ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಇರಾನ್ ವಿರುದ್ಧದ ದಾಳಿಗೆ ಬಳಕೆಯಾಯ್ತೆ ಭಾರತೀಯ ನೌಕಾನೆಲೆ? ಅಮೆರಿಕ ಮಾಜಿ ಸೇನಾಧಿಕಾರಿ ಹೇಳಿಕೆ ಖಂಡಿಸಿದ ವಿದೇಶಾಂಗ ಸಚಿವಾಲಯ

ಅಮೆರಿಕ ಸೇನೆಯ ಮಾಜಿ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್, ಇರಾನ್ ಮೇಲೆ ದಾಳಿ ಮಾಡಲು ಅಮೆರಿಕ ಭಾರತೀಯ ನೌಕಾನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ನೀಡಿದ ವಿಡಿಯೊ ವೈರಲ್ ಆಗಿತ್ತು. ಆದರೆ ಈ ಆರೋಪಗಳನ್ನು ಭಾರತ ಸರ್ಕಾರ ತಳ್ಳಿಹಾಕಿದ್ದು, ಅಮೆರಿಕ ನೌಕಾಪಡೆ ಯಾವುದೇ ಭಾರತೀಯ ನೌಕಾನೆಲೆ ಅಥವಾ ಬಂದರು ಸೌಲಭ್ಯಗಳನ್ನು ಬಳಸುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

ಇರಾನ್ ಯುದ್ಧದಲ್ಲಿ ಭಾರತ ಪಾತ್ರವಿಲ್ಲ: ವಿದೇಶಾಂಗ ಸಚಿವಾಲಯ

ಸಾಂದರ್ಭಿಕ ಚಿತ್ರ -

Profile
Sushmitha Jain Mar 5, 2026 2:47 PM

ಹೊಸದಿಲ್ಲಿ, ಮಾ. 5: ಇರಾನ್ ಸಂಬಂಧಿತ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೆ ಬಿಗಡಾಯಿಸುತ್ತಿದ್ದು ಅದರ ಪರಿಣಾಮ ಜಾಗತಿಕ ಆರ್ಥಿಕತೆಯ ಮೇಲೆ ಬೀರುತ್ತಿದೆ. ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸುತ್ತಿದ್ದು, ಈ ಸಂಘರ್ಷವು ಪ್ರಾದೇಶಿಕ ಭದ್ರತೆಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹಲವು ರಾಷ್ಟ್ರಗಳು ತಮ್ಮ ರಾಜಕೀಯ ಹಾಗೂ ಸೈನಿಕ ನಿಲುವುಗಳನ್ನು ವ್ಯಕ್ತಪಡಿಸುತ್ತಿರುವಾಗ, ಭಾರತ ಮಾತ್ರ ಈ ಯುದ್ಧದಲ್ಲಿ ತಟಸ್ಥ ನಿಲುವನ್ನು ಮುಂದುವರಿಸಿಕೊಂಡಿದೆ.

ಇದರ ನಡುವೆ ಅಮೆರಿಕ ಸೇನೆಯ ಮಾಜಿ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅಮೆರಿಕವು ಇರಾನ್ ಮೇಲೆ ದಾಳಿ ನಡೆಸಲು ಭಾರತೀಯ ನೌಕಾನೆಲೆಗಳನ್ನು ಬಳಸುತ್ತಿದೆ ಎಂದು ಅವರು ಹೇಳಿಕೆ ನೀಡಿದ್ದರು. OAN (One America News Network) ಎಂಬ ಅಮೆರಿಕದ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು, “ಅಮೆರಿಕದ ಕೆಲವು ನೆಲೆಗಳು ಹಾಗೂ ಬಂದರುಗಳು ಹಾನಿಗೊಳಗಾಗಿರುವುದರಿಂದ ಭಾರತೀಯ ನೌಕಾನೆಲೆಗಳನ್ನು ಬಳಸುವ ಪರಿಸ್ಥಿತಿ ಎದುರಾಗಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ” ಎಂದು ಹೇಳಿದ್ದರು.

ಇದುವರೆಗೂ 5 ವಿಮಾನಗಳಲ್ಲಿ 1500 ಮಂದಿ ಗಲ್ಫ್‌ನಿಂದ ಬೆಂಗಳೂರಿಗೆ

ಈ ಹೇಳಿಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರತವು ಅಮೆರಿಕ ಪರವಾಗಿ ಯುದ್ಧದಲ್ಲಿ ಪರೋಕ್ಷವಾಗಿ ಭಾಗವಹಿಸುತ್ತಿದೆ ಎಂಬ ಚರ್ಚೆ ಮುನ್ನಲೆಗೆ ಬಂದಿದೆ. ಹಲವು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದ್ದು, ವಿವಿಧ ರೀತಿಯ ಅಭಿಪ್ರಾಯಗಳನ್ನು ವ್ಯಕ್ತವಾಗುತ್ತಿದೆ.

ವಿದೇಶಾಂಗ ಸಚಿವಾಲಯದ ಪೋಸ್ಟ್‌:



ಈ ಆರೋಪಗಳನ್ನು ಭಾರತ ಸರ್ಕಾರ ಸ್ಪಷ್ಟವಾಗಿ ತಳ್ಳಿ ಹಾಕಿದೆ. ಭಾರತದ ವಿದೇಶಾಂಗ ಸಚಿವಾಲಯದ ಅಧಿಕೃತ ಫ್ಯಾಕ್ಟ್‌ ಚೆಕ್ ವಿಭಾಗ ತನ್ನ X ಖಾತೆಯಲ್ಲಿ “ನಕಲಿ ಸುದ್ದಿ ಎಚ್ಚರಿಕೆ” ಎಂಬ ಶೀರ್ಷಿಕೆಯಡಿ ಪೋಸ್ಟ್ ಮಾಡಿದ್ದು, ಅಮೆರಿಕ ನೌಕಾಪಡೆಯು ಭಾರತೀಯ ನೌಕಾನೆಲೆಗಳು ಅಥವಾ ಬಂದರು ಸೌಲಭ್ಯಗಳನ್ನು ಬಳಸುತ್ತಿದೆ ಎಂಬ ಮಾಹಿತಿ ಸಂಪೂರ್ಣವಾಗಿ ಸುಳ್ಳು ಹಾಗೂ ಆಧಾರರಹಿತ ಎಂದು ಸ್ಪಷ್ಟಪಡಿಸಿದೆ. ಇಂತಹ ತಪ್ಪು ಮಾಹಿತಿಗಳನ್ನು ನಂಬಬಾರದು ಹಾಗೂ ಹಂಚಿಕೊಳ್ಳಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಇದೇ ವೇಳೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಹಿಂದೂ ಮಹಾಸಾಗರ ಪ್ರದೇಶಕ್ಕೂ ತಲುಪಿದೆಯೆಂಬ ವರದಿಗಳು ಕೂಡ ಹೊರಬಂದಿವೆ. ಬುಧವಾರ (ಮಾರ್ಚ್‌ 4) ಶ್ರೀಲಂಕಾ ಕರಾವಳಿಯ ಸಮೀಪ ಅಮೆರಿಕದ ಜಲಾಂತರ್ಗಾಮಿ ನೌಕೆ ಟಾರ್ಪಿಡೊ ದಾಳಿಗೆ ಇರಾನ್‌ನ ಐರಿಸ್ ದೆನಾ ಎಂಬ ಯುದ್ಧ ನೌಕೆ ಮುಳುಗಿದೆ. ಈ ದಾಳಿಯಲ್ಲಿ ಇದುವರೆಗೆ ಕನಿಷ್ಠ 87 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಈ ದಾಳಿಗಳಲ್ಲಿ ಅಮೆರಿಕ ನೌಕಾಪಡೆಯು ಯಾವುದೇ ಭಾರತೀಯ ಬಂದರು ಅಥವಾ ನೌಕಾನೆಲೆಗಳನ್ನು ಬಳಸಿಲ್ಲ ಎಂದು ಭಾರತೀಯ ಅಧಿಕಾರಿಗಳು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದ ಸುಳ್ಳು ಸುದ್ದಿಗಳಿಗೆ ಸರ್ಕಾರ ಅಧಿಕೃತವಾಗಿ ಬ್ರೇಕ್ ಹಾಕಿದ್ದು, ಭಾರತ ತನ್ನ ತಟಸ್ಥ ವಿದೇಶಾಂಗ ನೀತಿಯನ್ನು ಮುಂದುವರಿಸುತ್ತಿದೆ ಎಂದು ತಿಳಿಸಿದೆ.