ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಶ್ಚಿಮ ಬಂಗಾಳದಲ್ಲಿ ನಿಲ್ಲುತ್ತಿಲ್ಲ ಹಿಂಸಾಚಾರ; MLA ಮನೆ ಬಳಿ ಬಾಂಬ್‌ ಸ್ಪೋಟ, 5 ಬಿಜೆಪಿ ಕಾರ್ಯಕರ್ತರಿಗೆ ಗಾಯ

ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಬಳಿಕ ದಿನೇ ದಿನೇ ಹಿಂಸಾಚಾರ ಹೆಚ್ಚುತ್ತಲೇ ಇದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿಯವರ ಪಿಎಯನ್ನು ಗುಂಡಿಕ್ಕಿ ಕೊಂದ ಬಳಿಕ ಇದೀಗ ಬಾಂಬ್‌ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

MLA ಮನೆ ಬಳಿ ಬಾಂಬ್‌ ಸ್ಪೋಟ, 5 ಬಿಜೆಪಿ ಕಾರ್ಯಕರ್ತರಿಗೆ ಗಾಯ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 7, 2026 12:42 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಬಳಿಕ ದಿನೇ ದಿನೇ (West Bengal Row) ಹಿಂಸಾಚಾರ ಹೆಚ್ಚುತ್ತಲೇ ಇದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿಯವರ ಪಿಎಯನ್ನು ಗುಂಡಿಕ್ಕಿ ಕೊಂದ ಬಳಿಕ ಇದೀಗ ಬಾಂಬ್‌ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಐವರು ಬಿಜೆಪಿ (Bjp) ಬೆಂಬಲಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ.

ಪನಿಹತಿಯ ಸೇಂಟ್ ಕ್ಸೇವಿಯರ್ ಸಂಸ್ಥೆಯ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಅಪರಿಚಿತ ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರ ಗುಂಪಿನ ಮೇಲೆ ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದಾರೆ. ಘಟನೆಯಲ್ಲಿ ಕನಿಷ್ಠ ಐದು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಗಾಯಾಳುಗಳನ್ನು ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ, ಪಣಿಹತಿಯ ವಾರ್ಡ್ ಸಂಖ್ಯೆ 2 ರ ದತ್ತ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ನಿವಾಸಿಗಳೊಂದಿಗೆ ಸಂವಹನ ನಡೆಸುತ್ತಿದ್ದಾಗ, ಮೋಟಾರ್ ಸೈಕಲ್‌ನಲ್ಲಿ ಬಂದ ವ್ಯಕ್ತಿಗಳ ಗುಂಪೊಂದು ಅವರನ್ನು ಗುರಿಯಾಗಿಸಿಕೊಂಡು ಬಾಂಬ್‌ಗಳಿಂದ ದಾಳಿ ನಡೆಸಿ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ. ದಾಳಿಕೋರರಿಗೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬೆಂಬಲ ನೀಡಿದೆ ಎಂದು ಬಿಜೆಪಿ ಆರೋಪಿಸಿದೆ, ಆದರೆ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷ ಈ ಆರೋಪವನ್ನು ನಿರಾಕರಿಸಿದೆ.

West Bengal Election ground report by Raghav Sharma Nidle: ಬಂಗಾಳದ ರಣಕಣದಲ್ಲಿ ನಾನು ಕಂಡದ್ದು, ಕೇಳಿದ್ದು...

"ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿಗಳನ್ನು ಬಂಧಿಸಲು ದಾಳಿ ನಡೆಸಲಾಗುತ್ತಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಫೋಟ ಸಂಭವಿಸಿದ ಪ್ರದೇಶವು ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ ಸಂತ್ರಸ್ತೆಯ ತಾಯಿ, ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕಿ ರತ್ನಾ ದೇಬ್ನಾಥ್ ಅವರ ನಿವಾಸದ ಬಳಿ ಇದೆ ಎಂದು ತಿಳಿದು ಬಂದಿದೆ.