Narendra Modi: ಟ್ರಂಪ್ ಆಹ್ವಾನವನ್ನು ತಿರಸ್ಕರಿಸಿದ್ದು ಇದೇ ಕಾರಣಕ್ಕೇ; ಅಮೆರಿಕಕ್ಕೆ ತೆರಳದ ನಿಜವಾದ ಕಾರಣ ಬಿಚ್ಚಿಟ್ಟ ಮೋದಿ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಳೆದ ವಾರ ವಿದೇಶ ಪ್ರವಾಸದಲ್ಲಿದ್ದರು. ಕೆನಡಾದಲ್ಲಿ ಅವರು G7 ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅದೇ ಸಂದರ್ಭದಲ್ಲಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಸುಮಾರು 35 ನಿಮಿಷಗಳ ಕಾಲ ಫೋನ್ನಲ್ಲಿ ಮಾತನಾಡಿದ್ದರು. ಈ ವೇಳೆ ಅವರು ಟ್ರಂಪ್ ಮೋದಿಗೆ ಅಮೆರಿಕಕ್ಕೆ ಬರುವಂತೆ ಆಹ್ವಾನಿಸಿದ್ದರು.


ಭುವನೇಶ್ವರ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಳೆದ ವಾರ ವಿದೇಶ ಪ್ರವಾಸದಲ್ಲಿದ್ದರು. ಕೆನಡಾದಲ್ಲಿ ಅವರು G7 ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅದೇ ಸಂದರ್ಭದಲ್ಲಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರೊಂದಿಗೆ ಸುಮಾರು 35 ನಿಮಿಷಗಳ ಕಾಲ ಫೋನ್ನಲ್ಲಿ ಮಾತನಾಡಿದ್ದರು. ಈ ವೇಳೆ ಅವರು ಟ್ರಂಪ್ ಮೋದಿಗೆ ಅಮೆರಿಕಕ್ಕೆ ಬರುವಂತೆ ಆಹ್ವಾನಿಸಿದ್ದರು. ಆದರೆ ಮೋದಿ ಅದನ್ನು ತಿರಸ್ಕರಿಸಿದ್ದರು. ಇಂದು ಅವರು ಅಮೆರಿಕ್ಕಕೆ ತೆರಳಿದಿರುವ ನಿಜವಾದ ಕಾರಣವನ್ನು ತಿಳಿಸಿದ್ದಾರೆ.
ಅಮೆರಿಕಕ್ಕೆ ಭೇಟಿ ನೀಡಬೇಕೆಂಬ ಆಹ್ವಾನವನ್ನು ತಿರಸ್ಕರಿಸಿದ್ದು, ಏಕೆಂದರೆ ಅವರು "ಭಗವಾನ್ ಜಗನ್ನಾಥನ ಭೂಮಿಗೆ ಬರಲು ಎಂದು ಮೋದಿ ಹೇಳಿದ್ದಾರೆ. ಜಗನ್ನಾಥನ ಭೂಮಿಗೆ ಭೇಟಿ ನೀಡಲು ಅಮೆರಿಕಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನವನ್ನು ನಾನು ವಿನಮ್ರವಾಗಿ ತಿರಸ್ಕರಿಸಿದೆ " ಎಂದು ಪ್ರಧಾನಿ ಮೋದಿ ಹೇಳಿದರು. ಒಡಿಶಾದಲ್ಲಿ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಭುವನೇಶ್ವರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಪುರಿ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳು, ಅದರ 'ರತ್ನ ಭಂಡಾರ'ವನ್ನು ಮತ್ತೆ ತೆರೆಯುವ ಮೂಲಕ ರಾಜ್ಯ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸಿದೆ ಎಂದು ಹೇಳಿದರು. ಒಡಿಶಾದಲ್ಲಿ ಮೊದಲ ಬಿಜೆಪಿ ಸರ್ಕಾರ ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಗಳ ವಿತರಣೆಯೊಂದಿಗೆ ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿದೆ ಎಂದು ಅವರು ಹೇಳಿದ್ದಾರೆ.
ಕೆನಡಾದಲ್ಲಿದ್ದಾಗ ಮೋದಿ ಹಾಗೂ ಟ್ರಂಪ್ ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾಹಿತಿಯನ್ನು ನೀಡಿದ್ದರು. ಉಭಯ ದೇಶದ ನಾಯಕರು 35 ನಿಮಿಷಗಳ ಕಾಲ ಮಾತನಾಡಿದರು. ಕರೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಆಪರೇಷನ್ ಸಿಂದೂರ್ದ ಕುರಿತು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಭಾರತ ಹಾಗೂ ಪಾಕ್ ನಡುವೆ ಕದನ ವಿರಾಮ ಘೋಷಣೆ ಕುರಿತು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದರು.
ಈ ಸುದ್ದಿಯನ್ನೂ ಓದಿ: Donald Trump: ನಾನೇ ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು, ಬಡಾಯಿ ಕೊಚ್ಚಿಕೊಳ್ಳುವ ಟ್ರಂಪ್; ಮೋದಿ ಸ್ಪಷ್ಟನೆ ಬಳಿಕವೂ ನಿಲ್ಲದ ಹೇಳಿಕೆ
ಪಾಕ್ ಮನವಿ ಬಳಿಕ ಭಾರತ ಪರಸ್ಪರ ಹೊಂದಾಣಿಕೆಯೊಂದಿಗೆ ಕದನ ವಿರಾಮ ಘೋಷಿಸಿದೆ. ಇದರಲ್ಲಿ ಯಾವ ದೇಶದ ಮಧ್ಯಸ್ಥಿಕೆಯೂ ಇರಲಿಲ್ಲ. ಯಾವುದೇ ವ್ಯಾಪಾರ ಒಪ್ಪಂದದ ಬಗ್ಗೆಯೂ ಚರ್ಚಿಸಿಲ್ಲ. ಭಾರತವು ಇನ್ನುಮುಂದೆ ಭಯೋತ್ಪಾದನೆಯನ್ನು ಪ್ರಾಕ್ಸಿ ಯುದ್ಧವಾಗಿ ನೋಡುವುದಿಲ್ಲ, ಬದಲಿಗೆ ಯುದ್ಧವಾಗಿ ನೋಡುತ್ತದೆ. ಭಾರತದ ಆಪರೇಷನ್ ಸಿಂದೂರ್ ಇನ್ನೂ ಮುಂದುವರಿಯುತ್ತದೆ. ಉಗ್ರರನ್ನು ನಾವು ಸೆದೆಬಡಿಯುತ್ತೇವೆ ಎಂದು ಅವರು ಹೇಳಿದ್ದಾರೆ. ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಮಾತ್ರ ಗುರಿಯಾಗಿಸಿಕೊಂಡು ನಾವು ದಾಳಿ ನಡೆಸಿದ್ದೇವೆ ಎಂದು ಹೇಳಿದ್ದರು.