Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿ; ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಸ್ಥಳೀಯರ ಬಂಧನ
ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ (Pahalgam Terror Attack) 26 ಅಮಾಯಕರು ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿದ್ದರು. ಅದರ ತನಿಖೆಯನ್ನು NIA ವಹಿಸಿಕೊಂಡಿದೆ. ಇದೀಗ ಪ್ರಮುಖ ಪ್ರಗತಿಯಲ್ಲಿ , ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಯೋತ್ಪಾದಕರಿಗೆ ಆಶ್ರಯ ನೀಡಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ.


ಶ್ರೀನಗರ: ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ (Pahalgam Terror Attack) 26 ಅಮಾಯಕರು ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿದ್ದರು. ಅದರ ತನಿಖೆಯನ್ನು NIA ವಹಿಸಿಕೊಂಡಿದೆ. ಇದೀಗ ಪ್ರಮುಖ ಪ್ರಗತಿಯಲ್ಲಿ , ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಯೋತ್ಪಾದಕರಿಗೆ ಆಶ್ರಯ ನೀಡಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಬಂಧಿತ ಇಬ್ಬರು ವ್ಯಕ್ತಿಗಳನ್ನು ಪಹಲ್ಗಾಮ್ನ ಬಟ್ಕೋಟ್ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಪಹಲ್ಗಾಮ್ನ ಹಿಲ್ ಪಾರ್ಕ್ನ ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ. ಈ ಇಬ್ಬರನ್ನು NIA ವಿಚಾರಣೆಗೆ ಒಳಪಡಿಸಿದೆ.
ವಿಚಾರಣೆಯ ಸಮಯದಲ್ಲಿ, ಈ ಇಬ್ಬರೂ ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಗುರುತನ್ನು ಬಹಿರಂಗಪಡಿಸಿದ್ದಾರೆ. ಅವರು ಲಷ್ಕರ್-ಎ-ತೈಬಾ (ಎಲ್ಇಟಿ) ಗೆ ಸಂಬಂಧಿಸಿದ ಉಗ್ರರು ಪಾಕಿಸ್ತಾನಿ ಪ್ರಜೆಗಳು ಎಂದು ಅವರು ದೃಢಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್ಐಎ ತನಿಖೆಯ ಪ್ರಕಾರ, ಪರ್ವೈಜ್ ಮತ್ತು ಬಶೀರ್ ಇಬ್ಬರೂ ದಾಳಿಗೆ ಮೊದಲು ಹಿಲ್ ಪಾರ್ಕ್ನಲ್ಲಿರುವ ಕಾಲೋಚಿತ ಧೋಕ್ (ಮನೆಯಲ್ಲಿ) ನಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು ಎಂದು ತಿಳಿದು ಬಂದಿದೆ.
ಪರ್ವೈಜ್ ಮತ್ತು ಬಶೀರ್ ಇಬ್ಬರನ್ನೂ 1967 ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19 ರ ಅಡಿಯಲ್ಲಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಮೂವರು ಪಾಕಿಸ್ತಾನಿಗಳಾದ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್, ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್, ಆಸಿಫ್ ಫೌಜಿ ಮತ್ತು ಅನಂತನಾಗ್ ನಿವಾಸಿ ಸ್ಥಳೀಯ ಉಗ್ರಗಾಮಿ ಅಬಿದ್ ಹುಸೇನ್ ಥೋಕರ್ ಸೇರಿದಂತೆ ನಾಲ್ವರು ಉಗ್ರರು ಭಾಗಿಯಾಗಿದ್ದಾರೆ ಎಂದು ಭದ್ರತಾ ಪಡೆಗಳು ಶಂಕಿಸಿವೆ.
ಈ ಸುದ್ದಿಯನ್ನೂ ಓದಿ: Cabinet Meet In Pahalgam: ಪಹಲ್ಗಾಮ್ನಲ್ಲಿ ಬೀಡು ಬಿಟ್ಟ ಓಮರ್ ಅಬ್ದುಲ್ಲಾ... ವಿಶೇಷ ಸಂಪುಟ ಸಭೆ- ಗಾಲ್ಫ್ ಆಡಿ ಗಮನ ಸೆಳೆ ಫಾರೂಕ್ ಅಬ್ದುಲ್ಲಾ
ಉಗ್ರರ ಪತ್ತೆಯನ್ನು ತಿಳಿಸಿದವರಿಗೆ ಪೊಲೀಸರು 20 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಪ್ರಕರಣದ ತನಿಖೆಯನ್ನು NIA ವಹಿಸಿಕೊಂಡಿದ್ದು, NIA ಅಧಿಕಾರಿಗಳು ತನಿಖೆಗಾಗಿ ಪಹಲ್ಗಾಮ್ನಲ್ಲಿ ಮೊಕ್ಕಾಂ ಹೂಡಿದ್ದಾರೆ. NIA ಮುಖ್ಯಸ್ಥ ಸದಾನಂದ ವಸಂತ್ ದಾತೆ ಕೂಡ ದಾಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.