ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

"ಹರ್ ಘರ್ ತಿರಂಗಾ-ಹರ್ ಮನ್ ತಿರಂಗಾ"ಕ್ಕೆ ಪ್ರೇರಣೆಯಾದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ

ದೆಹಲಿಯ ಗೃಹ ಕಚೇರಿಯಲ್ಲಿ ಸಚಿವರು ರಕ್ಷಣಾ ಸಿಬ್ಬಂದಿ ಮತ್ತು ಸಹೋದ್ಯೋಗಿಗಳ ಜತೆ ಸೇರಿ ಧ್ವಜಾರೋಹಣ ನೆರವೇರಿಸಿದರೆ, ಹುಬ್ಬಳ್ಳಿ ಕಚೇರಿಯಲ್ಲಿ 'ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ, ಸಮಾನ ಅವಕಾಶ ಲಭಿಸಬೇಕೆಂಬ ಆಶಯ-ಸಂದೇಶದೊಂದಿಗೆ ಸವಿತಾ ಸಮಾಜ, ಹಡಪದ ಸಮಾಜದ ಮುಖಂಡರಿಂದಲೇ ಧ್ವಜಾರೋಹಣ ನೆರವೇರಿಸಿ ಪ್ರೇರಣೆಯಾದರು.

ದೆಹಲಿಯಲ್ಲಿ ರಕ್ಷಣಾ ಸಿಬ್ಬಂದಿ ಜತೆ ಸೇರಿ ಸಚಿವರಿಂದ ಧ್ವಜಾರೋಹಣ

-

Profile
Ashok Nayak Aug 15, 2026 2:43 PM

ಹುಬ್ಬಳ್ಳಿ ಕಚೇರಿಯಲ್ಲಿ ಸವಿತಾ ಸಮಾಜ, ಹಡಪದ ಮುಖಂಡರಿಂದ ಧ್ವಜಾರೋಹಣ

ರಕ್ಷಣಾ ಸಿಬ್ಬಂದಿಗೆ ಸಿಹಿ ಹಂಚಿ, ಶ್ರಮಿಕರಿಗೆ ಸನ್ಮಾನಿಸಿ ಸಂಭ್ರಮ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ(Pralhad Joshi) ಅವರ ದೆಹಲಿ ಮತ್ತು ಹುಬ್ಬಳ್ಳಿ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ(80th Independence Day)ವನ್ನು ಅತ್ಯಂತ ಅರ್ಥಪೂರ್ಣವಾಗಿ ಸಡಗರ, ಸಂಭ್ರಮದಿಂದ ವಿಶಿಷ್ಠವಾಗಿ ಆಚರಿಸಲಾಯಿತು.

ದೆಹಲಿಯ ಗೃಹ ಕಚೇರಿಯಲ್ಲಿ ಸಚಿವರು ರಕ್ಷಣಾ ಸಿಬ್ಬಂದಿ ಮತ್ತು ಸಹೋದ್ಯೋಗಿಗಳ ಜತೆ ಸೇರಿ ಧ್ವಜಾರೋಹಣ ನೆರವೇರಿಸಿದರೆ, ಹುಬ್ಬಳ್ಳಿ ಕಚೇರಿಯಲ್ಲಿ 'ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ, ಸಮಾನ ಅವಕಾಶ ಲಭಿಸಬೇಕೆಂಬ ಆಶಯ-ಸಂದೇಶದೊಂದಿಗೆ ಸವಿತಾ ಸಮಾಜ, ಹಡಪದ ಸಮಾಜದ ಮುಖಂಡರಿಂದಲೇ ಧ್ವಜಾರೋಹಣ ನೆರವೇರಿಸಿ ಪ್ರೇರಣೆಯಾದರು.

ಇದನ್ನೂ ಓದಿ: 80th Independence Day Special: 18ನೇ ವಯಸ್ಸಿನಲ್ಲೇ ನೇಣಿಗೇರಿದ ಯುವ ಕ್ರಾಂತಿಕಾರಿ; ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಖುದಿರಾಮ್ ಬೋಸ್ ಸಾಹಸಗಾಥೆ ಇಲ್ಲಿದೆ

ದೆಹಲಿಯ ಗೃಹ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವ ಪ್ರಲ್ಹಾದ ಜೋಶಿ ಅವರು ರಕ್ಷಣಾ ಸಿಬ್ಬಂದಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ತಮ್ಮ ನಿವಾಸದಲ್ಲೂ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸಿ 'ಹರ್ ಘರ್ ತಿರಂಗಾ', 'ಹರ್ ಮನ್ ತಿರಂಗಾ' ಅಭಿಯಾನಕ್ಕೆ ಪ್ರೇರಣೆಯಾದರು. ತಿರಂಗವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ತ್ಯಾಗ ಮತ್ತು ಚೈತನ್ಯವನ್ನು ಸಾಕಾರಗೊಳಿಸುತ್ತದೆ ಎಂದು ಜೋಶಿ ಪ್ರತಿಪಾದಿಸಿದರು.

Pralhad Joshi host 2

ನಮ್ಮ ತ್ರಿವರ್ಣ ಧ್ವಜವು ಪ್ರತಿಯೊಬ್ಬರ ಸಮೃದ್ಧಿ ಮತ್ತು ವಿಕಸಿತ ಭಾರತ ನಿರ್ಮಾಣಕ್ಕೆ ಪ್ರೇರೇಪಿಸು ತ್ತದೆ. ಈ ಸ್ವಾತಂತ್ರ್ಯ ದಿನದಂದು ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪವನ್ನು ನವೀಕರಿಸೋಣ ಮತ್ತು ಸ್ವಾತಂತ್ರ್ಯ ತಂದುಕೊಟ್ಟವರ ಅಹಿಂಸಾ, ತ್ಯಾಗ, ವೀರ ಪರಂಪರೆ ಮುನ್ನಡೆಸೋಣ ಎಂದು ಹೇಳಿದರು.

ದೆಹಲಿಯ ಗೃಹ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(Sangolli Rayanna) ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ವೀರ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ತ್ಯಾಗ-ಬಲಿದಾನ, ನಿಸ್ವಾರ್ಥ ಹೋರಾಟ, ಅಪ್ಪಟ ದೇಶಪ್ರೇಮ ಯುವಜನತೆಗೆ ಪ್ರೇರಣಾದಾಯಕ ಎಂದರು.

Pralhad Joshi host 3

ಪ್ರೇರಣೆಯಾದ ಹುಬ್ಬಳ್ಳಿ ಕಚೇರಿ: ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ಕಾರ್ಯಾಲಯ ದಲ್ಲಿ ಪ್ರತಿ ವರ್ಷದಂತೆ ಶ್ರಮಜೀವಿಗಳಿಂದಲೇ ಧ್ವಜಾರೋಹಣ ನೆರವೇರಿಸಿದ್ದು ಮಾದರಿ ಮತ್ತು ಪ್ರೇರಣೆ ಯಾಯಿತು.

ಹುಬ್ಬಳ್ಳಿ ಕಚೇರಿಯಲ್ಲಿ ಕಳೆದ ವರ್ಷ ಪಾದರಕ್ಷೆ ಕುಶಲಕರ್ಮಿ ಒಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿ ಎನಿಸಿದ್ದರೆ, ಈ ಬಾರಿ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಸವಿತಾ ಸಮಾಜ ಮತ್ತು ಹಡಪದ ಸಮಾಜದವರಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ವಿಶಿಷ್ಠವಾಗಿ ಆಚರಿಸಿ ಸಮಾಜಕ್ಕೆ ಉತ್ತಮ, ಪ್ರೇರಣಾತ್ಮಕ ಸಂದೇಶ ನೀಡಿದರು ಸಚಿವ ಪ್ರಲ್ಹಾದ ಜೋಶಿ.

Pralhad Joshi host 4

ಶ್ರಮಜೀವಿಗಳಿಗೆ ಸನ್ಮಾನ: ಸವಿತಾ ಸಮಾಜ ಮತ್ತು ಹಡಪದ ಸಮಾಜದ ಮುಖಂಡರಾದ ಮಲ್ಲಪ್ಪ ಹಡಪದ, ಕಲ್ಲಪ್ಪ ಹಡಪದ ಹಾಗೂ ಬುಚ್ಚಣ್ಣ ಮುಸ್ತಿಪಲ್ಲಿ ಅವರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ಲದೇ, ಹಡಪದ ಸಮಾಜದ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸ ಲಾಯಿತು.

ಸಮಾರಂಭದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ(MLA Mahesh Tenginkai), ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಸವಿತಾ ಸಮಾಜ ಮತ್ತು ಹಡಪದ ಸಮಾಜದ ಮುಖಂಡರು, ಪಾಲಿಕೆ‌ ಸದಸ್ಯರು, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಗಣ್ಯರು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.