ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ರಾಜಕೀಯ
DK Shivakumar: ಕಾವೇರಿ ಆರತಿ ಕಾರ್ಯಕ್ರಮಕ್ಕೆ ವಾರದಲ್ಲಿ ನೀಲನಕ್ಷೆ: ಡಿ.ಕೆ.ಶಿವಕುಮಾರ್

ಕಾವೇರಿ ಆರತಿ ಕಾರ್ಯಕ್ರಮಕ್ಕೆ ವಾರದಲ್ಲಿ ನೀಲನಕ್ಷೆ: ಡಿಕೆಶಿ

DK Shivakumar: ಕಾವೇರಿ ಆರತಿಗೆ ಸರ್ಕಾರ 92 ಕೋಟಿ ರೂ. ನೀಡಲು ತೀರ್ಮಾನಿಸಿದ್ದು, ಇದರ ಜತೆಗೆ ಬೇರೆ ಇಲಾಖೆಗಳು ಅಗತ್ಯ ಸಹಕಾರ ನೀಡಲಿವೆ. ಕನಿಷ್ಠ ಸುಮಾರು 10 ಸಾವಿರ ಜನರು ಕೂತು ಈ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಬೇಕು. ಎಷ್ಟು ದಿನ ಕಾರ್ಯಕ್ರಮ ಮಾಡಬೇಕು ಎಂಬುದನ್ನು ಸಮಿತಿ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

CM Siddaramaiah: ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಸಿಎಂ ಆಗಿದ್ದೇನೆ: ಸಿಎಂ: ಸಿದ್ದರಾಮಯ್ಯ

ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಸಿಎಂ ಆಗಿದ್ದೇನೆ: ಸಿಎಂ

CM Siddaramaiah: ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ದೇಶಕ್ಕೇ ಮಾದರಿಯಾಗುವಂತೆ ಗ್ರೇಟರ್ ಬೆಂಗಳೂರು ನಿರ್ಮಾಣ: ಡಿಕೆಶಿ

ದೇಶಕ್ಕೇ ಮಾದರಿಯಾಗುವಂತೆ ಗ್ರೇಟರ್ ಬೆಂಗಳೂರು ನಿರ್ಮಾಣ: ಡಿಕೆಶಿ

DK Shivakumar: ಗ್ರೇಟರ್ ಬೆಂಗಳೂರು ನಗರ ಇಡೀ ದೇಶಕ್ಕೇ ಮಾದರಿಯಾಗುವಂತಹ ನಗರವನ್ನಾಗಿ ಮಾಡುತ್ತೇವೆ. ದೆಹಲಿ‌, ಚಂಡೀಗಡ್ ಮಾದರಿಗಿಂತ ಉತ್ತಮವಾಗಿ 10 ಸಾವಿರ ಎಕರೆಯಲ್ಲಿ ಬೆಂಗಳೂರು ನಗರಕ್ಕಿಂತ ಚೆನ್ನಾಗಿ ರೂಪಿಸಲಾಗುವುದು. ಇದಕ್ಕಾಗಿ ಯೋಜನೆ ಸಿದ್ಧವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Asaduddin Owaisi:  ಉಗ್ರರನ್ನು ಖಂಡಿಸಿದ ಓವೈಸಿ ಹೇಳಿಕೆಗೆ ಎಲ್ಲೆಡೆ ಮೆಚ್ಚುಗೆ; ವೈರಲ್ ಆಯ್ತು ಆ ವಿಡಿಯೊ

ಪಹಲ್ಗಾಮ್‌ ದಾಳಿ ಬಗ್ಗೆ ಒವೈಸಿ ಹೇಳಿದ್ದೇನು ಗೊತ್ತಾ...?

Owaisi on Pahalagam attack: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Pahalgam Terror Attack: ಬಾಯ್‌ ಫ್ರೆಂಡ್‌ಗಾಗಿ ಭಾರತಕ್ಕೆ ಬಂದ ಸೀಮಾ ಹೈದರ್‌ ಪಾಕಿಸ್ತಾನಕ್ಕೆ ಹೋಗ್ತಾಳಾ?

ಪಾಕ್‌ನಿಂದ ಓಡಿಬಂದ ಸೀಮಾ ಹೈದರ್‌ ಮುಂದಿನ ದಾರಿ ಏನು?

Pahalgam Terror Attack: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ಪ್ರವಾಸಿಗರು ಸಾವನ್ನಪ್ಪಿದ ಬೆನ್ನಲ್ಲೇ, ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಮತ್ತು ನೀತಿಗತ ಕ್ರಮಗಳನ್ನು ಕೈಗೊಂಡಿದೆ. ಈ ಕ್ರಮಗಳು ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನದ ನಾಗರಿಕರ ಸ್ಥಿತಿಗತಿಯ ಬಗ್ಗೆ, ವಿಶೇಷವಾಗಿ ತನ್ನ ಭಾರತೀಯ ಪ್ರಿಯಕರನನ್ನು ಭೇಟಿಯಾಗಲು ಅಕ್ರಮವಾಗಿ ದೇಶ ಪ್ರವೇಶಿಸಿದ ಸೀಮಾ ಹೈದರ್‌ರಂತಹ ವ್ಯಕ್ತಿಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

Pahalgam Terror Attack: 2 ದಿನಗಳಲ್ಲಿ ಪಾಕಿಸ್ತಾನ ವಿರುದ್ಧ 7 ದೊಡ್ಡ ನಿರ್ಧಾರ ಕೈಗೊಂಡ ಭಾರತ

ಪಾಕಿಸ್ತಾನದ ವಿರುದ್ಧ ಭಾರತದ ಪ್ರತೀಕಾರ ಹೇಗಿದೆ ಗೊತ್ತಾ..?

Pahalgam Terror Attack: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಭಾರತ ದಿಟ್ಟ ಹೆಜ್ಜೆ ಇಟ್ಟಿದ್ದು, ಭಾರತವು ಅಟಾರಿ ಗಡಿ ಬಂದ್ ಮಾಡಿದ್ದು, ಪಾಕಿಸ್ತಾನದ ಮೇಲೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವ ಭಾರತ, ಪಾಕಿಸ್ತಾನದೊಂದಿಗಿನ ತನ್ನ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿದೆ. ಪಾಕಿಸ್ತಾನಿಗರಿಗೆ ವೀಸಾ ಸೇವೆ ಸ್ಥಗಿತಗೊಳಿಸಿದ್ದು, ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇದರಿಂದ ಪಾಕಿಸ್ತಾನ ಕಂಗಾಲಾಗಿದೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.

Pahalgam Terror Attack: ಇಂದು ಜಮ್ಮು-ಕಾಶ್ಮೀರಕ್ಕೆ ರಾಹುಲ್‌ ಗಾಂಧಿ ಭೇಟಿ

ಇಂದು ಜಮ್ಮು-ಕಾಶ್ಮೀರಕ್ಕೆ ರಾಹುಲ್‌ ಗಾಂಧಿ ಭೇಟಿ

Rahul Gandhi To Visit J&K:ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಇಂದು ಭೇಟಿ ನೀಡಲಿದ್ದಾರೆ. ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಿದ್ದ ರಾಹುಲ್ ಗಾಂಧಿ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಗುರುವಾರ ಮುಂಜಾನೆ ನವದೆಹಲಿಗೆ ಮರಳಿದ್ದರು.

Begane Ramaiah: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

Begane Ramaiah: ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು, ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಇವರು 1972ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 1978ರಲ್ಲಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲೇ ಗೆದ್ದಿದ್ದರು.

Tumkur News: ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐಗೆ ಅದ್ಧೂರಿ ಬೀಳ್ಕೊಡುಗೆ!

ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐಗೆ ಅದ್ಧೂರಿ ಬೀಳ್ಕೊಡುಗೆ!

Tumkur News: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಮೃತಪಟ್ಟು ಇಡೀ ದೇಶ ಶೋಕಚರಣೆಯಲ್ಲಿರುವಾಗ, ತುಮಕೂರಿನಿಂದ ವರ್ಗಾವಣೆಯಾಗಿರುವ ಸಿಪಿಐ ಗೆ ತೆರೆದ ಜೀಪಿನಲ್ಲಿ ರೋಡ್ ಶೋ ಮಾಡಿ, ಅದ್ಧೂರಿಯಾಗಿ ಬೀಳ್ಕೊಡುಗೆ ಆಚರಿಸಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

DK Shivakumar: ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ನಮ್ಮ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರದ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ಸರ್ಕಾರ ಬದ್ಧ: ಡಿಕೆಶಿ

DK Shivakumar: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

Male Mahadeshwara Hills: ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆ

ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ನಂದಿನಿ ತುಪ್ಪ ಬಳಕೆ

Male Mahadeshwara Hills: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸಲು ತೀರ್ಮಾನಿಸಲಾಗಿದೆ.

JD Vance: ತಾಜ್‌ಮಹಲ್ ಅಂದಕ್ಕೆ ಮನಸೋತ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್- ಫೋಟೋಗಳು ಇಲ್ಲಿವೆ

ತಾಜ್ ಮಹಲ್ ಎದುರು ಫೋಟೋಕ್ಕೆ ಪೋಸ್ ನೀಡಿದ ಜೆಡಿ ವ್ಯಾನ್ಸ್ ದಂಪತಿ

ಅಮೆರಿಕ ಉಪಾಧ್ಯಕ್ಷ (US Vice President) ಜೆಡಿ ವ್ಯಾನ್ಸ್ (JD Vance) ಗುರುವಾರ ಆಗ್ರಾದಲ್ಲಿ ರೋಮಾಂಚಕ ದಿನವನ್ನು ತಾಜ್‌ಮಹಲ್‌ ಬಳಿ (Taj Mahal) ಕಳೆದು, ಕುಟುಂಬದೊಂದಿಗಿನ ಸುಂದರ ಕ್ಷಣವನ್ನು ಫೋಟೋ ಮೂಲಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರವು ತಾಜ್‌ಮಹಲ್‌ನ ವೈಭವವನ್ನು ಮಾತ್ರವಲ್ಲದೆ, ವ್ಯಾನ್ಸ್ ಕುಟುಂಬದ ಭಾರತದ ಅನುಭವದ ಖುಷಿಯ ಕ್ಷಣವನ್ನೂ ತೋರಿಸುತ್ತದೆ.

Male Mahadeshwara Hills: ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

Male Mahadeshwara Hills: ಇಲ್ಲಿಯವರೆಗೂ ಮಹದೇಶ್ವರ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

Pahalgam Terror Attack: ಪಾಕ್‌ ಪ್ರೇರಿತ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರ ಶತಸಿದ್ಧ: ಪ್ರಲ್ಹಾದ್‌ ಜೋಶಿ

ಪಾಕ್‌ ಪ್ರೇರಿತ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರ ಶತಸಿದ್ಧ: ಜೋಶಿ

Pahalgam Terror Attack: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಭಯೋತ್ಪಾದನೆಗೆ ಇತಿಶ್ರೀ ಹಾಡಲು ಸಂಕಲ್ಪ ತೊಟ್ಟಿದೆ. ಪಹಲ್ಗಾಮ್‌ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಮಾಯಕರನ್ನು ಬಲಿ ಪಡೆದಿರುವ ಪಾಕ್‌ ಉಗ್ರರನ್ನು ಸೆದೆ ಬಡಿಯುತ್ತದೆ. ದುಷ್ಕೃತ್ಯವೆಸಗಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಮೊದಲ ಹೆಜ್ಜೆ ಎನ್ನುವಂತೆ ರಾಜತಾಂತ್ರಿಕವಾಗಿ 5 ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Cabinet meeting: ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ; 3647 ಕೋಟಿ ರೂ. ಕಾಮಗಾರಿಗಳಿಗೆ ಸಂಪುಟ ಒಪ್ಪಿಗೆ

ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ನೀಡಲು ಸಂಪುಟ ಒಪ್ಪಿಗೆ

Cabinet meeting: ಬೆಂಗಳೂರು ಕೇಂದ್ರಿತ ಆಡಳಿತ ಮಾದರಿಗೆ ಬದಲಾಗಿ ಕರ್ನಾಟಕದ ವಿಕೇಂದ್ರೀಕೃತ ಆಡಳಿತ ಮಾದರಿಯನ್ನು ಅಳವಡಿಸಿಕೊಳ್ಳಲು ಉದ್ದೇಶಿಸಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Cabinet meeting: ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಬೇಕು; ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

ಉಗ್ರರ ದಾಳಿ ಕುರಿತು ಕ್ಯಾಬಿನೆಟ್‌ ಸಭೆಯಲ್ಲಿ ಖಂಡನಾ ನಿರ್ಣಯ

Cabinet meeting: ಉಗ್ರರ ದಾಳಿ ಕುರಿತು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸಚಿವ ಸಂಪುಟ ನಿರ್ಧರಿಸಿದೆ.

Rahul gandhi: ರಾಹುಲ್‌ ಗಾಂಧಿ ಕುರಿತು ಅವಹೇಳನಕಾರಿ ಪೋಸ್ಟ್‌; ರಾಜ್ಯ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್

ರಾಹುಲ್‌ ಗಾಂಧಿ ವಿರುದ್ಧ ಪೋಸ್ಟ್; ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್

Rahul gandhi: ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗ ಉಗ್ರರ ದಾಳಿ ನಡೆಯುತ್ತದೆ. ಪ್ರತಿ ಬಾರಿ ವಿದೇಶಕ್ಕೆ ಹೋದಾಗ ಈ ರೀತಿಯ ಕೃತ್ಯ ನಡೆದಿರುತ್ತದೆ ಎಂದು ಬಿಜೆಪಿ ಅವಹೇಳನ ಮಾಡಿದೆ ಎಂದು ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

Pralhad Joshi: ʼಮುಸ್ಲಿಮರು ದುರ್ಬಲರುʼ ಹೇಳಿಕೆಗೆ ರಾಬರ್ಟ್‌ ವಾದ್ರಾ ದೇಶದ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ ಆಗ್ರಹ

ರಾಬರ್ಟ್‌ ವಾದ್ರಾ ದೇಶದ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ಇಡೀ ದೇಶವೇ ಭಯೋತ್ಪಾದನೆ ಕೃತ್ಯವನ್ನು ಖಂಡಿಸುತ್ತಿದ್ದರೆ, ರಾಬಾರ್ಟ್‌ ವಾದ್ರಾ ಅವರು ಅದನ್ನು ಸಮರ್ಥಿಸಿಕೊಳ್ಳುವ ರೀತಿ ಹೇಳಿಕೆ ನೀಡುತ್ತಿರುವುದು ನಿಜಕ್ಕೂ ಅಸಹ್ಯಕರವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Pahalgam Terror Attack: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಪ್ರಲ್ಹಾದ್‌ ಜೋಶಿ

ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಪ್ರಲ್ಹಾದ್‌ ಜೋಶಿ

Pahalgam Terror Attack: ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂಬ ಮಾಹಿತಿಯಿದೆ. ಮೃತರ ಪಾರ್ಥಿವ ಶರೀರ, ಗಾಯಾಳುಗಳು-ಕುಟುಂಬಸ್ಥರನ್ನು ಹಾಗೂ ಪ್ರವಾಸಿಗರನ್ನು ಸ್ವಂತ ಊರು-ಮನೆಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಹೆಚ್ಚಿನ ವಿಮಾನ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pahalgam Terror Attack: ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

Pahalgam Terror Attack: ಶಿವಮೊಗ್ಗದ ಮಂಜುನಾಥ್‌ ರಾವ್‌ ಹಾಗೂ ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ. ಇನ್ನು ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

PM Narendra Modi: ಒಂದೇ ದಿನದ ಭೇಟಿಯಲ್ಲಿ ಸೌದಿ ಜೊತೆ ನಾಲ್ಕು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದ ಪ್ರಧಾನಿ ಮೋದಿ

ಸೌದಿ- ಭಾರತ ನಡುವೆ ನಾಲ್ಕು ಪ್ರಮುಖ ಒಪ್ಪಂದಗಳಿಗೆ ಸಹಿ

ಪ್ರಧಾನಿ ನರೇಂದ್ರ ಮೋದಿ(PM Modi Visit) ಅವರು ಮಂಗಳವಾರ ಜೆಡ್ಡಾದಲ್ಲಿ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ವ್ಯಾಪಕ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಮಾತುಕತೆ ನಡೆಸಿದರು. ಇವರ ಸಭೆಯ ಬಳಿಕ ನಾಲ್ಕು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭೇಟಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ಭಾರತಕ್ಕೆ ಮರಳಿದ್ದಾರೆ.

Pahalgam Terror Attack: ಪ್ರವಾಸಿಗರ ಸುರಕ್ಷಿತ ರವಾನೆಗೆ ಟಿಕೆಟ್ ದರ ಹೆಚ್ಚಿಸದಿರಲು ವೈಮಾನಿಕ ಕಂಪನಿಗಳಿಗೆ ಸೂಚನೆ- ಪ್ರಲ್ಹಾದ್‌ ಜೋಶಿ

ಟಿಕೆಟ್ ದರ ಹೆಚ್ಚಿಸದಿರಲು ವೈಮಾನಿಕ ಕಂಪನಿಗಳಿಗೆ ಸೂಚನೆ: ಪ್ರಲ್ಹಾದ್‌‌ ಜೋಶಿ

Pahalgam Terror Attack: ಭಯೋತ್ಪಾದನಾ ಕೃತ್ಯ ನಡೆದ ಸ್ಥಳದಿಂದ ಹಾಗೂ ಕಾಶ್ಮೀರದ ಇತರೆ ಪ್ರವಾಸಿ ತಾಣಗಳಿಂದ ಪ್ರವಾಸಿಗರ ರಕ್ಷಣಾ ಕಾರ್ಯ ನಡೆದಿದೆ. ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಹೆಚ್ಚಿನ ಟಿಕೆಟ್ ದರ ವಿಧಿಸದಿರುವಂತೆ ವೈಮಾನಿಕ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

Pahalgam Terror Attack: ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಾಂತ್ವನ

ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಸಿಎಂ ಸಾಂತ್ವನ

Pahalgam Terror Attack: ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

PM Narendra Modi: ಉಗ್ರರನ್ನು ಮಟ್ಟ ಹಾಕಲು ಮಾಸ್ಟರ್‌ ಪ್ಲ್ಯಾನ್‌! ಪ್ರಧಾನಿ ಮೋದಿ ಹೈವೋಲ್ಟೇಜ್‌ ಮೀಟಿಂಗ್‌

ದೆಹಲಿಯಲ್ಲಿ ಪ್ರಧಾನಿ ಮೋದಿ ಹೈವೋಲ್ಟೇಜ್‌ ಮೀಟಿಂಗ್‌

PM Narendra Modi: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಕೇಂದ್ರ ಸುರಕ್ಷತಾ ಸಮಿತಿ ಜೊತೆ ಪ್ರಮುಖ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ದಾಳಿಗೆ ಪ್ರತಿಕ್ರಿಯೆ ಮತ್ತು ರಕ್ಷಣಾ ಕಾರ್ಯತಂತ್ರವನ್ನು ರೂಪಿಸಲಾಗುವುದು.