ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೇಶ

ಇಂದಿರಾ ಗಾಂಧಿ ಕಾಲದ ಕಾಂಗ್ರೆಸ್ ದಾಖಲೆ ಸರಿಗಟ್ಟಿದ ಬಿಜೆಪಿ: ಈಗ ಕಛ್‌ನಿಂದ ಕಿಬಿತ್ತುವರೆಗೆ ಕೇಸರಿ ಅಲೆ

21 ರಾಜ್ಯಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಬಿಜೆಪಿ

ಅಸ್ಸಾಂನಲ್ಲಿ ಸತತ ಮೂರನೇ ಬಾರಿ ಅಧಿಕಾರವನ್ನು ಕಾಪಾಡಿಕೊಂಡು, ಪಶ್ಚಿಮ ಬಂಗಾಳದಲ್ಲಿ ಮಹತ್ವದ ಗೆಲುವು ಸಾಧಿಸುವ ಮೂಲಕ ಬಿಜೆಪಿ ತನ್ನ ರಾಜಕೀಯ ಪ್ರಭಾವವನ್ನು ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿದೆ. 2014ರಲ್ಲಿ ಕೇವಲ ಏಳು ರಾಜ್ಯಗಳಲ್ಲಿ ಮಾತ್ರ ಅಧಿಕಾರ ಹೊಂದಿದ್ದ ಪಕ್ಷ, ಸಂಘಟನಾ ಶಕ್ತಿ, ಮೈತ್ರಿ ರಾಜಕೀಯ ಮತ್ತು ಬೂತ್ ಮಟ್ಟದ ಕಾರ್ಯತಂತ್ರಗಳ ಮೂಲಕ ದೊಡ್ಡ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ. ಈ ಸಾಧನೆ ಇಂದಿರಾ ಗಾಂಧಿಯ ಕಾಲದಲ್ಲಿ ಕಾಂಗ್ರೆಸ್ ಹೊಂದಿದ್ದ ಐತಿಹಾಸಿಕ ಪ್ರಾಬಲ್ಯಕ್ಕೆ ಸಮಾನವಾಗಿದೆ. 2024ರ ಲೋಕಸಭಾ ಚುನಾವಣೆಯ ಹಿನ್ನಡೆಯ ನಂತರವೂ ಬಿಜೆಪಿ ಪುನರುತ್ಥಾನ ಸಾಧಿಸಿದ್ದು, ರಾಷ್ಟ್ರ ರಾಜಕೀಯದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೆ ದೃಢಪಡಿಸಿದೆ.

Gold Price Today On 5th May 2026: ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಭಾರಿ ಇಳಿಕೆ

ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ

Gold Silver Rate: ಇಂದು ಚಿನ್ನದ ದರ ಇಳಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 40 ರುಪಾಯಿ ಕಡಿಮೆಯಾಗಿದ್ದು, ಆ ಮೂಲಕ 13,675 ರುಪಾಯಿಗೆ ಇಳಿದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 44 ರುಪಾಯಿ ಅಗ್ಗವಾಗಿದ್ದು, 14,918 ರುಪಾಯಿಗೆ ಬಂದು ತಲುಪಿದೆ.

ತಮಿಳುನಾಡು ಚುನಾವಣೆ ಫಲಿತಾಂಶ: ಮೂರು ಪಕ್ಷಗಳಿಂದ ಸ್ಪರ್ಧಿಸಿ ಗೆದ್ದ ಒಂದೇ ಕುಟುಂಬದ ಸದಸ್ಯರು

ಮೂರು ಪಕ್ಷಗಳಿಂದ ಸ್ಪರ್ಧಿಸಿ ಗೆದ್ದ ಒಂದೇ ಕುಟುಂಬದ ಸದಸ್ಯರು

Tamil Nadu Election Results: 2026ರ ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಭಾರತದ 'ಲಾಟರಿ ಕಿಂಗ್' ಎಂದೇ ಹೆಸರು ಪಡೆದಿರುವ ಸ್ಯಾಂಟಿಯಾಗೊ ಮಾರ್ಟಿನ್ ಅವರ ಕುಟುಂಬದ ಮೂವರು ಸದಸ್ಯರು ವಿವಿಧ ಪಕ್ಷಗಳಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ. ಒಂದೇ ಕುಟುಂಬದ ಸದಸ್ಯರು ಮೂರು ಬೇರೆ-ಬೇರೆ ರಾಜಕೀಯ ಸಿದ್ಧಾಂತವುಳ್ಳ ಪಕ್ಷಗಳಿಂದ ಸ್ಪರ್ಧಿಸಿರುವುದು ವಿಶೇಷ.

ಟಿವಿಕೆ ಅಭ್ಯರ್ಥಿ ವಿರುದ್ಧ ಡಿಎಂಕೆ ಸಚಿವನನ್ನು ಸೋಲಿಸಿತ್ತು ಕೇವಲ ಒಂದು ಮತ

ತಮಿಳುನಾಡಿನ ಒಂದು ಮತದ ಕಥೆ

ಕೇವಲ ಒಂದೇ ಒಂದು ಮತ ಮಸ್ಕತ್‌ ವ್ಯಕ್ತಿ ಹಾಕದೇ ಇರುತ್ತಿದ್ದರೆ ಅಲ್ಲಿನ ರಾಜಕೀಯ ಚಿತ್ರಣವೇ ಬೇರೆ ಆಗಿರುತ್ತಿತ್ತು. ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಡಿಎಂಕೆ ಸಚಿವನ ಸೋಲಿಗೆ ಕಾರಣವಾಗಿದ್ದು ಕೇವಲ ಒಂದು ಮತ ಎಂದರೆ ಅಚ್ಚರಿಯಾಗಲೇಬೇಕು. ಇದರಿಂದಾಗಿಯೇ ಟಿವಿಕೆ ಅಭ್ಯರ್ಥಿ ಗೆದ್ದರು. ಇಂದು ಒಂದು ಮತದ ಮಹತ್ವದ ಕಥೆಯನ್ನು ಈಗ ಹೇಳುತ್ತಿದೆ.

Kalita Majhi: ಮನೆಗೆಲಸ ಮಾಡುತ್ತಿದ್ಧ ಮಹಿಳೆ ಈಗ ಬಂಗಾಳದ ಶಾಸಕಿ!; ಯಾರು ಈ ಕಲಿತಾ ಮಾಝಿ?

ಮನೆಗೆಲಸ ಮಾಡುತ್ತಿದ್ಧ ಮಹಿಳೆ ಬಂಗಾಳದ ಶಾಸಕಿ!

Who is Kalita Majhi?: 294 ಸದಸ್ಯ ಬಲದ ವಿಧಾನಸಭೆಯಲ್ಲಿ 206 ಸ್ಥಾನಗಳನ್ನು ಗಳಿಸಿದ ಬಿಜೆಪಿಯ ಭರ್ಜರಿ ಗೆಲುವಿನ ಮಧ್ಯೆ ಮಾಝಿಯವರ ಗೆಲುವು ಕೂಡ ಗಮನಸೆಳೆದಿದೆ. ಬಿಜೆಪಿಯ ಈ ಗೆಲುವು ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್‌ನ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು.

ದಳಪತಿ ಗೆಲುವಿಗೆ ರಾಹುಲ್ ಗಾಂಧಿ ಅಭಿನಂದನೆ; ಟಿವಿಕೆ ಜೊತೆ ಸೇರಲು ಡಿಎಂಕೆಯೊಂದಿಗಿನ ಮೈತ್ರಿ ಮುರಿಯುತ್ತಾ ಕಾಂಗ್ರೆಸ್?

ಟಿವಿಕೆ ಜೊತೆ ಕಾಂಗ್ರೆಸ್ ಮೈತ್ರಿ? ರಾಹುಲ್ ಗಾಂಧಿ ಹೇಳಿದ್ದೇನು?

ಭಾರಿ ಗದ್ದಲದ ನಡುವೆ ಅಧಿಕಾರದ ಗದ್ದುಗೆ ಏರಲು ಈಗ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ದಳಪತಿ ವಿಜಯ್ ಅವರಿಗೆ ಬಹುಮತದ ಸವಾಲು ಎದುರಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಭಾಶಯ ಸಂದೇಶಗಳನ್ನು ಅವರಿಗೆ ಕಳುಹಿಸಿದ್ದು, ಕಾಂಗ್ರೆಸ್ ಮತ್ತು ಟಿವಿಕೆ ಮೈತ್ರಿ ಮಾಡಿಕೊಳ್ಳುತ್ತದೆ ಎನ್ನಲಾಗುತ್ತಿದೆ.

ಪತ್ನಿಯನ್ನು ಕೊಂದು, 2 ವರ್ಷದ ಮಗುವನ್ನು ಕಾಡಿನಲ್ಲಿ ಬಿಟ್ಟು ಹೋದ ಆರೋಪಿ

ಪತ್ನಿಯನ್ನು ಕೊಂದು, 2 ವರ್ಷದ ಮಗುವನ್ನು ಕಾಡಿನಲ್ಲಿ ಬಿಟ್ಟ ಆರೋಪಿ

Crime News: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ, 2 ವರ್ಷದ ಪುತ್ರನನ್ನು ಕಾಡಿನಲ್ಲಿ ಬಿಟ್ಟು ಹೋದ ಘಟನೆ ಮಧ್ಯಪ್ರದೇಶದ ರೈಸೇನ್ ಮತ್ತು ವಿದಿಶಾ ಜಿಲ್ಲೆಗಳ ನಡುವೆ ನಡೆದಿದೆ. ಈ ಆಘಾತಕಾರಿ ಕೃತ್ಯದ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿದರು. ಇದು ರಾಯ್ಸೆನ್ ಮತ್ತು ವಿದಿಶಾ ಜಿಲ್ಲೆಗಳಲ್ಲಿ ರಾತ್ರಿಯಿಡೀ ಬೃಹತ್ ಶೋಧ ಕಾರ್ಯಾಚರಣೆಗೆ ಕಾರಣವಾಯಿತು.

ಬದಲಾವಣೆ ಗಾಳಿಯಲ್ಲಿ ಹೊಸ ಪಾಠ

ಬದಲಾವಣೆ ಗಾಳಿಯಲ್ಲಿ ಹೊಸ ಪಾಠ

ಕೇರಳದಲ್ಲಿ ಮೂರು ಅವಧಿಯಿಂದ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವ ದ ಎಡರಂಗದ ಎಲ್‌ಡಿಎಫ್ ಪಕ್ಷದಿಂದ ಅಧಿಕಾರ ಕಸಿದು ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಗದ್ದುಗೆ ಏರುತ್ತಿದೆ. ಕೇರಳದಲ್ಲೂ ಬಿಜೆಪಿ ಮೊದಲ ಬಾರಿಗೆ ಮೂರು ಸ್ಥಾನ ಗೆದ್ದಿದೆ. ಈ ನಾಲ್ಕು ರಾಜ್ಯಗಳ ಫಲಿತಾಂಶ, ದೇಶ ಬದಲಾವಣೆಯತ್ತ ವಾಲುತ್ತಿರುವುದಕ್ಕೆ ಉದಾಹರಣೆ.

ಬಂಗಾಳದಲ್ಲಿ ಸತತ 2ನೇ ಅವಧಿಗೆ ಶಾಸಕರಾಗಿ ಆಯ್ಕೆಯಾದ ಆರ್‌ಸಿಬಿ ಮಾಜಿ ವೇಗಿ

ಸತತ 2ನೇ ಅವಧಿಗೆ ಶಾಸಕರಾಗಿ ಆಯ್ಕೆಯಾದ ಆರ್‌ಸಿಬಿ ಮಾಜಿ ವೇಗಿ

Assembly Elections Results 2026: 2009ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದ ಅಶೋಕ್ ದಿಂಡಾ, 13 ಏಕದಿನ ಮತ್ತು9 ಟಿ20ಐ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರ ಜೊತೆಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ವಿವಿಧ ಫ್ರಾಂಚೈಸಿ ಪರ ಆಡಿರುವ ಅವರು 68 ವಿಕೆಟ್ ಪಡೆದಿದ್ದಾರೆ. ಕನ್ನಡಿಗರ ನೆಚ್ಚಿನ ತಂಡ ಆರ್‌ಸಿಬಿ ಪರವೂ ಆಡಿದ್ದಾರೆ.

15 ವರ್ಷಗಳ ಮಮತಾ ಬ್ಯಾನರ್ಜಿ ಸರ್ಕಾರ ಪತನಕ್ಕೆ ಮೆಸ್ಸಿ ಕಾರಣವಂತೆ!

15 ವರ್ಷಗಳ ಮಮತಾ ಬ್ಯಾನರ್ಜಿ ಸರ್ಕಾರ ಪತನಕ್ಕೆ ಮೆಸ್ಸಿ ಕಾರಣವಂತೆ!

Bengal elections: ಸತತ 2 ವರ್ಷಗಳಿಂದ, ಬಂಗಾಳ ಗೆಲ್ಲಲು ಬಿಜೆಪಿಯ ಚುನಾವಣಾ ರಣತಂತ್ರಗಾರ ಅಮಿತ್‌ ಶಾ ಹೆಣೆದ ಕಾರ್ಯತಂತ್ರ, ಬಿಜೆಪಿಯ ತಳಮಟ್ಟದ ಕಾರ್ಯಕರ್ತರು ಕಳೆದ 2 ತಿಂಗಳಲ್ಲಿ ರಾಜ್ಯವ್ಯಾಪಿ 1.50 ಲಕ್ಷಕ್ಕೂ ಹೆಚ್ಚು ಸಮುದಾಯ ಸಭೆ ನಡೆಸಿ ಮಮತಾ ಸರ್ಕಾರದ ವೈಫಲ್ಯ, ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದಾಳಿ ಪ್ರಸ್ತಾಪಿಸಿ, ಹಿಂದೂಗಳನ್ನು ಬಡಿದೆಬ್ಬಿಸಿದ್ದು, ಮಮತಾ ಸರ್ಕಾರದ ಓಲೈಕೆ ರಾಜಕಾರಣದ ಬಗ್ಗೆ ಗಮನ ಸೆಳೆದಿದ್ದು ಬಿಜೆಪಿ ಗೆಲುವಿಗೆ ದೊಡ್ಡ ಮಟ್ಟದಲ್ಲಿ ನೆರವು ನೀಡಿದೆ.

ಬಂಗಾಳದಲ್ಲಿ ಸರ್ಕಾರ ರಚಿಸಲು ಬಿಜೆಪಿ ಸಜ್ಜು; ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

ಬಂಗಾಳ ನೂತನ ಸರ್ಕಾರದ ಸಿಎಂ ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

West Bengal New CM: ಪಶ್ಚಿಮ ಬಂಗಾಳದ ಚುನಾವಣೆಯ ಫಲಿತಾಂಶ ರಾಜಕೀಯದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನು ಒಡೆದು ಬಿಜೆಪಿ ಅಧಿಕಾರಕ್ಕೆ ಬಂದಿದೆ. 200 ಕ್ಕೂ ಅಧಿಕ ಕ್ಷೇತ್ರವನ್ನು ಗೆಲ್ಲುವ ಮೂಲಕ ಬಂಗಾಳದಲ್ಲಿ ಸರ್ಕಾರ ರಚಿಸಲು ಭಾರತೀಯ ಜನತಾ ಪಕ್ಷ ಸಜ್ಜಾಗಿದೆ.

Raghava Sharma Nidle Column: ದೀದಿಗೆ ಗುಡ್‌ಬೈ , ಮೋದಿಗೆ ಹಾಯ್ ಹಾಯ್..!

ದೀದಿಗೆ ಗುಡ್‌ಬೈ , ಮೋದಿಗೆ ಹಾಯ್ ಹಾಯ್..!

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಪತ್ಯ ಕೊನೆಗೊಳಿಸಿ, ಕೇಸರಿಪಡೆ ದಿಗ್ವಿಜಯ ಸಾಧಿಸುವ ಮೂಲಕ ಗಡಿ ರಾಜ್ಯದಲ್ಲಿ ಹೊಸ ರಾಜಕೀಯ ಇತಿಹಾಸವೊಂದು ಸೃಷ್ಟಿಯಾಗಿದೆ. ಟಿಎಂಸಿ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಹಿಂದೆಂದೂ ಕಾಣದ ರೀತಿಯಲ್ಲಿ ಮುಗ್ಗರಿಸಿದ್ದು, ಟಿಎಂಸಿಯ ಹಿಂಸಾಚಾರದ ರಾಜಕಾರಣವನ್ನು ಮತದಾರರು ತಿರಸ್ಕರಿಸಿದ್ದಾರೆ

ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ; ಮುಂದೆ ಕರ್ನಾಟಕದಲ್ಲೂ ಮನೆಗೆ: ಜೋಶಿ ಭವಿಷ್ಯ!

ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ: ಜೋಶಿ

Pralhad Joshi: ದೆಹಲಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪಂಚರಾಜ್ಯ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು, ದುರಾಡಳಿತ, ಮಿತಿಮೀರಿದ ತುಷ್ಟೀಕರಣ, ಭ್ರಷ್ಟಾಚಾರ, ಗೂಂಡಾಗಿರಿ ವಿರುದ್ಧ ಅತ್ಯಂತ ಸ್ಪಷ್ಟ ಜನಾದೇಶ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA-BJP ಆಡಳಿತಕ್ಕೆ ಬಹುದೊಡ್ಡ ಗೆಲುವು ತಂದುಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ ಸತತ 3ನೇ ಬಾರಿಗೆ ಬಿಜೆಪಿಗೆ ಭರ್ಜರಿ ಜಯ; ಇದು 'ಐತಿಹಾಸಿಕ ಗೆಲುವು' ಎಂದ ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿ ಭರ್ಜರಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಗೆಲುವನ್ನು ‘ಐತಿಹಾಸಿಕ’ ಎಂದು ಕರೆದಿದ್ದು, ಜನರಿಗೆ ಧನ್ಯವಾದ ಸಲ್ಲಿಸಿ ಚುನಾವಣಾ ಭರವಸೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಬಲಪಡಿಸಿದೆ.

"ಲೂಟಿ, ಲೂಟಿ, ಲೂಟಿ. ನಾವು ಮತ್ತೆ ಪುಟಿದೇಳುತ್ತೇವೆ": ಬಂಗಾಳದ ಆಘಾತಕಾರಿ ಸೋಲಿಗೆ ಮಮತಾ ಬ್ಯಾನರ್ಜಿ ಹತಾಶೆ

ಬಂಗಾಳ ಸೋಲಿನ ಬೆನ್ನಲ್ಲೇ ಮಮತಾ ಹತಾಶೆ ನುಡಿ

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಮಮತಾ ಬ್ಯಾನರ್ಜಿ, ಫಲಿತಾಂಶವನ್ನು ;ಲೂಟಿʼ ಎಂದು ಕರೆದಿದ್ದಾರೆ. ಬಿಜೆಪಿ ಐತಿಹಾಸಿಕ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಮತ್ತು ಕೇಂದ್ರದ ಮೇಲೆ ತೀವ್ರ ಆರೋಪ ಮಾಡಿರುವ ಮಮತಾ, ತೃಣಮೂಲ ಕಾಂಗ್ರೆಸ್ ಮತ್ತೆ ಬಲವಾಗಿ ಪುನಃ ಏಳುತ್ತದೆ ಎಂದು ಹೇಳಿದ್ದಾರೆ.

624 ಕೋಟಿ ರೂ. ಸಂಪತ್ತಿನ ಒಡೆಯ ನಟ, ರಾಜಕಾರಣಿ ದಳಪತಿ ವಿಜಯ್

ನಟ ವಿಜಯ್ ಅವರ ಸಂಪತ್ತು ಎಷ್ಟಿದೆ ಗೊತ್ತೇ?

ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸುವುದರೊಂದಿಗೆ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು ದಶಕಗಳ ಕಾಲ ಆಡಳಿತ ನಡೆಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಸೋಲುಣಿಸಿದೆ. ಈ ಮೂಲಕ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಪೂರ್ಣ ಪ್ರಮಾಣದ ರಾಜಕಾರಣಿಯಾಗಿ ಹೊರಹೊಮ್ಮಿದ್ದು, ಇವರ ಒಟ್ಟು ಆಸ್ತಿ ಎಷ್ಟಿದೆ ? ಎನ್ನುವ ಕುರಿತು ವಿವರ ಇಲ್ಲಿದೆ.

Assembly Election Result 2026: ಕೇರಳಂನಲ್ಲಿ ಇತಿಹಾಸ ಬರೆದ ಬಿಜೆಪಿ; ಇದೇ ಮೊದಲ ಬಾರಿಗೆ ಮೂರು ಕ್ಷೇತ್ರಗಳಲ್ಲಿ ಜಯಭೇರಿ

ಕೇರಳ: ಮೂರು ಕ್ಷೇತ್ರಗಳಲ್ಲಿ ಅರಳಿದ ಕಮಲ

Assembly Election Result 2026: 2026ರ ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದೆ. ನೇಮಂ, ಚಾತನ್ನೂರು ಮತ್ತು ಕಳಕೂಟ್ಟಂ ಕ್ಷೇತ್ರಗಳಲ್ಲಿ ಕಮಲ ಅರಳಿದ್ದು, ರಾಜ್ಯ ರಾಜಕೀಯದಲ್ಲಿ ಮೂರನೇ ಶಕ್ತಿಯಾಗಿ ತನ್ನ ಅಸ್ತಿತ್ವವನ್ನು ಬಲಪಡಿಸಿದೆ. ಇದೇ ವೇಳೆ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಮರಳಿದ್ದು, ಎಲ್‌ಡಿಎಫ್‌ ಭಾರಿ ಸೋಲು ಕಂಡಿದೆ.

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾರು ಅಧಿಕಾರಕ್ಕೆ ಬಂದ್ರು?

ಚುನಾವಣಾ ಫಲಿತಾಂಶ; ಯಾರಿದೆ ಮುನ್ನಡೆ?

Election Results 2026: 2026ರ ನಾಲ್ಕು ರಾಜ್ಯಗಳು (ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳಂ, ಅಸ್ಸಾಂ) ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ (ಪುದುಚೇರಿ) ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (ಮೇ 4) ಪ್ರಕಟವಾಗಿದ್ದು, ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಚುನಾವಣಾ ಫಲಿತಾಂಶಗಳ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ:

ತಮಿಳುನಾಡು ರಾಜಕಾರಣದಲ್ಲಿ ʻಸೀಟಿʼ ಊದಿಕೊಂಡೇ ಸುನಾಮಿ ಎಬ್ಬಿಸಿದ ನಟ ವಿಜಯ್; ‌ʻದಳಪತಿʼ ಗೆಲುವಿಗೆ ಸಂಭ್ರಮಿಸಿದ ಚಿತ್ರರಂಗ

TVK: ʻದಳಪತಿʼ ವಿಜಯ್ ಐತಿಹಾಸಿಕ ಗೆಲುವಿಗೆ ಭಾರತೀಯ ಚಿತ್ರರಂಗ ದಿಲ್‌ಖುಷ್‌

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ 'ಟಿವಿಕೆ' ಪಕ್ಷವು ಐತಿಹಾಸಿಕ ಗೆಲುವು ಸಾಧಿಸುತ್ತಿರುವ ಬೆನ್ನಲ್ಲೇ ಭಾರತೀಯ ಚಿತ್ರರಂಗ ಸಂಭ್ರಮಿಸುತ್ತಿದೆ. ಮೊದಲ ಪ್ರಯತ್ನದಲ್ಲೇ ಅಧಿಕಾರದ ಗದ್ದುಗೆ ಏರುತ್ತಿರುವ ನಟ ವಿಜಯ್ ಅವರಿಗೆ ಮೆಗಾಸ್ಟಾರ್ ಚಿರಂಜೀವಿ, ಕಮಲ್ ಹಾಸನ್, ಸೂರ್ಯ ಮತ್ತು ನಾನಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ʼʼಗಂಗಾ ನದಿ ಹರಿಯುವ ರಾಜ್ಯಗಳಲ್ಲೆಲ್ಲ ಬಿಜೆಪಿ ಸರ್ಕಾರʼʼ: ವಿಜಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

ಸಾಂಪ್ರದಾಯಿಕ ಬೆಂಗಾಳಿ ಉಡುಗೆ ತೊಟ್ಟು ಗಮನ ಸೆಳೆದ ಮೋದಿ

PM Narendra Modi: ದೇಶದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಜಯೋತ್ಸವ ಭಾಷಣ ಮಾಡಿದರು. ವಿಶೇಷ ಉಡುಗೆ ತೊಟ್ಟು ಅವರು ದೆಹಲಿಯ ಬಿಜೆಪಿ ಕಚೇರಿಗೆ ಮೋದಿ ಆಗಮಿಸಿದರು. ಈ ವೇಳೆ ಅವರು ತೊಟ್ಟ ಉಡುಗೆ ಗಮನ ಸೆಳೆಯಿತು. ಬೆಂಗಾಳಿ ಶೈಲಿಯಲ್ಲಿ ಧೋತಿ-ಕುರ್ತಾ ಧರಿಸಿ ಪಶ್ಚಿಮ ಬಂಗಾಳ ಜನತೆಗೆ ಪ್ರಬಲ ರಾಜಕೀಯ ಸಂದೇಶ ಸಾರಿದರು. ಜತೆಗೆ ಬಿಜೆಪಿ

ʼಮೋದಿಮಯ್ ಭಾರತ್ʼ ನಕ್ಷೆ ಬಿಡುಗಡೆ ಮಾಡಿದ ಬಿಜೆಪಿ: ಪಶ್ಚಿಮ ಬಂಗಾಳವನ್ನು ತಲುಪಿದೆ ಕೇಸರಿ ಅಲೆ

ಪಶ್ಚಿಮ ಬಂಗಾಳದಲ್ಲಿ ಈಗ ಕೇಸರಿ ಅಲೆ

ಉತ್ತರ ಭಾರತದ ಐದು ರಾಜ್ಯಗಳನ್ನು ಹೊರತು ಪಡಿಸಿ ಈಗ ಸಂಪೂರ್ಣ ಕೇಸರಿಮಯವಾಗಿದೆ. ಉತ್ತರ ಭಾರತದ ಐದು ರಾಜ್ಯಗಳಾದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಜಾರ್ಖಂಡ್ ಹಾಗೂ ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಹೊರತು ಉಳಿದ ಎಲ್ಲಾ ರಾಜ್ಯಗಳಲ್ಲೂ ಕೇಸರಿ ಪಕ್ಷ ರಾರಾಜಿಸುತ್ತಿದೆ. ಇದೀಗ ಪಶ್ಚಿಮ ಬಂಗಾಳ ಕೂಡ ಕೇಸರಿಮಯವಾಗುವ ಮುನ್ಸೂಚನೆ ಇದೆ.

ಆಂಬುಲೆನ್ಸ್‌ ಕೊರತೆ: 15 ವರ್ಷದ ಬುಡಕಟ್ಟು ಬಾಲಕಿಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಸಾಗಿಸಿದ ಕುಟುಂಬ

ಸಿಗದ ಆಂಬುಲೆನ್ಸ್‌; ಭುಜದಲ್ಲಿ ಹೊತ್ತು ಮಗಳ ಮೃತದೇಹ ಸಾಗಿಸಿದ ಪೋಷಕರು

ಮಧ್ಯ ಪ್ರದೇಶದ ಅಶೋಕನಗರದಲ್ಲಿ 15 ವರ್ಷದ ಬುಡಕಟ್ಟು ಬಾಲಕಿಯ ಮೃತದೇಹ ಸಾಗಿಸಲು ಯಾವುದೇ ವ್ಯವಸ್ಥೆ ಇಲ್ಲದ ಕಾರಣ ಕುಟುಂಬಸ್ಥರು ಭುಜದ ಮೇಲೆ ಹೊತ್ತೊಯ್ಯಬೇಕಾದ ದಾರುಣ ಘಟನೆ ನಡೆದಿದೆ. ಆಸ್ಪತ್ರೆಯ ನಿರ್ಲಕ್ಷ್ಯ, ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯಕ್ಕೆ ಈ ಘಟನೆ ಕನ್ನಡಿ ಹಿಡಿದಿದೆ.

ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ ಟಿವಿಕೆಯ ವಿಜಯ್ ಮುಂದಿದೆ ಹಲವು ಆಯ್ಕೆಗಳು: ಯಾರ ಕೈಹಿಡಿಯಲಿದ್ದಾರೆ 'ಜನನಾಯಕ'?

ತಮಿಳುನಾಡಿನಲ್ಲಿ ಟಿವಿಕೆ ನಾಯಕ ವಿಜಯ್ ಕಿಂಗ್‌ ಮೇಕರ್

ತಮಿಳುನಾಡಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ಟಿವಿಕೆ ಪಕ್ಷ ಅಚ್ಚರಿ ಮೂಡಿಸುವ ಸಾಧನೆ ಮಾಡಿದ್ದು, ಬಹುಮತದ ಅಂಚಿಗೆ ಬಂದು ನಿಂತಿದೆ. ಸರ್ಕಾರ ರಚಿಸಲು ಎಐಎಡಿಎಂಕೆ, ಸಣ್ಣ ಪಕ್ಷಗಳು ಅಥವಾ ಕಾಂಗ್ರೆಸ್ ಬೆಂಬಲ ಪಡೆಯುವ ಆಯ್ಕೆಗಳು ಅವರ ಮುಂದಿವೆ. ಬಿಜೆಪಿ ವಿರುದ್ಧದ ನಿಲುವು ಅವರ ಮೈತ್ರಿ ನಿರ್ಧಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳದಲ್ಲಿ ಅರಳಿದ ಕಮಲ: ತನ್ನದೇ ಭದ್ರಕೋಟೆಯಲ್ಲಿ ಟಿಎಂಸಿಗೆ ಹೀನಾಯ ಸೋಲು; ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಸಂಭ್ರಮಿಸಿದ್ದು ಹೀಗೆ...

ಬಂಗಾಳದಲ್ಲಿ ಅರಳಿದ ಕಮಲ: ಭರ್ಜರಿ ಜಯಕ್ಕೆ ಮೋದಿ ಫಸ್ಟ್‌ ರಿಯಾಕ್ಷನ್‌

Lotus blooms in West Bengal: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಜಯೋತ್ಸವದ ಘೋಷಣೆ ಮಾಡಿದ್ದಾರೆ. ತನ್ನದೇ ಭದ್ರಕೋಟೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹೀನಾಯವಾಗಿ ಸೋಲು ಕಾಣುತ್ತಿದೆ ಎಂದು ಅವರು ಬಣ್ಣಿಸಿದ್ದಾರೆ. ಬಿಜೆಪಿಯು 200ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಹಿಡಿಯುವತ್ತ ಸಾಗಿದೆ.

Loading...