ಕೆ ಭಾರತ ಆಗ್ರಹ

ಗಾಂಧಿ ಪ್ರತಿಮೆಗೆ ಹಾನಿ; ಕ್ರಮಕ್ಕೆ ಆಗ್ರಹ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದಿರುವ ಘಟನೆ ನಡೆದಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ಯಲಾಗಿದೆ. ಇದು ಭಾರತೀಯ ಮತ್ತು ಆಸ್ಟ್ರೇಲಿಯನ್ ಸಮುದಾಯದಲ್ಲಿ ತೀವ್ರ ಕಳವಳವನ್ನು ಉಂಟು ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ ಕ್ರಮಕ್ಕೆ ಆಗ್ರಹಿಸಿದೆ.

ʼʼಅತ್ಯುತ್ತಮ ಒಪ್ಪಂದʼʼ: ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದೇನು?

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಅತ್ಯುತ್ತಮ: ಪಿಯೂಷ್ ಗೋಯಲ್

India -US Trade Deal: ಭಾರತ–ಅಮೆರಿಕ ಮಧ್ಯೆ ಒಪ್ಪಂದದ ವಿವರಗಳನ್ನು ಸಂಸತ್ತಿನಲ್ಲಿ ಹಂಚಿಕೊಳ್ಳಲು ಬಯಸಿದ್ದೆ. ಆದರೆ ಲೋಕಸಭೆಯಲ್ಲಿ ನಡೆದ ಗದ್ದಲದ ಕಾರಣ ಸಾಧ್ಯವಾಗಲಿಲ್ಲ ಎಂದು ಸಚಿವ ಪಿಯೂಷ್ ಗೋಯಲ್ ಹೇಳಿದರು. ಈ ವೇಳೆ ವಿರೋಧ ಪಕ್ಷದ ನಾಯಕರನ್ನು ತೀವ್ರವಾಗಿ ಟೀಕಿಸಿದ ಅವರು, ರಾಹುಲ್ ಗಾಂಧಿ ನಕಾರಾತ್ಮಕ ಮನಸ್ಥಿತಿಯ ವ್ಯಕ್ತಿ. ಅವರು ದೇಶದ ಬೆಳವಣಿಗೆಯನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು.

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು; ಸಂಬಂಧಿಕರಲ್ಲಿ ಕ್ಷಮೆ ಕೇಳಿದ್ದೇಕೆ?

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು

ರೈಲ್ವೇ ಹಳಿಯಲ್ಲಿ ತಾಯಿ ಮತ್ತು ಮಕ್ಕಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮಹಿಳೆ ತನ್ನ ಸಂಬಂಧಿಕರಿಗೆ ಕ್ಷಮೆ ಕೇಳಿ ಪತ್ರ ಬರೆದಿದ್ದು, ಡೆತ್ ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಈ ಹೃದಯ ವಿದ್ರಾವಕ ಘಟನೆಯ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಅಮೆರಿಕ- ಭಾರತ ವ್ಯಾಪಾರ ಒಪ್ಪಂದ: ರೈತರ ವಿಚಾರದಲ್ಲಿ ರಾಜಿ ಇಲ್ಲ, ವೆನೆಜುವೆಲಾ ತೈಲ ಖರೀದಿ ಮಾಡೋದಿಲ್ಲ

ಅಮೆರಿಕ- ಭಾರತ ಒಪ್ಪಂದದ ಬಗ್ಗೆ ಕೇಂದ್ರ ಸರ್ಕಾರ ಹೇಳುವುದೇನು?

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಪೂರ್ಣಗೊಂಡಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕೇಂದ್ರ ಸರ್ಕಾರ ಘೋಷಣೆಯನ್ನೂ ಮಾಡಿವೆ. ಅಮೆರಿಕ- ಭಾರತ ಒಪ್ಪಂದಕ್ಕಾಗಿ ರೈತರ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ವೆನೆಜುವೆಲಾ ತೈಲ ಖರೀದಿ ಮಾಡೋದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಪ್ರಧಾನಿ ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ

ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ ಎಂದ ರಾಹುಲ್ ಗಾಂಧಿ

Rahul Gandhi’s allegation: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಮೆರಿಕ–ಭಾರತ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಆರೋಪ ಹೊರಿಸಿದ್ದಾರೆ. ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ದೇಶವನ್ನು ಮಾರಾಟ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕುಡಿದ ಮತ್ತಿನಲ್ಲಿ ಅರೆಬೆತ್ತಲೆಯಾಗಿ ಪತ್ನಿ ಮೇಲೆ ಹಲ್ಲೆ ನಡೆಸಿದ ಕಾನ್‌ಸ್ಟೇಬಲ್; ಚಿಕ್ಕ ಮಗು ಕೈಲಿದ್ರೂ ಮನಸ್ಸು ಕರಗಲಿಲ್ಲ

ಅರೆಬೆತ್ತಲೆಯಾಗಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಪೇದೆ

Constable attacks wife: ಕುಡಿದ ಮತ್ತಿನಲ್ಲಿ ಕಾನ್‌ಸ್ಟೇಬಲ್‍ ಒಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪತ್ನಿಯು ತನ್ನ ಮಗುವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರೆ, ಪೇದೆಯು ಅರೆಬೆತ್ತಲೆಯಾಗಿದ್ದು, ಮನಬಂದಂತೆ ಹೆಂಡತಿಗೆ ಥಳಿಸಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ; ಯುಮ್ನಮ್ ಖೇಮಚಂದ್ ಸಿಂಗ್ ನೂತನ ಸಿಎಂ

ಯುಮ್ನಮ್ ಖೇಮಚಂದ್ ಸಿಂಗ್ ಮಣಿಪುರ ಮುಖ್ಯಮಂತ್ರಿ

Yumnam Khemchand Singh: ಮಣಿಪುರದಲ್ಲಿ ಸುಮಾರು 1 ವರ್ಷದ ರಾಷ್ಟ್ರಪತಿ ಆಡಳಿತ ಅಂತ್ಯವಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಯುಮ್ನಮ್ ಖೇಮಚಂದ್ ಸಿಂಗ್ ಆಯ್ಕೆಯಾಗಿದ್ದಾರೆ. ಬಿರೇನ್ ಸಿಂಗ್ ಅವರ ರಾಜೀನಾಮೆ ಮತ್ತು ಜನಾಂಗೀಯ ಹಿಂಸಾಚಾರದ ಬಳಿಕ ಮಣಿಪುರದಲ್ಲಿ ಕಳೆದ ವರ್ಷ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು.

ಕೈಯಿಂದಲ್ಲ, ಬಾಯಿಯಿಂದ ನಾಗರಹಾವನ್ನು ಹಿಡಿದ ವ್ಯಕ್ತಿ; ಮೈಜುಮ್ಮೆನ್ನಿಸುವ ವಿಡಿಯೊ ವೈರಲ್

ಕೈಯಿಂದಲ್ಲ, ಬಾಯಿಯಿಂದ ನಾಗರಹಾವನ್ನು ಹಿಡಿದ ವ್ಯಕ್ತಿ

Cobra caught with mouth: ಕೈಯಿಂದಲ್ಲ, ಬಾಯಿಯಿಂದಲೇ ನಾಗರಹಾವನ್ನು ಹಿಡಿದ ವ್ಯಕ್ತಿಯೊಬ್ಬನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಅಪಾಯಕಾರಿ ಕೃತ್ಯವು ಬೆಚ್ಚಿ ಬೀಳಿಸುವಂತಿದ್ದು, ವ್ಯಕ್ತಿಯ ಧೈರ್ಯ ಮತ್ತು ಅಜಾಗರೂಕತೆಯ ಬಗ್ಗೆ ಚರ್ಚೆ ಹುಟ್ಟು ಹಾಕಿದೆ. ಒಡಿಶಾದ ಬಾಲಸೋರ್‌ನಲ್ಲಿ ಈ ಘಟನೆ ನಡೆದಿದೆ.

ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಕಾರ್ಯಾಚರಣೆ; ಉಧಮ್‌ಪುರದಲ್ಲಿ ಸಿಲುಕಿಕೊಂಡ ಇಬ್ಬರು ಜೈಶ್ ಭಯೋತ್ಪಾದಕರು

ಕಾಶ್ಮೀರದಲ್ಲಿ ಜೈಶ್ ಭಯೋತ್ಪಾದಕರಿಗೆ ದಿಗ್ಬಂಧನ

ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಭದ್ರತಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ಇಬ್ಬರು ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೋಯಿಂಗ್ 787 ಫ್ಲೀಟ್‌ನ ಇಂಧನ ನಿಯಂತ್ರಣ ಸ್ವಿಚ್‌ಗಳ ಪರಿಶೀಲನೆ ಪ್ರಾರಂಭಿಸಿದ ಏರ್ ಇಂಡಿಯಾ

ಡ್ರೀಂಲೈನರ್‌ನಲ್ಲಿ ಸ್ವಿಚ್ ದೋಷ; ಏರ್ ಇಂಡಿಯಾದಿಂದ ಮರುಪರಿಶೀಲನೆ

Air India begins inspection: ಏರ್ ಇಂಡಿಯಾ ಬೋಯಿಂಗ್ 787 ಫ್ಲೀಟ್‌ನ ಎಲ್ಲ ವಿಮಾನಗಳಲ್ಲಿ ಇಂಧನ ನಿಯಂತ್ರಣ ಸ್ವಿಚ್‌ಗಳ ಪರಿಶೀಲನೆಯನ್ನು ಆರಂಭಿಸಿದೆ. ಡ್ರೀಂಲೈನರ್‌ನಲ್ಲಿ ಸ್ವಿಚ್ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಮಾನಯಾನ ಸಂಸ್ಥೆಯು ಪ್ರಸ್ತುತ 33 ಬೋಯಿಂಗ್ 787 ಡ್ರೀಮ್‌ಲೈನರ್‌ಗಳನ್ನು ನಿರ್ವಹಿಸುತ್ತಿದೆ.

ಎಸ್ ಐಪಿಯಲ್ಲಿ 10 ಸಾವಿರದಿಂದ 10 ಕೋಟಿ ರೂ. ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ಎಸ್ ಐಪಿಯಲ್ಲಿ ನಿವೃತ್ತಿ ಪ್ರಯೋಜನ ಪಡೆಯುವುದು ಹೇಗೆ?

ನಿವೃತ್ತಿ ಅನಂತರದ ಆರ್ಥಿಕ ಭದ್ರತೆಗಾಗಿ ನಾವು ಉದ್ಯೋಗಕ್ಕೆ ಸೇರಿದ ಆರಂಭದಿಂದಲೇ ಯೋಜನೆ ಮಾಡುವುದು ಉತ್ತಮ. ಇದಕ್ಕಾಗಿ ವ್ಯವಸ್ಥಿತ ಹೂಡಿಕೆ ಯೋಜನೆ (ಎಸ್‌ಐಪಿ) ಒಂದು ಆಯ್ಕೆಯಾಗಿದೆ. ಇದರಲ್ಲಿ ನಿಯಮಿತವಾಗಿ ಹೂಡಿಕೆ ಮಾಡುವುದರಿಂದ 10 ಕೋಟಿ ರೂ. ವರೆಗೆ ಲಾಭ ಪಡೆಯಬಹುದು ಎನ್ನುತ್ತಾರೆ ಹಣಕಾಸು ತಜ್ಞರಾದ ಅಶೋಕ್ ದೇವಾನಾಂಪ್ರಿಯ.

ಭಾರತದ ಗೌಪ್ಯತಾ ಕಾನೂನು ಪಾಲಿಸಲು ಆಗದಿದ್ದರೆ ದೇಶ ಬಿಟ್ಟು ಹೋಗಿ: ವಾಟ್ಸ್‌ಆ್ಯಪ್‌ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ವಾಟ್ಸ್‌ಆ್ಯಪ್‌ ಗೌಪ್ಯತಾ ನೀತಿ: ಮೆಟಾಗೆ ಸುಪ್ರೀಂ ಕಠಿಣ ಎಚ್ಚರಿಕೆ

Supreme Court: ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಿಕೊಳ್ಳುವುದನ್ನು ಯಾವುದೇ ರೀತಿಯಲ್ಲಿ ಸಹಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ವಾಟ್ಸ್‌ಆ್ಯಪ್‌ ಗೌಪ್ಯತಾ ನೀತಿ ವಿಚಾರದಲ್ಲಿ ಮೆಟಾ ಸಂಸ್ಥೆಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಭಾರತೀಯ ಬಳಕೆದಾರರ ಗೌಪ್ಯತೆಯನ್ನು ಕಾಪಾಡಬೇಕು, ಅವರ ಡೇಟಾದ ಅಲ್ಪಾಂಶವನ್ನೂ ಅನಧಿಕೃತವಾಗಿ ಬಳಸಲು ಅವಕಾಶ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಗೌಪ್ಯತೆಯನ್ನು ಉಳಿಸಲು ಸಾಧ್ಯವಿಲ್ಲದಿದ್ದರೆ ಭಾರತದಲ್ಲಿ ಕಾರ್ಯನಿರ್ವಹಿಸುವ ಅಗತ್ಯ ಇಲ್ಲ ಎಂಬ ಕಠಿಣ ಸಂದೇಶ ರವಾನಿಸಿದೆ.

ಇಯು, ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ಭಾರತದ ಆರ್ಥಿಕತೆಯಲ್ಲಿ ಹೊಸ ಯುಗದ ಆರಂಭ

ವಾರದೊಳಗೆ ಎರಡು ಪ್ರಮುಖ ವ್ಯಾಪಾರ ಒಪ್ಪಂದ; ಭಾರತಕ್ಕೇನು ಲಾಭ?

ಸುದೀರ್ಘ ಮಾತುಕತೆಯ ಬಳಿಕ ಭಾರತ ಮತ್ತು ಅಮೆರಿಕ ನಡುವಿನ ಸುಂಕ ಸಮರ ಒಂದು ತಾರ್ಕಿಕ ಅಂತ್ಯ ಕಂಡಿದೆ. ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದ ಮಾತುಕತೆಯನ್ನು ಪೂರ್ಣಗೊಳಿಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಸರಕುಗಳ ಮೇಲಿನ ಸುಂಕವನ್ನು ಶೇ. 25ರಿಂದ ಶೇ 18ಕ್ಕೆ ಇಳಿಸಲು ಒಪ್ಪಿಕೊಂಡಿದ್ದಾರೆ. ಇದು ಹೇಗೆ ಕಾರ್ಯನಿರ್ವಹಿಸುತ್ತದೆ, ಇದರ ಪರಿಣಾಮ ಏನು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

ಭಾರತ ತೈಲ ಖರೀದಿ ನಿಲ್ಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ: ಅಮೆರಿಕ ವ್ಯಾಪಾರ ಒಪ್ಪಂದದ ನಂತರ ರಷ್ಯಾ ಮೊದಲ ಪ್ರತಿಕ್ರಿಯೆ

ಅಮೆರಿಕ ವ್ಯಾಪಾರ ಒಪ್ಪಂದದ ನಂತರ ರಷ್ಯಾ ಮೊದಲ ಪ್ರತಿಕ್ರಿಯೆ

India-US Trade Deal: ಭಾರತ ಮತ್ತು ಅಮೆರಿಕ ನಡುವೆ ಮಹತ್ವದ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ. ಅದರ ಭಾಗವಾಗಿ ಭಾರತವು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಷ್ಯಾ ಈ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ ಎಂದಿದೆ.

ಲೋಕಸಭೆಯಿಂದ 8  ವಿಪಕ್ಷ ಸಂಸದರ ಅಮಾನತು; ಸದನದಲ್ಲಿ ಅಂತದ್ದೇನಾಯ್ತು?

ಲೋಕಸಭೆಯಿಂದ 8 ವಿಪಕ್ಷ ಸಂಸದರ ಅಮಾನತು

ಲೋಕಸಭೆಯಲ್ಲಿ ಮಂಗಳವಾರ ಎಂಟು ವಿರೋಧ ಪಕ್ಷದ ಸದಸ್ಯರು "ಅಶಿಸ್ತಿನ ವರ್ತನೆ" ತೋರಿ ಸದನದ ಕಲಾಪಕ್ಕೆ ಅಡ್ಡಿಪಡಿಸಿ, ಸಭಾಪತಿಯ ಕಡೆಗೆ ಕಾಗದಗಳನ್ನು ಎಸೆದಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸ್ಪೀಕರ್​ಗೆ ದೂರು ನೀಡಿದರು. ಬಳಿಕ ಸ್ಪೀಕರ್‌ ಓಂ ಬಿರ್ಲಾ ಎಂಟು ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಹೆಚ್ಚಿನ ಸುಂಕ, ಬೆದರಿಕೆ, ಒಪ್ಪಂದ; ಅಮೆರಿಕ-ಭಾರತ ವ್ಯಾಪಾರ ಡೀಲ್‌ ಸಾಗಿ ಬಂದ ಉದ್ವಿಗ್ನತೆಯ ಹಾದಿ

ಅಮೆರಿಕ–ಭಾರತ ವ್ಯಾಪಾರ ಒಪ್ಪಂದ ಘರ್ಷಣೆ ಹೇಗಿತ್ತು?

ಭಾರತ–ಅಮೆರಿಕ ನಡುವಿನ ದೀರ್ಘಕಾಲದ ಸುಂಕ ವಿವಾದಕ್ಕೆ ತೆರೆ ಬಿದ್ದಿದ್ದು, ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಎರಡೂ ದೇಶಗಳು ಒಪ್ಪಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ರಫ್ತುಗಳ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಭಾರತೀಯ ರಫ್ತುದಾರರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಧಾನಿ ಮೋದಿ ಜತೆಗಿನ ಮಾತುಕತೆಯ ಬಳಿಕ ಸ್ನೇಹ ಮತ್ತು ಪರಸ್ಪರ ಗೌರವದ ಸಂಕೇತವಾಗಿ ಈ ಒಪ್ಪಂದ ಜಾರಿಗೆ ಬಂದಿದೆ.

ತಪ್ಪಿದ ಭಾರೀ ದುರಂತ;  ಮಹಾರಾಷ್ಟ್ರದ ಸಚಿವೆ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ, ಅಪಾಯದಿಂದ ಜಸ್ಟ್‌ ಮಿಸ್‌

ಮಹಾರಾಷ್ಟ್ರ ಸಚಿವೆ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ!

ಬಿಜೆಪಿ ನಾಯಕಿ ಮತ್ತು ಕ್ಯಾಬಿನೆಟ್ ಸಚಿವೆ ಪಂಕಜಾ ಮುಂಡೆ ಅವರು ಮಂಗಳವಾರ ಮಹಾರಾಷ್ಟ್ರದ ಲಾತೂರ್‌ಗೆ ಪ್ರಯಾಣಿಸುವ ಮುನ್ನ ಅವರ ಹೆಲಿಕಾಪ್ಟರ್ ತಾಂತ್ರಿಕ ದೋಷವನ್ನು ಎದುರಿಸಿತು. ಜಿಲ್ಲಾ ಪರಿಷತ್ ಚುನಾವಣೆ ಅಥವಾ ಜಿಲ್ಲಾ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ಪ್ರಚಾರ ಮಾಡಲು ಮುಂಡೆ ಅವರು ಸಂಭಾಜಿನಗರದಿಂದ ಲಾತೂರ್‌ಗೆ ಹೆಲಿಕಾಪ್ಟರ್‌ನಲ್ಲಿ ತೆರಳುವವರಿದ್ದರು.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ರಾಜ್ಯಸಭೆ ಕಲಾಪ ಬಹಿಷ್ಕರಿಸಿ ಹೊರ ನಡೆದ ವಿಪಕ್ಷ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ರಾಜ್ಯಸಭೆಯಿಂದ ವಿಪಕ್ಷಗಳ ಸಭಾತ್ಯಾಗ

India–US trade deal: ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ವಿವಾದದ ನಡುವೆ, ಈ ವಿಷಯದ ಕುರಿತು ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷಗಳು ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿವೆ. ಒಪ್ಪಂದವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಕಪಕ್ಷೀಯವಾಗಿ ಘೋಷಿಸಿದ್ದೇಕೆ ಎಂದು ವಿಪಕ್ಷಗಳು ಸರ್ಕಾರವನ್ನು ಪ್ರಶ್ನಿಸಿವೆ.

ರಾಜ್ಯಸಭೆಯಲ್ಲಿ ತಮ್ಮ ಎರಡು ಕೃತಕ ಕಾಲು ತೆಗೆದು ತೋರಿಸಿ  ಕಮ್ಯುನಿಷ್ಟರ ಕರಾಳ ಮುಖ ತೆರದಿಟ್ಟ ಬಿಜೆಪಿ ಸಂಸದ

ಕೃತಕ ಕಾಲು ತೋರಿಸಿ ಕಮ್ಯುನಿಷ್ಟರ ಕರಾಳ ಮುಖ ತೆರದಿಟ್ಟ ಬಿಜೆಪಿ ಸಂಸದ

ಸೋಮವಾರ ರಾಜ್ಯಸಭೆಯಲ್ಲಿ ಬಿಜೆಪಿ ನಾಮನಿರ್ದೇಶಿತ ಸದಸ್ಯ ಸಿ ಸದಾನಂದನ್ ಮಾಸ್ಟರ್ ತಮ್ಮ ಚೊಚ್ಚಲ ಭಾಷಣದ ಸಮಯದಲ್ಲಿ ತಮ್ಮ ಕೃತಕ ಅಂಗಗಳನ್ನು ಮೇಜಿನ ಮೇಲೆ ಪ್ರದರ್ಶಿಸಿದಾಗ ಕೋಲಾಹಲ ಉಂಟಾಯಿತು. ಮೂರು ದಶಕಗಳ ಹಿಂದೆ ತಮ್ಮ ಮೇಲೆ ಸಿಪಿಐ-ಎಂ ಕಾರ್ಯಕರ್ತರು ದಾಳಿ ನಡೆಸಿದ್ದರಿಂದ ತಾನು ಈ ಪರಿಸ್ಥಿತಿಯಲ್ಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಕದನ ವಿರಾಮದಂತೆ ಅಮೆರಿಕ- ಭಾರತ ವ್ಯಾಪಾರ ಒಪ್ಪಂದದ ಘೋಷಣೆ: ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ

ವ್ಯಾಪಾರ ಒಪ್ಪಂದದ ಪರಿಣಾಮದ ಬಗ್ಗೆ ತಿಳಿಸಿ: ಎನ್ ಡಿಎಗೆ ಕಾಂಗ್ರೆಸ್ ಸವಾಲು

ಯಾವುದೋ ದೊಡ್ಡ ಕದನ ವಿರಾಮದಂತೆ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಈ ಒಪ್ಪಂದದಿಂದ ರೈತರಿಗೆ ಭಾರಿ ಪ್ರಯೋಜನವಿದೆ ಎನ್ನಲಾಗುತ್ತಿದೆ. ಅದು ಏನು ಎಂಬುದನ್ನು ವಿವರವಾಗಿ ತಿಳಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ನೇಪಾಳದಂತೆ ಭಾರತದಲ್ಲೂ ಜೆನ್ ಝೀ ಪ್ರತಿಭಟನೆಗೆ ಸೋನಮ್ ವಾಂಗ್ಚುಕ್ ಕುಮ್ಮಕ್ಕು: ಕೇಂದ್ರ ಸರ್ಕಾರ ಆರೋಪ

ಜೆನ್ ಝೀ ಪ್ರತಿಭಟನೆಗೆ ಸೋನಮ್ ವಾಂಗ್ಚುಕ್ ಕುಮ್ಮಕ್ಕು: ಕೇಂದ್ರ

Sonam Wangchuk: ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ನೇಪಾಳದ ಮಾದರಿಯಂತೆ ಭಾರತದಲ್ಲಿಯೂ ಜೆನ್ ಝೀ ಹಿಂಸಾಚಾರಕ್ಕೆ ಪ್ರಚೋದಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಈ ಬಗ್ಗೆ ಕೇಂದ್ರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ಆಡಳಿತವು ಸುಪ್ರೀಂ ಕೋರ್ಟ್‌ಗೆ ತಿಳಿಸಿವೆ.

Loading...