ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

ಟಿಎಂಸಿಗೆ ಮರಳಲು 6 ಸಂಸದರು, 25ಕ್ಕೂ ಹೆಚ್ಚು ಬಂಡಾಯ ನಾಯಕರು ಸಜ್ಜು; ಕುನಾಲ್ ಘೋಷ್ ಹೇಳಿದ್ದೇನು?

ಮಮತಾ ಬ್ಯಾನರ್ಜಿ ಸಂಪರ್ಕದಲ್ಲಿ ಟಿಎಂಸಿ ಬಂಡಾಯ ನಾಯಕರು

Kunal Ghosh: ಟಿಎಂಸಿ ನಾಯಕ ಕುನಾಲ್ ಘೋಷ್ ಬಂಡಾಯ ಎದ್ದಿರುವ ಆರು ಸಂಸದರು ಹಾಗೂ ಅರ್ಧಕ್ಕಿಂತ ಹೆಚ್ಚು ಶಾಸಕರು ಮಮತಾ ಬ್ಯಾನರ್ಜಿ ಅವರೊಂದಿಗೆ ಸಂಪರ್ಕದಲ್ಲಿದ್ದು, ಮತ್ತೆ ಪಕ್ಷಕ್ಕೆ ಮರಳಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ ಬಿಜೆಪಿ ಬೆಂಬಲದೊಂದಿಗೆ ಪೊಲೀಸರ ಒತ್ತಡದಿಂದ ಅವರು ಬಹಿರಂಗವಾಗಿ ಮರಳಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಟಿಎಂಸಿಗೆ ಮತ್ತೊಂದು ಆಘಾತ; ಪಕ್ಷಕ್ಕೆ ನೇತಾಜಿ ಕುಟುಂಬದ ಚಂದ್ರಕುಮಾರ್ ಬೋಸ್ ಗುಡ್‌ಬೈ

ನೇತಾಜಿ ಕುಟುಂಬದ ಕುಡಿ ಚಂದ್ರಕುಮಾರ್ ಬೋಸ್ ಟಿಎಂಸಿಗೆ ಗುಡ್‌ಬೈ

Chandra Kumar Bose: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದ ಸದಸ್ಯ ಹಾಗೂ ಮಾಜಿ ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 2023ರಲ್ಲಿ ಬಿಜೆಪಿ ತೊರೆದ ಬಳಿಕ ಟಿಎಂಸಿ ಸೇರಿದ್ದ ಅವರು, ಇದೀಗ ಮತ್ತೆ ರಾಜಕೀಯ ಬದಲಾವಣೆಯ ಹೆಜ್ಜೆ ಇಟ್ಟಿದ್ದಾರೆ.

Pro-tem Speaker: ವಿಧಾನಸಭೆ ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ

ವಿಧಾನಸಭೆ ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ

ಕರ್ನಾಟಕ ವಿಧಾನಸಭೆ ನೂತನ ಸಭಾಧ್ಯಕ್ಷರನ್ನು ಸಂವಿಧಾನಬದ್ಧವಾಗಿ ಚುನಾಯಿಸುವವರೆಗೂ ಟಿ.ಬಿ. ಜಯಚಂದ್ರ ಅವರು ಸ್ಪೀಕರ್ ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ. ಹಂಗಾಮಿ ಅಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ಅವರನ್ನು ನೇಮಿಸಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯದ ಸರ್ಕಾರದ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Vinay Kulkarni: ವಿನಯ್‌ ಕುಲಕರ್ಣಿಗೆ ಗುಡ್‌ ನ್ಯೂಸ್‌; ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಶಾಸಕ ಸ್ಥಾನ ಮರುಸ್ಥಾಪನೆ

ವಿನಯ್‌ ಕುಲಕರ್ಣಿಗೆ ಗುಡ್‌ನ್ಯೂಸ್‌; ಶಾಸಕ ಸ್ಥಾನ ಮರುಸ್ಥಾಪನೆ

ವಿನಯ್ ಕುಲಕರ್ಣಿ ಅವರು ಧಾರವಾಡ ಕ್ಷೇತ್ರದ ಶಾಸಕರಾಗಿ ತಮ್ಮ ಅಧಿಕೃತ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಹಸಿರು ನಿಶಾನೆ ಸಿಕ್ಕಿದೆ. ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರತಿಯನ್ನು ಭಾರತೀಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೂ ರವಾನಿಸಲಾಗಿದೆ.

By Elections: ಮೂರರಲ್ಲಿ ಎರಡು ಸ್ಥಾನ ಕಳೆದುಕೊಂಡ ಬಿಜೆಪಿ; ಜೆನ್‌ ಝೀ ಹೋರಾಟ ಕಮಲ ಪಡೆಗೆ ಎಚ್ಚರಿಕೆಯ ಕರೆಗಂಟೆಯಾಗುತ್ತ?

ಉಪಚುನಾವಣೆ: ಮೂರರಲ್ಲಿ ಎರಡು ಸ್ಥಾನ ಕಳೆದುಕೊಂಡ ಬಿಜೆಪಿ

Prashant Kishor: 3 ರಾಜ್ಯಗಳ 3 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸೋತಿದ್ದು, 1 ಸ್ಥಾನದಲ್ಲಷ್ಟೇ ಜಯಗಳಿಸಲು ಶಕ್ತವಾಗಿದೆ. ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌, ಮಧ್ಯ ಪ್ರದೇಶ ಮತ್ತು ಬಿಹಾರದಲ್ಲಿ ಉಪಚುನಾವಣೆ ನಡೆದಿದ್ದು, ಗುಜರಾತ್‌ನಲ್ಲಿ ಮಾತ್ರ ಕಮಲ ಅರಳಿದೆ. ಮಧ್ಯ ಪ್ರದೇಶ ಮತ್ತು ಬಿಹಾರದಲ್ಲಿ ತೀವ್ರ ಮುಖಭಂಗ ಅನುಭವಿಸಿದೆ. ಇದು ಬಿಜೆಪಿಗೆ ಹಲವು ಪಾಠ ಕಲಿಸಿದೆ.

ಭ್ರಷ್ಟರಿಗೆ ಬಹುಮಾನ, ಪೇಮೆಂಟ್ ಕೊಟ್ಟವರಿಗೆ ಸಚಿವ ಸ್ಥಾನ: ಡಿಕೆಶಿ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಟೀಕೆ

ಕಾಂಗ್ರೆಸ್‌ನಲ್ಲಿ ಪೇಮೆಂಟ್ ಕೊಟ್ಟವರಿಗೆ ಸಚಿವ ಸ್ಥಾನ: ಬಿಜೆಪಿ ಟೀಕೆ

Karnataka cabinet expansion: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಬಿಜೆಪಿ ಟೀಕಿಸಿದೆ. ಲೂಟಿಕೋರ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟರಿಗೆ ಮಾತ್ರ ಆದ್ಯತೆ, ಮಾನ್ಯತೆ. ಭ್ರಷ್ಟ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಪೇಮೆಂಟ್‌ ಕೊಟ್ರೆ ಸಾಕು ಸಚಿವರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆಗುತ್ತೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿಯ 30 ವರ್ಷಗಳ ಭದ್ರಕೋಟೆ ಪುಡಿ ಪುಡಿ ಮಾಡಿದ ಪ್ರಶಾಂತ್ ಕಿಶೋರ್; ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್‌ಗೆ ಐತಿಹಾಸಿಕ ಗೆಲುವು

ಬಿಜೆಪಿ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

Prashant Kishor: ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಬಿಜೆಪಿ ಭದ್ರಕೋಟೆಯನ್ನು ಭೇದಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಅವರು, ಮೂರು ತಿಂಗಳಲ್ಲಿ ಬಂಕಿಪುರದಲ್ಲಿ ಗೋಚರಿಸುವ ಬದಲಾವಣೆ ತರುವುದಾಗಿ ಭರವಸೆ ನೀಡಿದ್ದಾರೆ. ಈ ಗೆಲುವು ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಎಂದೇ ಪರಿಗಣಿಸಲಾಗಿದೆ.

Karnataka Cabinet Expansion: ಡಿಕೆಶಿ ಸಂಪುಟದ ಸಚಿವರಾಗಿ ಅಜಯ್ ಧರಮ್ ಸಿಂಗ್, ಬಾಲಕೃಷ್ಣ ಸೇರಿ 19 ಮಂದಿ ಪ್ರಮಾಣವಚನ ಸ್ವೀಕಾರ; ಇಲ್ಲಿದೆ ನೂತನ ಸಚಿವರ ಪಟ್ಟಿ

ಸಚಿವರಾಗಿ ಅಜಯ್‌ ಸಿಂಗ್‌, ಬಾಲಕೃಷ್ಣ ಸೇರಿ 19 ಶಾಸಕರ ಪ್ರಮಾಣವಚನ

ಬೆಂಗಳೂರಿನ ರಾಜಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಮತ್ತೊಂದೆಡೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಹಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಕಾಂಗ್ರೆಸ್‌ ನಾಯಕ ನಾನಾ ಪಟೋಲೆ ಪಾದಪೂಜೆ ಮಾಡಿದ ಕಾರ್ಯಕರ್ತರು: ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ; ವಿಡಿಯೊ ವೈರಲ್‌

ಕಾಂಗ್ರೆಸ್‌ ನಾಯಕ ನಾನಾ ಪಟೋಲೆ ಪಾದಪೂಜೆಗೆ ಬಿಜೆಪಿ ಟೀಕೆ

Congress Leader Nana Patole: ಗುರು ಪೂರ್ಣಿಮೆಯ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ನಾನಾ ಪಟೋಲೆ ಅವರ ಪಾದಗಳನ್ನು ಇಬ್ಬರು ಕಾರ್ಯಕರ್ತರು ತೊಳೆದು ಪೂಜೆ ಸಲ್ಲಿಸಿದ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ಇದನ್ನು ಕಾಂಗ್ರೆಸ್ ಸಂಸ್ಕೃತಿಯ ಪ್ರತಿಬಿಂಬ ಎಂದು ಆರೋಪಿಸಿದೆ. ಪಟೋಲೆ ಈ ಬಗ್ಗೆ ಸ್ಪಷ್ಟನೆ ನೀಡಿ ಪಾದಪೂಜೆ ಮಾಡಿದವರು ತಮ್ಮ ಕುಟುಂಬದ ಸದಸ್ಯರು ಹಾಗೂ ಗುರು ಪೂರ್ಣಿಮೆಯ ಅಂಗವಾಗಿ ಗೌರವ ಸೂಚಕವಾಗಿ ಈ ಆಚರಣೆ ನಡೆಸಿದ್ದಾರೆ ಎಂದಿದ್ದಾರೆ.

ಸಚಿವ ಸ್ಥಾನ ಸಿಗದ ಹಿನ್ನೆಲೆ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ಸಲ್ಲಿಕೆ, ನಾಳೆಯೇ ರಾಜೀನಾಮೆ ಕೊಡುವೆ ಎಂದ ಬೇಳೂರು ಗೋಪಾಲಕೃಷ್ಣ!

ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ಸಲ್ಲಿಕೆ

Karnataka Cabinet expansion: ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೇ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿನ ಈ ಬೆಳವಣಿಗೆಗಳು ಕೈ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ.

Karnataka Cabinet expansion: ಹಾವೇರಿ ಶಾಸಕ ರುದ್ರಪ್ಪ ಲಮಾಣಿಗೆ ಎರಡನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ

ಶಾಸಕ ರುದ್ರಪ್ಪ ಲಮಾಣಿಗೆ ಎರಡನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ

Rudrappa Lamani: ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ.

ಬಿಹಾರ, ಗುಜರಾತ್‌, ಮಧ್ಯಪ್ರದೇಶ ಉಪಚುನಾವಣೆ ಫಲಿತಾಂಶ ಇಂದು: ಸಿಜೆಪಿ ಪ್ರತಿಭಟನೆಯಿಂದ ಬಿಜೆಪಿಗೆ ಬೀಳುತ್ತಾ ಹೊಡೆತ?

ಸಿಜೆಪಿ ಪ್ರತಿಭಟನೆ: ಉಪಚುನಾವಣೆ ಮೇಲೆ ಪರಿಣಾಮ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಇತ್ತೀಚೆಗೆ ದೇಶಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಪರಿಣಾಮ ಉಪ ಚುನಾವಣೆ ಮೇಲೆ ಬೀರುವುದೇ ? ಎನ್ನುವ ಆತಂಕ ಈಗ ಶುರುವಾಗಿದೆ. ಅದರಲ್ಲೂ ಮುಖ್ಯವಾಗಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ.

Karnataka Cabinet expansion: ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಸಚಿವ ಪ್ರಿಯಾಂಕ್ ಖರ್ಗೆ

30 ರಿಂದ 40 ಮಂದಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಈ ಸಂಪುಟ ವಿಸ್ತರಣೆಯ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಲವು ಜಿಲ್ಲೆಗಳ ಶಾಸಕರಿಗೆ ಈ ಬಾರಿ ಮಂತ್ರಿಗಿರಿ ಸಿಗುವುದು ಖಚಿತವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ದೆಹಲಿಯಲ್ಲಿ ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತ ಎನ್‌ಎಫ್‌ಪಿಆರ್‌ಸಿ ಕಾರ್ಯಾಗಾರ ಯಶಸ್ವಿ

ದೆಹಲಿಯಲ್ಲಿ ಹವಾಮಾನ-ಸಹನಶೀಲ ಕೃಷಿ ಕುರಿತು ಕಾರ್ಯಾಗಾರ

NFPRC's workshop in New Delhi: ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಾಗಾರವು ಶಾಸಕರು ಮತ್ತು ನೀತಿ ತಜ್ಞರನ್ನು ಒಟ್ಟುಗೂಡಿಸಿ ಅನುಭವ ವಿನಿಮಯ ಹಾಗೂ ಪರಿಣಾಮಕಾರಿ, ಸಾಕ್ಷ್ಯಾಧಾರಿತ ಮತ್ತು ಜನಕೇಂದ್ರಿತ ಆಡಳಿತಕ್ಕಾಗಿ ಪ್ರಾಯೋಗಿಕ ಪರಿಹಾರಗಳನ್ನು ಅನ್ವೇಷಿಸಲು ವೇದಿಕೆಯನ್ನು ಒದಗಿಸಿತು.

ಸ್ವಾಮಿ ವಿವೇಕಾನಂದರ ತತ್ತ್ವ ಉಲ್ಲೇಖಿಸಿ ದೇಶದ ಯುವ ಜನತೆಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ

ಮೈಸೂರಿನಲ್ಲಿ ಯುವಶಕ್ತಿ, ಶಿಕ್ಷಣಕ್ಕೆ ಪ್ರಧಾನಿ ಮೋದಿ ಒತ್ತು

Narendra modi: ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ 'ವಿವೇಕ ಸ್ಮಾರಕ' ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಯುವಜನತೆ, ಶಿಕ್ಷಣ ಮತ್ತು ಸಮಾನ ಅವಕಾಶಗಳ ಮಹತ್ವವನ್ನು ಒತ್ತಿ ಹೇಳಿದರು. ಮಾತೃಭಾಷೆಯಲ್ಲಿನ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ, ಮಹಿಳೆಯರಿಗೆ ಎನ್‌ಡಿಎ ಪ್ರವೇಶ, ಸ್ಟಾರ್ಟ್‌ಅಪ್‌ಗಳು ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಕರ ಸಾಧನೆಗಳನ್ನು ಶ್ಲಾಘಿಸಿ, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಸಕ್ರಿಯ ಭಾಗವಹಿಸುವಿಕೆಗೆ ಕರೆ ನೀಡಿದರು.

Police Transfer Guidelines: ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

Karnataka Police Department: ಪೊಲೀಸ್ ಉಪಾಧೀಕ್ಷಕರು (ಸಿವಿಲ್) ಮತ್ತು ಪೊಲೀಸ್ ನಿರೀಕ್ಷಕರ (ಸಿವಿಲ್) ವರ್ಗಾವಣೆ ಮಾರ್ಗಸೂಚಿಗೆ ಸಂಬಂಧಿಸಿ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ; ಪ್ರಧಾನಿ ಮೋದಿಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪಿಎಂ ಮೋದಿಗೆ ಸಿಎಂ ಮನವಿ

CM DK Shivakumar: ನಮ್ಮ ಸರ್ಕಾರ ಕೂಡ ವಿವೇಕಾನಂದರ ಆಲೋಚನೆ ಹೊಂದಿದೆ. ಯುವ ಯುಗ, ನವ ಯುಗ ನಮ್ಮ ಸರ್ಕಾರದ ಘೋಷಣೆ. ನಾವು ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಯುವಕರು ಒಂದಾಗಬೇಕು, ಅವರ ಕಲೆ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯುವಕರ ಸಂಘ ಸ್ಥಾಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ʼʼ12 ವರ್ಷವಾದರೂ ಸರ್ವಾಧಿಕಾರಿಯಾಗಲು ಮೋದಿ ವಿಫಲʼʼ: ಪ್ರಧಾನಿ ವಿರುದ್ಧ ತಿರುಗಿ ಬಿದ್ರಾ ಶೆಹಜಾದ್ ಪೂನಾವಾಲಾ?

ಮೋದಿ ಸರ್ವಾಧಿಕಾರಿಯಾಗಲು ವಿಫಲ: ಪೂನಾವಾಲಾ ವ್ಯಂಗ್ಯ

Shehzad Poonawalla: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಟೀಕಿಸುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ, "12 ವರ್ಷವಾದರೂ ಮೋದಿ ಸರ್ವಾಧಿಕಾರಿಯಾಗಲು ವಿಫಲರಾಗಿದ್ದಾರೆ" ಎಂದು ವ್ಯಂಗ್ಯವಾಡಿದ್ದಾರೆ. ನೀಟ್ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಕ್ಷಮಿಸುವಂತೆ ಮೋದಿ ಮಾಡಿದ ಮನವಿಯನ್ನೂ ಅವರು ಉಲ್ಲೇಖಿಸಿದ್ದಾರೆ.

Exam scam: ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ್ರೆ ಜೈಲು ಶಿಕ್ಷೆ, ಭಾರಿ ದಂಡ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ

ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ್ರೆ ಕಠಿಣ ಕ್ರಮ: ಪ್ರಿಯಾಂಕ್‌ ಖರ್ಗೆ

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವುದು ಕಂಡುಬಂದರೆ ಅಂತಹ ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ಹೇಳಿದ್ದಾರೆ.

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು ಎಂದ ಸಿಎಂ ಡಿ.ಕೆ. ಶಿವಕುಮಾರ್

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು: ಸಿಎಂ

CM DK Shivakumar: ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್‌, ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Viveka Smaraka in Mysuru: ಮೈಸೂರಿನಲ್ಲಿ 45 ಕೋಟಿ ವೆಚ್ಚದ ʼವಿವೇಕ ಸ್ಮಾರಕʼ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿನಲ್ಲಿ ʼವಿವೇಕ ಸ್ಮಾರಕʼ ಉದ್ಘಾಟಿಸಿದ ಪ್ರಧಾನಿ ಮೋದಿ

PM Narendra Modi: 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಆಗಮಿಸಿದ್ದ ಐತಿಹಾಸಿಕ ಘಟನೆಯನ್ನು ಸ್ಮರಿಸುವ ಉದ್ದೇಶದಿಂದ ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಅವರ ಬೋಧನೆಗಳು ಹಾಗೂ ಆದರ್ಶಗಳ ಮೂಲಕ ಯುವಜನತೆಗೆ ಸ್ಫೂರ್ತಿ ನೀಡುವ ಉದ್ದೇಶ ಹೊಂದಿದೆ.

PC Exam Dress code: ನಾಳೆ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಧಾರ್ಮಿಕ ಉಡುಪುಗಳಿಗೆ ನಿರ್ಬಂಧವಿಲ್ಲ ಎಂದು ಗೃಹಸಚಿವ ಸ್ಪಷ್ಟನೆ

ಪರೀಕ್ಷೆಯಲ್ಲಿ ಧಾರ್ಮಿಕ ಉಡುಪುಗಳಿಗೆ ನಿರ್ಬಂಧವಿಲ್ಲ

Priyank Kharge: ಪರೀಕ್ಷಾ ಕೇಂದ್ರಕ್ಕೆ ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಸಂಪೂರ್ಣ ಪಟ್ಟಿಯನ್ನು ಈಗಾಗಲೇ ಅಭ್ಯರ್ಥಿಗಳ ಹಾಲ್ ಟಿಕೆಟ್‌ನಲ್ಲಿ ವಿವರವಾಗಿ ನೀಡಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸಲು ಕೋರಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದ್ದಾರೆ.

ಝೆನ್ ಜಿ ಬಗ್ಗೆ ತಿಳಿದುಕೊಳ್ಳಲು ಯುವ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾದ ಬಿಜೆಪಿ

ಸಿಜೆಪಿ ಪ್ರತಿಭಟಣೆ ಬಳಿಕ ಬಿಜೆಪಿಯಿಂದ ಮಹತ್ವದ ನಿರ್ಧಾರ

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ಎನ್ ಡಿಎ ಸರ್ಕಾರಕ್ಕೆ ಬಹುದೊಡ್ಡ ಹೊಡೆತವನ್ನೇ ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗೆ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಝೆನ್ ಜಿ ಬಗ್ಗೆ ತಿಳಿದುಕೊಳ್ಳಲು ಬಿಜೆಪಿ ನಿರ್ಧರಿಸಿದೆ. ಇದಕ್ಕಾಗಿ ಸಚಿವ ಸಂಪುಟ, ಮುಖ್ಯಸ್ಥರ ತಂಡದಲ್ಲಿ ಯುವ ನಾಯಕರಿಗೆ ಮಣೆ ಹಾಕಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ʼಪಿಎಂ ಸೂರ್ಯ ಸರೋವರ' ಯೋಜನೆಗೆ ಕೇಂದ್ರ ಅಸ್ತು: ಬಳಕೆಯಾಗದ ಜಲಮೂಲಗಳಲ್ಲಿ 5000 ಮೆ.ವ್ಯಾ ತೇಲುವ ಸೌರ PV ಅಳವಡಿಕೆ

ʼಪಿಎಂ ಸೂರ್ಯ ಸರೋವರ' ಯೋಜನೆಗೆ ಕೇಂದ್ರ ಅಸ್ತು

Pralhad Joshi: ಪ್ರಧಾನಮಂತ್ರಿ ಸೂರ್ಯ ಸರೋವರ ಯೋಜನೆ ದೇಶದಲ್ಲಿ ಜಲಾಶಯಗಳು ಮತ್ತು ಜಲಮೂಲಗಳನ್ನೂ ಬಳಸಿಕೊಂಡು ಸೌರ ಶಕ್ತಿ ಉತ್ಪಾದಿಸುವ ಒಂದು ಮಹತ್ತರ ಯೋಜನೆಯಾಗಿದ್ದು, ಬಳಕೆಯಾಗದ ಜಲಮೂಲಗಳ ಸದ್ಬಳಕೆಗೆ ಉತ್ತಮ ಅವಕಾಶವಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

Loading...