Ahmedabad Plane Crash: ವಿಮಾನ ದುರಂತ ಸ್ಥಳಕ್ಕೆ ಮೋದಿ ಭೇಟಿ ; ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ
ಗುಜರಾತಿನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ (Ahmedabad Plane Crash) ವಿಮಾನ ಪತನಗೊಂಡು 241 ಮಂದಿ ಮೃತಪಟ್ಟಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ಗೆ ಭೇಟಿ ನೀಡಿದ್ದಾರೆ. ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದರು.


ಗಾಂಧಿನಗರ: ಗುಜರಾತಿನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ (Ahmedabad Plane Crash) ವಿಮಾನ ಪತನಗೊಂಡು 241 ಮಂದಿ ಮೃತಪಟ್ಟಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ಗೆ ಭೇಟಿ ನೀಡಿದ್ದಾರೆ. ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದರು. ಪ್ರಧಾನಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಮೇಘನಿನಗರ ಪ್ರದೇಶದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲಿ ಹೋದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಇದ್ದರು.
ಮೋದಿ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ - ಭಾರತೀಯ ಮೂಲದ ಬ್ರಿಟಿಷ್ ಪ್ರಜೆ - ವಿಶ್ವಶ್ ಕುಮಾರ್ ರಮೇಶ್ ಅವರನ್ನು ಅವರು ಆಸ್ಪತ್ರೆಯಲ್ಲಿ ಭೇಟಿಯಾದರು.
#WATCH | PM Modi visited the Air India plane crash site and assessed the ground situation, today
— ANI (@ANI) June 13, 2025
(Video source: DD) pic.twitter.com/nTGGScRIlf
ಗುಜರಾತ್ ಮುಖ್ಯಮಂತ್ರಿಯಾಗಿ 12 ವರ್ಷಗಳ ಕಾಲ ಸೇವೆ ಸಲ್ಲಿಸಿದ ಪ್ರಧಾನಿ ಮೋದಿ, ಈ ದುರಂತದಿಂದ "ದಿಗ್ಭ್ರಮೆಗೊಂಡಿದ್ದೇನೆ" ಎಂದು ಈ ಹಿಂದೆ ಹೇಳಿದ್ದರು. "ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿರುವ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೆ" ಎಂದು ಅವರು ಗುರುವಾರ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಅಪಘಾತದ ತನಿಖೆಗಾಗಿ ಕೇಂದ್ರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಅವರು ಹೇಳಿದ್ದರು. ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ AI 171 ಹಾರಾಟ ಆರಂಭಿಸಿದ ಕೆಲವೇ ಸೆಕೆಂಡುಗಳಲ್ಲಿ ಈ ಅಪಘಾತ ಸಂಭವಿಸಿದೆ .
ಈ ಸುದ್ದಿಯನ್ನೂ ಓದಿ: Ahmedabad Plane Crash: ಅಹಮದಾಬಾದ್ ವಿಮಾನ ಪತನ; ಬ್ರಿಟಿಷ್ ಪ್ರಯಾಣಿಕನ ಕೊನೆಯ ವಿಡಿಯೊ ವೈರಲ್!
ಮಧ್ಯಾಹ್ನ 1.30 ರ ಸುಮಾರಿಗೆ ಹಾರಾಟ ಆರಂಭಿಸಿದ ವಿಮಾನ ನಿಯಂತ್ರಣ ಕಳೆದುಕೊಂಡು ಮೇಘನಿನಗರ ಪ್ರದೇಶದಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ವೈದ್ಯರ ವಸತಿ ಗೃಹಕ್ಕೆ ಹೋಗಿ ಅಪ್ಪಳಿಸಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಅಪಘಾತದಲ್ಲಿ ಗುಜರಾತ್ನ ಮಾಜಿ ಸಿಎಂ ವಿಜಯ್ ರೂಪಾನಿ ಅವರು ಕೂಡ ಮೃತಪಟ್ಟಿದ್ದಾರೆ. ಅವರು ತಮ್ಮ ಕುಟುಂಬವನ್ನು ಭೇಟಿ ಮಾಡಲು ಲಂಡನ್ಗೆ ತೆರಳುವವರಿದ್ದರು.