ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ್‌ ಹೆಗಲಿಗೆ ಬೇರೆ ಸಚಿವಾಲಯದ ಜವಾಬ್ದಾರಿ? ರಾಹುಲ್ ಗಾಂಧಿ ಹೇಳಿದ್ದೇನು?

Rahul Gandhi: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಅವರನ್ನು ಬೇರೆ ಖಾತೆಗೆ ವರ್ಗಾಯಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ವಿಚಾರ ಸದ್ಯ ಸದ್ದು ಮಾಡುತ್ತಿದೆ.

ಪ್ರಧಾನ್‌ ಬೇರೆ ಸಚಿವಾಲಯಕ್ಕೆ ಜವಾಬ್ದಾರಿ ಹೊರುತ್ತಾರ?

ದೆಹಲಿಯ ಜನಪಥ್ ಹೊರಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ -

Priyanka P
Priyanka P Jul 25, 2026 7:04 PM

ನವದೆಹಲಿ, ಜು. 25: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ (NEET-UG paper leak) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ತಲೆದಂಡವಾಗಿದೆ. ಅವರು ಶನಿವಾರ (ಜುಲೈ 25) ರಾಜೀನಾಮೆ ನೀಡಿದ್ದಾರೆ. ಅವರನ್ನು ಬೇರೆ ಖಾತೆಗೆ ವರ್ಗಾಯಿಸುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿರುವ ಹೇಳಿಕೆ ಸದ್ಯ ಸದ್ದು ಮಾಡುತ್ತಿದೆ. ಕೇಂದ್ರ ಸರ್ಕಾರವು ಪ್ರಧಾನ್ ಅವರನ್ನು ಬೆಂಬಲಿಸುತ್ತಿದೆ ಎಂದು ರಾಹುಲ್‌ ಗಾಂಧಿ ದೂರಿದ್ದಾರೆ.

ಜನಪಥ್ ಹೊರಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ʼʼಪ್ರಧಾನ್ ಅವರನ್ನು ಬೇರೆ ಸಚಿವಾಲಯಕ್ಕೆ ವರ್ಗಾಯಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೆಲವು ಚರ್ಚೆಗಳು ನಡೆದಿವೆʼʼ ಎಂದು ರಾಹುಲ್ ಹೇಳಿದ್ದಾರೆ.

ಸಿಜೆಪಿ ಬೇಡಿಕೆ ಅಂಗೀಕರಿಸಿದ ಕೇಂದ್ರ ಸರ್ಕಾರ; 36 ದಿನಗಳ ದೆಹಲಿ ಪ್ರತಿಭಟನೆ ಅಂತ್ಯ

“ಇದು ಭಾರತದ ವಿದ್ಯಾರ್ಥಿಗಳಿಗೆ ಸ್ವೀಕಾರಾರ್ಹವಲ್ಲ. ಇದು ಯಾರಿಗೂ ಸ್ವೀಕಾರಾರ್ಹವಲ್ಲ” ಎಂದು ಅವರು ತಿಳಿಸಿದ್ದಾರೆ. ಪ್ರಧಾನ್ ಅವರನ್ನು ಭ್ರಷ್ಟಾಚಾರದ ಸಂಕೇತ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿನಾಶ ಎಂದು ಅವರು ಕರೆದಿದ್ದಾರೆ.

ಬಲ ಪ್ರಯೋಗಕ್ಕೆ ಖಂಡನೆ

ಜುಲೈ 20ರಂದು ಸಂಸತ್ತಿಗೆ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್‌ನಿಂದ ಹಿಡಿದು ಪೆಲೆಟ್ ಗನ್ ಬಳಸಿದ ಆರೋಪದವರೆಗೆ ಪೊಲೀಸರ ಅತಿಯಾದ ಬಲಪ್ರಯೋಗವನ್ನು ರಾಹುಲ್ ಗಾಂಧಿ ಖಂಡಿಸಿದರು. ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ವರ್ತಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಅವರನ್ನು ಕಾನೂನು ಪ್ರಕಾರ ಶಿಕ್ಷಿಸಬೇಕು ಮತ್ತು ಹೊಣೆಗಾರರನ್ನಾಗಿ ಮಾಡಬೇಕು ಎಂದು ವಿವರಿಸಿದ್ದಾರೆ.

“ನರೇಂದ್ರ ಮೋದಿ ಭಾರತದ ಭೂತಕಾಲ. ಭೂತಕಾಲವು ಎಂದಿಗೂ ಭವಿಷ್ಯದೊಂದಿಗೆ ಹೋರಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಜೆಪಿ ಮತ್ತು ಸರ್ಕಾರದ ನಡುವಿನ ಮೂರನೇ ಸುತ್ತಿನ ಮಾತುಕತೆಗೆ ಮುಂಚಿತವಾಗಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು.