ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pakistan Spy: ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಅರೆಸ್ಟ್‌

ಆಪರೇಷನ್ ಸಿಂದೂರ್ ಸಮಯದಲ್ಲಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಖಾಸಿಮ್ ಪಾಕಿಸ್ತಾನದ ಮಹಿಳೆಯೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದ ಎನ್ನಲಾಗಿದೆ. ಆತನನ್ನು ಭರತ್‌ಪುರ ಜಿಲ್ಲೆಯಲ್ಲಿ ರಾಜಸ್ಥಾನದ ಗುಪ್ತಚರ ದಳ (IB) ಬಂಧಿಸಿದೆ. ಖಾಸಿಮ್ ಹಲವು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನಕ್ಕೆ ಗುಪ್ತಚರ ಮಾಹಿತಿಯನ್ನು ಒದಗಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆಪರೇಷನ್ ಸಿಂದೂರ್ ವೇಳೆ ಪಾಕ್‌ನೊಂದಿಗೆ ನಂಟು- ಮತ್ತೋರ್ವ ಅರೆಸ್ಟ್‌

ಜೈಫುರ: ಕಾಶ್ಮೀರದ (Kashmir) ಪಹಲ್ಗಾಮ್ (pahalgam) ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಿಂದ (terror attack) 27 ಮಂದಿ ಪ್ರವಾಸಿಗರು ಸಾವನ್ನಪ್ಪಿದ ಬಳಿಕ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ (Operation Sindoor) ಕಾರ್ಯಾಚರಣೆಯ ವೇಳೆ ಗಡಿಯಾಚೆಗಿನ ಸಂಪರ್ಕ ಹೊಂದಿದ್ದ ಪಾಕಿಸ್ತಾನ ಗೂಢಚಾರನನ್ನು (Pakistan Spy) ರಾಜಸ್ಥಾನದಲ್ಲಿ (Rajasthan) ಬಂಧಿಸಲಾಗಿದೆ. ಆರೋಪಿಯನ್ನು ಖಾಸಿಮ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನದ ಮಹಿಳೆಯನ್ನು ವಿವಾಹವಾಗಿದ್ದ ಖಾಸಿಮ್ ಆಪರೇಷನ್ ಸಿಂದೂರ್ ಸಮಯದಲ್ಲಿ ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನುವುದು ತನಿಖೆಗಳಿಂದ ತಿಳಿದುಬಂದಿದೆ.

ಆಪರೇಷನ್ ಸಿಂದೂರ್ ಸಮಯದಲ್ಲಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಖಾಸಿಮ್ ಪಾಕಿಸ್ತಾನದ ಮಹಿಳೆಯೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದ ಎನ್ನಲಾಗಿದೆ. ಆತನನ್ನು ಭರತ್‌ಪುರ ಜಿಲ್ಲೆಯಲ್ಲಿ ರಾಜಸ್ಥಾನದ ಗುಪ್ತಚರ ದಳ (IB) ಬಂಧಿಸಿದೆ. ಖಾಸಿಮ್ ಹಲವು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನಕ್ಕೆ ಗುಪ್ತಚರ ಮಾಹಿತಿಯನ್ನು ಒದಗಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಖಾಸಿಮ್ ಪಾಕಿಸ್ತಾನದ ಮಹಿಳೆಯನ್ನು ಮದುವೆಯಾಗಿದ್ದು, ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಸಮಯದಲ್ಲಿ ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತನಿಖೆಗಳು ಬಹಿರಂಗಪಡಿಸಿವೆ.

ಈಗಾಗಲೇ ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸಿದ್ದ ಹಲವರನ್ನು ಬಂಧಿಸಲಾಗಿದೆ. ಕೆಲವು ದಿನಗಳ ಹಿಂದೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಗಡಿ ಜಿಲ್ಲೆಯ ಕಚ್‌ನಲ್ಲಿ ನಿಯೋಜಿಸಲಾದ ಗುತ್ತಿಗೆ ಆರೋಗ್ಯ ಕಾರ್ಯಕರ್ತ ಪಾಕಿಸ್ತಾನದ ಗೂಢಚಾರನೊಂದಿಗೆ ಮಿಲಿಟರಿ ಸ್ಥಾಪನೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಬಂಧಿಸಲಾಗಿತ್ತು.

ಇದನ್ನೂ ಓದಿ: Bank Robbery: ವಿಜಯಪುರದಲ್ಲಿ ಬ್ಯಾಂಕ್‌ ದರೋಡೆಗೆ ಯತ್ನ, ಬೀಗ ಮುರಿದ ಕಳ್ಳರು

ಆದಿತಿ ಭಾರದ್ವಾಜ್ ಎಂದು ಗುರುತಿಸಿಕೊಂಡ ಪಾಕಿಸ್ತಾನಿ ಏಜೆಂಟ್ ಸಹದೇವ್‌ಸಿನ್ಹ್ ಗೋಹಿಲ್ (28) ಎಂಬಾತನಿಗೆ ಆಮಿಷ ಒಡ್ಡಿದ್ದು, ಕಚ್‌ನಲ್ಲಿ ಉಪಸ್ಥಿತವಿರುವ ಗಡಿ ಭದ್ರತಾ ಪಡೆ ಮತ್ತು ಭಾರತೀಯ ನೌಕಾಪಡೆಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ಒತ್ತಾಯಿಸಿದ್ದ ಎನ್ನಲಾಗಿದೆ. ಇದಕ್ಕೂ ಮೊದಲು ಮೇ 17ರಂದು ಉತ್ತರ ರಾಜ್ಯದ ಹರಿಯಾಣದ ಪ್ರಭಾವಿ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನದೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಬಂಧಿಸಲಾಗಿತ್ತು.