ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: 6,520 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

PMKSY: ಪ್ರಧಾನ ಮಂತ್ರಿ ಕಿಸಾನ್‌ ಸಂಪದ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ 15ನೇ ಹಣಕಾಸು ಆಯೋಗದಡಿ ಒಟ್ಟು 6,520 ಕೋಟಿ ರೂ. ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

6,520 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದ ಅನುಮೋದನೆ

Ramesh B Ramesh B Jul 31, 2025 6:00 PM

ದೆಹಲಿ: ʼʼಪ್ರಧಾನ ಮಂತ್ರಿ ಕಿಸಾನ್‌ ಸಂಪದ ಯೋಜನೆ (PMKSY) ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ 15ನೇ ಹಣಕಾಸು ಆಯೋಗದಡಿ ಒಟ್ಟು 6,520 ಕೋಟಿ ರೂ. ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆʼʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದ್ದಾರೆ. ʼʼಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 15ನೇ ಹಣಕಾಸು ಆಯೋಗದಡಿ (2021-22ರಿಂದ 2025-26) ನಡೆಯುತ್ತಿರುವ ಕೇಂದ್ರ ವಲಯದ ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆ (PMKSY)ಗಾಗಿ ಹೆಚ್ಚುವರಿ 1,920 ಕೋಟಿ ರೂ. ಸೇರಿದಂತೆ ಒಟ್ಟು 6,520 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಾಯಿತುʼʼ ಎಂದು ಹೇಳಿದ್ದಾರೆ.

ಆಹಾರ ಘಟಕಗಳಿಗೆ 1,000 ಕೋಟಿ ರೂ.

ಕಿಸಾನ್‌ ಸಂಪದ ಯೋಜನೆ ಮೂಲಕ ಆಹಾರ ಸುರಕ್ಷತೆ, ಗುಣಮಟ್ಟ ಮತ್ತು ಮೂಲಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಆಹಾರ ಮೌಲ್ಯವರ್ಧನ ಮೂಲ ಸೌಕರ್ಯ (ICCVAI) ಮತ್ತು 100 ಆಹಾರ ಪರೀಕ್ಷಾ ಪ್ರಯೋಗಾಲಯಗಳು ಹಾಗೂ 50 ಬಹು ಉತ್ಪನ್ನ ಆಹಾರ ವಿಕಿರಣ ಘಟಕಗಳನ್ನು ಸ್ಥಾಪಿಸಲು 1,000 ಕೋಟಿ ರೂ. ವೆಚ್ಚಕ್ಕೆ ಕೇಂದ್ರ ಅನುಮೋದನೆ ನೀಡಿದೆ.

ಈ ಸುದ್ದಿಯನ್ನೂ ಓದಿ: Pralhad Joshi: ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ಉಳಿತಾಯ: ಪ್ರಲ್ಹಾದ್‌ ಜೋಶಿ

ʼʼICCVAI ಮತ್ತು FSQAI ಇವೆರೆಡೂ PMKSYಯ ಬೇಡಿಕೆ ಆಧಾರಿತ ಘಟಕ ಯೋಜನೆಗಳಾಗಿವೆ. ಹಾಗಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಪ್ರಧಾನ ಮಂತ್ರಿ ಕಿಸಾನ್‌ ಸಂಪದ ಮೂಲಕ ವಿವಿಧ ಯೋಜನೆ ಮಂಜೂರಾತಿಗೆ 920 ಕೋಟಿ ರೂ. ಒದಗಿಸಿದೆ. ಪ್ರಸ್ತಾವಿತ 50 ಬಹು ಉತ್ಪನ್ನ ಆಹಾರ ವಿಕಿರಣ ಘಟಕಗಳನ್ನು ಅನುಷ್ಠಾನಗೊಳಿಸಲಾಗುವುದು. ಇದರಿಂದ ವರ್ಷಕ್ಕೆ 20ರಿಂದ 30 ಲಕ್ಷ ಮೆಟ್ರಿಕ್ ಟನ್‌ ಆಹಾರ ಸಂರಕ್ಷಣಾ ಸಾಮರ್ಥ್ಯದ ನಿರೀಕ್ಷೆಯಿದೆʼʼ ಎಂದಿದ್ದಾರೆ.

ʼʼಖಾಸಗಿ ವಲಯದಡಿ ಪ್ರಸ್ತಾವಿತ 100 ಆಹಾರ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಯಿಂದ ಆಹಾರ ಮಾದರಿ ಪರೀಕ್ಷೆ ಸುಲಲಿತವಾಗಲಿದೆ. ಅಲ್ಲದೇ ಸುಧಾರಿತ ಮೂಲಸೌಕರ್ಯಗಳ ಅಭಿವೃದ್ಧಿಗೆ ಕಾರಣವಾಗುತ್ತದೆ. ಇದರಿಂದಾಗಿ ಆಹಾರ ಸುರಕ್ಷತೆ ಹಾಗೂ ಸುರಕ್ಷಿತ ಆಹಾರಗಳ ಪೂರೈಕೆಗೆ ಹೆಚ್ಚು ಹೆಚ್ಚು ನೆರವಾಗಲಿದೆʼʼ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.