ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬರೋಬ್ಬರಿ 14 ರೇಪ್‌ & ಮರ್ಡರ್‌ ಕೇಸ್‌ನ ನರ ಹಂತಕ ಸುರೇಂದರ್‌ ಕೋಲಿ ಖುಲಾಸೆ; ತಕ್ಷಣ ರಿಲೀಸ್‌ಗೆ ಸುಪ್ರೀಂ ಆದೇಶ

2006 Nithari serial killings case: 2006ರ ನಿಥಾರಿ ಸೀರಿಯಲ್‌ ಕಿಲ್ಲಿಂಗ್‌ ಕೇಸ್‌ ಎಂದೇ ಕುಖ್ಯಾತಿ ಪಡೆದಿರುವ ಈ ಕೇಸ್‌ನ ಪ್ರಮುಖ ಆರೋಪಿ ಸುರೇಂದ್ರ ಕೋಲಿಯನ್ನು ಸುಪ್ರೀಂ ಕೋರ್ಟ್‌ ಕೊನೆಯ ಪ್ರಕರಣದಿಂದಲೂ ಖುಲಾಸೆಗೊಳಿಸಿದೆ. ಅಲ್ಲದೇ ತಕ್ಷಣ ರಿಲೀಸ್‌ ಮಾಡುವಂತೆ ಆದೇಶ ಹೊರಡಿಸಿದೆ.

ನರ ಹಂತಕ ಸುರೇಂದರ್‌ ಕೋಲಿ ರಿಲೀಸ್‌ಗೆ ಸುಪ್ರೀಂ ಆದೇಶ

ಸೀರಿಯಲ್‌ ಕಿಲ್ಲರ್‌ ಸುರೇಂದರ್‌ ಕೋಲಿ(ಸಂಗ್ರಹ ಚಿತ್ರ) -

Rakshita Karkera
Rakshita Karkera Nov 11, 2025 1:58 PM

ನವದೆಹಲಿ: ಸುಮಾರು 20 ವರ್ಷಗಳ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನೋಯ್ಡಾದ ಸೀರಿಯಲ್‌ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌(Supreme Court) ಮಹತ್ವದ ಆದೇಶ ಹೊರಡಿಸಿದೆ. 2006ರ ನಿಥಾರಿ ಸೀರಿಯಲ್‌ ಕಿಲ್ಲಿಂಗ್‌ ಕೇಸ್‌ ಎಂದೇ ಕುಖ್ಯಾತಿ ಪಡೆದಿರುವ ಈ ಕೇಸ್‌ನ ಪ್ರಮುಖ ಆರೋಪಿ ಸುರೇಂದ್ರ ಕೋಲಿಯನ್ನು(Surendra Koli) ಸುಪ್ರೀಂ ಕೋರ್ಟ್‌ ಕೊನೆಯ ಪ್ರಕರಣದಿಂದಲೂ ಖುಲಾಸೆಗೊಳಿಸಿದೆ. ಅಲ್ಲದೇ ಆತನ ಇನ್ನು ಯಾವುದೇ ಪ್ರರಕಣದಲ್ಲಿ ಆರೋಪಿಯಾಗಿಲ್ಲ. ಹೀಗಾಗಿ ಆತನನ್ನು ತಕ್ಷಣ ರಿಲೀಸ್‌ ಮಾಡುವಂತೆ ಆದೇಶ ಹೊರಡಿಸಿದೆ. ಇಂದು ಹೊರಬಂದಿರುವ ಈ ತೀರ್ಪಿನೊಂದಿಗೆ, ಸುಪ್ರೀಂ ಕೋರ್ಟ್ ಭಾರತದ ಇತಿಹಾಸದಲ್ಲಿ ಅತ್ಯಂತ ಭಯಾನಕ ಕ್ರಿಮಿನಲ್ ಪ್ರಕರಣಗಳಲ್ಲಿ ಒಂದನ್ನು ಮುಕ್ತಾಯಗೊಳಿಸಿದೆ.

ನಿಥಾರಿ ಕೊಲೆ ಪ್ರಕರಣಗಳ ಪೈಕಿ ಬಾಕಿ ಉಳಿದಿದ್ದ ಒಂದು ಕೇಸ್‌ನಲ್ಲಿ ಕೋಲಿ ತನ್ನ ಅಪರಾಧ ಸಾಬೀತು ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಠವು ಈ ಆದೇಶವನ್ನು ಹೊರಡಿಸಿದೆ. ಕೋಲಿ ಈಗಾಗಲೇ ಎಲ್ಲಾ ಇತರ ನಿಥಾರಿ ಪ್ರಕರಣಗಳಲ್ಲಿ ಖುಲಾಸೆಗೊಂಡಿರುವುದರಿಂದ ಆತ ಶೀಘ್ರದಲ್ಲೇ ಜೈಲಿನಿಂದ ಹೊರಬರಲಿದ್ದಾನೆ.

ಈ ಸುದ್ದಿಯನ್ನೂ ಓದಿ: Serial Killer: ದಿಲ್ಲಿ ಪೊಲೀಸರ ರೋಚಕ ಕಾರ್ಯಾಚರಣೆ; 24 ವರ್ಷಗಳ ಬಳಿಕ ಸೀರಿಯಲ್‌ ಕಿಲ್ಲರ್‌ ಅರೆಸ್ಟ್‌

ಏನಿದು ಪ್ರಕರಣ?

ಡಿಸೆಂಬರ್ 29, 2006 ರಂದು ನೋಯ್ಡಾದ ನಿಥಾರಿ ಗ್ರಾಮದ ಉದ್ಯಮಿ ಮೋನಿಂದರ್ ಸಿಂಗ್ ಪಂಧೇರ್ ಮನೆಯ ಹಿಂದಿನ ಚರಂಡಿಯಲ್ಲಿ ಕನಿಷ್ಠ ಎಂಟು ಮಕ್ಕಳ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿತ್ತು. ಆ ಮೂಲಕ ಈ ಸರಣಿ ಹತ್ಯಾಕಾಂಡ ಪ್ರಕರಣಗಳು ಬೆಳಕಿಗೆ ಬಂದವು. ಈ ಭೀಕರ ಪ್ರಕರಣವು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಈ ಬಗ್ಗೆ ಹಲವಾರು ತನಿಖೆಗಳು ಮತ್ತು ವಿಚಾರಣೆಗಳು ನಡೆದಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೋನಿಂದರ್ ಸಿಂಗ್ ಪಂಧೇರ್ ಹಾಗೂ ಆತನ ಮನೆಕೆಲಸದವನಾಗಿದ್ದ ಸುರೇಂದರ್‌ ಕೋಲಿಯನ್ನು ಅರೆಸ್ಟ್‌ ಮಾಡಲಾಗಿತ್ತು. ಒಟ್ಟು 14 ಪ್ರಕರಣಗಳ ಪೈಕಿ 15 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆಗೆ ಕೋಲಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು. ಅಲಹಾಬಾದ್ ಹೈಕೋರ್ಟ್ 2015 ರ ಜನವರಿಯಲ್ಲಿ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತು, ಅವರ ಕ್ಷಮಾದಾನ ಅರ್ಜಿಯನ್ನು ನಿರ್ಧರಿಸುವಲ್ಲಿನ ವಿಳಂಬವನ್ನು ಉಲ್ಲೇಖಿಸಿತು.

ಅಕ್ಟೋಬರ್ 2023 ರಲ್ಲಿ, ಅಲಹಾಬಾದ್ ಹೈಕೋರ್ಟ್ ಹಲವಾರು ಇತರ ನಿಥಾರಿ ಪ್ರಕರಣಗಳಲ್ಲಿ ಕೋಲಿ ಮತ್ತು ಪಂಧೇರ್ ಇಬ್ಬರನ್ನೂ ಖುಲಾಸೆಗೊಳಿಸಿತು. ಅಲ್ಲದೇ 2017 ರಲ್ಲಿ ವಿಚಾರಣಾ ನ್ಯಾಯಾಲಯವು ನೀಡಿದ್ದ ಮರಣದಂಡನೆಗಳನ್ನು ರದ್ದುಗೊಳಿಸಿತು. ನ್ಯಾಯಾಲಯವು 12 ಪ್ರಕರಣಗಳಲ್ಲಿ ಕೋಲಿಯನ್ನು ಮತ್ತು ಎರಡು ಪ್ರಕರಣಗಳಲ್ಲಿ ಪಂಧೇರ್ ಅವರನ್ನು ಖುಲಾಸೆಗೊಳಿಸಿತು. ಸಿಬಿಐ ಮತ್ತು ಸಂತ್ರಸ್ತ ಕುಟುಂಬಗಳು ಆ ಖುಲಾಸೆಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದವು, ಆದರೆ ಸುಪ್ರೀಂ ಕೋರ್ಟ್ ಜುಲೈ 30, 2024 ರಂದು ಎಲ್ಲಾ 14 ಮೇಲ್ಮನವಿಗಳನ್ನು ವಜಾಗೊಳಿಸಿತು.