ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Building Collapses: 40 ವರ್ಷಗಳ ಹಿಂದಿನ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರು ಸಾವು, ಮತ್ತೊಬ್ಬ ನಾಪತ್ತೆ

ತ್ರಿಶೂರ್‌ನ ಕೊಡಕರದಲ್ಲಿ ವಲಸೆ ಕಾರ್ಮಿಕರನ್ನು ಹೊಂದಿದ್ದ ಎರಡು ಅಂತಸ್ತಿನ ಕಟ್ಟಡವೊಂದು ಶುಕ್ರವಾರ ಮುಂಜಾನೆ ಕುಸಿದು ಬಿದ್ದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಹೆಚ್ಚಿನ ಕಾರ್ಮಿಕರು ಕೆಲಸಕ್ಕೆ ಹೊರಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

40 ವರ್ಷಗಳ ಹಿಂದಿನ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರು ಸಾವು,

Profile Vishakha Bhat Jun 27, 2025 11:52 AM

ತಿರುವನಂತಪುರಂ: ತ್ರಿಶೂರ್‌ನ ಕೊಡಕರದಲ್ಲಿ ವಲಸೆ ಕಾರ್ಮಿಕರನ್ನು (Building Collapses) ಹೊಂದಿದ್ದ ಎರಡು ಅಂತಸ್ತಿನ ಕಟ್ಟಡವೊಂದು ಶುಕ್ರವಾರ ಮುಂಜಾನೆ ಕುಸಿದು ಬಿದ್ದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಹೆಚ್ಚಿನ ಕಾರ್ಮಿಕರು ಕೆಲಸಕ್ಕೆ ಹೊರಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಮೂವರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ತಂಡಗಳು ಅವರಲ್ಲಿ ಇಬ್ಬರನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು, ಪಶ್ಚಿಮ ಬಂಗಾಳದ ರಾಹುಲ್ (19) ಮತ್ತು ರೂಪೆಲ್ (21) ಮೃತಪಟ್ಟವರಾಗಿದ್ದಾರೆ.

ರೂಪೆಲ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದ. ರಾಹುಲ್‌ನನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಆತ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳ ಮೂಲದ ಅಲೀಮ್ (30) ಅವರ ಪತ್ತೆಗಾಗಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕೊಡಕರ ಪಂಚಾಯತ್ ಕಚೇರಿಯ ಬಳಿ ಇರುವ ಹಳೆಯ ಕಟ್ಟಡವು ಲ್ಯಾಟರೈಟ್ ಇಟ್ಟಿಗೆಗಳಿಂದ ಮಾಡಲ್ಪಟ್ಟಿದ್ದು, ಕುಸಿತದ ಸಮಯದಲ್ಲಿ 17 ವಲಸೆ ಕಾರ್ಮಿಕರು ಇದ್ದರು ಎಂದು ವರದಿಯಾಗಿದೆ. ಅವರಲ್ಲಿ ಹದಿನಾಲ್ಕು ಮಂದಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಹಿಂದಿನ ರಾತ್ರಿ ಈ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಟ್ಟಡ ದುರ್ಬಲಗೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ, ಸ್ಥಳೀಯ ನಿವಾಸಿಗಳೊಂದಿಗೆ ಬೆಳಿಗ್ಗೆಯಿಂದ ತೀವ್ರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ವಯನಾಡಿನ ಚೂರಲ್ಮಲಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದೆ.

ಘಟನೆಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಬೇಕಾಗಿದೆ ಎಂದು ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿಯನ್ನೂ ಓದಿ: Building Collapse: ದೆಹಲಿಯ ಮುಸ್ತಫಾಬಾದ್‌ನಲ್ಲಿ ಕಟ್ಟಡ ಕುಸಿತ; ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋ

ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ರಾಜ್ಯ ರಾಜಧಾನಿಯ ಕೆಲವು ಭಾಗಗಳು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮರಗಳು ಉರುಳಿಬಿದ್ದು, ದೈನಂದಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ವಯನಾಡ್, ಮಲಪ್ಪುರಂ, ತ್ರಿಶೂರ್ ಮತ್ತು ಇಡುಕ್ಕಿಗೆ ಆರೆಂಜ್ ಅಲರ್ಟ್ ನೀಡಿದೆ.