ಕಾವೇರಿ ಆರತಿ ಕಾರ್ಯಕ್ರಮಕ್ಕೆ ವಾರದಲ್ಲಿ ನೀಲನಕ್ಷೆ: ಡಿಕೆಶಿ
DK Shivakumar: ಕಾವೇರಿ ಆರತಿಗೆ ಸರ್ಕಾರ 92 ಕೋಟಿ ರೂ. ನೀಡಲು ತೀರ್ಮಾನಿಸಿದ್ದು, ಇದರ ಜತೆಗೆ ಬೇರೆ ಇಲಾಖೆಗಳು ಅಗತ್ಯ ಸಹಕಾರ ನೀಡಲಿವೆ. ಕನಿಷ್ಠ ಸುಮಾರು 10 ಸಾವಿರ ಜನರು ಕೂತು ಈ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಬೇಕು. ಎಷ್ಟು ದಿನ ಕಾರ್ಯಕ್ರಮ ಮಾಡಬೇಕು ಎಂಬುದನ್ನು ಸಮಿತಿ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.