Ahmedabad Plane Crash: ಮಾಜಿ ಸಿಎಂ ರೂಪಾನಿ ಡಿಎನ್ಎ ಹೊಂದಾಣಿಕೆ; ಅಪಘಾತದಲ್ಲಿ ಮೃತಪಟ್ಟವರ ದೇಹ ಹಸ್ತಾಂತರ ಪ್ರಕ್ರಿಯೆ ಶುರು
ಅಹಮದಾಬಾದ್ ವಿಮಾನ ಅಪಘಾತದಲ್ಲಿ (Ahmedabad Plane Crash) ಸಾವನ್ನಪ್ಪಿದ 274 ಜನರ ಗುರುತು ಪತ್ತೆಯಾಗಿದ್ದು, ಅವರ ಮೃತದೇಹಗಳನ್ನು ಗುಜರಾತ್ ಸರ್ಕಾರ ಭಾನುವಾರ ಅವರ ಕುಟುಂಬಗಳಿಗೆ ಹಸ್ತಾಂತರಿಸಲಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತವಾದ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎಂದು ಹೇಳಲಾಗಿತ್ತು. ಇದೀಗ ಅವರ ಡಿನ್ಎನ್ಎ ಪರೀಕ್ಷೆಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ.


ಗಾಂಧಿನಗರ್: ಅಹಮದಾಬಾದ್ ವಿಮಾನ ಅಪಘಾತದಲ್ಲಿ (Ahmedabad Plane Crash) ಸಾವನ್ನಪ್ಪಿದ 274 ಜನರ ಗುರುತು ಪತ್ತೆಯಾಗಿದ್ದು, ಅವರ ಮೃತದೇಹಗಳನ್ನು ಗುಜರಾತ್ ಸರ್ಕಾರ ಭಾನುವಾರ ಅವರ ಕುಟುಂಬಗಳಿಗೆ ಹಸ್ತಾಂತರಿಸಲಿದೆ ಎಂದು ಮೂಲಗಳು ತಿಳಿಸಿವೆ. ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಹೊರಗೆ ಡಿಎನ್ಎ ಪರೀಕ್ಷೆಯ ಮೂಲಕ ಗುರುತಿಸಲಾದ ಶವಗಳನ್ನು ಹಸ್ತಾಂತರಿಸಲು ಸುಮಾರು 600 ವೈದ್ಯರು, ಸಹಾಯಕರು ಮತ್ತು ಚಾಲಕರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
ಅಪಘಾತವಾದ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎಂದು ಹೇಳಲಾಗಿತ್ತು. ಇದೀಗ ಅವರ ಡಿನ್ಎನ್ಎ ಪರೀಕ್ಷೆಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ. ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ಶನಿವಾರ ರಾಜ್ಕೋಟ್ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಅಂಜಲಿ ರೂಪಾನಿ ಅವರು ಶುಕ್ರವಾರ ವಿಶೇಷ ಚಾರ್ಟರ್ಡ್ ವಿಮಾನದ ಮೂಲಕ ಲಂಡನ್ನಿಂದ ಅಹಮದಾಬಾದ್ಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂಜಲಿ ರೂಪಾನಿ ಮತ್ತು ಇತರ ಕುಟುಂಬ ಸದಸ್ಯರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.
ಗುರುವಾರ, ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಏಕಾಏಕಿ ಪತನಕ್ಕೊಳಗಾಗಿದೆ. ಮಧ್ಯಾಹ್ನ 1.30 ರ ಸುಮಾರಿಗೆ ಹಾರಾಟ ಆರಂಭಿಸಿದ ವಿಮಾನ ನಿಯಂತ್ರಣ ಕಳೆದುಕೊಂಡು ಮೇಘನಿನಗರ ಪ್ರದೇಶದಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ವೈದ್ಯರ ವಸತಿ ಗೃಹಕ್ಕೆ ಹೋಗಿ ಅಪ್ಪಳಿಸಿದೆ. ಪರಿಣಾಮ ಹಾಸ್ಟೆಲ್ನಲ್ಲಿದ್ದ 20 ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದ ದುರ್ಘಟನೆಯಲ್ಲಿ ಒಟ್ಟು 274 ಮೃತಪಟ್ಟಿದ್ದಾರೆ.
ಈ ಸುದ್ದಿಯನ್ನೂ ಓದಿ: Chopper Crash: ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ಅವಘಡ; ಹೆಲಿಕಾಪ್ಟರ್ ಪತನ- 7 ಜನರ ದುರ್ಮರಣ
ವಿಮಾನ ಟೇಕ್ ಆಫ್ ಆದ ಕೂಡಲೇ ಪೈಲಟ್ 'ಮೇಡೇ' ಎಂಬ ತುರ್ತು ಪರಿಸ್ಥಿತಿಯನ್ನು ಸೂಚಿಸುವ 'ಮೇಡೇ' ಎಂಬ ಸಂಕಷ್ಟದ ಕರೆ ನೀಡಿದ್ದರು. ಆದರೆ ತುರ್ತು ಪರಿಸ್ಥಿಯನ್ನು ನಿಯಂತ್ರಿಸುವ ಮೊದಲೇ ಈ ದುರ್ಘಟನೆ ನಡೆದು ಹೋಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ಗೆ ಭೇಟಿ ನೀಡಿ ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಮೋದಿ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಂತರ ಅವರು ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.