ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಮಂಗಳೂರು ಕಾರಾಗೃಹದ ಬಳಿ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ

Priyank Kharge: ಕಾರಾಗೃಹದ ಭದ್ರತೆ ಅತ್ಯಂತ ಮುಖ್ಯವಾಗಿರುವಂತೆಯೇ, ಕಾರಾಗೃಹದ ಸುತ್ತಮುತ್ತ ವಾಸಿಸುವ ಸಾರ್ವಜನಿಕರಿಗೆ ಮತ್ತು ಇತರ ಬಳಕೆದಾರರಿಗೆ ಮೊಬೈಲ್ ಸಂಪರ್ಕ ಸೇವೆಯಲ್ಲಿ ಅನಗತ್ಯ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದೂ ಅಗತ್ಯ. ಈ ಎರಡೂ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ನಿಟ್ಟಿನಲ್ಲಿ ತಾಂತ್ರಿಕ ಪರಿಹಾರಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವಯಂ ರಕ್ತದಾನ; ಯುವ ಸಮುದಾಯಕ್ಕೆ ಪ್ರೇರಣೆಯಾದ ಶಿಕ್ಷಣ ಸಚಿವ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವಯಂ ರಕ್ತದಾನ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಆಯೋಜಿಸಿದ್ದ "ಸೇವಾ ಸಂಕಲ್ಪ ಅಭಿಯಾನ"ದ ಭಾಗವಾಗಿ ಬಿಜೆಪಿ ಯುವ ಮೋರ್ಚಾವು ಮಹಾಮನೆ ಮನಗುಂಡಿಯಲ್ಲಿ ಗುರುವಾರ ಆಯೋಜಿಸಿದ್ಧ ರಕ್ತದಾನ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವತಃ ರಕ್ತದಾನ ಮಾಡುವ ಮೂಲಕವೇ ಚಾಲನೆ ನೀಡಿದ್ದಾರೆ.

‘ಅಸ್ಸಲಾಮ್‌ ಅಲೈಕುಮ್’ ಹೇಳಿದ ಐಪಿಎಸ್ ಅಧಿಕಾರಿಗೆ ವರ್ಗಾವಣೆ ಶಿಕ್ಷೆ; ಪಶ್ಚಿಮ ಬಂಗಾಳದಲ್ಲಿ ಚರ್ಚೆಗೆ ಗ್ರಾಸವಾಯ್ತು ಬುಷ್ರಾ ಬಾನು ಪ್ರಕರಣ

ಐಪಿಎಸ್ ಅಧಿಕಾರಿ ಬುಷ್ರಾ ಬಾನುಗೆ ವರ್ಗಾವಣೆ

Bushra Bano: ಪಶ್ಚಿಮ ಬಂಗಾಳದ ಐಪಿಎಸ್ ಅಧಿಕಾರಿ ಬುಷ್ರಾ ಬಾನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯುಪಿಎಸ್‌ಸಿ ಕುರಿತ ವಿಡಿಯೊದಲ್ಲಿ ‘ಅಸ್ಸಲಾಮು ಅಲೈಕುಮ್’, ‘ಇನ್‌ಶಾ ಅಲ್ಲಾ’ ಸೇರಿದಂತೆ ಕೆಲವು ಪದಗಳನ್ನು ಬಳಸಿದ್ದ ವಿಚಾರ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಪಶ್ಚಿಮ ಬಂಗಾಳ ಸರ್ಕಾರ ಅವರನ್ನು ಮತ್ತೊಂದು ಹುದ್ದೆಗೆ ವರ್ಗಾವಣೆ ಮಾಡಿದೆ. ಆದರೆ ವರ್ಗಾವಣೆ ಆದೇಶದಲ್ಲಿ ಕಾರಣವಾಗಿ ‘ಸಾರ್ವಜನಿಕ ಹಿತಾಸಕ್ತಿ’ ಎಂದು ಮಾತ್ರ ಉಲ್ಲೇಖಿಸಲಾಗಿದೆ. ವಿಡಿಯೊ ವಿವಾದವೇ ವರ್ಗಾವಣೆಗೆ ಕಾರಣ ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ.

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್; ತಳಮಟ್ಟದಿಂದಲೇ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸಚಿವ  ಪ್ರಲ್ಹಾದ್‌ ಜೋಶಿ ಮಹತ್ತರ ಹೆಜ್ಜೆ

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್

Pralhad Joshi: ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ, ಪ್ರಾಥಮಿಕ ಶಿಕ್ಷಕರ ಶಿಕ್ಷಣದಲ್ಲಿ ಆರು ತಿಂಗಳ ಪ್ರಮಾಣಪತ್ರ (ಬ್ರಿಡ್ಜ್) ಕೋರ್ಸ್‌ಗೆ ಚಾಲನೆ ನೀಡಿದ್ದಾರೆ.

ಹಾವೇರಿ ಅನ್ನದಾತರಿಗೆ‌ ಕೊಂಚ ರಿಲೀಫ್; ಬರಪೀಡಿತ ಜಿಲ್ಲೆಯಾಗಿ ಘೋಷಣೆ: ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ರುದ್ರಪ್ಪ ಲಮಾಣಿ

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ

Haveri News: ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಜಿಲ್ಲೆಯ ರೈತರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಕ್ಕರೆ ಮತ್ತು ಜವಳಿ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ಗಾಣಗಾಪುರದ ಶ್ರೀ ದತ್ತಾತ್ರೇಯ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಗಾಣಗಾಪುರದ ಶ್ರೀ ದತ್ತಾತ್ರೇಯ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ

CM DK Shivakumar: ಗಾಣಗಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಈಗಾಗಲೇ ಸೂಕ್ತ ಯೋಜನೆಗಳನ್ನು ಘೋಷಿಸಿದೆ. ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮನವಿಯಂತೆ ಹಂತ- ಹಂತವಾಗಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ʼʼಉಮರ್ ಖಾಲಿದ್​​ ದೇಶಪ್ರೇಮಿʼʼ: ವಿವಾದದ ಕಿಡಿ ಹೊತ್ತಿಸಿದ  ಬಿ.ಕೆ. ಹರಿಪ್ರಸಾದ್​​

ಉಮರ್ ಖಾಲಿದ್​​ ದೇಶಪ್ರೇಮಿ ಹೇಳಿಕೆ ಸಮರ್ಥಿಸಿಕೊಂಡ ಹರಿಪ್ರಸಾದ್​​

B.K. Hariprasad: ಜೈಲಿನಲ್ಲಿರುವ ಉಮರ್ ಖಾಲಿದ್ ದೇಶಪ್ರೇಮಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದು, ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ʼʼನಾನು ಉಮರ್ ಖಾಲಿದ್ ಅವರನ್ನು ರಾಷ್ಟ್ರವಾದಿ ಎಂದು ಕರೆದಿದ್ದೇನೆ. ಅದರಲ್ಲಿ ನನಗೆ ಯಾವುದೇ ಹಿಂಜರಿಕೆಯಿಲ್ಲʼʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಮ ಮಂದಿರದಿಂದ ರಕ್ಷಣಾ ರಫ್ತುವರೆಗೆ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿನ 11 ಮಹತ್ವದ ಸಾಧನೆಗಳಿವು

ರಾಮ ಮಂದಿರದಿಂದ ರಕ್ಷಣಾ ರಫ್ತುವರೆಗೆ: ಸಾಧನೆಗಳನ್ನು ಉಲ್ಲೇಖಿಸಿದ ಬಿಜೆಪಿ

Narendra Modi Birthday: 12 ವರ್ಷಗಳಲ್ಲಿ ದೇಶವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಹಾಗೂ ಸ್ವಾವಲಂಬಿ ರಾಷ್ಟ್ರವನ್ನಾಗಿ ರೂಪಿಸುವ ಉದ್ದೇಶದಿಂದ ಹಲವು ಪ್ರಮುಖ ಸುಧಾರಣೆಗಳು, ಯೋಜನೆಗಳು ಮತ್ತು ಉಪಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಬಿಜೆಪಿ ಉಲ್ಲೇಖಿಸಿದೆ. ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಪ್ರಯುಕ್ತ ಇಲ್ಲಿವೆ ಬಿಜೆಪಿ ಮಾಡಿರುವ 11 ಸಾಧನೆಗಳ ಪಟ್ಟಿ.

ʼಚಾಯ್‌ ವಾಲಾʼನಿಂದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶದ ಪ್ರಧಾನಿವರೆಗೆ: ಝೀರೋದಿಂದ ಉನ್ನತ ಹುದ್ದೆಗೇರಿದ ನರೇಂದ್ರ ಮೋದಿ ಹೋರಾಟದ ಬದುಕು ಇಲ್ಲಿದೆ

ಸತತ 3 ಬಾರಿ ಪ್ರಧಾನಿಯಾದ ʼಚಾಯ್‌ ವಾಲಾʼ ನರೇಂದ್ರ ಮೋದಿ

PM Narendra Modi Birthday: 2001ರಲ್ಲಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ 2014ರಲ್ಲಿ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 1985ರಿಂದ ರಾಜಕೀಯದಲ್ಲಿ ಇವರಿಗೆ ಈಗ 76 ವರ್ಷ. ಕ್ರಿಯಾಶೀಲ, ಸಮರ್ಪಣಾಭಾವ ಮತ್ತು ದೃಢನಿಶ್ಚಯದ ವ್ಯಕ್ತಿತ್ವವನ್ನು ಹೊಂದಿರುವ ಇವರು ನೂರಾರು ಕೋಟಿ ಭಾರತೀಯರ ಭರವಸೆಯ ಪ್ರತೀಕ. ಅವರ ಜನ್ಮ ದಿನದ ಪ್ರಯುಕ್ತ ವಿಶೇಷ ಲೇಖನ.

ನರೇಂದ್ರ ಮೋದಿ–ಗಣಪತಿ ಒಟ್ಟಿಗೆ ಟೀ ಕುಡಿಯುವ ಪ್ರತಿಮೆ; ಗಣೇಶೋತ್ಸವದಲ್ಲಿ ರಾಜಕೀಯ ವಾಕ್ಸಮರ

ಗಣೇಶೋತ್ಸವದಲ್ಲಿ ಮೋದಿ–ಗಣೇಶ ಥೀಮ್‌ಗೆ ಟಿಎಂಸಿ ವಿರೋಧ

Narendra Modi: ಪಶ್ಚಿಮ ಬಂಗಾಳದ ಹೌರಾದ ಗಣೇಶ ಪೂಜಾ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಗವಾನ್ ಗಣಪತಿ ಜತೆಗೆ ಚಹಾ ಕುಡಿಯುತ್ತಿರುವ ರೀತಿಯಲ್ಲಿ ಪ್ರದರ್ಶಿಸಿದ ವಿಗ್ರಹ ವಿವಾದಕ್ಕೆ ಕಾರಣವಾಗಿದೆ. ‘ಹಿಂದೂ ರಾಷ್ಟ್ರ’ ಎಂಬ ಬರಹ ಹಾಗೂ ಕೇಸರಿ ಭಾರತದ ನಕ್ಷೆಯೂ ಥೀಮ್‌ನಲ್ಲಿದೆ. ಆಯೋಜಕ ಖೋಕನ್ ಕನ್ರಾ ಇದು ತಮ್ಮ ವೈಯಕ್ತಿಕ ಕಲ್ಪನೆ ಎಂದು ಸ್ಪಷ್ಟಪಡಿಸಿದ್ದು, ಯಾವುದೇ ಧರ್ಮಕ್ಕೆ ಧಕ್ಕೆ ತರುವ ಉದ್ದೇಶವಿಲ್ಲ ಎಂದಿದ್ದಾರೆ. ಈ ಕುರಿತು ತೃಣಮೂಲ ಕಾಂಗ್ರೆಸ್ ನಾಯಕ ಅರೂಪ್ ರಾಯ್ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಓಂ ಪ್ರಕಾಶ್ ಸಿಂಗ್ ಥೀಮ್‌ನಲ್ಲಿ ತಪ್ಪೇನಿಲ್ಲ ಎಂದು ಸಮರರ್ಥಿಸಿಕೊಂಡಿದ್ದಾರೆ.

Anant Nag: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸೇರಿ ಗಣ್ಯರಿಂದ ಅಭಿನಂದನೆ

ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

Dadasaheb Phalke Award 2024: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಗೌರವಾನ್ವಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.

“ಅಮೆರಿಕ ಪ್ರಭಾವವಿಲ್ಲ”: ಯುಪಿಐ ಶುಲ್ಕದ ಮೇಲಿನ ಬಾಹ್ಯ ಒತ್ತಡ ಆರೋಪಕ್ಕೆ ಕೇಂದ್ರ ಸರ್ಕಾರ ತಿರುಗೇಟು

ಯುಪಿಐ ಶುಲ್ಕದ ಮೇಲಿನ ಬಾಹ್ಯ ಒತ್ತಡ ಆರೋಪಕ್ಕೆ ಕೇಂದ್ರ ಹೇಳಿದ್ದೇನು?

UPI Charges: ಯುಪಿಐ ಪಾವತಿಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ದರ ಪರಿಚಯಿಸುವ ನಿರ್ಧಾರವು ವಿದೇಶಿ ಪ್ರಭಾವದಿಂದ ಪ್ರೇರಿತವಾಗಿದೆ ಎಂಬ ಆರೋಪಗಳನ್ನು ಕೇಂದ್ರ ಸರ್ಕಾರವು ತಳ್ಳಿಹಾಕಿದೆ. ವ್ಯಕ್ತಿಯಿಂದ ವ್ಯಕ್ತಿಗೆ ನಡೆಯುವ ಹಣ ವರ್ಗಾವಣೆಗಳು ಯಾವಾಗಲೂ ಸಂಪೂರ್ಣ ಉಚಿತವಾಗಿರಲಿವೆ ಎಂದು ಕೇಂದ್ರ ಸರ್ಕಾರವು ಸ್ಪಷ್ಟಪಡಿಸಿದೆ.

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್‌ ಸೂಚನೆ

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಡಿಸಿಎಂ

Dr G Parameshwara: ರಾಜ್ಯದಾದ್ಯಂತ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗಿಲ್ಲ. ಹೆಸರು ತಿದ್ದುಪಡಿ ಸೇರಿದಂತೆ ಇನ್ನಿತರ ವಿಚಾರಗಳಿಗೆ ನೋಟಿಸ್ ನೀಡಲಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ ಸೂಚನೆ ನೀಡಿದ್ದಾರೆ.

ಅಮೆರಿಕದ ಸೆಮಿಕಂಡಕ್ಟರ್ ಚಿಪ್ ತಯಾರಿಕಾ ಕಂಪನಿ ಅಪ್ಲೈಡ್ ಮೆಟೀರಿಯಲ್ಸ್‌ನಿಂದ ರಾಜ್ಯದಲ್ಲಿ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್‌

ಅಪ್ಲೈಡ್ ಮೆಟೀರಿಯಲ್ಸ್‌ನಿಂದ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್‌

MB Patil: ಅಪ್ಲೈಡ್ ಮೆಟೀರಿಯಲ್ಸ್ ಕಂಪನಿಯು ರಾಜ್ಯದಲ್ಲಿ ಮುಂದಿನ 10 ವರ್ಷಗಳಲ್ಲಿ 3,600 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಬೆಂಗಳೂರು ಸಿಗ್ನೇಚರ್ ಬಿಝಿನೆಸ್ ಪಾರ್ಕ್ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಯೋಜನೆಯಿಂದ 1,000 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

Ration Card e-KYC: ಪಡಿತರದಾರರಿಗೆ ಗುಡ್‌ನ್ಯೂಸ್‌; ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಲು ವಾರದೊಳಗೆ ಮೊಬೈಲ್‌ ಆ್ಯಪ್‌ ಬಿಡುಗಡೆ

ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಲು ವಾರದೊಳಗೆ ಮೊಬೈಲ್‌ ಆ್ಯಪ್‌ ಬಿಡುಗಡೆ

ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಡಿತರದಾರರು ಆಗಮಿಸುತ್ತಿರುವುದರಿಂದ ತಾಂತ್ರಿಕ ಸಮಸ್ಯೆ ಉಂಟಾಗಿ ಇ-ಕೆವೈಸಿ ಪ್ರಕ್ರಿಯೆ ವಿಳಂಬವಾಗಿಗುತ್ತಿದೆ. ಈ ಹಿನ್ನೆಲೆಯಲ್ಲಿ ಆಹಾರ ಸಚಿವ ರಿಜ್ವಾನ್‌ ಅರ್ಷದ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ವೈಟ್‌ಫೀಲ್ಡ್‌ನಲ್ಲಿ ವಿಶ್ವ ದರ್ಜೆಯ ಬಹುಪಯೋಗಿ ವಸ್ತು ಪ್ರದರ್ಶನ ಸಭಾಂಗಣ, ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ: ಎಂ.ಬಿ.ಪಾಟೀಲ್‌

ವೈಟ್‌ಫೀಲ್ಡ್‌ನಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ

MB Patil: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಕರ್ನಾಟಕ ವ್ಯಾಪಾರ ಉತ್ತೇಜನಾ ಸಂಸ್ಥೆ (ಕೆಟಿಪಿಒ) ಹೊಂದಿರುವ 48.35 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್, ಸಭಾಂಗಣ, ಪ್ರದರ್ಶನಾಂಗಣ ಇತ್ಯಾದಿಗಳಿರುವ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಮುಸ್ಲಿಮರ ಬಗ್ಗೆ ಮಾತಾಡಿದ್ರೆ ಬೀಳುತ್ತೆ ಮೊಟ್ಟೆ, ಚಪ್ಪಲಿ ಏಟು; ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡ ಇಮ್ರಾನ್‌ ಪಾಷ ಎಚ್ಚರಿಕೆ

ಚಪ್ಪಲಿ ಏಟು ಬೀಳುತ್ತೆ: ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡ ಎಚ್ಚರಿಕೆ

Muslim leader Imran Pasha: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಜಮೀರ್ ಅಹ್ಮದ್​ ಖಾನ್ ಅವರ ಆಪ್ತ ಇಮ್ರಾನ್ ಪಾಷಾ, ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

ಸೆ.18ರ ಸಚಿವ ಸಂಪುಟ ಸಭೆಯಲ್ಲಿ ತುಳು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ: ಶಾಸಕ ಅಶೋಕ್ ಕುಮಾರ್ ರೈ

ಸಚಿವ ಸಂಪುಟ ಸಭೆಯಲ್ಲಿ ತುಳು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ

Tulu as additional official language: ಮಂಗಳೂರಿನಲ್ಲಿ ಸೆಪ್ಟೆಂ ರ್ 18 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕೆಲವೊಂದು ಮಹತ್ವದ ಘೋಷಣೆಗಳನ್ನು ರಾಜ್ಯ ಸರ್ಕಾರ ಮಾಡು ಸಾಧ್ಯತೆ ಇದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದು, ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಜಿಲ್ಲೆಯ ಜನರದ್ದಾಗಿದೆ.

Koratagere News: ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

Koratagere News: ಕೊರಟಗೆರೆ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಪಕ್ಷದ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್, ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿ ಎಂದು ಕರೆ ನೀಡಿದ್ದಾರೆ.

ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಭರ್ಜರಿ ಮುನ್ನಡೆ, ಕಾಂಗ್ರೆಸ್‌ಗೆ ಭಾರಿ ಮುಖಭಂಗ

ರಾಜಸ್ಥಾನ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ

Urban Local Body Polls: ರಾಜಸ್ಥಾನದ 309 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆದಿದ್ದು, ಆಡಳಿತಾರೂಢ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಹಲವು ವಾರ್ಡ್‌ಗಳಲ್ಲಿ ಬಿಜೆಪಿಗೆ ತೀವ್ರ ಪೈಪೋಟಿ ನೀಡಿದೆ. ಸೆಪ್ಟೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.

ಟೀ, ಅಪ್ಪುಗೆ, ಶೇಕ್‌ ಹ್ಯಾಂಡ್‌: ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಕ್ಷಣಗಳು; ಅಪರೂಪದ ದೃಶ್ಯ ವೈರಲ್‌

ಪುಟಿನ್, ಜಿನ್‌ಪಿಂಗ್ ಜತೆ ಮೋದಿ; ಬ್ರಿಕ್ಸ್‌ನ ಅಪರೂಪದ ದೃಶ್ಯಗಳು ವೈರಲ್

BRICS 2026: ಬ್ರಿಕ್ಸ್ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಶಿ ಜಿನ್‌ಪಿಂಗ್ ಸೇರಿದಂತೆ ಹಲವು ವಿಶ್ವ ನಾಯಕರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದ ಅಪರೂಪದ ದೃಶ್ಯಗಳು ಗಮನ ಸೆಳೆದಿವೆ. ಚಹಾ ಮಾತುಕತೆ, ಹಸ್ತಲಾಘವ, ಅಪ್ಪುಗೆ ಸೇರಿದಂತೆ ಶೃಂಗಸಭೆಯ ಅನೌಪಚಾರಿಕ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ, ಕ್ಷೇತ್ರದ ಜನರ ಕುಶಲೋಪರಿ ವಿಚಾರಣೆ

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ

CM DK Shivakumar: ಕನಕಪುರ ತಾಲೂಕಿನ ಚಿಕ್ಕೇಗೌಡನದೊಡ್ಡಿಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ 10ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ವಿಘ್ನ ವಿನಾಶಕ ಶ್ರೀ ಗಣೇಶನಿಗೆ ಸಿಎಂ ಡಿ.ಕೆ. ಶಿವಕುಮಾರ್‌, ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.

ದುರ್ಗಾ ಪೂಜೆಗೂ ಮುನ್ನ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿರುಗಾಳಿ: 17 ಎನ್‌ಸಿಪಿಐ ಸಂಸದರು ಬಿಜೆಪಿ ಸೇರ್ಪಡೆ

ದುರ್ಗಾ ಪೂಜೆಗೂ ಮುನ್ನ 17 ಎನ್‌ಸಿಪಿಐ ಸಂಸದರು ಬಿಜೆಪಿ ಸೇರ್ಪಡೆ

NCPI MPs to Join BJP: ದುರ್ಗಾ ಪೂಜೆಗೂ ಮುನ್ನ 17 ಎನ್‌ಸಿಪಿಐ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದು ಟಿಎಂಸಿ ಬಂಡಾಯ ನಾಯಕ ಜಗದೀಶ್ ಚಂದ್ರ ಬರ್ಮಾ ಬಸುಣಿಯಾ ಹೇಳಿದ್ದಾರೆ. ಆರಂಭದಲ್ಲಿ ನಮ್ಮ ಯೋಜನೆಯು ಬಿಜೆಪಿಗೆ ಸೇರುವುದೇ ಆಗಿತ್ತು. ಆದರೆ ಕೆಲವರ ಆಕ್ಷೇಪಣೆಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಮೊದಲು ಎನ್‌ಸಿಪಿಐ ಪಕ್ಷಕ್ಕೆ ತಾತ್ಕಾಲಿಕ ಸೇರಲಾಯಿತು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಯನ್ನು ನಕಲು ಮಾಡಿದ್ರಾ ಟ್ರಂಪ್? ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ರಾಜ್ಯದ ಗ್ಯಾರಂಟಿ ಯೋಜನೆಯನ್ನು ನಕಲು ಮಾಡಿದ್ರಾ ಟ್ರಂಪ್?

Did Trump Copy Karnataka’s Guarantee Scheme: ಗ್ಯಾರಂಟಿ ಯೋಜನೆಯನ್ನು ಮಹಾರಾಷ್ಟ್ರದಲ್ಲಿ ನಕಲು ಮಾಡಿದರು. ಮಧ್ಯಪ್ರದೇಶದಲ್ಲಿ ನಕಲು ಮಾಡಿದರು. ರಾಜಸ್ಥಾನದಲ್ಲಿ ನಕಲು ಮಾಡಿದರು. ಬಿಹಾರದಲ್ಲೂ ನಮ್ಮನ್ನೇ ನಕಲು ಮಾಡಿದರು. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ನಮ್ಮನ್ನು ನಕಲು ಮಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Loading...