ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tejasvi Surya: ನಾನು ಬಿಜೆಪಿ, ನೀವು ಕಾಂಗ್ರೆಸ್‌ ; ಇಬ್ಬರೂ ಆರ್‌ಸಿಬಿ ಅಭಿಮಾನಿಗಳು... ವಿಡಿಯೋ ಮಾಡಿದ ತೇಜಸ್ವಿ- ತರೂರ್‌

ಐಪಿಎಲ್‌ 18 ನೇ ಆವೃತ್ತಿಯ ಫೈನಲ್‌ನಲ್ಲಿ ಗೆದ್ದು ಬೀಗಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಅಭಿಮಾನಿಗಳು ಇಡೀ ರಾಜ್ಯಾದ್ಯಂತ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಪರ ಭಾಷಿಕರೂ ಕೂಡ ತಮ್ಮ ನೆಚ್ಚಿನ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ನಾನು ಬಿಜೆಪಿ, ನೀವು ಕಾಂಗ್ರೆಸ್‌ ; ಇಬ್ಬರೂ ಆರ್‌ಸಿಬಿ ಅಭಿಮಾನಿಗಳು!

Profile Vishakha Bhat Jun 4, 2025 3:05 PM

ಬೆಂಗಳೂರು: ಐಪಿಎಲ್‌ 18 ನೇ ಆವೃತ್ತಿಯ ಫೈನಲ್‌ನಲ್ಲಿ ಗೆದ್ದು ಬೀಗಿದ (Tejasvi Surya) ರಾಯಲ್‌ ಚಾಲೆಂಜರ್ಸ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಅಭಿಮಾನಿಗಳು ಇಡೀ ರಾಜ್ಯಾದ್ಯಂತ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಪರ ಭಾಷಿಕರೂ ಕೂಡ ತಮ್ಮ ನೆಚ್ಚಿನ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಆಪರೇಷನ್‌ ಸಿಂದೂರ್‌ ಕುರಿತು ಭಾರತದ ನಿಲುವನ್ನು ವ್ಯಕ್ತಪಡಿಸಲು ಸರ್ವ ಪಕ್ಷ ನಿಯೋಗ ಸದಸ್ಯರು ಕೂಡ ಆರ್‌ಸಿಬಿ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕಾಂಗ್ರೆಸ್‌ ಸಂಸದ ಶಶಿ ತರೂರ್‌ (Shashi Taroor) ಆರ್‌ಸಿಬಿಗೆ ವಿಡಿಯೋ ಮೂಲಕ ಶುಭ ಕೋರಿದರು.

ಸೆಲ್ಫಿ ವಿಡಿಯೋ ಮಾಡಿರುವ ತೇಜಸ್ವಿ ಸೂರ್ಯ ಹಾಗೂ ಶಶಿ ತರೂರ್‌ ಇಬ್ಬರು ತಮ್ಮ ನೆಚ್ಚಿನ ತಂಡ ಗೆದ್ದಿರುವುದು ಖುಷಿ ತಂದಿದೆ ಎಂದು ಹೇಳಿದರು. ಮ್ಯಾಚ್‌ ನಡೆಯಬೇಕಿದ್ದರೆ ನಾವು ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆವು. ಹೀಗಾಗಿ ಪಂದ್ಯವನ್ನು ವೀಕ್ಷಿಸಲಾಗಲಿಲ್ಲ. ವಿಮಾನದಿಂದ ಕೆಳಗಿಳಿದ ಕೂಡಲೇ ನಾವು ಫಲಿತಾಂಶವನ್ನು ವೀಕ್ಷಿಸಿದೆವು. ಬೆಂಗಳೂರು ತಂಡ ಗೆದ್ದಿರುವುದು ತುಂಬಾ ಖುಷಿಯಾಯಿತು ಎಂದು ಅವರು ಹೇಳಿದ್ದಾರೆ.



ಸದ್ಯ ತೇಜಸ್ವಿ ಸೂರ್ಯ ಇದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಹರ್ಷ ವ್ಯಕ್ತಪಡಿಸಿದರು. ರಾಜಕೀಯದ ನಡುವೆಯೂ ತಂಡವನ್ನು ಬೆಂಬಲಿಸಿದ್ದು ಸಂತಸ ತಂದಿದೆ ಎಂದು ನೆಟ್ಟಿಗರು ಹೇಳಿದ್ದಾರೆ. 8ನೇ ಆವೃತ್ತಿಯ ಐಪಿಎಲ್‌(IPL 2025) ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ 6 ರನ್‌ಗಳ ಜಯ ಸಾಧಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಗೆಲುವನ್ನು ಸಾಧಿಸಿರುವುದಕ್ಕೆ ತಂಡದ ಮಾಜಿ ಮಾಲೀಕ, ಉದ್ಯಮಿ ವಿಜಯ್‌ ಮಲ್ಯ(Vijay Mallya) ಕೂಡ ಆರ್‌ಸಿಬಿ ತಂಡಕ್ಕೆ ಅಭಿನಂದಿಸಿದ್ದು, ತಂಡ ಮತ್ತು ವಿರಾಟ್‌ ಕೊಹ್ಲಿಯ ಬಗ್ಗೆ ಭಾವುಕ ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: IPL 2025 Final: ಆರ್‌ಸಿಬಿ-ಪಂಜಾಬ್‌ ಫೈನಲ್‌ ಪಂದ್ಯಕ್ಕೂ ಮುನ್ನ ನಿರ್ದೇಶಕ ರಾಜಮೌಳಿ ಭಾವನಾತ್ಮಕ ಪೋಸ್ಟ್‌

ಟ್ವಿಟರ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಯ, 'ನಾನು ಆರ್‌ಸಿಬಿಯನ್ನು ಸ್ಥಾಪಿಸಿದಾಗ ಬೆಂಗಳೂರಿಗೆ ಐಪಿಎಲ್ ಟ್ರೋಫಿ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದ ಕೊಹ್ಲಿಯನ್ನು ಆಯ್ಕೆ ಮಾಡಿದ್ದೆ, ಅವರು 18 ವರ್ಷಗಳ ಕಾಲ ಆರ್‌ಸಿಬಿಯೊಂದಿಗೆ ಇದ್ದು ಚಾಂಪಿಯನ್‌ ಆಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ 'ಆರ್‌ಸಿಬಿ ಇತಿಹಾಸದಲ್ಲಿ ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್ ಅಳಿಸಲಾಗದ ಭಾಗವಾಗಿದ್ದಾರೆ. ಕೊನೆಗೂ ಐಪಿಎಲ್ ಟ್ರೋಫಿ ಬೆಂಗಳೂರಿಗೆ ಆಗಮಿಸುತ್ತಿದೆ. ನನ್ನ ಕನಸನ್ನು ನನಸಾಗಿಸಿದ ಎಲ್ಲರಿಗೂ ಅಭಿನಂದನೆಗಳು, ಮತ್ತೊಮ್ಮೆ ಧನ್ಯವಾದಗಳು. ಆರ್‌ಸಿಬಿ ಅಭಿಮಾನಿಗಳು ಟ್ರೋಫಿಗೆ ಅರ್ಹರು. ಈ ಸಲ ಕಪ್‌ ನಮ್ದೇ’ ಎಂದು ಬರೆದುಕೊಂಡಿದ್ದಾರೆ.