ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೇಶ

20,000 ಭದ್ರತಾ ಸಿಬ್ಬಂದಿ, ಎನ್‌ಡಿಆರ್‌ಎಫ್ ಪಡೆ, ಸಿಸಿ ಕ್ಯಾಮರಾ: ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸರ್ಪಗಾವಲು

ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಭರದ ಸಿದ್ಧತೆ

Preparations for Independence Day Celebrations: ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ, ದೆಹಲಿಯು ಕೆಂಪು ಕೋಟೆಯ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭದ್ರತಾ ವ್ಯವಸ್ಥೆಯ ಭಾಗವಾಗಿ ದೆಹಲಿ ಪೊಲೀಸ್‌ ಸಿಬ್ಬಂದಿ, ಅರೆಸೇನಾ ಪಡೆಗಳು, ಕಮಾಂಡೋಗಳು ಹಾಗೂ ಎನ್‌ಎಸ್‌ಜಿ ತಂಡಗಳನ್ನು ನಿಯೋಜಿಸಲಾಗಿದೆ.

ಕಾಮನ್‌ವೆಲ್ತ್‌ ಪದಕ ವಿಜೇತರನ್ನು ಭೇಟಿಯಾದ ಮೋದಿ

ಕಾಮನ್‌ವೆಲ್ತ್‌ ಪದಕ ವಿಜೇತರನ್ನು ಭೇಟಿಯಾದ ಮೋದಿ

PM Modi meets CWG medallists: ಭಾರತದ ಬಾಕ್ಸಿಂಗ್ ಚಿನ್ನದ ಪದಕ ವಿಜೇತರಲ್ಲಿ ಒಬ್ಬರಾದ ಸಾಕ್ಷಿ ಚೌಧರಿ, ಪ್ರಧಾನಿಯವರ ಭೇಟಿಯ ಮಹತ್ವದ ಬಗ್ಗೆ ಮಾತನಾಡುತ್ತಾ, ಈ ಸಂವಾದವು ಕ್ರೀಡಾಪಟುಗಳಿಗೆ ಹೆಮ್ಮೆ ಮತ್ತು ಸಂತೋಷ ತಂದಿತು ಎಂದು ಹೇಳಿದರು.

ಬಾರಾಮತಿಯಲ್ಲಿ ತರಬೇತಿ ವಿಮಾನ ಅಪಘಾತ: ಅಜಿತ್ ಪವಾರ್ ದುರ್ಮರಣಕ್ಕೀಡಾದ ಸ್ಥಳದಲ್ಲೇ ಮತ್ತೊಂದು ದುರಂತ

ಬಾರಾಮತಿಯಲ್ಲಿ ತರಬೇತಿ ವಿಮಾನ ಅಪಘಾತ

Training Aircraft Accident in Baramati: ಮಹಾರಾಷ್ಟ್ರದ ಬಾರಾಮತಿಯಲ್ಲಿ ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ. ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ತರಬೇತಿ ವಿಮಾನವು ಭಾನುವಾರ (ಆಗಸ್ಟ್‌ 9) ಮಧ್ಯಾಹ್ನ ಮಹಾರಾಷ್ಟ್ರದ ಪುಣೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಯಿತು. ಮಧ್ಯಾಹ್ನ 12:35ರ ಸುಮಾರಿಗೆ ರನ್‌ವೇಯಿಂದ ಸ್ವಲ್ಪ ದೂರದಲ್ಲಿ ಈ ಅಪಘಾತ ಸಂಭವಿಸಿದೆ.

ವಾಟ್ಸ್‌ಆ್ಯಪ್‌ ಮೂಲಕ ರವಾನೆ; 2024ರ ಜೆಎಸ್‌ಎಸ್‌ಸಿ  ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಹೇಗೆ? ಸಿಐಡಿ ವರದಿಯಲ್ಲೇನಿದೆ?

ಜೆಎಸ್‌ಎಸ್‌ಸಿ 2024ರ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಐಡಿ ವರದಿಯಲ್ಲೇನಿದೆ?

ಜಾರ್ಖಂಡ್ ಸಿಬ್ಬಂದಿ ಆಯ್ಕೆ ಸಮಿತಿ ನಡೆಸುವ ಪದವಿ ಹಂತದ (JSSC-CGL) ಪರೀಕ್ಷೆ 2024ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರವು ಅಕ್ರಮಗಳನ್ನು ತಳ್ಳಿ ಹಾಕಿದ್ದರೂ ವಾಟ್ಸ್ ಆಪ್ ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಇನ್ನು ಹಲವು ಸ್ಪೋಟಕ ಮಾಹಿತಿಗಳನ್ನು ಸಿಐಡಿ ವರದಿ ಬಹಿರಂಗಪಡಿಸಿದೆ.

ವಿದ್ಯಾರ್ಥಿಗಳ ಜತೆ ಮಾತುಕತೆ; 3 ಪರೀಕ್ಷೆ ರದ್ದುಗೊಳಿಸಲು ಮುಂದಾದ ಜಾರ್ಖಂಡ್ ಸರ್ಕಾರ

ವಿದ್ಯಾರ್ಥಿಗಳೊಂದಿಗಿನ ಮಾತುಕತೆ ನಂತರ ಪರೀಕ್ಷೆ ರದ್ದು?

Jharkhand exam: ಜಾರ್ಖಂಡ್‌ನಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ಮುಂದುವರಿದಿದ್ದು, ಒಟ್ಟು ಆರು ಪ್ರತಿಭಟನಾಕಾರರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಭಾನುವಾರ ನಡೆದ ಮಾತುಕತೆ ಬಳಿಕ ಮೂರು ಪರೀಕ್ಷೆಗಳನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

“ನಾವು ಸಾಯುತ್ತಿದ್ದೆವು”: ಕಾರಿನ ಮೇಲೆ ಗೂಂಡಾಗಳು ದಾಳಿ ಮಾಡಿದ್ದಾರೆಂದು ಮಮತಾ ಬ್ಯಾನರ್ಜಿ ಆರೋಪ

ಕಾರಿನ ಮೇಲೆ ಗೂಂಡಾಗಳು ದಾಳಿ ಮಾಡಿದ್ದಾರೆ: ಮಮತಾ ಬ್ಯಾನರ್ಜಿ

Mamata Banerjee Alleges: ತಮ್ಮ ಕಾರಿನ ಮೇಲೆ ಗೂಂಡಾಗಳು ಕಲ್ಲು ಹಾಗೂ ಮಣ್ಣಿನಿಂದ ದಾಳಿ ಮಾಡಿದ್ದಾರೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಈ ವಿಚಾರದ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

SBI Recruitment 2026: ಎಸ್‌ಬಿಐಯಲ್ಲಿದೆ ಬರೋಬ್ಬರಿ 1,576 ಹುದ್ದೆ; ಪದವಿ ವಿದ್ಯಾರ್ಹತೆ ಹೊಂದಿದವರು ಇಂದೇ ಅಪ್ಲೈ ಮಾಡಿ

ಎಸ್‌ಬಿಐಯಲ್ಲಿದೆ ಬರೋಬ್ಬರಿ 1,576 ಹುದ್ದೆ

Bank Jobs: ಸಾರ್ವಜನಿಕ ವಲಯದ ಭಾರತದ ಅತಿದೊಡ್ಡ ಬ್ಯಾಂಕ್‌ ಎಸ್‌ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 1,576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜ್ಯೂನಿಯರ್‌ ಅಸೋಸಿಯೇಟ್‌, ಡೆಪ್ಯುಟಿ ವೈಸ್‌ ಪ್ರೆಸಿಡೆಂಟ್‌, ಡೆಪ್ಯುಟಿ ಮ್ಯಾನೇಜರ್‌ ಸೇರಿ ಹಲವು ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 27.

ಜಮ್ಮು-ಕಾಶ್ಮೀರದಲ್ಲಿ ನಿಷೇಧಿತ ಜಮಾತ್-ಎ-ಇಸ್ಲಾಮಿ ಸೇರಿದ 26 ಸ್ಥಳಗಳ ಮೇಲೆ ದಾಳಿ; ಶಂಕಿತ ಭಯೋತ್ಪಾದಕ ಜಾಲದ ವಿರುದ್ಧ ಕಾರ್ಯಾಚರಣೆ

ನಿಷೇಧಿತ ಜಮಾತ್-ಎ-ಇಸ್ಲಾಮಿಗೆ ಸೇರಿದ 26 ಸ್ಥಳಗಳ ಮೇಲೆ ದಾಳಿ

Jammu and Kashmir: ತನಿಖಾ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಜಮ್ಮು ಮತ್ತು ಕಾಶ್ಮೀರದ 26 ಸ್ಥಳಗಳ ಮೇಲೆ ದಾಳಿ ನಡೆಸಿ, ಶಂಕಿತ ಭಯೋತ್ಪಾದಕ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿವೆ. ನಿಷೇಧಿತ ಸಂಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಭೂಗತ ಜಾಲದ ಚಟುವಟಿಕೆಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಯಿತು.

ಮದ್ಯ ಸೇವಿಸಿದ್ರಾ ಏರ್‌ ಇಂಡಿಯಾ ಪೈಲಟ್‌? ದಿಢೀರ್​ 300 ಅಡಿ ಆಳಕ್ಕೆ ಕುಸಿದ ಫುಕೆಟ್-ದೆಹಲಿ ವಿಮಾನ

ಮದ್ಯ ಸೇವಿಸಿದ್ರಾ ಏರ್‌ ಇಂಡಿಯಾ ಪೈಲಟ್‌?

ಆಗಸ್ಟ್ 4ರಂದು ಫುಕೆಟ್‌ನಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI2379 ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತ್ತು. ಗಾಳಿಯ ಮಧ್ಯದಲ್ಲಿ ವಿಮಾನ ಇದ್ದಕ್ಕಿದ್ದಂತೆ ಸುಮಾರು 300 ಅಡಿ ಕೆಳಗೆ ದಿಢೀರ್​​ ಇಳಿದಿತ್ತು. ಈ ಘಟನೆಯಿಂದ ಪ್ರಯಾಣಿಕರು ಮತ್ತು ಸಿಬ್ಬಂದಿ ಆತಂಕಗೊಂಡಿದ್ದು, ಅಲ್ಲದೇ ಅವರು ಆರೋಗ್ಯ ಸಮಸ್ಯೆಗೂ ತುತ್ತಾಗಿದ್ದರು.

ಕಣ್ಮುಚ್ಚಿ ಕುಳಿತ ಕೇರಳಂ ಸರ್ಕಾರ; ನೇಮಕಾತಿ ವಿಳಂಬ ಖಂಡಿಸಿ ಹುಲ್ಲು ತಿಂದು ಪ್ರತಿಭಟನೆ ನಡೆಸಿದ ರ್‍ಯಾಂಕ್ ವಿಜೇತ ಉದ್ಯೋಗಾರ್ಥಿಗಳು: ಸಿಜೆಪಿ ನಾಯಕರು ಎಲ್ಲಿ ಹೋದ್ರು ಎಂದು ಪ್ರಶ್ನಿಸಿದ ನೆಟ್ಟಿಗರು

ನೇಮಕಾತಿ ವಿಳಂಬ ಖಂಡಿಸಿ ಹುಲ್ಲು ತಿಂದು ಪ್ರತಿಭಟನೆ

Kerala Public Service Commission: ನೇಮಕಾತಿ ಆದೇಶ ನೀಡಲು ವಿಳಂಬ ಮಾಡುತ್ತಿರುವ ಕೇರಳಂ ಸರ್ಕಾರದ ಧೋರಣೆಯನ್ನು ಖಂಡಿಸಿ, ಎಲ್‌ಪಿ ಶಾಲಾ ಶಿಕ್ಷಕ ಪರೀಕ್ಷೆಯ ರ್‍ಯಾಂಕ್ ಅಭ್ಯರ್ಥಿಗಳು ತಿರುವನಂತಪುರಂನಲ್ಲಿ ಶನಿವಾರ ಹುಲ್ಲು ತಿನ್ನುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಇವರ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದ್ದು, ಕೂಡಲೇ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇ20 ಪೆಟ್ರೋಲ್ ಕುರಿತು ಕೇಂದ್ರದಿಂದ ಅಭಯ: 'ಯಾವುದೇ ಆತಂಕವಿಲ್ಲದೆ ಬಳಸಿ ಎಂದು ಸೂಚನೆ

ಇ20 ಪೆಟ್ರೋಲ್ ಗುಣಮಟ್ಟ ನಿಗದಿತ ಮಿತಿಯಲ್ಲಿದೆ ಎಂದ ಕೇಂದ್ರ ಸರ್ಕಾರ

ಇ20 ಪೆಟ್ರೋಲ್‌ನ ಗುಣಮಟ್ಟದ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಕೇಂದ್ರ ತೈಲ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಗ್ರಾಹಕರು ಯಾವುದೇ ಆತಂಕವಿಲ್ಲದೆ ಇ20 ಪೆಟ್ರೋಲ್ ಬಳಸಬಹುದು ಎಂದು ತಿಳಿಸಿದೆ. ದೇಶಾದ್ಯಂತ ನಡೆಸಿದ ಪರೀಕ್ಷೆಗಳಲ್ಲಿ ಇಂಧನದ ಗುಣಮಟ್ಟ ನಿಗದಿತ ಮಾನದಂಡಗಳೊಳಗೇ ಇರುವುದು ದೃಢಪಟ್ಟಿದ್ದು, 100ಕ್ಕೂ ಹೆಚ್ಚು ಮಾದರಿಗಳಲ್ಲಿ ಕ್ಲೋರೈಡ್ ಪ್ರಮಾಣ 1 ಪಿಪಿಎಂಕ್ಕಿಂತ ಕಡಿಮೆ ಕಂಡುಬಂದಿದೆ ಎಂದು ಸಚಿವಾಲಯ ತಿಳಿಸಿದೆ.

14ನೇ ಜೆಪಿಎಸ್‌ಸಿ ಪರೀಕ್ಷೆ ರದ್ದು? ನೀಟ್ ಬಳಿಕ ಮತ್ತೊಂದು ವಿವಾದ ಎಬ್ಬಿಸಿದ ಜಾರ್ಖಂಡ್ ನಾಗರಿಕ ಸೇವಾ ಪರೀಕ್ಷೆ

ನೀಟ್ ಬಳಿಕ ವಿವಾದ ಎಬ್ಬಿಸಿದ ಮತ್ತೊಂದು ಪರೀಕ್ಷೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದಿಂದ ದೇಶಾದ್ಯಂತ ವಿದ್ಯಾರ್ಥಿಗಳ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕೇಂದ್ರ ಶಿಕ್ಷಣ ಸಚಿವರ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಈಗ ಜಾರ್ಖಂಡ್ ನಲ್ಲಿ ಮತ್ತೊಂದು ಪರೀಕ್ಷೆ ವಿವಾದ ಎದ್ದಿದೆ. 14ನೇ ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಂಡಿದ್ದು, ಪರೀಕ್ಷೆ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಪ್ರಿಯಕರನನ್ನು ಭೇಟಿಯಾಗಲು ಜೈಲಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಪತ್ತೆಯಾಯ್ತು ಜೀವಂತ ಗುಂಡುಗಳು!

ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಪತ್ತೆಯಾಯ್ತು ಜೀವಂತ ಗುಂಡುಗಳು!

Crime News: ಪ್ರಿಯಕರನನ್ನು ಭೇಟಿಯಾಗಲು ಜೈಲಿಗೆ ಹೋಗಿದ್ದ ಅಪ್ರಾಪ್ತ ಬಾಲಕಿಯ ಬಳಿ 10 ಜೀವಂತ ಬುಲೆಟ್ ಕಾರ್ಟ್ರಿಡ್ಜ್‌ಗಳು ಪತ್ತೆಯಾಗಿವೆ. ಬಳಿಕ ಜೈಲು ಹೊರಠಾಣೆಯ ಉಸ್ತುವಾರಿಯನ್ನು ಸ್ಥಳಕ್ಕೆ ಕರೆಸಲಾಯಿತು. ವಶಪಡಿಸಿಕೊಂಡ ವಸ್ತುಗಳೊಂದಿಗೆ ಆ ಇಬ್ಬರು ವ್ಯಕ್ತಿಗಳನ್ನು ಅವರ ವಶಕ್ಕೆ ಒಪ್ಪಿಸಲಾಯಿತು.

ಇಸ್ಲಾಮಿಕ್‌ ನ್ಯಾಟೋ ಸ್ಥಾಪನೆಗೆ ಪಾಕ್‌, ಟರ್ಕಿ, ಸೌದಿ ಅಡಿಪಾಯ ; ಭಾರತದ ಮೇಲಾಗುವ ಪರಿಣಾಮವೇನು?

ಇಸ್ಲಾಮಿಕ್‌ ನ್ಯಾಟೋ ಸ್ಥಾಪನೆಗೆ ಮುಂದಾದ ಪಾಕ್‌, ಟರ್ಕಿ, ಸೌದಿ

ತೈಲ ಹಾಗೂ ಖನಿಜ ಭರಿತ ಸೌದಿ ಅರೇಬಿಯಾ, ಅಣ್ವಸ್ತ್ರ ಶಕ್ತಿ ಹೊಂದಿರುವ ಪಾಕಿಸ್ತಾನ ಹಾಗೂ ರಕ್ಷಣಾ ಉದ್ಯಮದಲ್ಲಿ ಬೆಳೆಯುತ್ತಿರುವ ಟರ್ಕಿ ನಡುವೆ ರಕ್ಷಣಾ ಒಪ್ಪಂದ ಏರ್ಪಟ್ಟಿದೆ. ಇಸ್ಲಾಮಿಕ್‌ ನ್ಯಾಟೊ ಕುರಿತು ಜೋರಾಗಿ ಚರ್ಚೆ ನಡೆಯುತ್ತಿರುವಾಗಲೇ ಈ ಒಪ್ಪಂದ ನಡೆದಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸೌದಿ ಯುವರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌, ಟರ್ಕಿ ಅಧ್ಯಕ್ಷ ರೆಸೆಪ್‌ ತ್ಯಯಿಪ್‌ ಎರ್ಡೋಗನ್‌ ಮತ್ತು ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ನಡುವಿನ ಸಭೆಯಲ್ಲಿಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ರಾಜೀನಾಮೆ ಬಳಿಕ ಮೊದಲ ಬಾರಿ  ಜೆನ್ ಜಿಗಳ ಕುರಿತು ಮಾತನಾಡಿದ ಧರ್ಮೇಂದ್ರ ಪ್ರಧಾನ್; ಹೇಳಿದ್ದೇನು?

ಹುದ್ದೆ ನನಗೆ ಮುಖ್ಯವಾಗಿರಲಿಲ್ಲ: ಧರ್ಮೇಂದ್ರ ಪ್ರಧಾನ್

ನನಗೆ ಹುದ್ದೆ ಮುಖ್ಯವಾಗಿರಲಿಲ್ಲ ಎಂದು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಮನದ ಮಾತನ್ನು ಸಚಿವ ಧರ್ಮೇಂದ್ರ ಪ್ರಧಾನ್ ಎಲ್ಲರ ಮುಂದಿಟ್ಟಿದ್ದಾರೆ. ಸಂಬಲ್ಪುರದ ಜಿಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, ನೀಟ್ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಜೆನ್ ಜಿಗಳನ್ನು ದಾರಿತಪ್ಪಿಸುವ ಪ್ರಯತ್ನವನ್ನು ಕೆಲವರು ನಡೆಸಿದ್ದಾರೆ ಎಂದು ಆರೋಪಿಸಿದರು.

'ʼನಿಜವಾದ ಮುಸ್ಲಿಂ ಗೋಹತ್ಯೆ ಮಾಡುವುದಿಲ್ಲʼ': ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿಯ ಹೇಳಿಕೆಯಿಂದ ಭುಗಿಲೆದ್ದ ವಿವಾದ

ಗೋಹತ್ಯೆ ತಡೆ ಸಭೆಯಲ್ಲಿ ವಿವಾದಿತ ಹೇಳಿಕೆ; ರಾಮ್‌ಪುರ ಎಸ್‌ಪಿ ಸ್ಪಷ್ಟನೆ

Viral Video: ಉತ್ತರ ಪ್ರದೇಶದ ರಾಮ್‌ಪುರ ಎಸ್‌ಪಿ ಅನಿಲ್ ಕುಮಾರ್ ಸಿಂಗ್ ಸಿಸೋಡಿಯಾ ʼ‘ನಿಜವಾದ ಮುಸ್ಲಿಮರು ಗೋಹತ್ಯೆ ಮಾಡುವುದಿಲ್ಲʼ’ ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಅವರು, ʼʼಶ್ರಾವಣ ಮಾಸದಲ್ಲಿ ಧಾರ್ಮಿಕ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಮಾತನಾಡಿದ್ದು, ಯಾವುದೇ ಧರ್ಮ ಅಥವಾ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವುದು ತಮ್ಮ ಉದ್ದೇಶವಾಗಿರಲಿಲ್ಲʼʼ ಎಂದು ಹೇಳಿದ್ದಾರೆ.

ʼʼನಿಮ್ಮಲ್ಲಿ ನಂಬಿಕೆ ಇರಿಸಿದ್ದೇವೆ, ನಿಮ್ಮ ಕೊಡುಗೆ ದೇಶಕ್ಕೆ ಅಗತ್ಯʼʼ: ಜೆನ್‌ ಝೀ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ

ಜೆನ್‌ ಝೀ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ

Narendra Modi: ದೆಹಲಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (IIT Delhi) ಕ್ಯಾಂಪಸ್‌ನಲ್ಲಿ ಜೆನ್‌ ಝೀ ಸಮುದಾಯದ ಜತೆ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ, ವಿಕಸಿತ ಭಾರತದ ಗುರಿ ಸಾಧನೆಗೆ ಯುವ ಜನತೆ ಕೈ ಜೋಡಿಸುವಂತೆ ಮನವಿ ಮಾಡಿದರು.

ಯುಪಿಐ ಪಾವತಿಗೆ ಗ್ರಾಹಕರು ಯಾವುದೇ ಶುಲ್ಕ ಪಾವತಿಸಬೇಕಿಲ್ಲ: ಕೇಂದ್ರದಿಂದ ಅಭಯ

ಯುಪಿಐ ಪಾವತಿ ಶುಲ್ಕದ ಬಗ್ಗೆ ಕೇಂದ್ರದಿಂದ ಮಹತ್ವದ ಸ್ಪಷ್ಟನೆ

UPI Will Stay Free: ಯುಪಿಐ ಮೂಲಕ ಹಣ ಪಾವತಿಸುವ ಗ್ರಾಹಕರು ಮುಂದೆಯೂ ಯಾವುದೇ ವಹಿವಾಟು ಶುಲ್ಕ ಪಾವತಿಸಬೇಕಾಗಿಲ್ಲ ಎಂದು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಸಣ್ಣ ವ್ಯಾಪಾರಿಗಳಿಗೂ ಯುಪಿಐ ಪಾವತಿ ಸ್ವೀಕರಿಸಲು MDR ಶುಲ್ಕ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಡೇಟಿಂಗ್ ಅಪ್ಲಿಕೇಶನ್‌, ಖಾಸಗಿ ಕ್ಷಣದ ಫೋಟೊ, ವಿಡಿಯೊ: ಬರೋಬ್ಬರಿ 6 ಕೋಟಿ ರುಪಾಯಿ ದೋಚಿದ ಖತರ್ನಾಕ್‌ ಲೇಡಿಯ ಕಳ್ಳಾಟ ಬಯಲಾಗಿದ್ದು ಹೇಗೆ?

ಮಹಿಳೆ ಬರೋಬ್ಬರಿ 6 ಕೋಟಿ ರುಪಾಯಿ ವಂಚಿಸಿದ್ದು ಹೇಗೆ?

Dating app fraud: ಉತ್ತರ ಪ್ರದೇಶದ ಮಹಿಳೆಯೊಬ್ಬಳು ಟಿಂಡರ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸಿಕೊಂಡು, ಬಳಿಕ ಅವರ ಖಾಸಗಿ ಫೋಟೊ ಮತ್ತು ವಿಡಿಯೊ ಬಳಸಿ ಬ್ಲ್ಯಾಕ್‌ಮೇಲ್ ಮಾಡಿ, ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆ ಇಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ.

ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಅಮರನಾಥ ಯಾತ್ರೆ ಸ್ಥಗಿತ

ಜಮ್ಮುವಿನಲ್ಲಿ ಭಾರಿ ಮಳೆ ಸಾಧ್ಯತೆ: ಅಮರನಾಥ ಯಾತ್ರೆ ಸ್ಥಗಿತ

Amarnath Yatra Suspended: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ ಕಣಿವೆಯ ಕಡೆಗೆ ಯಾವುದೇ ಹೊಸ ಯಾತ್ರಿಕರಿಗೆ ತೆರಳಲು ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮುವಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಶನಿವಾರ (ಆಗಸ್ಟ್‌ 8) ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಆಸ್ಪತ್ರೆಯಲ್ಲಿ ಕೈಕೊಟ್ಟ ಕರೆಂಟ್: ಮೊಬೈಲ್ ಟಾರ್ಚ್ ಬೆಳಕಲ್ಲೇ ರೋಗಿಗಳಿಗೆ ಚಿಕಿತ್ಸೆ; ಕೇಂದ್ರ ಆರೋಗ್ಯ ಸಚಿವರ ತವರಲ್ಲೇ ದುಸ್ಥಿತಿ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಲ್ಲೇ ರೋಗಿಗಳಿಗೆ ಚಿಕಿತ್ಸೆ

Power Outage at Hospital: ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡ ಪರಿಣಾಮ ರೋಗಿಗಳು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಚಿಕಿತ್ಸೆ ಪಡೆಯುವಂತಾದ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯ ಸದರ್ ಆಸ್ಪತ್ರೆಯಲ್ಲಿ ನಡೆದಿದೆ. ಬ್ಯಾಕಪ್ ವಿದ್ಯುತ್ ವ್ಯವಸ್ಥೆಗಳನ್ನು ಹೊಂದಿದ್ದರೂ ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ.

ನಿರ್ಲಕ್ಷ್ಯ ತಂದ ದುರಂತ: ಹದಗೆಟ್ಟ ರಸ್ತೆಯಲ್ಲಿ 3 ಗಂಟೆ ಕೆಸರಿನಲ್ಲಿ ಸಿಲುಕಿಕೊಂಡ ಆಂಬ್ಯುಲೆನ್ಸ್; ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಬಾಲಕಿ ಸಾವು

ಮಣ್ಣಿನಲ್ಲಿ ಸಿಲುಕಿಕೊಂಡ ಆಂಬ್ಯುಲೆನ್ಸ್: ಬಾಲಕಿ ಸಾವು

Ambulance Stuck in Mud: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬ್ಯುಲೆನ್ಸ್ ಸುಮಾರು ಮೂರು ಗಂಟೆಗಳ ಕಾಲ ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಪರಿಣಾಮ 17 ವರ್ಷದ ಹದಿಹರೆಯದ ಬಾಲಕಿ ಮೃತಪಟ್ಟಿದ್ದಾಳೆ. ಚಕ್ ಮೆಥ್ಯಾನಿಯಲ್ಲಿ ಮಣ್ಣು ಕುಸಿತದಿಂದಾಗಿ ವಾಹನ ಸಿಕ್ಕಿಹಾಕಿಕೊಂಡಿತು ಎಂದು ಮೂಲಗಳು ತಿಳಿಸಿವೆ.

Honey Trap: ಮಹಿಳೆಯ ಆಮಿಷಕ್ಕೆ ಒಳಗಾಗಿ ಪಾಕಿಸ್ತಾನಕ್ಕೆ ರಕ್ಷಣಾ ರಹಸ್ಯ ಸೋರಿಕೆ ಮಾಡಿದ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅರೆಸ್ಟ್‌

ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಹನಿ ಟ್ರ್ಯಾಪ್‌ಗೆ ಬಲಿ

ಪಾಕಿಸ್ತಾನಕ್ಕೆ ಭಾರತದ ವಾಯುಪಡೆಯ ರಕ್ಷಣಾ ರಹಸ್ಯಗಳನ್ನು ನೀಡಿರುವ ಆರೋಪದಲ್ಲಿ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅನ್ನು ಬಂಧಿಸಲಾಗಿದೆ. ಹನಿ ಟ್ರ್ಯಾಪ್‌ಗೆ ಬಲಿಯಾದ ಸೇವೆಯಲ್ಲಿದ್ದ ಅಧಿಕಾರಿ ಆರೋಪಿಯನ್ನು ಕಳೆದ ಮೇ 30ರಂದು ಬಂಧಿಸಲಾಗಿದ್ದು, ಇದೀಗ ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾ ತೈಲ ಖರೀದಿಸುವ ಭಾರತದ ವಿರುದ್ಧ ಅಮೆರಿಕ ಕೆಂಡ; ಶೇಕಡಾ 100 ಸುಂಕ ವಿಧಿಸುವ ಸೆನೆಟರ್ ಲಿಂಡ್ಸೆ ಗ್ರಹಾಂ ಮಸೂದೆಗೆ ಅಂಗೀಕಾರ

ರಷ್ಯಾ ವಿರುದ್ಧ ನಿರ್ಬಂಧ ಮಸೂದೆ ಅಂಗೀಕಾರ

ರಷ್ಯಾ ವಿರುದ್ಧ ನಿರ್ಬಂಧ ವಿಧಿಸುವ ಸೆನೆಟರ್ ಲಿಂಡ್ಸೆ ಗ್ರಹಾಂ ಅವರ ಗೌರವಾರ್ಥ ಮಸೂದೆಯನ್ನು ಅಮೆರಿಕದ ಸೆನೆಟ್ ಅನುಮೋದಿಸಿದೆ. ಈ ಮಸೂದೆಯು ರಷ್ಯಾದ ತೈಲ ಅಥವಾ ನೈಸರ್ಗಿಕ ಅನಿಲದ ವಿಶ್ವದ ಐದು ಅಗ್ರ ಖರೀದಿದಾರರ ಮೇಲೆ ಪರಿಣಾಮ ಬೀರಲಿದೆ. ಉಕ್ರೇನ್ ಯುದ್ಧ ಪ್ರಾರಂಭಿಸಿದ್ದಕ್ಕಾಗಿ ರಷ್ಯಾ ವಿರುದ್ಧ ಹೊಸ ನಿರ್ಬಂಧಗಳನ್ನು ಗ್ರಹಾಂ ಬಲವಾಗಿ ಪ್ರತಿಪಾದಿಸಿದ್ದರಿಂದ ಅವರ ಹೆಸರನ್ನು ಈ ಮಸೂದೆಗೆ ಇಡಲಾಗಿದೆ.

Loading...