ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Brain Eating Amoeba: ಅಲರ್ಟ್‌... ಅಲರ್ಟ್‌! ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಮತ್ತೆ ಎರಡು ಬಲಿ

ಮಿದುಳು ತಿನ್ನುವ ಅಮೀಬಾಕ್ಕೆ ಕೇರಳದಲ್ಲಿ ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಅಮೀಬಿಕ್ ಎನ್ಸೆಫಾಲಿಟಿಸ್ ಅಪರೂಪ ಹಾಗೂ ಮಾರಣಾಂತಿಕವಾಗಿದ್ದು, ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ. ಇದು ಮುಕ್ತ ಜೀವಂತ ಅಮೀಬಾ ಆಗಿರುವ ನೈಗ್ಲೇರಿಯಾ ಫೌಲೇರಿ ಯಿಂದ ಉಂಟಾಗುತ್ತದೆ. ಇದು ತಾಜಾ ನೀರಿನ ಸೆಲೆಗಳಾದ, ಕೆರೆ, ನದಿಗಳಲ್ಲೂ ಕಾಣಬಹುದಾಗಿದೆ.

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಮತ್ತೆ ಎರಡು ಬಲಿ

ಸಾಂಧರ್ಬಿಕ ಚಿತ್ರ -

Profile Sushmitha Jain Sep 1, 2025 6:05 PM

ಕೋಝಿಕೋಡ್: ಕೇರಳದ (Kerala) ಕೋಝಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (Kozhikode Medical College Hospital) ಅಪರೂಪದ ಮತ್ತು ಮಾರಕ ಮೆದುಳಿನ ಸೋಂಕಾದ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌ಗೆ (Amoebic Meningoencephalitis) ಚಿಕಿತ್ಸೆ ಪಡೆಯುತ್ತಿದ್ದ ಮೂರು ತಿಂಗಳ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಈ ಘಟನೆಯೊಂದಿಗೆ ಆಗಸ್ಟ್ ತಿಂಗಳಲ್ಲಿ ಕೇರಳದಲ್ಲಿ ಈ ಸೋಂಕಿನಿಂದ ಸಾವಿನ ಸಂಖ್ಯೆ ಮೂರಕ್ಕೇರಿದೆ.

ಕೋಝಿಕೋಡ್ ಜಿಲ್ಲೆಯ ಒಮಾಸ್ಸೆರಿಯ ಅಬೂಬಕರ್ ಸಿದ್ದಿಖ್ ಅವರ ಮೂರು ತಿಂಗಳ ಮಗು, ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿತ್ತು. ಆದರೆ, ಭಾನುವಾರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಮಗು ಮೃತಪಟ್ಟಿದೆ. ಇನ್ನೊಬ್ಬರು ಮಲಪ್ಪುರಂ ಜಿಲ್ಲೆಯ ಕಪ್ಪಿಲ್‌ನ 52 ವರ್ಷದ ರಮ್ಲಾ ಅವರಿಗೆ ಜುಲೈ 8 ರಂದು ರೋಗಲಕ್ಷಣಗಳು ಕಂಡುಬಂದಿದ್ದವು. ಅವರನ್ನು ಆರಂಭದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಸ್ಥಿತಿ ಗಂಭೀರವಾದಾಗ ಕೋಝಿಕೋಡ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು.

ಈ ಸುದ್ದಿಯನ್ನು ಓದಿ: Viral News: ದಿನಕ್ಕೆ 12 ಗಂಟೆಗಳ ಕಾಲ ಕೆಲಸ ಮಾಡಬೇಕೆಂದ 23 ವರ್ಷದ ಭಾರತೀಯ ಮೂಲದ ಉದ್ಯಮಿ; ನೆಟ್ಟಿಗರಿಂದ ಟೀಕೆಗಳ ಮಹಾಪೂರ

ಈ ಹಿಂದೆ, ಆಗಸ್ಟ್ 14 ರಂದು, ತಾಮರಶ್ಶೇರಿಯ 9 ವರ್ಷದ ಬಾಲಕಿಯೊಬ್ಬಳು ಇದೇ ಸೋಂಕಿನಿಂದ ಇದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಆರೋಗ್ಯ ಇಲಾಖೆಯ ಪ್ರಕಾರ, ಕೋಝಿಕೋಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಿಂದ ಒಟ್ಟು ಎಂಟು ರೋಗಿಗಳು ಈಗ ಕೋಝಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಸಾಮಾನ್ಯವಾಗಿ ಕಲುಷಿತ ನೀರಿನಲ್ಲಿ ಈಜುವುದರಿಂದ ಅಥವಾ ಸ್ನಾನ ಮಾಡುವುದರಿಂದ ಸೋಂಕು ತಗುಲುತ್ತದೆ. ಈ ವರ್ಷ ಕೇರಳದಾದ್ಯಂತ 42 ಪ್ರಕರಣಗಳು ವರದಿಯಾಗಿವೆ. ಪುನರಾವರ್ತಿತ ಪ್ರಕರಣಗಳನ್ನು ತಡೆಗಟ್ಟಲು, ಆರೋಗ್ಯ ಇಲಾಖೆಯು ಕೋಝಿಕೋಡ್, ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಬಾವಿಗಳು ಮತ್ತು ನೀರಿನ ಶೇಖರಣಾ ತೊಟ್ಟಿಗಳ ಕ್ಲೋರಿನೇಷನ್ ಕಾರ್ಯವನ್ನು ಆರಂಭಿಸಿದೆ. ಜೊತೆಗೆ, ಸೋಂಕು ತಡೆಗಟ್ಟಲು ಜಾಗೃತಿ ಅಭಿಯಾನಗಳನ್ನು ಸಹ ನಡೆಸಲಾಗುತ್ತಿದೆ. ಈ ಸೋಂಕಿನ ಬಗ್ಗೆ ಹೆಚ್ಚುತ್ತಿರುವ ಕಳವಳದಿಂದಾಗಿ ರಾಜ್ಯವು ಎಚ್ಚರಿಕೆಯಿಂದ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.