Ahmedabad Plane Crash: ಅಹಮದಾಬಾದ್ ವಿಮಾನ ದುರಂತ; ಮೃತ ದೇಹದ ಪತ್ತೆಗೆ ಇರುವ ದಾರಿಗಳೇನು?
ಗುರುವಾರ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. (Ahmedabad Plane Crash) ಅವರ ಮೃತದೇಹವನ್ನು ಕೂಡ ಗುರುತಿಸಲು ಸಾಧ್ಯವಾಗುತ್ತಿಲ್ಲ. ವಿಧಿವಿಜ್ಞಾನ ತಂಡ ಹಲ್ಲುಗಳ ಮಾದರಿಗಳನ್ನು ಎಚ್ಚರಿಕೆಯಿಂದ ಹೊರತೆಗೆದು ಹೆಚ್ಚಿನ ಭದ್ರತೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ.


ಗಾಂಧಿನಗರ: ಗುರುವಾರ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. (Ahmedabad Plane Crash) ಅವರ ಮೃತದೇಹವನ್ನು ಕೂಡ ಗುರುತಿಸಲು ಸಾಧ್ಯವಾಗುತ್ತಿಲ್ಲ. ಇದೀಗ ವಿಧಿವಿಜ್ಞಾನ ತಜ್ಞರ ತಂಡಗಳು ದಂತ ದಾಖಲೆಗಳು, ಉಗುರುಗಳಿಂದ ಡಿಎನ್ಎ ಮತ್ತು ರಕ್ತದ ಮಾದರಿಗಳನ್ನು ಕಲೆ ಹಾಕಲು ಪ್ರಾರಂಭಿಸಿವೆ. ಇದೀಗ 200 ಕ್ಕೂ ಅಧಿಕ ಡಿಎನ್ಎ ಸ್ಯಾಂಪಲ್ಗಳನ್ನು ಸಂಗ್ರಹಿಸಲಾಗಿದೆ.
ಲಂಡನ್-ಗ್ಯಾಟ್ವಿಕ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171 , ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳ ನಂತರ ಪತನಗೊಂಡಿತು , ಇದರಲ್ಲಿ 230 ಪ್ರಯಾಣಿಕರು ಮತ್ತು 11 ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದರು. ಇದೀಗ ಅವರ ಮೃತದೇಹವನ್ನು ಗುರುತಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸುವುದು ಸವಾಲಿನ ಕೆಲಸವಾಗಿದೆ.
ವಿಧಿವಿಜ್ಞಾನ ತಂಡ ಹಲ್ಲುಗಳ ಮಾದರಿಗಳನ್ನು ಎಚ್ಚರಿಕೆಯಿಂದ ಹೊರತೆಗೆದು ಹೆಚ್ಚಿನ ಭದ್ರತೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಅಲ್ಲಿ ವಿಧಿವಿಜ್ಞಾನ ದಂತವೈದ್ಯರು ಕುಟುಂಬಗಳು ಒದಗಿಸಿದ ಮೊದಲೇ ಅಸ್ತಿತ್ವದಲ್ಲಿರುವ ದಂತ ದಾಖಲೆಗಳೊಂದಿಗೆ ಅವುಗಳನ್ನು ಹೊಂದಿಸಲು ಪ್ರಯತ್ನಿಸುತ್ತಾರೆ. ದೇಹಗಳಿಂದ, ಬ್ಯಾಕಪ್ ಆಗಿ ಉಗುರುಗಳು ಮತ್ತು ರಕ್ತದಿಂದ ಡಿಎನ್ಎ ಹೊರತೆಗೆಯಲಾಗುತ್ತಿದೆ. "ಈ ಪ್ರಕ್ರಿಯೆಯು ಇನ್ನೂ 48 ರಿಂದ 72 ಗಂಟೆಗಳನ್ನು ತೆಗೆದುಕೊಳ್ಳುತ್ತದೆ" ಎಂದು ಉಪ ಪೊಲೀಸ್ ಆಯುಕ್ತ ಕಾನನ್ ದೇಸಾಯಿ ಹೇಳಿದ್ದಾರೆ.
ಪವಾಡಸದೃಶವಾಗಿ, 38 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಕುಮಾರ್ ಈ ಅಪಘಾತದಿಂದ ಬದುಕುಳಿದಿದ್ದು, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪ್ರಧಾನಿ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಕಡೆಗೆ ಹೊರಟ AI171 ವಿಮಾನ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಲಂಡನ್ನ ಗ್ಯಾಟ್ವಿಕ್ ಕಡೆಗೆ ಪ್ರಯಾಣಿಸುತ್ತಿದ್ದ ಈ ಬೋಯಿಂಗ್ 787-8 ಡ್ರೀಮ್ಲೈನರ್ (VT-ANB) ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳಿದ್ದರು. ಮಧ್ಯಾಹ್ನ 1.39 ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.