ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

"ನ್ಯಾಯಕ್ಕಾಗಿ ರಾಜಕೀಯ ಆರಿಸಿಕೊಂಡೆ": ಮೊದಲ ಬಾರಿ ಶಾಸಕಿಯಾದ ಬಗ್ಗೆ ಆರ್‌ಜಿ ಕರ್ ಸಂತ್ರಸ್ತೆಯ ತಾಯಿ ಪ್ರತಿಕ್ರಿಯೆ

ಮಗಳಿಗಾಗಿ ಹೋರಾಡಿದ ತಾಯಿ ಈಗ ಜನ ನಾಯಕಿ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ದಾರುಣ ಘಟನೆಯಲ್ಲಿ ಮಗಳನ್ನು ಕಳೆದುಕೊಂಡ ತಾಯಿ ರತ್ನ ದೇವನಾಥ್, ನ್ಯಾಯಕ್ಕಾಗಿ ರಾಜಕೀಯಕ್ಕೆ ಪ್ರವೇಶಿಸಿ ಪಶ್ಚಿಮ ಬಂಗಾಳದ ಪಾಣಿಹಾಟಿ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ದಶಕಗಳಿಂದ ತೃಣಮೂಲದ ಬಲವಾಗಿದ್ದ ಈ ಕ್ಷೇತ್ರದಲ್ಲಿ ಅವರ ಗೆಲುವು ಮಹಿಳೆಯರ ಧ್ವನಿಗೂ, ನ್ಯಾಯದ ಹೋರಾಟಕ್ಕೂ ದೊಡ್ಡ ಸಂದೇಶ ಎನಿಸಿಕೊಂಡಿದೆ. ತಮ್ಮ ಮಗಳ ಸಾವಿಗೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿರುವ ಅವರು, ಈ ಜಯವನ್ನು ರಾಜ್ಯದ ಮಹಿಳೆಯರಿಗೆ ಅರ್ಪಿಸಿದ್ದಾರೆ.

ನಾನು ಸೋತಿಲ್ಲ, ರಾಜೀನಾಮೆ ನೀಡೋದಿಲ್ಲ: ಹೀನಾಯವಾಗಿ ಸೋತ ಮಮತಾ ಬ್ಯಾನರ್ಜಿಯಿಂದ ಹೊಸ ವರಸೆ

ರಾಜೀನಾಮೆ ನೀಡೋದಿಲ್ಲ ಎಂದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ನಾನು ಸೋತಿಲ್ಲ, ರಾಜೀನಾಮೆ ನೀಡೋದಿಲ್ಲ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಅವರು ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಅವರು ನನ್ನ ರಾಜೀನಾಮೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸಿಎಂ ಆಗುವ ಸುಳಿವು 2024ರಲ್ಲೇ ನೀಡಿದ್ದ ದಳಪತಿ ವಿಜಯ್: 'TN CM 2026' ನಂಬರ್ ಪ್ಲೇಟ್‌ನ ಕಾರ್‌ ಚಲಾಯಿಸುವ ದೃಶ್ಯ ವೈರಲ್

ಸಿಎಂ ಆಗುವ ಸುಳಿವು 2024ರ ಚಿತ್ರದಲ್ಲೇ ನೀಡಿದ್ದ ದಳಪತಿ ವಿಜಯ್

ತಮಿಳುನಾಡಿನ ರಾಜಕೀಯದಲ್ಲಿ ದೀರ್ಘಕಾಲ ಪ್ರಭಾವ ಬೀರಿದ್ದ ಡಿಎಂಕೆ ಭದ್ರಕೋಟೆಯನ್ನು ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಭೇದಿಸಿ ಐತಿಹಾಸಿಕ ಸಾಧನೆ ಮಾಡಿದೆ. 2024ರಲ್ಲಿ ಪ್ರಾರಂಭವಾದ ಈ ಪಕ್ಷವು 2026ರ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2024ರಲ್ಲಿ ತೆರೆಕಂಡ ವಿಜಯ್ ಅವರ ‘GOAT’ ಚಿತ್ರದ ದೃಶ್ಯ ಈಗ ನಿಜವಾಗಿರುವುದು ವಿಶೇಷ. ಬಹುಮತಕ್ಕೆ ಸ್ವಲ್ಪ ಕೊರತೆ ಇದ್ದರೂ, ಕಾಂಗ್ರೆಸ್ ಸೇರಿ ಇತರ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಸಾಧ್ಯತೆ ಹೆಚ್ಚಿದೆ. ಸಿನಿಮಾ ಕ್ಷೇತ್ರದಿಂದ ರಾಜಕೀಯಕ್ಕೆ ಬಂದ ವಿಜಯ್ ಅವರ ಈ ಯಶಸ್ಸು ದಕ್ಷಿಣ ಭಾರತದ ರಾಜಕೀಯದಲ್ಲಿ ದೊಡ್ಡ ಬದಲಾವಣೆಗೆ ದಾರಿ ಮಾಡಿಕೊಟ್ಟಿದೆ.

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ ವಚನ ಸ್ವೀಕರಿಸಲು ದಿನಾಂಕ ನಿಗದಿ; ಯಾವಾಗ ಸಿಎಂ ಆಗ್ತಾರೆ ದಳಪತಿ?

ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ ಯಾವಾಗ?

Did Thalapathy Vijay take the oath: 2026ರ ತಮಿಳುನಾಡು ಚುನಾವಣೆಯಲ್ಲಿ ಅಚ್ಚರಿ ಮೂಡಿಸಿದ ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಮೇ 7ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮವು ಚೆನ್ನೈ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ವಿಶೇಷ ಎಂದರೆ ಇದು ವಿಜಯ್ ಅವರ ಚಲನಚಿತ್ರ ಸಂಬಂಧಿತ ಕಾರ್ಯಕ್ರಮಗಳು ನಡೆಯುತ್ತಿದ್ದ ಸ್ಥಳ.

ಮಮತಾ ಬ್ಯಾನರ್ಜಿ, ಸ್ಟಾಲಿನ್‌...; 2026ರ ವಿಧಾನಸಭಾ ಚುನಾವಣೆಯಲ್ಲಿ ಸೋತ ರಾಜಕೀಯ ಧುರೀಣರು

2026ರ ಚುನಾವಣೆಯಲ್ಲಿ ಸೋತ ಪ್ರಮುಖರು

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಹಲವಾರು ಘಟಾನುಘಟಿ ರಾಜಕಾರಣಿಗಳು ಸೋಲು ಅನುಭವಿಸಿದ್ದಾರೆ. ಇದರಲ್ಲಿ ಮುಖ್ಯವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಾಂಗ್ರೆಸ್‌ ಸಂಸದ ಗೌರವ್ ಗೊಗೊಯ್ ಸೇರಿದ್ದಾರೆ.

ಅಮೆರಿಕದಿಂದ ಪಾಕಿಸ್ತಾನದವರೆಗೆ; ಬಂಗಾಳದ ಬಿಜೆಪಿ ಗೆಲುವನ್ನು ಅಂತಾರಾಷ್ಟ್ರೀಯ ಮಾಧ್ಯಮಗಳು ಬಣ್ಣಿಸಿದ್ದು ಹೀಗೆ

ಬಿಜೆಪಿಯ ಗೆಲುವನ್ನು ಅಂತಾರಾಷ್ಟ್ರೀಯ ಮಾಧ್ಯಮಗಳು ನೋಡಿದ್ದು ಹೇಗೆ?

BJP victory in Bengal: ವಿಧಾನಸಭಾ ಚುನಾವಣಾ ಫಲಿತಾಂಶಗಳು ಹೊರಬಿದ್ದಂತೆ, ಜಾಗತಿಕ ರಾಜಕೀಯ ವಲಯದಲ್ಲಿ ಗಮನ ಸೆಳೆಯುವ ಬೆಳವಣಿಗೆಗಳು ನಡೆದವು. ಅಂತಾರಾಷ್ಟ್ರೀಯ ಮಾಧ್ಯಮಗಳು ಈ ಫಲಿತಾಂಶಗಳನ್ನು ವಿಶ್ಲೇಷಿಸುತ್ತ, ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಸಾಧಿಸಿದ ವಿಜಯವನ್ನು ಪ್ರಮುಖ ಬೆಳವಣಿಗೆ ಎಂದೇ ಬಣ್ಣಿಸಿದವು.

BJP MLA DN Jeevaraj: ಅಂಚೆ ಮತ ತಿರುಚಿದ ಆರೋಪ; ಶೃಂಗೇರಿ ಬಿಜೆಪಿ ಶಾಸಕ ಡಿ.ಎನ್‌. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಶೃಂಗೇರಿ ಶಾಸಕ ಡಿ.ಎನ್‌. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

2023ರಲ್ಲಿ ಮತ ತಿರುಚಿರುವುದು ನಡೆದಿದೆ ಎನ್ನುವುದಾದರೆ ಆ ವಿಚಾರವನ್ನು ಮರು ಎಣಿಕೆಗೆ ಆದೇಶಿಸಿದ ನ್ಯಾಯಾಲಯದ ಗಮನಕ್ಕೆ ತಂದು, ನಿರ್ದೇಶನ ಪಡೆದು ಮುಂದುವರಿಯಬೇಕಿತ್ತು. ದೂರಿನಲ್ಲಿ ಹಾಲಿ ಚುನಾವಣಾಧಿಕಾರಿ ಗೌರವ್‌ ಶೆಟ್ಟಿಯನ್ನು ಏಕೆ ಆರೋಪಿ ಮಾಡಲಾಗಿಲ್ಲ ಎಂದು ಪ್ರಶ್ನಿಸಿರುವ ಕೋರ್ಟ್‌, ಶಾಸಕ ಜೀವರಾಜ್‌ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.

ಮೇ 9ರ ರವೀಂದ್ರನಾಥ್ ಟ್ಯಾಗೋರ್ ಜನ್ಮ ದಿನಾಚರಣೆಯಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣ ವಚನ

ಮೇ 9ರಂದು ಬಂಗಾಳದಲ್ಲಿ ಬಿಜೆಪಿ ಸರ್ಕಾರ ಪ್ರಮಾಣ ವಚನ ಸಾಧ್ಯತೆ

BJP government in Bengal: ನೋಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ್ ಟ್ಯಾಗೋರ್ ಅವರ ಜನ್ಮದಿನದಂದೇ ಅಂದರೆ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಕೂಡ ಈ ದಿನಾಂಕವನ್ನು ದೃಢಪಡಿಸಿದ್ದಾರೆ.

ಶೃಂಗೇರಿ ಕ್ಷೇತ್ರದ ಮರುಎಣಿಕೆ: ಕಾನೂನು ಹೋರಾಟ ಮಾಡುತ್ತೇವೆ ಎಂದ ಡಿ.ಕೆ. ಶಿವಕುಮಾರ್

ಶೃಂಗೇರಿ ಮರುಎಣಿಕೆ: ಕಾನೂನು ಹೋರಾಟ ಮಾಡುತ್ತೇವೆ: ಡಿಕೆಶಿ

DK Shivakumar: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಗೆದ್ದ 19 ಶಾಸಕರಲ್ಲಿ 18 ಮಂದಿ ಮುಸ್ಲಿಮರು!

ಅಸ್ಸಾಂನಲ್ಲಿ ಕಾಂಗ್ರೆಸ್‌ನಿಂದ ಗೆದ್ದ 19 ಶಾಸಕರಲ್ಲಿ 18 ಮಂದಿ ಮುಸ್ಲಿಮರು!

ಮೇ 4ರಂದು ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಲ್ಲಿ ಸ್ಪರ್ಧಿಸಿದ ಮುಸ್ಲಿಂ ಅಭ್ಯರ್ಥಿಗಳು ಗಮನಾರ್ಹ ಯಶಸ್ಸು ಸಾಧಿಸಿದ್ದಾರೆ. ವಿಶೇಷವಾಗಿ ಅಸ್ಸಾಂನಲ್ಲಿ ಕಾಂಗ್ರೆಸ್‌ನಿಂದ ಗೆದ್ದ 19 ಸ್ಥಾನಗಳಲ್ಲಿ 18 ಮಂದಿ ಮುಸ್ಲಿಂ ಅಭ್ಯರ್ಥಿಗಳು. ಆ ಮೂಲಕ ಸುಮಾರು ಶೇ. 90ರಷ್ಟು ಯಶಸ್ಸು ದಾಖಲಿಸಲಾಗಿದೆ. ಅದೇ ಸಮಯದಲ್ಲಿ ಮುಸ್ಲಿಮೇತರ ಅಭ್ಯರ್ಥಿಗಳ ಪ್ರದರ್ಶನ ಅತ್ಯಂತ ದುರ್ಬಲವಾಗಿತ್ತು. ಕೇರಳಂನಲ್ಲಿಯೂ ಯುಡಿಎಫ್ ಮೈತ್ರಿಕೂಟದ ಮೂಲಕ ಹೆಚ್ಚಿನ ಮುಸ್ಲಿಂ ಶಾಸಕರು ಆಯ್ಕೆಯಾಗಿದ್ದು, ರಾಜಕೀಯ ಸಮೀಕರಣಗಳಲ್ಲಿ ಮತಧ್ರುವೀಕರಣದ ಸ್ಪಷ್ಟ ಚಿತ್ರಣ ಕಂಡುಬಂದಿದೆ.

ಶೃಂಗೇರಿಯಲ್ಲಿ ಬಿಜೆಪಿಯು ವೋಟ್ ಚೋರಿ ಮಾಡಿರುವುದು ಸ್ಪಷ್ಟ: ಸಿಎಂ ಆರೋಪ

ಶೃಂಗೇರಿಯಲ್ಲಿ ಬಿಜೆಪಿಯು ವೋಟ್ ಚೋರಿ ಮಾಡಿರುವುದು ಸ್ಪಷ್ಟ: ಸಿಎಂ

Sringeri Postal Ballot Recount: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ರಾಜೇಗೌಡರಿಗೆ 255 ಮತಗಳು ಅನರ್ಹ ಆಗಿವೆ. ಜೀವರಾಜ್ ಅವರಿಗೆ ಮರು ಎಣಿಕೆಯಲ್ಲಿ 690 ಮತಗಳು ಲಭಿಸಿವೆ. ಇದರಿಂದ ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ, ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ಇದು ವೋಟ್ ಡಕಾಯಿತಿಯಾಗಿದೆ ಎಂದು ಆರೋಪಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇಂದಿರಾ ಗಾಂಧಿ ಕಾಲದ ಕಾಂಗ್ರೆಸ್ ದಾಖಲೆ ಸರಿಗಟ್ಟಿದ ಬಿಜೆಪಿ: ಈಗ ಕಛ್‌ನಿಂದ ಕಿಬಿತ್ತುವರೆಗೆ ಕೇಸರಿ ಅಲೆ

21 ರಾಜ್ಯಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಬಿಜೆಪಿ

ಅಸ್ಸಾಂನಲ್ಲಿ ಸತತ ಮೂರನೇ ಬಾರಿ ಅಧಿಕಾರವನ್ನು ಕಾಪಾಡಿಕೊಂಡು, ಪಶ್ಚಿಮ ಬಂಗಾಳದಲ್ಲಿ ಮಹತ್ವದ ಗೆಲುವು ಸಾಧಿಸುವ ಮೂಲಕ ಬಿಜೆಪಿ ತನ್ನ ರಾಜಕೀಯ ಪ್ರಭಾವವನ್ನು ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿದೆ. 2014ರಲ್ಲಿ ಕೇವಲ ಏಳು ರಾಜ್ಯಗಳಲ್ಲಿ ಮಾತ್ರ ಅಧಿಕಾರ ಹೊಂದಿದ್ದ ಪಕ್ಷ, ಸಂಘಟನಾ ಶಕ್ತಿ, ಮೈತ್ರಿ ರಾಜಕೀಯ ಮತ್ತು ಬೂತ್ ಮಟ್ಟದ ಕಾರ್ಯತಂತ್ರಗಳ ಮೂಲಕ ದೊಡ್ಡ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ. ಈ ಸಾಧನೆ ಇಂದಿರಾ ಗಾಂಧಿಯ ಕಾಲದಲ್ಲಿ ಕಾಂಗ್ರೆಸ್ ಹೊಂದಿದ್ದ ಐತಿಹಾಸಿಕ ಪ್ರಾಬಲ್ಯಕ್ಕೆ ಸಮಾನವಾಗಿದೆ. 2024ರ ಲೋಕಸಭಾ ಚುನಾವಣೆಯ ಹಿನ್ನಡೆಯ ನಂತರವೂ ಬಿಜೆಪಿ ಪುನರುತ್ಥಾನ ಸಾಧಿಸಿದ್ದು, ರಾಷ್ಟ್ರ ರಾಜಕೀಯದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೆ ದೃಢಪಡಿಸಿದೆ.

ಟಿವಿಕೆ ಅಭ್ಯರ್ಥಿ ವಿರುದ್ಧ ಡಿಎಂಕೆ ಸಚಿವನನ್ನು ಸೋಲಿಸಿತ್ತು ಕೇವಲ ಒಂದು ಮತ

ತಮಿಳುನಾಡಿನ ಒಂದು ಮತದ ಕಥೆ

ಕೇವಲ ಒಂದೇ ಒಂದು ಮತ ಮಸ್ಕತ್‌ ವ್ಯಕ್ತಿ ಹಾಕದೇ ಇರುತ್ತಿದ್ದರೆ ಅಲ್ಲಿನ ರಾಜಕೀಯ ಚಿತ್ರಣವೇ ಬೇರೆ ಆಗಿರುತ್ತಿತ್ತು. ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಡಿಎಂಕೆ ಸಚಿವನ ಸೋಲಿಗೆ ಕಾರಣವಾಗಿದ್ದು ಕೇವಲ ಒಂದು ಮತ ಎಂದರೆ ಅಚ್ಚರಿಯಾಗಲೇಬೇಕು. ಇದರಿಂದಾಗಿಯೇ ಟಿವಿಕೆ ಅಭ್ಯರ್ಥಿ ಗೆದ್ದರು. ಇಂದು ಒಂದು ಮತದ ಮಹತ್ವದ ಕಥೆಯನ್ನು ಈಗ ಹೇಳುತ್ತಿದೆ.

ದಳಪತಿ ಗೆಲುವಿಗೆ ರಾಹುಲ್ ಗಾಂಧಿ ಅಭಿನಂದನೆ; ಟಿವಿಕೆ ಜೊತೆ ಸೇರಲು ಡಿಎಂಕೆಯೊಂದಿಗಿನ ಮೈತ್ರಿ ಮುರಿಯುತ್ತಾ ಕಾಂಗ್ರೆಸ್?

ಟಿವಿಕೆ ಜೊತೆ ಕಾಂಗ್ರೆಸ್ ಮೈತ್ರಿ? ರಾಹುಲ್ ಗಾಂಧಿ ಹೇಳಿದ್ದೇನು?

ಭಾರಿ ಗದ್ದಲದ ನಡುವೆ ಅಧಿಕಾರದ ಗದ್ದುಗೆ ಏರಲು ಈಗ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ದಳಪತಿ ವಿಜಯ್ ಅವರಿಗೆ ಬಹುಮತದ ಸವಾಲು ಎದುರಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಭಾಶಯ ಸಂದೇಶಗಳನ್ನು ಅವರಿಗೆ ಕಳುಹಿಸಿದ್ದು, ಕಾಂಗ್ರೆಸ್ ಮತ್ತು ಟಿವಿಕೆ ಮೈತ್ರಿ ಮಾಡಿಕೊಳ್ಳುತ್ತದೆ ಎನ್ನಲಾಗುತ್ತಿದೆ.

ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ; ಬೆಂಬಲ ಬೆಲೆಯಲ್ಲಿ 9023 ಮೆ.ಟನ್‌ ಖರೀದಿಗೆ ಅಸ್ತು

ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ

Pralhad Joshi: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರಾಜ್ಯದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತಿದೆ. ಸಚಿವ ಜೋಶಿ ಅವರ ಮಾರ್ಗದರ್ಶನದಂತೆ ಕೇಂದ್ರ ಕೃಷಿ ಸಚಿವಾಲಯ ಇದೀಗ ಕ್ವಿಂಟಲ್‌ಗೆ 7721 ರುಪಾಯಿ ಬೆಂಬಲ ಬೆಲೆ ಯೋಜನೆಯಲ್ಲಿ ಸೂರ್ಯಕಾಂತಿ ಖರೀದಿಗೆ ಅನುಮೋದನೆ ನೀಡಿದೆ.

ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ; ಮುಂದೆ ಕರ್ನಾಟಕದಲ್ಲೂ ಮನೆಗೆ: ಜೋಶಿ ಭವಿಷ್ಯ!

ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ: ಜೋಶಿ

Pralhad Joshi: ದೆಹಲಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪಂಚರಾಜ್ಯ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು, ದುರಾಡಳಿತ, ಮಿತಿಮೀರಿದ ತುಷ್ಟೀಕರಣ, ಭ್ರಷ್ಟಾಚಾರ, ಗೂಂಡಾಗಿರಿ ವಿರುದ್ಧ ಅತ್ಯಂತ ಸ್ಪಷ್ಟ ಜನಾದೇಶ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA-BJP ಆಡಳಿತಕ್ಕೆ ಬಹುದೊಡ್ಡ ಗೆಲುವು ತಂದುಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ ಸತತ 3ನೇ ಬಾರಿಗೆ ಬಿಜೆಪಿಗೆ ಭರ್ಜರಿ ಜಯ; ಇದು 'ಐತಿಹಾಸಿಕ ಗೆಲುವು' ಎಂದ ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು

ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿ ಭರ್ಜರಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಗೆಲುವನ್ನು ‘ಐತಿಹಾಸಿಕ’ ಎಂದು ಕರೆದಿದ್ದು, ಜನರಿಗೆ ಧನ್ಯವಾದ ಸಲ್ಲಿಸಿ ಚುನಾವಣಾ ಭರವಸೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಬಲಪಡಿಸಿದೆ.

"ಲೂಟಿ, ಲೂಟಿ, ಲೂಟಿ. ನಾವು ಮತ್ತೆ ಪುಟಿದೇಳುತ್ತೇವೆ": ಬಂಗಾಳದ ಆಘಾತಕಾರಿ ಸೋಲಿಗೆ ಮಮತಾ ಬ್ಯಾನರ್ಜಿ ಹತಾಶೆ

ಬಂಗಾಳ ಸೋಲಿನ ಬೆನ್ನಲ್ಲೇ ಮಮತಾ ಹತಾಶೆ ನುಡಿ

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಮಮತಾ ಬ್ಯಾನರ್ಜಿ, ಫಲಿತಾಂಶವನ್ನು ;ಲೂಟಿʼ ಎಂದು ಕರೆದಿದ್ದಾರೆ. ಬಿಜೆಪಿ ಐತಿಹಾಸಿಕ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಮತ್ತು ಕೇಂದ್ರದ ಮೇಲೆ ತೀವ್ರ ಆರೋಪ ಮಾಡಿರುವ ಮಮತಾ, ತೃಣಮೂಲ ಕಾಂಗ್ರೆಸ್ ಮತ್ತೆ ಬಲವಾಗಿ ಪುನಃ ಏಳುತ್ತದೆ ಎಂದು ಹೇಳಿದ್ದಾರೆ.

624 ಕೋಟಿ ರೂ. ಸಂಪತ್ತಿನ ಒಡೆಯ ನಟ, ರಾಜಕಾರಣಿ ದಳಪತಿ ವಿಜಯ್

ನಟ ವಿಜಯ್ ಅವರ ಸಂಪತ್ತು ಎಷ್ಟಿದೆ ಗೊತ್ತೇ?

ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸುವುದರೊಂದಿಗೆ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು ದಶಕಗಳ ಕಾಲ ಆಡಳಿತ ನಡೆಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಸೋಲುಣಿಸಿದೆ. ಈ ಮೂಲಕ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಪೂರ್ಣ ಪ್ರಮಾಣದ ರಾಜಕಾರಣಿಯಾಗಿ ಹೊರಹೊಮ್ಮಿದ್ದು, ಇವರ ಒಟ್ಟು ಆಸ್ತಿ ಎಷ್ಟಿದೆ ? ಎನ್ನುವ ಕುರಿತು ವಿವರ ಇಲ್ಲಿದೆ.

Assembly Election Result 2026: ಕೇರಳಂನಲ್ಲಿ ಇತಿಹಾಸ ಬರೆದ ಬಿಜೆಪಿ; ಇದೇ ಮೊದಲ ಬಾರಿಗೆ ಮೂರು ಕ್ಷೇತ್ರಗಳಲ್ಲಿ ಜಯಭೇರಿ

ಕೇರಳ: ಮೂರು ಕ್ಷೇತ್ರಗಳಲ್ಲಿ ಅರಳಿದ ಕಮಲ

Assembly Election Result 2026: 2026ರ ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದೆ. ನೇಮಂ, ಚಾತನ್ನೂರು ಮತ್ತು ಕಳಕೂಟ್ಟಂ ಕ್ಷೇತ್ರಗಳಲ್ಲಿ ಕಮಲ ಅರಳಿದ್ದು, ರಾಜ್ಯ ರಾಜಕೀಯದಲ್ಲಿ ಮೂರನೇ ಶಕ್ತಿಯಾಗಿ ತನ್ನ ಅಸ್ತಿತ್ವವನ್ನು ಬಲಪಡಿಸಿದೆ. ಇದೇ ವೇಳೆ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಮರಳಿದ್ದು, ಎಲ್‌ಡಿಎಫ್‌ ಭಾರಿ ಸೋಲು ಕಂಡಿದೆ.

Election Results 2026: ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್

ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್

Laxmi Hebbalkar: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಜನರು ನಮ್ಮ ಜನಪರ ಆಡಳಿತವನ್ನು ಸ್ವೀಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ. ಇದು ಕೇವಲ ರಾಜಕೀಯ ಗೆಲುವಲ್ಲ, ಜನ ವಿಶ್ವಾಸದ ಗೆಲುವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾರು ಅಧಿಕಾರಕ್ಕೆ ಬಂದ್ರು?

ಚುನಾವಣಾ ಫಲಿತಾಂಶ; ಯಾರಿದೆ ಮುನ್ನಡೆ?

Election Results 2026: 2026ರ ನಾಲ್ಕು ರಾಜ್ಯಗಳು (ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳಂ, ಅಸ್ಸಾಂ) ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ (ಪುದುಚೇರಿ) ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (ಮೇ 4) ಪ್ರಕಟವಾಗಿದ್ದು, ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಚುನಾವಣಾ ಫಲಿತಾಂಶಗಳ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ:

ʼʼಗಂಗಾ ನದಿ ಹರಿಯುವ ರಾಜ್ಯಗಳಲ್ಲೆಲ್ಲ ಬಿಜೆಪಿ ಸರ್ಕಾರʼʼ: ವಿಜಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

ಸಾಂಪ್ರದಾಯಿಕ ಬೆಂಗಾಳಿ ಉಡುಗೆ ತೊಟ್ಟು ಗಮನ ಸೆಳೆದ ಮೋದಿ

PM Narendra Modi: ದೇಶದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಜಯೋತ್ಸವ ಭಾಷಣ ಮಾಡಿದರು. ವಿಶೇಷ ಉಡುಗೆ ತೊಟ್ಟು ಅವರು ದೆಹಲಿಯ ಬಿಜೆಪಿ ಕಚೇರಿಗೆ ಮೋದಿ ಆಗಮಿಸಿದರು. ಈ ವೇಳೆ ಅವರು ತೊಟ್ಟ ಉಡುಗೆ ಗಮನ ಸೆಳೆಯಿತು. ಬೆಂಗಾಳಿ ಶೈಲಿಯಲ್ಲಿ ಧೋತಿ-ಕುರ್ತಾ ಧರಿಸಿ ಪಶ್ಚಿಮ ಬಂಗಾಳ ಜನತೆಗೆ ಪ್ರಬಲ ರಾಜಕೀಯ ಸಂದೇಶ ಸಾರಿದರು. ಜತೆಗೆ ಬಿಜೆಪಿ

ʼಮೋದಿಮಯ್ ಭಾರತ್ʼ ನಕ್ಷೆ ಬಿಡುಗಡೆ ಮಾಡಿದ ಬಿಜೆಪಿ: ಪಶ್ಚಿಮ ಬಂಗಾಳವನ್ನು ತಲುಪಿದೆ ಕೇಸರಿ ಅಲೆ

ಪಶ್ಚಿಮ ಬಂಗಾಳದಲ್ಲಿ ಈಗ ಕೇಸರಿ ಅಲೆ

ಉತ್ತರ ಭಾರತದ ಐದು ರಾಜ್ಯಗಳನ್ನು ಹೊರತು ಪಡಿಸಿ ಈಗ ಸಂಪೂರ್ಣ ಕೇಸರಿಮಯವಾಗಿದೆ. ಉತ್ತರ ಭಾರತದ ಐದು ರಾಜ್ಯಗಳಾದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಜಾರ್ಖಂಡ್ ಹಾಗೂ ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಹೊರತು ಉಳಿದ ಎಲ್ಲಾ ರಾಜ್ಯಗಳಲ್ಲೂ ಕೇಸರಿ ಪಕ್ಷ ರಾರಾಜಿಸುತ್ತಿದೆ. ಇದೀಗ ಪಶ್ಚಿಮ ಬಂಗಾಳ ಕೂಡ ಕೇಸರಿಮಯವಾಗುವ ಮುನ್ಸೂಚನೆ ಇದೆ.

Loading...