ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಫೋಟೋ ಗ್ಯಾಲರಿ: ಕರುನಾಡಿನ ಸಾಧಕರಿಗೆ ಜಾರ್ಜಿಯಾದಲ್ಲಿ ವಿಶ್ವವಾಣಿ ಗ್ಲೋಬಲ್‌ ಅಚೀವರ್ಸ್‌ ಪ್ರಶಸ್ತಿ

ಜಾರ್ಜಿಯಾದ ರಾಜಧಾನಿ, ಸುಂದರ ಗಿರಿಧಾಮ ಟಿಬಿಲಿಸಿಯಲ್ಲಿ ವಿಶ್ವವಾಣಿ ಮಾಧ್ಯಮಸಂಸ್ಥೆ ಏರ್ಪಡಿಸಿದ ಗ್ಲೋಬಲ್ ಅಚೀವರ್ಸ್ ಸಮ್ಮೇಳನದ ಸುಂದರ ಕಾರ್ಯಕ್ರಮದಲ್ಲಿ 17 ಮಂದಿ ಕನ್ನಡ ನಾಡಿನ ಸಾಧಕರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಾರ್ಜಿಯಾದ ಜನಪ್ರತಿನಿಧಿಗಳು, ರಾಯಭಾರ ಕಚೇರಿಯ ಅಧಿಕಾರಿಗಳು, ಅನಿವಾಸಿ ಭಾರತೀಯರು ಮತ್ತು ಬೆಂಗಳೂರಿನಿಂದ ತೆರಳಿದ್ದ ವಿಶೇಷ ನಿಯೋಗದ ಸದಸ್ಯರ ಸಮ್ಮುಖದಲ್ಲಿ ಜಾರ್ಜಿಯಾ ಕಲಾವಿದರ ಆಕರ್ಷಕ ಸಂಸ್ಕೃತಿಕ ಕಾರ್ಯಕ್ರಮಗಳ ಸಮ್ಮಿಲನದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಕನ್ನಡ ನಾಡಿನಲ್ಲಿ ಕಲೆ, ಶಿಕ್ಷಣ, ಸಮಾಜ ಸೇವೆ, ಕೃಷಿ, ಕೈಗಾರಿಕೋದ್ಯಮ, ರಾಜಕಾರಣ, ಹೋಟೆಲ್ ಉದ್ಯಮ, ಸಂಗೀತ ಮುಂತಾದ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಸಾಧನೆ ಕೈಗೊಂಡ ಸ್ಫೂರ್ತಿವಂತರಿಗೆ ಮತ್ತು ಅನಿವಾಸಿ ಕನ್ನಡಿಗರಿಗೆ ವಿಶ್ವವಾಣಿಯ ಅಂತಾರಾಷ್ಟ್ರೀಯ ಪ್ರಶಸ್ತಿಯ ಕಿರೀಟ ತೊಡಿಸಲಾಯಿತು. ಈ ಸಮಾರಂಭದ ಫೋಟೋಗಳು ಇಲ್ಲಿವೆ.

ಸಾಧಕರಿಗೆ ಜಾರ್ಜಿಯಾದಲ್ಲಿ ವಿಶ್ವವಾಣಿ ಗ್ಲೋಬಲ್‌ ಅಚೀವರ್ಸ್‌ ಪ್ರಶಸ್ತಿ

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಅವರ ಜೊತೆಗೆ ಪ್ರಶಸ್ತಿ ಪುರಸ್ಕೃತರು ಮತ್ತು ಅತಿಥಿಗಳು. ಜಾರ್ಜಿಯಾದ ಪ್ರಸಿದ್ಧ ನಟ ನಿಕೊಲಾಜ್‌ ಸುಲುಕಿಜ್‌, ಪ್ರಸಿದ್ಧ ಲೇಖಕ ಜಾರ್ಜಿ ಕೆಕೆಲಿಡ್ಜ್‌, ದರ್ಪಣ್‌ ಪರಾಶರ್‌, ಶ್ರೀ ಸ್ವಪ್ರಭು ನೀಲಕಂಠ ಮಹಾಸ್ವಾಮೀಜಿ ಜತೆಗಿದ್ದರು.

ಹರೀಶ್‌ ಕೇರ ಹರೀಶ್‌ ಕೇರ May 24, 2025 1:34 PM