ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Land Slide: ಕೇದಾರನಾಥ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ: 2 ಸಾವು, 3 ಜನರಿಗೆ ಗಾಯ

ಕೇದಾರನಾಥ ದೇವಾಲಯಕ್ಕೆ (Kedarnath) ಹೋಗುವ ಪಾದಯಾತ್ರೆಯ ಮಾರ್ಗದಲ್ಲಿ ಬುಧವಾರ ಭಾರೀ ಭೂಕುಸಿತ ಉಂಟಾಗಿದೆ. (Land Slide) ಭೂಕುಸಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ರಕ್ಷಣಾ ಕಾರ್ಯಾಚರಣೆ ಶುರು ಮಾಡಲಾಗಿದೆ ಎಂದು ರುದ್ರಪ್ರಯಾಗ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಪ್ರಹ್ಲಾದ್ ಕೊಂಡೆ ತಿಳಿಸಿದ್ದಾರೆ.

ಕೇದಾರನಾಥ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ; 2 ಸಾವು

Profile Vishakha Bhat Jun 18, 2025 4:48 PM

ಡೆಹ್ರಾಡೂನ್‌: ಕೇದಾರನಾಥ ದೇವಾಲಯಕ್ಕೆ (Kedarnath) ಹೋಗುವ ಪಾದಯಾತ್ರೆಯ ಮಾರ್ಗದಲ್ಲಿ ಬುಧವಾರ ಭಾರೀ ಭೂಕುಸಿತ ಉಂಟಾಗಿದೆ. (Land Slide) ಭೂಕುಸಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಿಗ್ಗೆ 11.20 ಕ್ಕೆ ಜಂಗಲ್‌ಚಟ್ಟಿ ಘಾಟ್ ಬಳಿ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಇಳಿಜಾರಿನಲ್ಲಿ ಬಂಡೆಗಳು ಉರುಳಿ ಯಾತ್ರಿಕರು ಮತ್ತು ಪಲ್ಲಕ್ಕಿ ಮತ್ತು ಪೋರ್ಟರ್ ನಿರ್ವಾಹಕರಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ಶುರು ಮಾಡಲಾಗಿದೆ ಎಂದು ರುದ್ರಪ್ರಯಾಗ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಪ್ರಹ್ಲಾದ್ ಕೊಂಡೆ ತಿಳಿಸಿದ್ದಾರೆ.

ಭೂಕುಸಿತದ ಅವಶೇಷಗಳ ಡಿಕ್ಕಿಯಿಂದ ಹಲವರು ಕಂದಕಕ್ಕೆ ಬಿದ್ದಿದ್ದರು. ನಂತರ ಅವರನ್ನು ರಕ್ಷಿಸಲಾಗಿದೆ. ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಹಾಗೂ ಸ್ಥಳೀಯರು ಹಗ್ಗಗಳ ಸಹಾಯದಿಂದ ಸತ್ತವರನ್ನು ಮತ್ತು ಗಾಯಾಳುಗಳನ್ನು ಕಮರಿಯಿಂದ ಹೊರತೆಗೆಯಲು ಕಷ್ಟಪಟ್ಟರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬ ಮಹಿಳೆ ಸೇರಿದಂತೆ ಮೂವರು ಗಾಯಗೊಂಡರು. ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಪುರುಷರನ್ನು ಗೌರಿಕುಂಡ್‌ನ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಎಸ್‌ಪಿ ಹೇಳಿದರು.

ಮೃತರ ಗುರುತು ಇನ್ನೂ ಸಿಕ್ಕಿಲ್ಲ. ಕಂದಕದಲ್ಲಿ ಸಿಲುಕಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಪೊಲೀಸ್ ರಕ್ಷಣೆಯಲ್ಲಿ ಮಾರ್ಗದಲ್ಲಿ ಯಾತ್ರಾರ್ಥಿಗಳ ಸಂಚಾರ ಮುಂದುವರೆದಿದೆ ಎಂದು ಎಸ್ಪಿ ಕೊಂಡೆ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Karnataka Rain news: ರಾಜ್ಯದಲ್ಲಿ ಮಳೆಗೆ ಮೂರು ಬಲಿ, ಹಲವೆಡೆ ಭೂಕುಸಿತ, ಸಾರಿಗೆ ಅಸ್ತವ್ಯಸ್ತ

ಜೂನ್‌ 15 ರಂದು ಕೇದಾರ್‌ನಾಥದಲ್ಲಿ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿ ಏಳು ಮಂದಿ ಮೃತಪಟ್ಟಿದ್ದರು. ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಹೆಲಿಕಾಪ್ಟರ್ ಗೌರಿಕುಂಡ್ ಮತ್ತು ತ್ರಿಜುಗಿನಾರಾಯಣದ ನಡುವೆ ಕೆಡಾರ್ಘಾತಿಯಲ್ಲಿ ಬಿದ್ದಿದೆ. ಹೆಲಿಕಾಪ್ಟರ್ ಬೆಂಕಿಗೆ ಆಹುತಿಯಾಗಿದೆ. ವ್ಯತಿರಿಕ್ತ ಹವಾಮಾನದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಉತ್ತರಾಖಂಡ ಸಿವಿಲ್ ಏವಿಯೇಷನ್ ಡೆವಲಪ್‌ಮೆಂಟ್ ಅಥಾರಿಟಿ (UCADA) ಮಾಹಿತಿ ಪ್ರಕಾರ, ಹೆಲಿಕಾಪ್ಟರ್ ಬೆಳಿಗ್ಗೆ 5.30ಕ್ಕೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿತ್ತು. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಅದು ಪತನಗೊಂಡಿದೆ. ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್‌ವಾರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಗೌರಿಕುಂಡ್‌ನ ಕಾಡುಗಳ ಮೇಲೆ ಹೆಲಿಕಾಪ್ಟರ್ ಬಿದ್ದಿದೆ. ಹವಾಮಾನ ಸರಿಯಿಲ್ಲದ ಕಾರಣ ಈ ಅಪಘಾತವಾಗಿದೆ.